Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಷ್ಟ್ರೀಯ ದಶಪಥ ಹೆದ್ದಾರಿಯ ಟಾರ್ ಕಿತ್ತು ಬಂದಿದೆ. ಮತ್ತೊಂದೆಡೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿಚಾರಕ್ಕೆ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ. ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ.

ಈ ಕಾಮಗಾರಿಯಲ್ಲೂ ಬಿಜೆಪಿ ಸಂಸದ ಕಮಿಷನ್ ತಿಂದ ಆರೋಪ

ಮಂಗಳವಾರ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ. ಕಮಿಷನ್ ತಿಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಯ ದಿನವೇ ಅಪಘಾತವೊಂದು ಸಂಭವಿಸಿತ್ತು. ಭಾನುವಾರ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 50 ಮೀಟರ್‌ ದೂರ ನಡೆಯುವ ಮೂಲಕ ಅಧಿಕೃತವಾಗಿ ದಶಪಥ ರಸ್ತೆಯನ್ನು ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಮಧ್ಯಾಹ್ನ 2:30ರ ಸುಮಾರಿಗೆ ಮದ್ದೂರು ಶಿಂಷಾ ನದಿ ಸೇತುವೆ ಬಳಿ ಕಾರು ಅಪಘಾತ ಸಂಭವಿಸಿತ್ತು. ಬೆಂಗಳೂರಿನಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಕಾರು, ಶಿಂಷಾ ನದಿ ಸೇತುವೆಯ ಬಳಿ ತಡೆಗೋಡೆಗೆ ಡಿಕ್ಕಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾಗಿತ್ತು. ಈ ರಸ್ತೆಯು ಅವೈಜ್ಣಾನಿಕವಾಗಿದೆ ಎಂದು ಹಲವರು ಈ ಹಿಂದಿನಿಂದಲೂ ಆರೋಪಿಸುತ್ತಿದ್ದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

ಟೋಲ್ ಸಂಗ್ರಹಕ್ಕೆ ವಿರೋಧ

ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ವಾಹನ ಸವಾರರಿಂದ ಮಂಗಳವಾರ (ಮಾರ್ಚ್ 14)ದಂದು ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ಸುಮಾರು 55 ಕಿ.ಮೀ, ಹೆದ್ದಾರಿಗೆ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಿಸಲು ಮುಂದಾಗಿದ್ದರು. ಆದರೆ ವಾಹನ ಸವಾರರು ಹಾಗೂ ಹಲವು ಸಂಘಟನೆಯವರು ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಹತ್ತಿರ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿದ್ದರು. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ್ದರು, ಅವರನ್ನೆಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟೋಲ್ ದರ ಹೀಗಿದೆ:

  • ಕಾರು, ಜೀಪು, ವ್ಯಾನ್​ಗಳಿಗೆ ಏಕಮುಖ ಸಂಚಾರಕ್ಕೆ 135 ರೂ., ಎರಡೂ ಕಡೆಗೆ 205 ರೂ.
  • ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ, ಮಿನಿ ಬಸ್​ಗಳಿಗೆ ಏಕಮುಖ ಸಂಚಾರಕ್ಕೆ 220 ರೂ., ಅದೇ ದಿನ ಮರುಸಂಚಾರಕ್ಕೆ 330 ರೂಪಾಯಿ.
  • ಬಸ್/ಟ್ರಕ್​ಗಳಿಗೆ ಏಕಮುಖ ಸಂಚಾರಕ್ಕೆ 460 ರೂ, ಎರಡೂ ಕಡೆಗೆ 690 ರೂ.

ಟೋಲ್ ಶುಲ್ಕ ಸಂಗ್ರಹ ಮಾಡಲು ಮುಂದಾಗುತ್ತಿದ್ದಂತೆಯೇ ಹಲವು ಸಂಘಟನೆಗಳ ಮುಖಂಡರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಹಲವು ಸಂಘಟನೆಗಳು ಮತ್ತು ಕಾಂಗ್ರೆಸ್‌ ನಾಯಕರು ಸರ್ಕಾರ ಜನರಿಂದ ಹೆಚ್ಚಿನ ದರ ವಿಧಿಸಿ ಸುಲಿಗೆ ಮಾಡುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ ಬೆಳಗ್ಗೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿವೆ. ಧರಣಿಗೆ ಕರೆ ಹಿನ್ನೆಲೆ ವಾಹನ ಸವಾರರಿಗೆ ಪ್ರತಿಭಟನೆಯ ಬಿಸಿ ಮುಟ್ಟಿದೆ ಎನ್ನಲಾಗಿದೆ. ಇದರಿಂದ ಸಂಚಾರ ದಟ್ಟಣೆಯೂ ಕೂಡ ಆಗಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ. ಹಲವು ವಾಹನ ಸವಾರರು ಈ ಟೋಲ್ ಸಂಗ್ರದ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ರಾಮನಗರ ಡಿಸಿ, ಎಸ್‌ಪಿಗೆ ಮನವಿ ಮಾಡಿದ್ದಾರೆ. ಅದರಂತೆಯೇ ಟೋಲ್‌ ಬಳಿ 3 ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಿದ್ದಾರೆ. ಭದ್ರತೆಗಾಗಿ 200‌ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಗಿದೆ. ಎಸ್‌ಪಿ ಕಾರ್ತಿಕ್ ರೆಡ್ಡಿ‌ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...