Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಷ್ಟ್ರೀಯ ದಶಪಥ ಹೆದ್ದಾರಿಯ ಟಾರ್ ಕಿತ್ತು ಬಂದಿದೆ. ಮತ್ತೊಂದೆಡೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿಚಾರಕ್ಕೆ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ. ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ.

ಈ ಕಾಮಗಾರಿಯಲ್ಲೂ ಬಿಜೆಪಿ ಸಂಸದ ಕಮಿಷನ್ ತಿಂದ ಆರೋಪ

ಮಂಗಳವಾರ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ. ಕಮಿಷನ್ ತಿಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಯ ದಿನವೇ ಅಪಘಾತವೊಂದು ಸಂಭವಿಸಿತ್ತು. ಭಾನುವಾರ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 50 ಮೀಟರ್‌ ದೂರ ನಡೆಯುವ ಮೂಲಕ ಅಧಿಕೃತವಾಗಿ ದಶಪಥ ರಸ್ತೆಯನ್ನು ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಮಧ್ಯಾಹ್ನ 2:30ರ ಸುಮಾರಿಗೆ ಮದ್ದೂರು ಶಿಂಷಾ ನದಿ ಸೇತುವೆ ಬಳಿ ಕಾರು ಅಪಘಾತ ಸಂಭವಿಸಿತ್ತು. ಬೆಂಗಳೂರಿನಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಕಾರು, ಶಿಂಷಾ ನದಿ ಸೇತುವೆಯ ಬಳಿ ತಡೆಗೋಡೆಗೆ ಡಿಕ್ಕಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾಗಿತ್ತು. ಈ ರಸ್ತೆಯು ಅವೈಜ್ಣಾನಿಕವಾಗಿದೆ ಎಂದು ಹಲವರು ಈ ಹಿಂದಿನಿಂದಲೂ ಆರೋಪಿಸುತ್ತಿದ್ದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

ಟೋಲ್ ಸಂಗ್ರಹಕ್ಕೆ ವಿರೋಧ

ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ವಾಹನ ಸವಾರರಿಂದ ಮಂಗಳವಾರ (ಮಾರ್ಚ್ 14)ದಂದು ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ಸುಮಾರು 55 ಕಿ.ಮೀ, ಹೆದ್ದಾರಿಗೆ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಿಸಲು ಮುಂದಾಗಿದ್ದರು. ಆದರೆ ವಾಹನ ಸವಾರರು ಹಾಗೂ ಹಲವು ಸಂಘಟನೆಯವರು ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಹತ್ತಿರ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿದ್ದರು. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ್ದರು, ಅವರನ್ನೆಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟೋಲ್ ದರ ಹೀಗಿದೆ:

  • ಕಾರು, ಜೀಪು, ವ್ಯಾನ್​ಗಳಿಗೆ ಏಕಮುಖ ಸಂಚಾರಕ್ಕೆ 135 ರೂ., ಎರಡೂ ಕಡೆಗೆ 205 ರೂ.
  • ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ, ಮಿನಿ ಬಸ್​ಗಳಿಗೆ ಏಕಮುಖ ಸಂಚಾರಕ್ಕೆ 220 ರೂ., ಅದೇ ದಿನ ಮರುಸಂಚಾರಕ್ಕೆ 330 ರೂಪಾಯಿ.
  • ಬಸ್/ಟ್ರಕ್​ಗಳಿಗೆ ಏಕಮುಖ ಸಂಚಾರಕ್ಕೆ 460 ರೂ, ಎರಡೂ ಕಡೆಗೆ 690 ರೂ.

ಟೋಲ್ ಶುಲ್ಕ ಸಂಗ್ರಹ ಮಾಡಲು ಮುಂದಾಗುತ್ತಿದ್ದಂತೆಯೇ ಹಲವು ಸಂಘಟನೆಗಳ ಮುಖಂಡರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಹಲವು ಸಂಘಟನೆಗಳು ಮತ್ತು ಕಾಂಗ್ರೆಸ್‌ ನಾಯಕರು ಸರ್ಕಾರ ಜನರಿಂದ ಹೆಚ್ಚಿನ ದರ ವಿಧಿಸಿ ಸುಲಿಗೆ ಮಾಡುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ ಬೆಳಗ್ಗೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿವೆ. ಧರಣಿಗೆ ಕರೆ ಹಿನ್ನೆಲೆ ವಾಹನ ಸವಾರರಿಗೆ ಪ್ರತಿಭಟನೆಯ ಬಿಸಿ ಮುಟ್ಟಿದೆ ಎನ್ನಲಾಗಿದೆ. ಇದರಿಂದ ಸಂಚಾರ ದಟ್ಟಣೆಯೂ ಕೂಡ ಆಗಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ. ಹಲವು ವಾಹನ ಸವಾರರು ಈ ಟೋಲ್ ಸಂಗ್ರದ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ರಾಮನಗರ ಡಿಸಿ, ಎಸ್‌ಪಿಗೆ ಮನವಿ ಮಾಡಿದ್ದಾರೆ. ಅದರಂತೆಯೇ ಟೋಲ್‌ ಬಳಿ 3 ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಿದ್ದಾರೆ. ಭದ್ರತೆಗಾಗಿ 200‌ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಗಿದೆ. ಎಸ್‌ಪಿ ಕಾರ್ತಿಕ್ ರೆಡ್ಡಿ‌ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...