Homeಕರ್ನಾಟಕಮೆಟ್ರೊ ಸ್ಮಾರ್ಟ್ ಕಾರ್ಡ್‍ನಲ್ಲಿ ಕನಿಷ್ಠ 50ರೂ ಠೇವಣಿ ಹಿಂದಿನ ಹುನ್ನಾರಗಳೇನು?

ಮೆಟ್ರೊ ಸ್ಮಾರ್ಟ್ ಕಾರ್ಡ್‍ನಲ್ಲಿ ಕನಿಷ್ಠ 50ರೂ ಠೇವಣಿ ಹಿಂದಿನ ಹುನ್ನಾರಗಳೇನು?

- Advertisement -
- Advertisement -

| ಮುತ್ತುರಾಜು |

ದಿನಾಂಕ 27-03-2019 ರಿಂದ ಬೆಂಗಳೂರು ಮೆಟ್ರೊ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ಇಲ್ಲದೆ, ಸಮರ್ಪಕ ಮಾಹಿತಿ ಕೊಡದೆ, ಸಾರ್ವಜನಿಕರ ಆಕ್ಷೇಪ ಕೇಳದೆ ಸ್ಮಾರ್ಟ್ ಕಾರ್ಡ್ ನಲ್ಲಿ ಕನಿಷ್ಟ 50 ರೂಪಾಯಿ ಹಣ ಮೆಟ್ರೊ ಪ್ರವೇಶಕ್ಕೆ ಇಟ್ಟುಕೊಳ್ಳಬೇಕು ಅಂತ ಆದೇಶ ಮಾಡಿದ್ದಾರೆ. ಮುಂಚೆ  ಕನಿಷ್ಠ 10 ರೂ ಇದ್ದರೂ ಕೂಡ ಪ್ರವೇಶ ಸಾಧ್ಯವಿತ್ತು. ಆದರೆ ಈಗ ನಿಮ್ಮ ಸ್ಮಾರ್ಟ್ ಕಾರ್ಡ್‍ನಲ್ಲಿ 49 ರೂಗಳಿದ್ದರೂ, ನೀವು ಮುಂದಿನ ನಿಲ್ದಾಣದಲ್ಲಿ ಇಳಿಯಬೇಕಿದ್ದರೂ (8.50ರೂ ದರ) ನಿಮಗೆ ಪ್ರವೇಶ ಸಿಗುವುದಿಲ್ಲ. ನೀವು ಮತ್ತೆ ಕನಿಷ್ಠ 50 ರೂಗಳನ್ನು ರೀಚಾರ್ಜ್ ಮಾಡಿಸಲೇಬೇಕು. ದೇಶದ ಯಾವ ಮೆಟ್ರೊದಲ್ಲಿಯೂ ಇಲ್ಲದ ಈ ನಿಯಮವನ್ನು ಬೆಂಗಳೂರು ಮೆಟ್ರೊ ಅಧಿಕಾರಿಗಳು ಜಾರಿ ಮಾಡಿದ್ದಾರೆ.

ಮೇಲ್ನೋಟಕ್ಕೆ ಅಸಂಬದ್ಧ ಎನ್ನಿಸುವ ಈ ನಿರ್ಧಾರದ ವಿರುದ್ಧ ಎಂತವರಿಗೂ ಸಿಟ್ಟು ಬರುತ್ತದೆ. ಹಾಗೆಯೇ ಹಲವು ಪ್ರಯಾಣಿಕರು ಈ ಹೊಸ ನಿಯಮದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಕೃಷಿಕ್ ಎ.ವಿ ಎನ್ನುವ ಸಾಮಾಜಿಕ ಕಾರ್ಯಕರ್ತನೊಬ್ಬ ಇದರ ವಿರುದ್ಧ ಸತತ ಎರಡು ದಿನಗಳ ಕಾಲ ಹೋರಾಟ ಮುಂದುವರೆಸಿದ್ದಾರೆ. ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯ ಮೆಟ್ರೊ ಹೊರಗಡೆ ಗಂಟೆಗಟ್ಟಲೇ ಪ್ಲೇಕಾರ್ಡ್ ಹಿಡಿದು ಪ್ರತಿಭಟಿಸಿದ್ದಲ್ಲದೇ 300ಕ್ಕೂ ಹೆಚ್ಚು ಪ್ರಯಾಣಿಕರ ಅಭಿಪ್ರಾಯ ಪಡೆದು ಸಹಿ ಸಂಗ್ರಯ ಅಭಿಯಾನ ಕೂಡ ಮಾಡಿದ್ದಾರೆ. ಪೋಲೀಸರು ಇವರನ್ನು ಬಂಧಿಸಿ ಬಿಡುಗಡೆ ಮಾಡಿದ ನಂತರ ತಮ್ಮ ಹೋರಾಟವನ್ನು ಟೌನ್ ಕಡೆಗೆ ತಿರುಗಿಸಿ ಅಲ್ಲಿಯೂ ಪ್ರತಿಭಟನೆ ನಡೆಸಿದ್ದಾರೆ.  ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಮತ್ತು ಕೆಲ ಸಾರ್ವಜನಿಕರು ಇದಕ್ಕೆ ಸಾಥ್ ನೀಡಿದ್ದಾರೆ.

