Homeಕರ್ನಾಟಕಮೆಟ್ರೊ ಸ್ಮಾರ್ಟ್ ಕಾರ್ಡ್‍ನಲ್ಲಿ ಕನಿಷ್ಠ 50ರೂ ಠೇವಣಿ ಹಿಂದಿನ ಹುನ್ನಾರಗಳೇನು?

ಮೆಟ್ರೊ ಸ್ಮಾರ್ಟ್ ಕಾರ್ಡ್‍ನಲ್ಲಿ ಕನಿಷ್ಠ 50ರೂ ಠೇವಣಿ ಹಿಂದಿನ ಹುನ್ನಾರಗಳೇನು?

- Advertisement -
- Advertisement -

| ಮುತ್ತುರಾಜು |

ದಿನಾಂಕ 27-03-2019 ರಿಂದ ಬೆಂಗಳೂರು ಮೆಟ್ರೊ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ಇಲ್ಲದೆ, ಸಮರ್ಪಕ ಮಾಹಿತಿ ಕೊಡದೆ, ಸಾರ್ವಜನಿಕರ ಆಕ್ಷೇಪ ಕೇಳದೆ ಸ್ಮಾರ್ಟ್ ಕಾರ್ಡ್ ನಲ್ಲಿ ಕನಿಷ್ಟ 50 ರೂಪಾಯಿ ಹಣ ಮೆಟ್ರೊ ಪ್ರವೇಶಕ್ಕೆ ಇಟ್ಟುಕೊಳ್ಳಬೇಕು ಅಂತ ಆದೇಶ ಮಾಡಿದ್ದಾರೆ. ಮುಂಚೆ  ಕನಿಷ್ಠ 10 ರೂ ಇದ್ದರೂ ಕೂಡ ಪ್ರವೇಶ ಸಾಧ್ಯವಿತ್ತು. ಆದರೆ ಈಗ ನಿಮ್ಮ ಸ್ಮಾರ್ಟ್ ಕಾರ್ಡ್‍ನಲ್ಲಿ 49 ರೂಗಳಿದ್ದರೂ, ನೀವು ಮುಂದಿನ ನಿಲ್ದಾಣದಲ್ಲಿ ಇಳಿಯಬೇಕಿದ್ದರೂ (8.50ರೂ ದರ) ನಿಮಗೆ ಪ್ರವೇಶ ಸಿಗುವುದಿಲ್ಲ. ನೀವು ಮತ್ತೆ ಕನಿಷ್ಠ 50 ರೂಗಳನ್ನು ರೀಚಾರ್ಜ್ ಮಾಡಿಸಲೇಬೇಕು. ದೇಶದ ಯಾವ ಮೆಟ್ರೊದಲ್ಲಿಯೂ ಇಲ್ಲದ ಈ ನಿಯಮವನ್ನು ಬೆಂಗಳೂರು ಮೆಟ್ರೊ ಅಧಿಕಾರಿಗಳು ಜಾರಿ ಮಾಡಿದ್ದಾರೆ.

ಮೇಲ್ನೋಟಕ್ಕೆ ಅಸಂಬದ್ಧ ಎನ್ನಿಸುವ ಈ ನಿರ್ಧಾರದ ವಿರುದ್ಧ ಎಂತವರಿಗೂ ಸಿಟ್ಟು ಬರುತ್ತದೆ. ಹಾಗೆಯೇ ಹಲವು ಪ್ರಯಾಣಿಕರು ಈ ಹೊಸ ನಿಯಮದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಕೃಷಿಕ್ ಎ.ವಿ ಎನ್ನುವ ಸಾಮಾಜಿಕ ಕಾರ್ಯಕರ್ತನೊಬ್ಬ ಇದರ ವಿರುದ್ಧ ಸತತ ಎರಡು ದಿನಗಳ ಕಾಲ ಹೋರಾಟ ಮುಂದುವರೆಸಿದ್ದಾರೆ. ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯ ಮೆಟ್ರೊ ಹೊರಗಡೆ ಗಂಟೆಗಟ್ಟಲೇ ಪ್ಲೇಕಾರ್ಡ್ ಹಿಡಿದು ಪ್ರತಿಭಟಿಸಿದ್ದಲ್ಲದೇ 300ಕ್ಕೂ ಹೆಚ್ಚು ಪ್ರಯಾಣಿಕರ ಅಭಿಪ್ರಾಯ ಪಡೆದು ಸಹಿ ಸಂಗ್ರಯ ಅಭಿಯಾನ ಕೂಡ ಮಾಡಿದ್ದಾರೆ. ಪೋಲೀಸರು ಇವರನ್ನು ಬಂಧಿಸಿ ಬಿಡುಗಡೆ ಮಾಡಿದ ನಂತರ ತಮ್ಮ ಹೋರಾಟವನ್ನು ಟೌನ್ ಕಡೆಗೆ ತಿರುಗಿಸಿ ಅಲ್ಲಿಯೂ ಪ್ರತಿಭಟನೆ ನಡೆಸಿದ್ದಾರೆ.  ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಮತ್ತು ಕೆಲ ಸಾರ್ವಜನಿಕರು ಇದಕ್ಕೆ ಸಾಥ್ ನೀಡಿದ್ದಾರೆ.

