Homeಕರ್ನಾಟಕಮೆಟ್ರೊ ಸ್ಮಾರ್ಟ್ ಕಾರ್ಡ್‍ನಲ್ಲಿ ಕನಿಷ್ಠ 50ರೂ ಠೇವಣಿ ಹಿಂದಿನ ಹುನ್ನಾರಗಳೇನು?

ಮೆಟ್ರೊ ಸ್ಮಾರ್ಟ್ ಕಾರ್ಡ್‍ನಲ್ಲಿ ಕನಿಷ್ಠ 50ರೂ ಠೇವಣಿ ಹಿಂದಿನ ಹುನ್ನಾರಗಳೇನು?

- Advertisement -
- Advertisement -

| ಮುತ್ತುರಾಜು |

ದಿನಾಂಕ 27-03-2019 ರಿಂದ ಬೆಂಗಳೂರು ಮೆಟ್ರೊ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ಇಲ್ಲದೆ, ಸಮರ್ಪಕ ಮಾಹಿತಿ ಕೊಡದೆ, ಸಾರ್ವಜನಿಕರ ಆಕ್ಷೇಪ ಕೇಳದೆ ಸ್ಮಾರ್ಟ್ ಕಾರ್ಡ್ ನಲ್ಲಿ ಕನಿಷ್ಟ 50 ರೂಪಾಯಿ ಹಣ ಮೆಟ್ರೊ ಪ್ರವೇಶಕ್ಕೆ ಇಟ್ಟುಕೊಳ್ಳಬೇಕು ಅಂತ ಆದೇಶ ಮಾಡಿದ್ದಾರೆ. ಮುಂಚೆ  ಕನಿಷ್ಠ 10 ರೂ ಇದ್ದರೂ ಕೂಡ ಪ್ರವೇಶ ಸಾಧ್ಯವಿತ್ತು. ಆದರೆ ಈಗ ನಿಮ್ಮ ಸ್ಮಾರ್ಟ್ ಕಾರ್ಡ್‍ನಲ್ಲಿ 49 ರೂಗಳಿದ್ದರೂ, ನೀವು ಮುಂದಿನ ನಿಲ್ದಾಣದಲ್ಲಿ ಇಳಿಯಬೇಕಿದ್ದರೂ (8.50ರೂ ದರ) ನಿಮಗೆ ಪ್ರವೇಶ ಸಿಗುವುದಿಲ್ಲ. ನೀವು ಮತ್ತೆ ಕನಿಷ್ಠ 50 ರೂಗಳನ್ನು ರೀಚಾರ್ಜ್ ಮಾಡಿಸಲೇಬೇಕು. ದೇಶದ ಯಾವ ಮೆಟ್ರೊದಲ್ಲಿಯೂ ಇಲ್ಲದ ಈ ನಿಯಮವನ್ನು ಬೆಂಗಳೂರು ಮೆಟ್ರೊ ಅಧಿಕಾರಿಗಳು ಜಾರಿ ಮಾಡಿದ್ದಾರೆ.

ಮೇಲ್ನೋಟಕ್ಕೆ ಅಸಂಬದ್ಧ ಎನ್ನಿಸುವ ಈ ನಿರ್ಧಾರದ ವಿರುದ್ಧ ಎಂತವರಿಗೂ ಸಿಟ್ಟು ಬರುತ್ತದೆ. ಹಾಗೆಯೇ ಹಲವು ಪ್ರಯಾಣಿಕರು ಈ ಹೊಸ ನಿಯಮದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಕೃಷಿಕ್ ಎ.ವಿ ಎನ್ನುವ ಸಾಮಾಜಿಕ ಕಾರ್ಯಕರ್ತನೊಬ್ಬ ಇದರ ವಿರುದ್ಧ ಸತತ ಎರಡು ದಿನಗಳ ಕಾಲ ಹೋರಾಟ ಮುಂದುವರೆಸಿದ್ದಾರೆ. ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯ ಮೆಟ್ರೊ ಹೊರಗಡೆ ಗಂಟೆಗಟ್ಟಲೇ ಪ್ಲೇಕಾರ್ಡ್ ಹಿಡಿದು ಪ್ರತಿಭಟಿಸಿದ್ದಲ್ಲದೇ 300ಕ್ಕೂ ಹೆಚ್ಚು ಪ್ರಯಾಣಿಕರ ಅಭಿಪ್ರಾಯ ಪಡೆದು ಸಹಿ ಸಂಗ್ರಯ ಅಭಿಯಾನ ಕೂಡ ಮಾಡಿದ್ದಾರೆ. ಪೋಲೀಸರು ಇವರನ್ನು ಬಂಧಿಸಿ ಬಿಡುಗಡೆ ಮಾಡಿದ ನಂತರ ತಮ್ಮ ಹೋರಾಟವನ್ನು ಟೌನ್ ಕಡೆಗೆ ತಿರುಗಿಸಿ ಅಲ್ಲಿಯೂ ಪ್ರತಿಭಟನೆ ನಡೆಸಿದ್ದಾರೆ.  ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಮತ್ತು ಕೆಲ ಸಾರ್ವಜನಿಕರು ಇದಕ್ಕೆ ಸಾಥ್ ನೀಡಿದ್ದಾರೆ.