ಜನರಿಗೆ ತೊಂದರೆಯಾಗುವ ಈ ನಿರ್ಧಾರವನ್ನು ಮೆಟ್ರೊ ಏಕೆ ತೆಗೆದುಕೊಂಡಿತ್ತು ಎಂದು ಹುಡುಕುತ್ತಾ ಹೋದರೆ ಇದರ ಹಿಂದಿನ ಹುನ್ನಾರಗಳು ಒಂದೊಂದೆ ತೆರೆದುಕೊಳ್ಳುತ್ತಿವೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಷಯವೆಂದರೆ ಪ್ರತಿಯೊಬ್ಬ ಪ್ರಯಾಣಿಕರು ಮೆಟ್ರೊ ಸ್ಮಾರ್ಟ್ ಕಾರ್ಡ್ ಖರೀದಿಸುವಾಗಲೇ 50ರೂಗಳನ್ನು ಕಟ್ಟಿರುತ್ತಾರೆ. ಆ ಹಣ ವಾಪಸ್ ಬರುವುದಿಲ್ಲ. 15 ಲಕ್ಷಕ್ಕೂ ಹೆಚ್ಚು ಮೆಟ್ರೊ ಕಾರ್ಡುಗಳು ಈಗಾಗಲೇ ವಿತರಣೆಯಾಗಿವೆ ಎಂದು ಅಂಕಿ ಅಂಶಗಳು ಹೇಳುತ್ತಿವೆ. 15 ಲಕ್ಷ * 50 ರೂ ಎಂದರೂ 7.5 ಕೋಟಿಯಷ್ಟು ದೊಡ್ಡ ಮೊತ್ತವಾಗುತ್ತದೆ. ಈಗ ಅನಿವಾರ್ಯವಾಗಿ ಮತ್ತೆ 50 ರೂ ಠೇವಣಿ ಇಡಬೇಕೆಂದರೆ ಮತ್ತೆ 7.5 ಕೋಟಿ ಹಣ ಕೆಲವೇ ದಿನಗಳಲ್ಲಿ ಮೆಟ್ರೊ ಪಾಲಾಗುತ್ತದೆ. ಈ ಹಣವೂ ಸಹ ಪ್ರಯಾಣಿಕರಿಗೆ ವಾಪಸ್ ಹೋಗುವುದಿಲ್ಲ. ಇಷ್ಟು ಹಣ ಒಮ್ಮೆಲೆ ಸಿಗುತ್ತದೆ ಎಂದರೆ ಬಿಡುವವರ್ಯಾರು ಹೇಳಿ.?

ಇಷ್ಟೊಂದು ದೊಡ್ಡ ಮೊತ್ತವನ್ನು ಮೆಟ್ರೋ ಎಲ್ಲಿ ಬೇಕಾದರೂ ಹೂಡಿಕೆ ಮಾಡಬಹುದು. ಅಥವಾ ಏಳುವರೆ ಕೋಟಿ ರೂಗಳನ್ನು ಮೆಟ್ರೊದವರು ತಿಂಗಳಿಗೆ ಕೇವಲ 3% ಬಡ್ಡಿಯಂತೆ ಸಾಲ ಕೊಟ್ಟರೂ ಸಾಕು ಎಷ್ಟಾಗುತ್ತದೆ ಲೆಕ್ಕ ಹಾಕಿ. ಪ್ರತಿ ತಿಂಗಳು ಅವರಿಗೆ 22.5 ಲಕ್ಷ ಬಡ್ಡಿ ಸಿಗುತ್ತದೆ ಎಂದರೆ ನೀವು ನಂಬಲೇಬೇಕು. ಈಗಾಗಲೇ  ಭಾರತದಲ್ಲಿಯೇ ಮೆಟ್ರೊ ದರ ಅತ್ಯಂತ ಹೆಚ್ಚು ಬೆಂಗಳೂರಿನಲ್ಲಿದೆ. ಇನ್ನು ದರ ಹೆಚ್ಚು ಮಾಡಲು ಸಾಧ್ಯವಿಲ್ಲ ಎಂದು ಈ ರೀತಿಯ ಅಡ್ಡ ದಾರಿಗಳನ್ನು ಮೆಟ್ರೊದವರು ಹುಡುಕಿಕೊಂಡು ಜನಸಾಮಾನ್ಯರಿಂದ ಲೂಟಿ ಮಾಡಲಾಗುತ್ತಿದೆ. ಮೆಟ್ರೊ ಪ್ರಯಾಣಿಕರು ಅಸಂಘಟಿತರಾಗಿರುವವರು. ಹಾಗಾಗಿ ಇದರ ವಿರುದ್ಧ ಸಂಘಟಿತ ಹೋರಾಟ ಸಾಧ್ಯವಿಲ್ಲ. ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ, ಬಹುತೇಕರು ಅಯ್ಯೋ 50ರೂ ತಾನೇ ಎಂದು ಸುಮ್ಮನಾಗಬೇಕಾದ ಪರಿಸ್ಥಿತಿ ಇರುವುದರಿಂದಲೇ ಮೆಟ್ರೊ ಈ ಜನವಿರೋಧಿ ನಿರ್ಧಾರವನ್ನು ತರಲು ಸಾಧ್ಯವಾಗಿದೆ.