ಜನರಿಗೆ ತೊಂದರೆಯಾಗುವ ಈ ನಿರ್ಧಾರವನ್ನು ಮೆಟ್ರೊ ಏಕೆ ತೆಗೆದುಕೊಂಡಿತ್ತು ಎಂದು ಹುಡುಕುತ್ತಾ ಹೋದರೆ ಇದರ ಹಿಂದಿನ ಹುನ್ನಾರಗಳು ಒಂದೊಂದೆ ತೆರೆದುಕೊಳ್ಳುತ್ತಿವೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಷಯವೆಂದರೆ ಪ್ರತಿಯೊಬ್ಬ ಪ್ರಯಾಣಿಕರು ಮೆಟ್ರೊ ಸ್ಮಾರ್ಟ್ ಕಾರ್ಡ್ ಖರೀದಿಸುವಾಗಲೇ 50ರೂಗಳನ್ನು ಕಟ್ಟಿರುತ್ತಾರೆ. ಆ ಹಣ ವಾಪಸ್ ಬರುವುದಿಲ್ಲ. 15 ಲಕ್ಷಕ್ಕೂ ಹೆಚ್ಚು ಮೆಟ್ರೊ ಕಾರ್ಡುಗಳು ಈಗಾಗಲೇ ವಿತರಣೆಯಾಗಿವೆ ಎಂದು ಅಂಕಿ ಅಂಶಗಳು ಹೇಳುತ್ತಿವೆ. 15 ಲಕ್ಷ * 50 ರೂ ಎಂದರೂ 7.5 ಕೋಟಿಯಷ್ಟು ದೊಡ್ಡ ಮೊತ್ತವಾಗುತ್ತದೆ. ಈಗ ಅನಿವಾರ್ಯವಾಗಿ ಮತ್ತೆ 50 ರೂ ಠೇವಣಿ ಇಡಬೇಕೆಂದರೆ ಮತ್ತೆ 7.5 ಕೋಟಿ ಹಣ ಕೆಲವೇ ದಿನಗಳಲ್ಲಿ ಮೆಟ್ರೊ ಪಾಲಾಗುತ್ತದೆ. ಈ ಹಣವೂ ಸಹ ಪ್ರಯಾಣಿಕರಿಗೆ ವಾಪಸ್ ಹೋಗುವುದಿಲ್ಲ. ಇಷ್ಟು ಹಣ ಒಮ್ಮೆಲೆ ಸಿಗುತ್ತದೆ ಎಂದರೆ ಬಿಡುವವರ್ಯಾರು ಹೇಳಿ.?

ಇಷ್ಟೊಂದು ದೊಡ್ಡ ಮೊತ್ತವನ್ನು ಮೆಟ್ರೋ ಎಲ್ಲಿ ಬೇಕಾದರೂ ಹೂಡಿಕೆ ಮಾಡಬಹುದು. ಅಥವಾ ಏಳುವರೆ ಕೋಟಿ ರೂಗಳನ್ನು ಮೆಟ್ರೊದವರು ತಿಂಗಳಿಗೆ ಕೇವಲ 3% ಬಡ್ಡಿಯಂತೆ ಸಾಲ ಕೊಟ್ಟರೂ ಸಾಕು ಎಷ್ಟಾಗುತ್ತದೆ ಲೆಕ್ಕ ಹಾಕಿ. ಪ್ರತಿ ತಿಂಗಳು ಅವರಿಗೆ 22.5 ಲಕ್ಷ ಬಡ್ಡಿ ಸಿಗುತ್ತದೆ ಎಂದರೆ ನೀವು ನಂಬಲೇಬೇಕು. ಈಗಾಗಲೇ  ಭಾರತದಲ್ಲಿಯೇ ಮೆಟ್ರೊ ದರ ಅತ್ಯಂತ ಹೆಚ್ಚು ಬೆಂಗಳೂರಿನಲ್ಲಿದೆ. ಇನ್ನು ದರ ಹೆಚ್ಚು ಮಾಡಲು ಸಾಧ್ಯವಿಲ್ಲ ಎಂದು ಈ ರೀತಿಯ ಅಡ್ಡ ದಾರಿಗಳನ್ನು ಮೆಟ್ರೊದವರು ಹುಡುಕಿಕೊಂಡು ಜನಸಾಮಾನ್ಯರಿಂದ ಲೂಟಿ ಮಾಡಲಾಗುತ್ತಿದೆ. ಮೆಟ್ರೊ ಪ್ರಯಾಣಿಕರು ಅಸಂಘಟಿತರಾಗಿರುವವರು. ಹಾಗಾಗಿ ಇದರ ವಿರುದ್ಧ ಸಂಘಟಿತ ಹೋರಾಟ ಸಾಧ್ಯವಿಲ್ಲ. ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ, ಬಹುತೇಕರು ಅಯ್ಯೋ 50ರೂ ತಾನೇ ಎಂದು ಸುಮ್ಮನಾಗಬೇಕಾದ ಪರಿಸ್ಥಿತಿ ಇರುವುದರಿಂದಲೇ ಮೆಟ್ರೊ ಈ ಜನವಿರೋಧಿ ನಿರ್ಧಾರವನ್ನು ತರಲು ಸಾಧ್ಯವಾಗಿದೆ.

