Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಷ್ಟ್ರೀಯ ದಶಪಥ ಹೆದ್ದಾರಿಯ ಟಾರ್ ಕಿತ್ತು ಬಂದಿದೆ. ಮತ್ತೊಂದೆಡೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿಚಾರಕ್ಕೆ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ. ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ.

ಈ ಕಾಮಗಾರಿಯಲ್ಲೂ ಬಿಜೆಪಿ ಸಂಸದ ಕಮಿಷನ್ ತಿಂದ ಆರೋಪ

ಮಂಗಳವಾರ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ. ಕಮಿಷನ್ ತಿಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಯ ದಿನವೇ ಅಪಘಾತವೊಂದು ಸಂಭವಿಸಿತ್ತು. ಭಾನುವಾರ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 50 ಮೀಟರ್‌ ದೂರ ನಡೆಯುವ ಮೂಲಕ ಅಧಿಕೃತವಾಗಿ ದಶಪಥ ರಸ್ತೆಯನ್ನು ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಮಧ್ಯಾಹ್ನ 2:30ರ ಸುಮಾರಿಗೆ ಮದ್ದೂರು ಶಿಂಷಾ ನದಿ ಸೇತುವೆ ಬಳಿ ಕಾರು ಅಪಘಾತ ಸಂಭವಿಸಿತ್ತು. ಬೆಂಗಳೂರಿನಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಕಾರು, ಶಿಂಷಾ ನದಿ ಸೇತುವೆಯ ಬಳಿ ತಡೆಗೋಡೆಗೆ ಡಿಕ್ಕಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾಗಿತ್ತು. ಈ ರಸ್ತೆಯು ಅವೈಜ್ಣಾನಿಕವಾಗಿದೆ ಎಂದು ಹಲವರು ಈ ಹಿಂದಿನಿಂದಲೂ ಆರೋಪಿಸುತ್ತಿದ್ದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

ಟೋಲ್ ಸಂಗ್ರಹಕ್ಕೆ ವಿರೋಧ

ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ವಾಹನ ಸವಾರರಿಂದ ಮಂಗಳವಾರ (ಮಾರ್ಚ್ 14)ದಂದು ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ಸುಮಾರು 55 ಕಿ.ಮೀ, ಹೆದ್ದಾರಿಗೆ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಿಸಲು ಮುಂದಾಗಿದ್ದರು. ಆದರೆ ವಾಹನ ಸವಾರರು ಹಾಗೂ ಹಲವು ಸಂಘಟನೆಯವರು ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಹತ್ತಿರ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿದ್ದರು. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ್ದರು, ಅವರನ್ನೆಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟೋಲ್ ದರ ಹೀಗಿದೆ:

  • ಕಾರು, ಜೀಪು, ವ್ಯಾನ್​ಗಳಿಗೆ ಏಕಮುಖ ಸಂಚಾರಕ್ಕೆ 135 ರೂ., ಎರಡೂ ಕಡೆಗೆ 205 ರೂ.
  • ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ, ಮಿನಿ ಬಸ್​ಗಳಿಗೆ ಏಕಮುಖ ಸಂಚಾರಕ್ಕೆ 220 ರೂ., ಅದೇ ದಿನ ಮರುಸಂಚಾರಕ್ಕೆ 330 ರೂಪಾಯಿ.
  • ಬಸ್/ಟ್ರಕ್​ಗಳಿಗೆ ಏಕಮುಖ ಸಂಚಾರಕ್ಕೆ 460 ರೂ, ಎರಡೂ ಕಡೆಗೆ 690 ರೂ.

ಟೋಲ್ ಶುಲ್ಕ ಸಂಗ್ರಹ ಮಾಡಲು ಮುಂದಾಗುತ್ತಿದ್ದಂತೆಯೇ ಹಲವು ಸಂಘಟನೆಗಳ ಮುಖಂಡರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಹಲವು ಸಂಘಟನೆಗಳು ಮತ್ತು ಕಾಂಗ್ರೆಸ್‌ ನಾಯಕರು ಸರ್ಕಾರ ಜನರಿಂದ ಹೆಚ್ಚಿನ ದರ ವಿಧಿಸಿ ಸುಲಿಗೆ ಮಾಡುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ ಬೆಳಗ್ಗೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿವೆ. ಧರಣಿಗೆ ಕರೆ ಹಿನ್ನೆಲೆ ವಾಹನ ಸವಾರರಿಗೆ ಪ್ರತಿಭಟನೆಯ ಬಿಸಿ ಮುಟ್ಟಿದೆ ಎನ್ನಲಾಗಿದೆ. ಇದರಿಂದ ಸಂಚಾರ ದಟ್ಟಣೆಯೂ ಕೂಡ ಆಗಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ. ಹಲವು ವಾಹನ ಸವಾರರು ಈ ಟೋಲ್ ಸಂಗ್ರದ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ರಾಮನಗರ ಡಿಸಿ, ಎಸ್‌ಪಿಗೆ ಮನವಿ ಮಾಡಿದ್ದಾರೆ. ಅದರಂತೆಯೇ ಟೋಲ್‌ ಬಳಿ 3 ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಿದ್ದಾರೆ. ಭದ್ರತೆಗಾಗಿ 200‌ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಗಿದೆ. ಎಸ್‌ಪಿ ಕಾರ್ತಿಕ್ ರೆಡ್ಡಿ‌ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...