ಜನರಿಗೆ ತೊಂದರೆಯಾಗುವ ಈ ನಿರ್ಧಾರವನ್ನು ಮೆಟ್ರೊ ಏಕೆ ತೆಗೆದುಕೊಂಡಿತ್ತು ಎಂದು ಹುಡುಕುತ್ತಾ ಹೋದರೆ ಇದರ ಹಿಂದಿನ ಹುನ್ನಾರಗಳು ಒಂದೊಂದೆ ತೆರೆದುಕೊಳ್ಳುತ್ತಿವೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಷಯವೆಂದರೆ ಪ್ರತಿಯೊಬ್ಬ ಪ್ರಯಾಣಿಕರು ಮೆಟ್ರೊ ಸ್ಮಾರ್ಟ್ ಕಾರ್ಡ್ ಖರೀದಿಸುವಾಗಲೇ 50ರೂಗಳನ್ನು ಕಟ್ಟಿರುತ್ತಾರೆ. ಆ ಹಣ ವಾಪಸ್ ಬರುವುದಿಲ್ಲ. 15 ಲಕ್ಷಕ್ಕೂ ಹೆಚ್ಚು ಮೆಟ್ರೊ ಕಾರ್ಡುಗಳು ಈಗಾಗಲೇ ವಿತರಣೆಯಾಗಿವೆ ಎಂದು ಅಂಕಿ ಅಂಶಗಳು ಹೇಳುತ್ತಿವೆ. 15 ಲಕ್ಷ * 50 ರೂ ಎಂದರೂ 7.5 ಕೋಟಿಯಷ್ಟು ದೊಡ್ಡ ಮೊತ್ತವಾಗುತ್ತದೆ. ಈಗ ಅನಿವಾರ್ಯವಾಗಿ ಮತ್ತೆ 50 ರೂ ಠೇವಣಿ ಇಡಬೇಕೆಂದರೆ ಮತ್ತೆ 7.5 ಕೋಟಿ ಹಣ ಕೆಲವೇ ದಿನಗಳಲ್ಲಿ ಮೆಟ್ರೊ ಪಾಲಾಗುತ್ತದೆ. ಈ ಹಣವೂ ಸಹ ಪ್ರಯಾಣಿಕರಿಗೆ ವಾಪಸ್ ಹೋಗುವುದಿಲ್ಲ. ಇಷ್ಟು ಹಣ ಒಮ್ಮೆಲೆ ಸಿಗುತ್ತದೆ ಎಂದರೆ ಬಿಡುವವರ್ಯಾರು ಹೇಳಿ.?

ಇಷ್ಟೊಂದು ದೊಡ್ಡ ಮೊತ್ತವನ್ನು ಮೆಟ್ರೋ ಎಲ್ಲಿ ಬೇಕಾದರೂ ಹೂಡಿಕೆ ಮಾಡಬಹುದು. ಅಥವಾ ಏಳುವರೆ ಕೋಟಿ ರೂಗಳನ್ನು ಮೆಟ್ರೊದವರು ತಿಂಗಳಿಗೆ ಕೇವಲ 3% ಬಡ್ಡಿಯಂತೆ ಸಾಲ ಕೊಟ್ಟರೂ ಸಾಕು ಎಷ್ಟಾಗುತ್ತದೆ ಲೆಕ್ಕ ಹಾಕಿ. ಪ್ರತಿ ತಿಂಗಳು ಅವರಿಗೆ 22.5 ಲಕ್ಷ ಬಡ್ಡಿ ಸಿಗುತ್ತದೆ ಎಂದರೆ ನೀವು ನಂಬಲೇಬೇಕು. ಈಗಾಗಲೇ  ಭಾರತದಲ್ಲಿಯೇ ಮೆಟ್ರೊ ದರ ಅತ್ಯಂತ ಹೆಚ್ಚು ಬೆಂಗಳೂರಿನಲ್ಲಿದೆ. ಇನ್ನು ದರ ಹೆಚ್ಚು ಮಾಡಲು ಸಾಧ್ಯವಿಲ್ಲ ಎಂದು ಈ ರೀತಿಯ ಅಡ್ಡ ದಾರಿಗಳನ್ನು ಮೆಟ್ರೊದವರು ಹುಡುಕಿಕೊಂಡು ಜನಸಾಮಾನ್ಯರಿಂದ ಲೂಟಿ ಮಾಡಲಾಗುತ್ತಿದೆ. ಮೆಟ್ರೊ ಪ್ರಯಾಣಿಕರು ಅಸಂಘಟಿತರಾಗಿರುವವರು. ಹಾಗಾಗಿ ಇದರ ವಿರುದ್ಧ ಸಂಘಟಿತ ಹೋರಾಟ ಸಾಧ್ಯವಿಲ್ಲ. ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ, ಬಹುತೇಕರು ಅಯ್ಯೋ 50ರೂ ತಾನೇ ಎಂದು ಸುಮ್ಮನಾಗಬೇಕಾದ ಪರಿಸ್ಥಿತಿ ಇರುವುದರಿಂದಲೇ ಮೆಟ್ರೊ ಈ ಜನವಿರೋಧಿ ನಿರ್ಧಾರವನ್ನು ತರಲು ಸಾಧ್ಯವಾಗಿದೆ.

