Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದರು. ಆದರೆ ಉದ್ಘಾಟನೆಯಾದ ಮರುದಿನವೇ ರಾಷ್ಟ್ರೀಯ ದಶಪಥ ಹೆದ್ದಾರಿಯ ಟಾರ್ ಕಿತ್ತು ಬಂದಿದೆ. ಮತ್ತೊಂದೆಡೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿಚಾರಕ್ಕೆ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ಟಾರ್ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ. ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕಲಾಗಿದೆ.

ಈ ಕಾಮಗಾರಿಯಲ್ಲೂ ಬಿಜೆಪಿ ಸಂಸದ ಕಮಿಷನ್ ತಿಂದ ಆರೋಪ

ಮಂಗಳವಾರ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ. ಕಮಿಷನ್ ತಿಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಯ ದಿನವೇ ಅಪಘಾತವೊಂದು ಸಂಭವಿಸಿತ್ತು. ಭಾನುವಾರ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 50 ಮೀಟರ್‌ ದೂರ ನಡೆಯುವ ಮೂಲಕ ಅಧಿಕೃತವಾಗಿ ದಶಪಥ ರಸ್ತೆಯನ್ನು ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಮಧ್ಯಾಹ್ನ 2:30ರ ಸುಮಾರಿಗೆ ಮದ್ದೂರು ಶಿಂಷಾ ನದಿ ಸೇತುವೆ ಬಳಿ ಕಾರು ಅಪಘಾತ ಸಂಭವಿಸಿತ್ತು. ಬೆಂಗಳೂರಿನಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಕಾರು, ಶಿಂಷಾ ನದಿ ಸೇತುವೆಯ ಬಳಿ ತಡೆಗೋಡೆಗೆ ಡಿಕ್ಕಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾಗಿತ್ತು. ಈ ರಸ್ತೆಯು ಅವೈಜ್ಣಾನಿಕವಾಗಿದೆ ಎಂದು ಹಲವರು ಈ ಹಿಂದಿನಿಂದಲೂ ಆರೋಪಿಸುತ್ತಿದ್ದರು.

ಇದನ್ನೂ ಓದಿ: ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

ಟೋಲ್ ಸಂಗ್ರಹಕ್ಕೆ ವಿರೋಧ

ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ವಾಹನ ಸವಾರರಿಂದ ಮಂಗಳವಾರ (ಮಾರ್ಚ್ 14)ದಂದು ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ಸುಮಾರು 55 ಕಿ.ಮೀ, ಹೆದ್ದಾರಿಗೆ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಿಸಲು ಮುಂದಾಗಿದ್ದರು. ಆದರೆ ವಾಹನ ಸವಾರರು ಹಾಗೂ ಹಲವು ಸಂಘಟನೆಯವರು ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಹತ್ತಿರ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿದ್ದರು. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ್ದರು, ಅವರನ್ನೆಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟೋಲ್ ದರ ಹೀಗಿದೆ:

  • ಕಾರು, ಜೀಪು, ವ್ಯಾನ್​ಗಳಿಗೆ ಏಕಮುಖ ಸಂಚಾರಕ್ಕೆ 135 ರೂ., ಎರಡೂ ಕಡೆಗೆ 205 ರೂ.
  • ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ, ಮಿನಿ ಬಸ್​ಗಳಿಗೆ ಏಕಮುಖ ಸಂಚಾರಕ್ಕೆ 220 ರೂ., ಅದೇ ದಿನ ಮರುಸಂಚಾರಕ್ಕೆ 330 ರೂಪಾಯಿ.
  • ಬಸ್/ಟ್ರಕ್​ಗಳಿಗೆ ಏಕಮುಖ ಸಂಚಾರಕ್ಕೆ 460 ರೂ, ಎರಡೂ ಕಡೆಗೆ 690 ರೂ.

ಟೋಲ್ ಶುಲ್ಕ ಸಂಗ್ರಹ ಮಾಡಲು ಮುಂದಾಗುತ್ತಿದ್ದಂತೆಯೇ ಹಲವು ಸಂಘಟನೆಗಳ ಮುಖಂಡರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಹಲವು ಸಂಘಟನೆಗಳು ಮತ್ತು ಕಾಂಗ್ರೆಸ್‌ ನಾಯಕರು ಸರ್ಕಾರ ಜನರಿಂದ ಹೆಚ್ಚಿನ ದರ ವಿಧಿಸಿ ಸುಲಿಗೆ ಮಾಡುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ ಬೆಳಗ್ಗೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿವೆ. ಧರಣಿಗೆ ಕರೆ ಹಿನ್ನೆಲೆ ವಾಹನ ಸವಾರರಿಗೆ ಪ್ರತಿಭಟನೆಯ ಬಿಸಿ ಮುಟ್ಟಿದೆ ಎನ್ನಲಾಗಿದೆ. ಇದರಿಂದ ಸಂಚಾರ ದಟ್ಟಣೆಯೂ ಕೂಡ ಆಗಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ. ಹಲವು ವಾಹನ ಸವಾರರು ಈ ಟೋಲ್ ಸಂಗ್ರದ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ರಾಮನಗರ ಡಿಸಿ, ಎಸ್‌ಪಿಗೆ ಮನವಿ ಮಾಡಿದ್ದಾರೆ. ಅದರಂತೆಯೇ ಟೋಲ್‌ ಬಳಿ 3 ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಿದ್ದಾರೆ. ಭದ್ರತೆಗಾಗಿ 200‌ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಗಿದೆ. ಎಸ್‌ಪಿ ಕಾರ್ತಿಕ್ ರೆಡ್ಡಿ‌ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...