ಈ ರೀತಿಯ ವಂಚನೆ ಮೆಟ್ರೊದಲ್ಲಿ ಮಾತ್ರವಲ್ಲಿ ಹಲವು ರಂಗಗಳಲ್ಲಿಯೂ ನಡೆಯುತ್ತಿದೆ. ಸ್ನ್ಯಾಪ್‍ಡೀಲ್ ಥರದ ಆನ್‍ಲೈನ್ ಮಾರಟಾಗಾರರು ಸಹ ಹಲವು ಬೆಲೆ ಬಾಳುವ ವಸ್ತುಗಳಿಗೆ ಶೇ.90% ರಷ್ಟು ರಿಯಾಯಿತಿ ಘೋಷಿಸುತ್ತಿತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜನ ಅದನ್ನು ನೋಡಿದ್ದೆ ತಡ ಇಷ್ಟೊಂದು ಕಡಿಮೆ ಬೆಲೆಯೇ, ನಮಗೊಂದು ಇರಲಿ ಎಂದು ಬುಕ್ ಮಾಡುತ್ತಾರೆ. ಕ್ಯಾಶ್ ಆನ್ ಡಿಲೆವರಿ ಅದು ತೆಗೆದುಕೊಳ್ಳದೇ ಕಾರ್ಡ್/ನೆಟ್ ಪೇಮೆಂಟ್ ಮಾಡಬೇಕಾಗುತ್ತದೆ. ಈ ರೀತಿಯಾಗಿ 500/- 1000/- ರೂಗಳಂತೆ ಸಾವಿರಾರು ಜನ ಆರ್ಡರ್ ಮಾಡಿದರೂ ಸಾಕು ಅದು ಕೋಟಿಗಟ್ಟಲೇ ಹಣ ಅವರ ಬಳಿ ಸಂಗ್ರಹವಾಗುತ್ತದೆ. 10-15 ದಿನ ಕಳೆದ ನಂತರ ಕಂಪನಿ ಹಲವು ಕಾರಣಗಳನ್ನು ಕೊಟ್ಟು ಆರ್ಡರ್ ಕ್ಯಾನ್ಸಲ್ ಮಾಡುತ್ತದೆ ಮತ್ತು ಅದಾದ ಎರಡು ಮೂರು ದಿನಗಳ ನಂತರ ಹಣವನ್ನು ಗ್ರಾಹಕರಿಗೆ ವಾಪಸ್ ಮಾಡುತ್ತದೆ. ಗ್ರಾಹಕರು ಅಬ್ಬ ಸದ್ಯ ನಮ್ಮ ಹಣ ವಾಪಸ್ ಬಂತಲ್ಲ ಎಂದು ನಿಟ್ಟುಸಿರು ಬಿಡುತ್ತಾರೆ. ಈ ಚಕ್ರ ಹೀಗೆ ಸುತ್ತಿತ್ತಿದ್ದರೆ ಕಂಪನಿ ಬಳಿ ಸದಾ ಕೋಟಿಗಟ್ಟಲೇ ಹಣ ಇದ್ದೆ ಇರುತ್ತದೆ. ಅದನ್ನು ಅವರು ಎಲ್ಲಾದರೂ ಹೂಡಿಕೆ ಮಾಡಿ ಅದರಿಂದ ಲಾಭ ಗಳಿಸುತ್ತಿರುತ್ತಾರೆ.

