Homeಕರ್ನಾಟಕಮೆಟ್ರೊ ಸ್ಮಾರ್ಟ್ ಕಾರ್ಡ್‍ನಲ್ಲಿ ಕನಿಷ್ಠ 50ರೂ ಠೇವಣಿ ಹಿಂದಿನ ಹುನ್ನಾರಗಳೇನು?

ಮೆಟ್ರೊ ಸ್ಮಾರ್ಟ್ ಕಾರ್ಡ್‍ನಲ್ಲಿ ಕನಿಷ್ಠ 50ರೂ ಠೇವಣಿ ಹಿಂದಿನ ಹುನ್ನಾರಗಳೇನು?

- Advertisement -
- Advertisement -

| ಮುತ್ತುರಾಜು |

ದಿನಾಂಕ 27-03-2019 ರಿಂದ ಬೆಂಗಳೂರು ಮೆಟ್ರೊ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ಇಲ್ಲದೆ, ಸಮರ್ಪಕ ಮಾಹಿತಿ ಕೊಡದೆ, ಸಾರ್ವಜನಿಕರ ಆಕ್ಷೇಪ ಕೇಳದೆ ಸ್ಮಾರ್ಟ್ ಕಾರ್ಡ್ ನಲ್ಲಿ ಕನಿಷ್ಟ 50 ರೂಪಾಯಿ ಹಣ ಮೆಟ್ರೊ ಪ್ರವೇಶಕ್ಕೆ ಇಟ್ಟುಕೊಳ್ಳಬೇಕು ಅಂತ ಆದೇಶ ಮಾಡಿದ್ದಾರೆ. ಮುಂಚೆ  ಕನಿಷ್ಠ 10 ರೂ ಇದ್ದರೂ ಕೂಡ ಪ್ರವೇಶ ಸಾಧ್ಯವಿತ್ತು. ಆದರೆ ಈಗ ನಿಮ್ಮ ಸ್ಮಾರ್ಟ್ ಕಾರ್ಡ್‍ನಲ್ಲಿ 49 ರೂಗಳಿದ್ದರೂ, ನೀವು ಮುಂದಿನ ನಿಲ್ದಾಣದಲ್ಲಿ ಇಳಿಯಬೇಕಿದ್ದರೂ (8.50ರೂ ದರ) ನಿಮಗೆ ಪ್ರವೇಶ ಸಿಗುವುದಿಲ್ಲ. ನೀವು ಮತ್ತೆ ಕನಿಷ್ಠ 50 ರೂಗಳನ್ನು ರೀಚಾರ್ಜ್ ಮಾಡಿಸಲೇಬೇಕು. ದೇಶದ ಯಾವ ಮೆಟ್ರೊದಲ್ಲಿಯೂ ಇಲ್ಲದ ಈ ನಿಯಮವನ್ನು ಬೆಂಗಳೂರು ಮೆಟ್ರೊ ಅಧಿಕಾರಿಗಳು ಜಾರಿ ಮಾಡಿದ್ದಾರೆ.

ಮೇಲ್ನೋಟಕ್ಕೆ ಅಸಂಬದ್ಧ ಎನ್ನಿಸುವ ಈ ನಿರ್ಧಾರದ ವಿರುದ್ಧ ಎಂತವರಿಗೂ ಸಿಟ್ಟು ಬರುತ್ತದೆ. ಹಾಗೆಯೇ ಹಲವು ಪ್ರಯಾಣಿಕರು ಈ ಹೊಸ ನಿಯಮದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಕೃಷಿಕ್ ಎ.ವಿ ಎನ್ನುವ ಸಾಮಾಜಿಕ ಕಾರ್ಯಕರ್ತನೊಬ್ಬ ಇದರ ವಿರುದ್ಧ ಸತತ ಎರಡು ದಿನಗಳ ಕಾಲ ಹೋರಾಟ ಮುಂದುವರೆಸಿದ್ದಾರೆ. ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯ ಮೆಟ್ರೊ ಹೊರಗಡೆ ಗಂಟೆಗಟ್ಟಲೇ ಪ್ಲೇಕಾರ್ಡ್ ಹಿಡಿದು ಪ್ರತಿಭಟಿಸಿದ್ದಲ್ಲದೇ 300ಕ್ಕೂ ಹೆಚ್ಚು ಪ್ರಯಾಣಿಕರ ಅಭಿಪ್ರಾಯ ಪಡೆದು ಸಹಿ ಸಂಗ್ರಯ ಅಭಿಯಾನ ಕೂಡ ಮಾಡಿದ್ದಾರೆ. ಪೋಲೀಸರು ಇವರನ್ನು ಬಂಧಿಸಿ ಬಿಡುಗಡೆ ಮಾಡಿದ ನಂತರ ತಮ್ಮ ಹೋರಾಟವನ್ನು ಟೌನ್ ಕಡೆಗೆ ತಿರುಗಿಸಿ ಅಲ್ಲಿಯೂ ಪ್ರತಿಭಟನೆ ನಡೆಸಿದ್ದಾರೆ.  ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಮತ್ತು ಕೆಲ ಸಾರ್ವಜನಿಕರು ಇದಕ್ಕೆ ಸಾಥ್ ನೀಡಿದ್ದಾರೆ.