ಈ ರೀತಿಯ ವಂಚನೆ ಮೆಟ್ರೊದಲ್ಲಿ ಮಾತ್ರವಲ್ಲಿ ಹಲವು ರಂಗಗಳಲ್ಲಿಯೂ ನಡೆಯುತ್ತಿದೆ. ಸ್ನ್ಯಾಪ್‍ಡೀಲ್ ಥರದ ಆನ್‍ಲೈನ್ ಮಾರಟಾಗಾರರು ಸಹ ಹಲವು ಬೆಲೆ ಬಾಳುವ ವಸ್ತುಗಳಿಗೆ ಶೇ.90% ರಷ್ಟು ರಿಯಾಯಿತಿ ಘೋಷಿಸುತ್ತಿತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜನ ಅದನ್ನು ನೋಡಿದ್ದೆ ತಡ ಇಷ್ಟೊಂದು ಕಡಿಮೆ ಬೆಲೆಯೇ, ನಮಗೊಂದು ಇರಲಿ ಎಂದು ಬುಕ್ ಮಾಡುತ್ತಾರೆ. ಕ್ಯಾಶ್ ಆನ್ ಡಿಲೆವರಿ ಅದು ತೆಗೆದುಕೊಳ್ಳದೇ ಕಾರ್ಡ್/ನೆಟ್ ಪೇಮೆಂಟ್ ಮಾಡಬೇಕಾಗುತ್ತದೆ. ಈ ರೀತಿಯಾಗಿ 500/- 1000/- ರೂಗಳಂತೆ ಸಾವಿರಾರು ಜನ ಆರ್ಡರ್ ಮಾಡಿದರೂ ಸಾಕು ಅದು ಕೋಟಿಗಟ್ಟಲೇ ಹಣ ಅವರ ಬಳಿ ಸಂಗ್ರಹವಾಗುತ್ತದೆ. 10-15 ದಿನ ಕಳೆದ ನಂತರ ಕಂಪನಿ ಹಲವು ಕಾರಣಗಳನ್ನು ಕೊಟ್ಟು ಆರ್ಡರ್ ಕ್ಯಾನ್ಸಲ್ ಮಾಡುತ್ತದೆ ಮತ್ತು ಅದಾದ ಎರಡು ಮೂರು ದಿನಗಳ ನಂತರ ಹಣವನ್ನು ಗ್ರಾಹಕರಿಗೆ ವಾಪಸ್ ಮಾಡುತ್ತದೆ. ಗ್ರಾಹಕರು ಅಬ್ಬ ಸದ್ಯ ನಮ್ಮ ಹಣ ವಾಪಸ್ ಬಂತಲ್ಲ ಎಂದು ನಿಟ್ಟುಸಿರು ಬಿಡುತ್ತಾರೆ. ಈ ಚಕ್ರ ಹೀಗೆ ಸುತ್ತಿತ್ತಿದ್ದರೆ ಕಂಪನಿ ಬಳಿ ಸದಾ ಕೋಟಿಗಟ್ಟಲೇ ಹಣ ಇದ್ದೆ ಇರುತ್ತದೆ. ಅದನ್ನು ಅವರು ಎಲ್ಲಾದರೂ ಹೂಡಿಕೆ ಮಾಡಿ ಅದರಿಂದ ಲಾಭ ಗಳಿಸುತ್ತಿರುತ್ತಾರೆ.

