Homeಕರ್ನಾಟಕಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!

ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!

- Advertisement -
- Advertisement -

ಬೆಂಗಳೂರಿನ ‘ನಮ್ಮ ಮೆಟ್ರೋ’ ದರ ಏರಿಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಆಟೋಮೊಬೈಲ್ ಎಂಜಿನಿಯರ್ ಸನತ್ ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ. ಬೆಂಗಳೂರು ಮೆಟ್ರೋ

ಅರ್ಜಿಯಲ್ಲಿನ ಖಂಡನೆಗಳನ್ನು ಪರಿಶೀಲಿಸಿ ಅರ್ಜಿಯನ್ನು ಪರಿಗಣಿಸಿದ್ದ ಪೀಠವು, ಪ್ರಸ್ತುತ ದರ ಏರಿಕೆಯ ವಿಷಯಕ್ಕೆ ಸಂಬಂಧಿಸಿದಂತೆ, ಕಾಯ್ದೆಯ ಸೆಕ್ಷನ್ 33 ರ ಅಡಿಯಲ್ಲಿ ಮೆಟ್ರೋ ಆಡಳಿತವು ಕಾಲಕಾಲಕ್ಕೆ ದರವನ್ನು ನಿಗದಿಪಡಿಸಲು ಅಧಿಕಾರ ಹೊಂದಿದೆ. ಇದನ್ನು ದರ ನಿಗದಿ ಸಮಿತಿಯ ಶಿಫಾರಸ್ಸಿನ ಮೇಲೆ ಮಾಡಲಾಗುತ್ತದೆ ಎಂದು ಹೈಕೋರ್ಟ್‌ ಹೇಳಿದೆ. ಬೆಂಗಳೂರು ಮೆಟ್ರೋ

“ಮೆಟ್ರೋ ರೈಲು ಕಾರ್ಯಾಚರಣೆಗಾಗಿ ರೈಲ್ವೆ ಆಡಳಿತದ ದರ ನಿಗದಿಯು ಶಾಸನಬದ್ಧ ಪ್ರಕ್ರಿಯೆಯಾಗಿದೆ. ದರ ನಿಗದಿ ಸಮಿತಿಗೆ ಇದರ ಕಾರ್ಯವನ್ನು ವಹಿಸಲಾಗಿದೆ. ದರ ನಿಗದಿಯು ತಜ್ಞರ ಪ್ರಕ್ರಿಯೆಯಾಗಿದೆ. ಅಂತಹ ಅಂಶಗಳನ್ನು ಪರಿಶೀಲಿಸುವುದು ನ್ಯಾಯಾಲಯದ ಕೆಲಸವಲ್ಲ. ಅದನ್ನು ದರ ನಿಗದಿ ಸಮಿತಿಯಿಂದ ಪರಿಗಣಿಸುವುದು ಉತ್ತಮ. ಶಾಸನಬದ್ಧ ಉಲ್ಲಂಘನೆಯನ್ನು ಸೂಚಿಸದ ಹೊರತು ನ್ಯಾಯಾಲಯವು ಅಂತಹ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ಪೀಠವೂ ಹೇಳಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ದರ ಹೆಚ್ಚಳವನ್ನು ಶೇಕಡಾ 71 ರಷ್ಟು ಹೆಚ್ಚಿಸಲಾಗಿದೆ. ಇದು ಪ್ರಾಮಿಸರಿ ಎಸ್ಟೋಪೆಲ್ ತತ್ವಗಳು ಮತ್ತು ಕಾನೂನುಬದ್ಧ ನಿರೀಕ್ಷೆಗೆ ವಿರುದ್ಧವಾಗಿದೆ ಎಂದು ವಾದಿಸಿದರು. ಇದಲ್ಲದೆ ಅವರು (ಬೆಂಗಳೂರು ಮೆಟ್ರೋ ರೈಲ್ವೆ ನಿಗಮ) ನಿಲ್ದಾಣವಾರು ದರಗಳನ್ನು ನಿಗದಿಪಡಿಸಬೇಕಿತ್ತು. ಆದರೆ ಅವರು ಅದರ ಬದಲಿಗೆ ಅದನ್ನು ಹಂತವಾರು ನಿಗದಿಪಡಿಸಿದ್ದಾರೆ. ಇದರಲ್ಲಿ ಒಂದು ಹಂತದಲ್ಲಿ 2 ರಿಂದ 3 ನಿಲ್ದಾಣಗಳನ್ನು ಒಳಗೊಂಡಿದೆ ಎಂದು ವಾದಿಸಲಾಯಿತು.

“ಪ್ರಾಮಿಸರಿ ಎಸ್ಟೊಪೆಲ್ ಉಲ್ಲಂಘನೆ ಅಥವಾ ಕಾನೂನುಬದ್ಧ ನಿರೀಕ್ಷೆಯ ನಿರಾಕರಣೆಯ ಬಗ್ಗೆ ಅರ್ಜಿದಾರರ ವಾದವನ್ನು ತಿರಸ್ಕರಿಸಿದ ನ್ಯಾಯಾಲಯವು,” ಯಾವುದೇ ಸಮಯದಲ್ಲೂ ದರವನ್ನು ಹೆಚ್ಚಿಸುವುದಿಲ್ಲ ಎಂದು ಯಾವುದೇ ಭರವಸೆ ನೀಡಲಾಗಿಲ್ಲ. ಕಾನೂನುಬದ್ಧ ನಿರೀಕ್ಷೆಯ ಪರಿಕಲ್ಪನೆಯನ್ನು ಇದರಲ್ಲಿ ಅನ್ವಯಿಸಲಾಗುವುದಿಲ್ಲ. ಇದರ ಸಂದರ್ಭಗಳು ಕಾನೂನುಬದ್ಧ ನಿರೀಕ್ಷೆಯ ಉಲ್ಲಂಘನೆಯಾಗಿದೆ ಎಂದು ಸೂಚಿಸುವುದಿಲ್ಲ ಎಂದು ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...