ಜನರಿಗೆ ತೊಂದರೆಯಾಗುವ ಈ ನಿರ್ಧಾರವನ್ನು ಮೆಟ್ರೊ ಏಕೆ ತೆಗೆದುಕೊಂಡಿತ್ತು ಎಂದು ಹುಡುಕುತ್ತಾ ಹೋದರೆ ಇದರ ಹಿಂದಿನ ಹುನ್ನಾರಗಳು ಒಂದೊಂದೆ ತೆರೆದುಕೊಳ್ಳುತ್ತಿವೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಷಯವೆಂದರೆ ಪ್ರತಿಯೊಬ್ಬ ಪ್ರಯಾಣಿಕರು ಮೆಟ್ರೊ ಸ್ಮಾರ್ಟ್ ಕಾರ್ಡ್ ಖರೀದಿಸುವಾಗಲೇ 50ರೂಗಳನ್ನು ಕಟ್ಟಿರುತ್ತಾರೆ. ಆ ಹಣ ವಾಪಸ್ ಬರುವುದಿಲ್ಲ. 15 ಲಕ್ಷಕ್ಕೂ ಹೆಚ್ಚು ಮೆಟ್ರೊ ಕಾರ್ಡುಗಳು ಈಗಾಗಲೇ ವಿತರಣೆಯಾಗಿವೆ ಎಂದು ಅಂಕಿ ಅಂಶಗಳು ಹೇಳುತ್ತಿವೆ. 15 ಲಕ್ಷ * 50 ರೂ ಎಂದರೂ 7.5 ಕೋಟಿಯಷ್ಟು ದೊಡ್ಡ ಮೊತ್ತವಾಗುತ್ತದೆ. ಈಗ ಅನಿವಾರ್ಯವಾಗಿ ಮತ್ತೆ 50 ರೂ ಠೇವಣಿ ಇಡಬೇಕೆಂದರೆ ಮತ್ತೆ 7.5 ಕೋಟಿ ಹಣ ಕೆಲವೇ ದಿನಗಳಲ್ಲಿ ಮೆಟ್ರೊ ಪಾಲಾಗುತ್ತದೆ. ಈ ಹಣವೂ ಸಹ ಪ್ರಯಾಣಿಕರಿಗೆ ವಾಪಸ್ ಹೋಗುವುದಿಲ್ಲ. ಇಷ್ಟು ಹಣ ಒಮ್ಮೆಲೆ ಸಿಗುತ್ತದೆ ಎಂದರೆ ಬಿಡುವವರ್ಯಾರು ಹೇಳಿ.?

ಇಷ್ಟೊಂದು ದೊಡ್ಡ ಮೊತ್ತವನ್ನು ಮೆಟ್ರೋ ಎಲ್ಲಿ ಬೇಕಾದರೂ ಹೂಡಿಕೆ ಮಾಡಬಹುದು. ಅಥವಾ ಏಳುವರೆ ಕೋಟಿ ರೂಗಳನ್ನು ಮೆಟ್ರೊದವರು ತಿಂಗಳಿಗೆ ಕೇವಲ 3% ಬಡ್ಡಿಯಂತೆ ಸಾಲ ಕೊಟ್ಟರೂ ಸಾಕು ಎಷ್ಟಾಗುತ್ತದೆ ಲೆಕ್ಕ ಹಾಕಿ. ಪ್ರತಿ ತಿಂಗಳು ಅವರಿಗೆ 22.5 ಲಕ್ಷ ಬಡ್ಡಿ ಸಿಗುತ್ತದೆ ಎಂದರೆ ನೀವು ನಂಬಲೇಬೇಕು. ಈಗಾಗಲೇ  ಭಾರತದಲ್ಲಿಯೇ ಮೆಟ್ರೊ ದರ ಅತ್ಯಂತ ಹೆಚ್ಚು ಬೆಂಗಳೂರಿನಲ್ಲಿದೆ. ಇನ್ನು ದರ ಹೆಚ್ಚು ಮಾಡಲು ಸಾಧ್ಯವಿಲ್ಲ ಎಂದು ಈ ರೀತಿಯ ಅಡ್ಡ ದಾರಿಗಳನ್ನು ಮೆಟ್ರೊದವರು ಹುಡುಕಿಕೊಂಡು ಜನಸಾಮಾನ್ಯರಿಂದ ಲೂಟಿ ಮಾಡಲಾಗುತ್ತಿದೆ. ಮೆಟ್ರೊ ಪ್ರಯಾಣಿಕರು ಅಸಂಘಟಿತರಾಗಿರುವವರು. ಹಾಗಾಗಿ ಇದರ ವಿರುದ್ಧ ಸಂಘಟಿತ ಹೋರಾಟ ಸಾಧ್ಯವಿಲ್ಲ. ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ, ಬಹುತೇಕರು ಅಯ್ಯೋ 50ರೂ ತಾನೇ ಎಂದು ಸುಮ್ಮನಾಗಬೇಕಾದ ಪರಿಸ್ಥಿತಿ ಇರುವುದರಿಂದಲೇ ಮೆಟ್ರೊ ಈ ಜನವಿರೋಧಿ ನಿರ್ಧಾರವನ್ನು ತರಲು ಸಾಧ್ಯವಾಗಿದೆ.