ನಿಮಗೆಲ್ಲಾ ನೆನಪಿದೆಯೇ? ಕೇವಲ 251ರೂಗಳಿಗೆ ಫ್ರೀಡಂ251 ಎಂಬ ಸ್ಮಾರ್ಟ್ ಫೋನ್ ಸಿಗುತ್ತದೆ ಈಗಲೇ ಬುಕ್ ಮಾಡಿ ಎಂಬ ಜಾಹಿರಾತು ಎಲ್ಲೆಡೆ ಹರಿದಾಡಿತು. ಆರ್ಡರ್ ಓಪನ್ ಮಾಡಿದ ಕೆಲವೆ ಸೆಕೆಂಡ್‍ಗಳಲ್ಲಿ  ಸೈಟ್ ಗೆ 6 ಲಕ್ಷಕ್ಕೂ ಅಧಿಕ ಹಿಟ್ಸ್‍ ಗಳು ಬಂದಿದ್ದವು. ಸುಮಾರು ಏಳುವರೆ ಕೋಟಿ ಜನ ಬುಕ್ ಮಾಡಿದ್ದರು. ಅದರಲ್ಲಿ ಕೆಲವರು ಮುಂಗಡ ಹಣ ಕೊಟ್ಟು ಬುಕ್ ಮಾಡಿದ್ದರೆ ಇನ್ನು ಕೆಲವರು ಕ್ಯಾಶ್ ಆನ್ ಡಿಲೆವರಿ ಮಾಡಿದ್ದರು. ರಿಂಗಿಂಗ್ ಬೆಲ್ಸ್ ಎಂಬ ಕಂಪನಿ ಈ ಬಳಾಂಗ್ ಬಿಟ್ಟಿತ್ತು. ಕಂಪನಿಗೆ ಮುಖ್ಯಸ್ಥ ಮೋಹಿತ್ ಗೋಯಲ್ ನರೇಂದ್ರ ಮೋದಿಯವರ ಹೆಸರೇಳಿಕೊಂಡು ಇಂತಹ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದ. ಈಗ ಯಾರಿಗಾದರೂ ಆ ಮೊಬೈಲ್ ತಲುಪಿತ ಎಂದು ನೋಡಿದರೆ ಇಲ್ಲ ಎಂಬ ಉತ್ತರ ಬರುತ್ತದೆ. ಹಣವೂ ಸಹ ವಾಪಸ್ ಬಂದಿಲ್ಲ. ಈ ರೀತಿ ಬಹಿರಂಗವಾಗಿ ಜನರನ್ನು ಮೋಸ ಮಾಡುವು ದೊಡ್ಡ ಜಾಲವಿದೆ.

ಈಗ ಮೆಟ್ರೊ ಕಥೆಗೆ ಮತ್ತೆ ಬರೋಣ. ಇದು ನೇರವಾಗಿಯೇ ಹಲವು ನಿಯಮಗಳ ಹೆಸರಿನಲ್ಲಿ ನಡೆಯುವ ಲೂಟಿ ಅಷ್ಟೇ. ಮೆಂಟೇನೆನ್ಸ್‍ ಗಾಗಿ ಎಂದು ಅವರು ಸಬೂಬು ಹೇಳಿದರೂ, ಸಾವಿರಾರು ಕೋಟಿ ಹೂಡಿಕೆ ಮಾಡಿರುವ ಮೆಟ್ರೊಗೆ ಏಳೂವರೆ ಕೋಟೆ ಹೆಚ್ಚಿನ ಹೊರೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಇಷ್ಟು ದೊಡ್ಡ ಮಟ್ಟದ ವಿರೋಧ ಬರುತ್ತದೆ ಎಂದು ಸ್ವತಃ ಮೆಟ್ರೊದವರಿಗೆ ಅನ್ನಿಸಿರಲಿಲ್ಲ. ಈಗ ಪ್ರತಿಭಟನೆಯ ಕೂಗು ಡಿಸಿಎಂ ಪರಮೇಶ್ವರ್‍ ರನ್ನು ಮುಟ್ಟಿದೆ. ಚುನಾವಣಾ ಸಂದರ್ಭದಲ್ಲಿ ಹೊಸ ನಿರ್ಧಾರ ಬೇಡವಾಗಿತ್ತು ಎಂದು ಮೆಟ್ರೊ ಅಧಿಕಾರಿಗಳಿಗೆ ಹೇಳಿದ್ದಾರಂತೆ. ಇದು ಸಾಧ್ಯವಾಗಲು ಹೋರಾಟ ಮತ್ತಷ್ಟು ಜೋರಾಗಬೇಕಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...