Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (ಎನ್‌ಎಚ್ 275) ಆರಂಭವಾದ ಮೊದಲ ದಿನದಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್ ಸಂಗ್ರಹಿಸಲು ಮುಂದಾಗಿದ್ದು, ಇದರಿಂದ ವಾಹನ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗಿದೆ. ಈ ಕುರಿತು ಮಾಧ್ಯಮಗಳು ನಿರಂತರವಾಗಿ ವರದಿ ಬಿತ್ತರಿಸುತ್ತಿರುವ ಹಿನ್ನೆಲೆ ಕರ್ನಾಟಕ ಹೈಕೋರ್ಟ್ ಬುಧವಾರ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಲು ಮುಂದಾಗಿದೆ.

ವಾಹನ ಚಾಲಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಸೂಚನೆ ನೀಡಿದೆ.

ಬೆಂಗಳೂರಿನಿಂದ ಕನಕಪುರದವರೆಗಿನ NH-209 ರ ಅಗಲೀಕರಣ ಮತ್ತು ನಿರ್ವಹಣಾ ಕಾಮಗಾರಿಗಳಲ್ಲಿ ವಿಳಂಬ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸದಿರುವುದುರ ಕುರಿತಾದ PIL ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪೀಠವು ಈ ನಿರ್ದೇಶನಗಳನ್ನು ನೀಡಿದೆ.

ಇದನ್ನೂ ಓದು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

”ಕಾಮಗಾರಿ ಇನ್ನೂ ಪೂರ್ಣಗೊಳ್ಳದೇ ತೆರಿಗೆ ಅಥವಾ ಟೋಲ್‌ ವಸೂಲಿ ಮಾಡುವುದು ನ್ಯಾಯಸಮ್ಮತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸುದ್ದಿಯನ್ನು ನ್ಯಾಯಾಲಯ ಉಲ್ಲೇಖಿಸಿದೆ. ತಾಂತ್ರಿಕ ದೋಷಗಳಿಂದಾಗಿ ಟೋಲ್ ಬಳಿಯಿರುವ ಸೆನ್ಸಾರ್‌ಗಳು ಕೆಲಸ ಮಾಡುತ್ತಿಲ್ಲ. ಬೂಮ್ ಬ್ಯಾರಿಯರ್‌ಗಳು ಕಾರಿನ ಗಾಜು, ಡಿಕ್ಕಿಗಳ ಮೇಲೆ ಬೀಳುತ್ತವೆ.ಇದರಿಂದ ಸರ್ಕಾರಿ ವಾಹನಗಳು ಜಖಂಗೊಂಡಿವೆ ಇದಕ್ಕೆ ದೋಷಪೂರಿತ ಕಾರ್ಯನಿರ್ವಹಣೆ ಅಥವಾ ಕಾರ್ಯವಿಧಾನವೇ ಕಾರಣ” ಎಂದು ಪೀಠವು ಹೇಳಿದೆ.

ಸುದ್ದಿ ವರದಿಗಳನ್ನು ಉಲ್ಲೇಖಿಸಿದ ಪೀಠವು, ”ಫಾಸ್ಟ್-ಟ್ರ್ಯಾಕ್ ಗುರುತಿಸುವಿಕೆಯಲ್ಲಿ ತಾಂತ್ರಿಕ ದೋಷಗಳಿಂದಾಗಿ ವಾಹನ ಸವಾರರು ದೀರ್ಘ ಸರತಿ ಸಾಲಿನಲ್ಲಿ ಕಾಯುವಂತಾಗಿದೆ. ಇವೆಲ್ಲವೂ ವಾಹನಗಳ ದಟ್ಟಣೆಗೆ ಕಾರಣವಾಯಿತು ಮತ್ತು ವಾಹನ ಚಾಲಕರು ಸರ್ವಿಸ್ ರಸ್ತೆಯನ್ನು ಬಳಸಲು ಒತ್ತಾಯಿಸಿರುವ” ಬಗ್ಗೆಯೂ ಪೀಠವು ಉಲ್ಲೇಖಿಸಿದೆ.

ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು, 2008ಅನ್ನು ಉಲ್ಲೇಖಿಸಿದ ಪೀಠವು, ಎಲ್ಲಾ ನಿಯಮಗಳನ್ನು ಅನುಸರಿಸಲಾಗಿದೆಯೇ ಎಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿತು. “ರಾಷ್ಟ್ರೀಯ ಹೆದ್ದಾರಿಗಳ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ನಿಯಮಗಳು-2008ಕ್ಕಿಂತ ಇದು ಸ್ವಲ್ಪ ಭಿನ್ನವಾಗಿರಬಹುದು. ಆದರೆ ನಿಯಮ 3 ಶುಲ್ಕವನ್ನು ವಿಧಿಸುವುದನ್ನು ಉಲ್ಲೇಖಿಸುತ್ತದೆ. ಅಧಿಸೂಚನೆಯ ಪ್ರಕಟಣೆ ಮತ್ತು ಶುಲ್ಕದ ಅಧಿಸೂಚನೆ ಮತ್ತು ಸಂಗ್ರಹಣೆಯ ನಡುವಿನ ನಿಗದಿತ ಅವಧಿ ಸೇರಿದಂತೆ ವಿವಿಧ ಪೂರ್ವಾಪೇಕ್ಷಿತಗಳಿವೆ. ಆದರೆ ಈ ಅಂಶಗಳ ಬಗ್ಗೆ ಗಮನಹರಿಸದೆ ಪ್ರಯಾಣಿಕರಿಂದ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಪೀಠ ಹೇಳಿದೆ.

ಬೆಂಗಳೂರು-ಕನಕಪುರ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಈ ರಸ್ತೆಯ ವಿಸ್ತರಣೆಯನ್ನು ಪರಿಶೀಲಿಸಲು ನ್ಯಾಯಾಲಯದ ಆಯುಕ್ತರಾಗಿ ನ್ಯಾಯವಾದಿ ಶಿವಪ್ರಸಾದ್ ಶಾನನಗೌಡರನ್ನು ನೇಮಿಸಿತು.

ತಾಂತ್ರಿಕ ಅಂಶಗಳ ಕುರಿತು ನ್ಯಾಯಾಲಯದ ಆಯುಕ್ತರಿಗೆ ಸಹಾಯ ಮಾಡಲು ಸಹಾಯಕ ಅಭಿಯಂತರರನ್ನು ನಿಯೋಜಿಸುವಂತೆ ರಾಮನಗರ ವಿಭಾಗದ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ. ಕೆಲಸದ ಹಂತ, ಕೆಲಸದ ಗುಣಮಟ್ಟ ಮತ್ತು ಸುರಕ್ಷತಾ ಕ್ರಮಗಳ ಅನುಸರಣೆಯನ್ನು ಮೌಲ್ಯಮಾಪನ ಮಾಡಲು ಮತ್ತು ಮೂರು ವಾರಗಳಲ್ಲಿ ಅದರ ವರದಿ ನೀಡುವಂತೆ ನ್ಯಾಯಾಲಯವು ಆಯುಕ್ತರಿಗೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...