ಈ ರೀತಿಯ ವಂಚನೆ ಮೆಟ್ರೊದಲ್ಲಿ ಮಾತ್ರವಲ್ಲಿ ಹಲವು ರಂಗಗಳಲ್ಲಿಯೂ ನಡೆಯುತ್ತಿದೆ. ಸ್ನ್ಯಾಪ್‍ಡೀಲ್ ಥರದ ಆನ್‍ಲೈನ್ ಮಾರಟಾಗಾರರು ಸಹ ಹಲವು ಬೆಲೆ ಬಾಳುವ ವಸ್ತುಗಳಿಗೆ ಶೇ.90% ರಷ್ಟು ರಿಯಾಯಿತಿ ಘೋಷಿಸುತ್ತಿತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜನ ಅದನ್ನು ನೋಡಿದ್ದೆ ತಡ ಇಷ್ಟೊಂದು ಕಡಿಮೆ ಬೆಲೆಯೇ, ನಮಗೊಂದು ಇರಲಿ ಎಂದು ಬುಕ್ ಮಾಡುತ್ತಾರೆ. ಕ್ಯಾಶ್ ಆನ್ ಡಿಲೆವರಿ ಅದು ತೆಗೆದುಕೊಳ್ಳದೇ ಕಾರ್ಡ್/ನೆಟ್ ಪೇಮೆಂಟ್ ಮಾಡಬೇಕಾಗುತ್ತದೆ. ಈ ರೀತಿಯಾಗಿ 500/- 1000/- ರೂಗಳಂತೆ ಸಾವಿರಾರು ಜನ ಆರ್ಡರ್ ಮಾಡಿದರೂ ಸಾಕು ಅದು ಕೋಟಿಗಟ್ಟಲೇ ಹಣ ಅವರ ಬಳಿ ಸಂಗ್ರಹವಾಗುತ್ತದೆ. 10-15 ದಿನ ಕಳೆದ ನಂತರ ಕಂಪನಿ ಹಲವು ಕಾರಣಗಳನ್ನು ಕೊಟ್ಟು ಆರ್ಡರ್ ಕ್ಯಾನ್ಸಲ್ ಮಾಡುತ್ತದೆ ಮತ್ತು ಅದಾದ ಎರಡು ಮೂರು ದಿನಗಳ ನಂತರ ಹಣವನ್ನು ಗ್ರಾಹಕರಿಗೆ ವಾಪಸ್ ಮಾಡುತ್ತದೆ. ಗ್ರಾಹಕರು ಅಬ್ಬ ಸದ್ಯ ನಮ್ಮ ಹಣ ವಾಪಸ್ ಬಂತಲ್ಲ ಎಂದು ನಿಟ್ಟುಸಿರು ಬಿಡುತ್ತಾರೆ. ಈ ಚಕ್ರ ಹೀಗೆ ಸುತ್ತಿತ್ತಿದ್ದರೆ ಕಂಪನಿ ಬಳಿ ಸದಾ ಕೋಟಿಗಟ್ಟಲೇ ಹಣ ಇದ್ದೆ ಇರುತ್ತದೆ. ಅದನ್ನು ಅವರು ಎಲ್ಲಾದರೂ ಹೂಡಿಕೆ ಮಾಡಿ ಅದರಿಂದ ಲಾಭ ಗಳಿಸುತ್ತಿರುತ್ತಾರೆ.