ನಿಮಗೆಲ್ಲಾ ನೆನಪಿದೆಯೇ? ಕೇವಲ 251ರೂಗಳಿಗೆ ಫ್ರೀಡಂ251 ಎಂಬ ಸ್ಮಾರ್ಟ್ ಫೋನ್ ಸಿಗುತ್ತದೆ ಈಗಲೇ ಬುಕ್ ಮಾಡಿ ಎಂಬ ಜಾಹಿರಾತು ಎಲ್ಲೆಡೆ ಹರಿದಾಡಿತು. ಆರ್ಡರ್ ಓಪನ್ ಮಾಡಿದ ಕೆಲವೆ ಸೆಕೆಂಡ್‍ಗಳಲ್ಲಿ  ಸೈಟ್ ಗೆ 6 ಲಕ್ಷಕ್ಕೂ ಅಧಿಕ ಹಿಟ್ಸ್‍ ಗಳು ಬಂದಿದ್ದವು. ಸುಮಾರು ಏಳುವರೆ ಕೋಟಿ ಜನ ಬುಕ್ ಮಾಡಿದ್ದರು. ಅದರಲ್ಲಿ ಕೆಲವರು ಮುಂಗಡ ಹಣ ಕೊಟ್ಟು ಬುಕ್ ಮಾಡಿದ್ದರೆ ಇನ್ನು ಕೆಲವರು ಕ್ಯಾಶ್ ಆನ್ ಡಿಲೆವರಿ ಮಾಡಿದ್ದರು. ರಿಂಗಿಂಗ್ ಬೆಲ್ಸ್ ಎಂಬ ಕಂಪನಿ ಈ ಬಳಾಂಗ್ ಬಿಟ್ಟಿತ್ತು. ಕಂಪನಿಗೆ ಮುಖ್ಯಸ್ಥ ಮೋಹಿತ್ ಗೋಯಲ್ ನರೇಂದ್ರ ಮೋದಿಯವರ ಹೆಸರೇಳಿಕೊಂಡು ಇಂತಹ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದ. ಈಗ ಯಾರಿಗಾದರೂ ಆ ಮೊಬೈಲ್ ತಲುಪಿತ ಎಂದು ನೋಡಿದರೆ ಇಲ್ಲ ಎಂಬ ಉತ್ತರ ಬರುತ್ತದೆ. ಹಣವೂ ಸಹ ವಾಪಸ್ ಬಂದಿಲ್ಲ. ಈ ರೀತಿ ಬಹಿರಂಗವಾಗಿ ಜನರನ್ನು ಮೋಸ ಮಾಡುವು ದೊಡ್ಡ ಜಾಲವಿದೆ.

ಈಗ ಮೆಟ್ರೊ ಕಥೆಗೆ ಮತ್ತೆ ಬರೋಣ. ಇದು ನೇರವಾಗಿಯೇ ಹಲವು ನಿಯಮಗಳ ಹೆಸರಿನಲ್ಲಿ ನಡೆಯುವ ಲೂಟಿ ಅಷ್ಟೇ. ಮೆಂಟೇನೆನ್ಸ್‍ ಗಾಗಿ ಎಂದು ಅವರು ಸಬೂಬು ಹೇಳಿದರೂ, ಸಾವಿರಾರು ಕೋಟಿ ಹೂಡಿಕೆ ಮಾಡಿರುವ ಮೆಟ್ರೊಗೆ ಏಳೂವರೆ ಕೋಟೆ ಹೆಚ್ಚಿನ ಹೊರೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಇಷ್ಟು ದೊಡ್ಡ ಮಟ್ಟದ ವಿರೋಧ ಬರುತ್ತದೆ ಎಂದು ಸ್ವತಃ ಮೆಟ್ರೊದವರಿಗೆ ಅನ್ನಿಸಿರಲಿಲ್ಲ. ಈಗ ಪ್ರತಿಭಟನೆಯ ಕೂಗು ಡಿಸಿಎಂ ಪರಮೇಶ್ವರ್‍ ರನ್ನು ಮುಟ್ಟಿದೆ. ಚುನಾವಣಾ ಸಂದರ್ಭದಲ್ಲಿ ಹೊಸ ನಿರ್ಧಾರ ಬೇಡವಾಗಿತ್ತು ಎಂದು ಮೆಟ್ರೊ ಅಧಿಕಾರಿಗಳಿಗೆ ಹೇಳಿದ್ದಾರಂತೆ. ಇದು ಸಾಧ್ಯವಾಗಲು ಹೋರಾಟ ಮತ್ತಷ್ಟು ಜೋರಾಗಬೇಕಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...