ಈ ರೀತಿಯ ವಂಚನೆ ಮೆಟ್ರೊದಲ್ಲಿ ಮಾತ್ರವಲ್ಲಿ ಹಲವು ರಂಗಗಳಲ್ಲಿಯೂ ನಡೆಯುತ್ತಿದೆ. ಸ್ನ್ಯಾಪ್‍ಡೀಲ್ ಥರದ ಆನ್‍ಲೈನ್ ಮಾರಟಾಗಾರರು ಸಹ ಹಲವು ಬೆಲೆ ಬಾಳುವ ವಸ್ತುಗಳಿಗೆ ಶೇ.90% ರಷ್ಟು ರಿಯಾಯಿತಿ ಘೋಷಿಸುತ್ತಿತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜನ ಅದನ್ನು ನೋಡಿದ್ದೆ ತಡ ಇಷ್ಟೊಂದು ಕಡಿಮೆ ಬೆಲೆಯೇ, ನಮಗೊಂದು ಇರಲಿ ಎಂದು ಬುಕ್ ಮಾಡುತ್ತಾರೆ. ಕ್ಯಾಶ್ ಆನ್ ಡಿಲೆವರಿ ಅದು ತೆಗೆದುಕೊಳ್ಳದೇ ಕಾರ್ಡ್/ನೆಟ್ ಪೇಮೆಂಟ್ ಮಾಡಬೇಕಾಗುತ್ತದೆ. ಈ ರೀತಿಯಾಗಿ 500/- 1000/- ರೂಗಳಂತೆ ಸಾವಿರಾರು ಜನ ಆರ್ಡರ್ ಮಾಡಿದರೂ ಸಾಕು ಅದು ಕೋಟಿಗಟ್ಟಲೇ ಹಣ ಅವರ ಬಳಿ ಸಂಗ್ರಹವಾಗುತ್ತದೆ. 10-15 ದಿನ ಕಳೆದ ನಂತರ ಕಂಪನಿ ಹಲವು ಕಾರಣಗಳನ್ನು ಕೊಟ್ಟು ಆರ್ಡರ್ ಕ್ಯಾನ್ಸಲ್ ಮಾಡುತ್ತದೆ ಮತ್ತು ಅದಾದ ಎರಡು ಮೂರು ದಿನಗಳ ನಂತರ ಹಣವನ್ನು ಗ್ರಾಹಕರಿಗೆ ವಾಪಸ್ ಮಾಡುತ್ತದೆ. ಗ್ರಾಹಕರು ಅಬ್ಬ ಸದ್ಯ ನಮ್ಮ ಹಣ ವಾಪಸ್ ಬಂತಲ್ಲ ಎಂದು ನಿಟ್ಟುಸಿರು ಬಿಡುತ್ತಾರೆ. ಈ ಚಕ್ರ ಹೀಗೆ ಸುತ್ತಿತ್ತಿದ್ದರೆ ಕಂಪನಿ ಬಳಿ ಸದಾ ಕೋಟಿಗಟ್ಟಲೇ ಹಣ ಇದ್ದೆ ಇರುತ್ತದೆ. ಅದನ್ನು ಅವರು ಎಲ್ಲಾದರೂ ಹೂಡಿಕೆ ಮಾಡಿ ಅದರಿಂದ ಲಾಭ ಗಳಿಸುತ್ತಿರುತ್ತಾರೆ.