ನಿಮಗೆಲ್ಲಾ ನೆನಪಿದೆಯೇ? ಕೇವಲ 251ರೂಗಳಿಗೆ ಫ್ರೀಡಂ251 ಎಂಬ ಸ್ಮಾರ್ಟ್ ಫೋನ್ ಸಿಗುತ್ತದೆ ಈಗಲೇ ಬುಕ್ ಮಾಡಿ ಎಂಬ ಜಾಹಿರಾತು ಎಲ್ಲೆಡೆ ಹರಿದಾಡಿತು. ಆರ್ಡರ್ ಓಪನ್ ಮಾಡಿದ ಕೆಲವೆ ಸೆಕೆಂಡ್‍ಗಳಲ್ಲಿ  ಸೈಟ್ ಗೆ 6 ಲಕ್ಷಕ್ಕೂ ಅಧಿಕ ಹಿಟ್ಸ್‍ ಗಳು ಬಂದಿದ್ದವು. ಸುಮಾರು ಏಳುವರೆ ಕೋಟಿ ಜನ ಬುಕ್ ಮಾಡಿದ್ದರು. ಅದರಲ್ಲಿ ಕೆಲವರು ಮುಂಗಡ ಹಣ ಕೊಟ್ಟು ಬುಕ್ ಮಾಡಿದ್ದರೆ ಇನ್ನು ಕೆಲವರು ಕ್ಯಾಶ್ ಆನ್ ಡಿಲೆವರಿ ಮಾಡಿದ್ದರು. ರಿಂಗಿಂಗ್ ಬೆಲ್ಸ್ ಎಂಬ ಕಂಪನಿ ಈ ಬಳಾಂಗ್ ಬಿಟ್ಟಿತ್ತು. ಕಂಪನಿಗೆ ಮುಖ್ಯಸ್ಥ ಮೋಹಿತ್ ಗೋಯಲ್ ನರೇಂದ್ರ ಮೋದಿಯವರ ಹೆಸರೇಳಿಕೊಂಡು ಇಂತಹ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದ. ಈಗ ಯಾರಿಗಾದರೂ ಆ ಮೊಬೈಲ್ ತಲುಪಿತ ಎಂದು ನೋಡಿದರೆ ಇಲ್ಲ ಎಂಬ ಉತ್ತರ ಬರುತ್ತದೆ. ಹಣವೂ ಸಹ ವಾಪಸ್ ಬಂದಿಲ್ಲ. ಈ ರೀತಿ ಬಹಿರಂಗವಾಗಿ ಜನರನ್ನು ಮೋಸ ಮಾಡುವು ದೊಡ್ಡ ಜಾಲವಿದೆ.

ಈಗ ಮೆಟ್ರೊ ಕಥೆಗೆ ಮತ್ತೆ ಬರೋಣ. ಇದು ನೇರವಾಗಿಯೇ ಹಲವು ನಿಯಮಗಳ ಹೆಸರಿನಲ್ಲಿ ನಡೆಯುವ ಲೂಟಿ ಅಷ್ಟೇ. ಮೆಂಟೇನೆನ್ಸ್‍ ಗಾಗಿ ಎಂದು ಅವರು ಸಬೂಬು ಹೇಳಿದರೂ, ಸಾವಿರಾರು ಕೋಟಿ ಹೂಡಿಕೆ ಮಾಡಿರುವ ಮೆಟ್ರೊಗೆ ಏಳೂವರೆ ಕೋಟೆ ಹೆಚ್ಚಿನ ಹೊರೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಇಷ್ಟು ದೊಡ್ಡ ಮಟ್ಟದ ವಿರೋಧ ಬರುತ್ತದೆ ಎಂದು ಸ್ವತಃ ಮೆಟ್ರೊದವರಿಗೆ ಅನ್ನಿಸಿರಲಿಲ್ಲ. ಈಗ ಪ್ರತಿಭಟನೆಯ ಕೂಗು ಡಿಸಿಎಂ ಪರಮೇಶ್ವರ್‍ ರನ್ನು ಮುಟ್ಟಿದೆ. ಚುನಾವಣಾ ಸಂದರ್ಭದಲ್ಲಿ ಹೊಸ ನಿರ್ಧಾರ ಬೇಡವಾಗಿತ್ತು ಎಂದು ಮೆಟ್ರೊ ಅಧಿಕಾರಿಗಳಿಗೆ ಹೇಳಿದ್ದಾರಂತೆ. ಇದು ಸಾಧ್ಯವಾಗಲು ಹೋರಾಟ ಮತ್ತಷ್ಟು ಜೋರಾಗಬೇಕಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...