ನಿಮಗೆಲ್ಲಾ ನೆನಪಿದೆಯೇ? ಕೇವಲ 251ರೂಗಳಿಗೆ ಫ್ರೀಡಂ251 ಎಂಬ ಸ್ಮಾರ್ಟ್ ಫೋನ್ ಸಿಗುತ್ತದೆ ಈಗಲೇ ಬುಕ್ ಮಾಡಿ ಎಂಬ ಜಾಹಿರಾತು ಎಲ್ಲೆಡೆ ಹರಿದಾಡಿತು. ಆರ್ಡರ್ ಓಪನ್ ಮಾಡಿದ ಕೆಲವೆ ಸೆಕೆಂಡ್‍ಗಳಲ್ಲಿ  ಸೈಟ್ ಗೆ 6 ಲಕ್ಷಕ್ಕೂ ಅಧಿಕ ಹಿಟ್ಸ್‍ ಗಳು ಬಂದಿದ್ದವು. ಸುಮಾರು ಏಳುವರೆ ಕೋಟಿ ಜನ ಬುಕ್ ಮಾಡಿದ್ದರು. ಅದರಲ್ಲಿ ಕೆಲವರು ಮುಂಗಡ ಹಣ ಕೊಟ್ಟು ಬುಕ್ ಮಾಡಿದ್ದರೆ ಇನ್ನು ಕೆಲವರು ಕ್ಯಾಶ್ ಆನ್ ಡಿಲೆವರಿ ಮಾಡಿದ್ದರು. ರಿಂಗಿಂಗ್ ಬೆಲ್ಸ್ ಎಂಬ ಕಂಪನಿ ಈ ಬಳಾಂಗ್ ಬಿಟ್ಟಿತ್ತು. ಕಂಪನಿಗೆ ಮುಖ್ಯಸ್ಥ ಮೋಹಿತ್ ಗೋಯಲ್ ನರೇಂದ್ರ ಮೋದಿಯವರ ಹೆಸರೇಳಿಕೊಂಡು ಇಂತಹ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದ. ಈಗ ಯಾರಿಗಾದರೂ ಆ ಮೊಬೈಲ್ ತಲುಪಿತ ಎಂದು ನೋಡಿದರೆ ಇಲ್ಲ ಎಂಬ ಉತ್ತರ ಬರುತ್ತದೆ. ಹಣವೂ ಸಹ ವಾಪಸ್ ಬಂದಿಲ್ಲ. ಈ ರೀತಿ ಬಹಿರಂಗವಾಗಿ ಜನರನ್ನು ಮೋಸ ಮಾಡುವು ದೊಡ್ಡ ಜಾಲವಿದೆ.

ಈಗ ಮೆಟ್ರೊ ಕಥೆಗೆ ಮತ್ತೆ ಬರೋಣ. ಇದು ನೇರವಾಗಿಯೇ ಹಲವು ನಿಯಮಗಳ ಹೆಸರಿನಲ್ಲಿ ನಡೆಯುವ ಲೂಟಿ ಅಷ್ಟೇ. ಮೆಂಟೇನೆನ್ಸ್‍ ಗಾಗಿ ಎಂದು ಅವರು ಸಬೂಬು ಹೇಳಿದರೂ, ಸಾವಿರಾರು ಕೋಟಿ ಹೂಡಿಕೆ ಮಾಡಿರುವ ಮೆಟ್ರೊಗೆ ಏಳೂವರೆ ಕೋಟೆ ಹೆಚ್ಚಿನ ಹೊರೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಇಷ್ಟು ದೊಡ್ಡ ಮಟ್ಟದ ವಿರೋಧ ಬರುತ್ತದೆ ಎಂದು ಸ್ವತಃ ಮೆಟ್ರೊದವರಿಗೆ ಅನ್ನಿಸಿರಲಿಲ್ಲ. ಈಗ ಪ್ರತಿಭಟನೆಯ ಕೂಗು ಡಿಸಿಎಂ ಪರಮೇಶ್ವರ್‍ ರನ್ನು ಮುಟ್ಟಿದೆ. ಚುನಾವಣಾ ಸಂದರ್ಭದಲ್ಲಿ ಹೊಸ ನಿರ್ಧಾರ ಬೇಡವಾಗಿತ್ತು ಎಂದು ಮೆಟ್ರೊ ಅಧಿಕಾರಿಗಳಿಗೆ ಹೇಳಿದ್ದಾರಂತೆ. ಇದು ಸಾಧ್ಯವಾಗಲು ಹೋರಾಟ ಮತ್ತಷ್ಟು ಜೋರಾಗಬೇಕಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...