Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ: ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (ಎನ್‌ಎಚ್ 275) ಆರಂಭವಾದ ಮೊದಲ ದಿನದಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್ ಸಂಗ್ರಹಿಸಲು ಮುಂದಾಗಿದ್ದು, ಇದರಿಂದ ವಾಹನ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗಿದೆ. ಈ ಕುರಿತು ಮಾಧ್ಯಮಗಳು ನಿರಂತರವಾಗಿ ವರದಿ ಬಿತ್ತರಿಸುತ್ತಿರುವ ಹಿನ್ನೆಲೆ ಕರ್ನಾಟಕ ಹೈಕೋರ್ಟ್ ಬುಧವಾರ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಲು ಮುಂದಾಗಿದೆ.

ವಾಹನ ಚಾಲಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಸೂಚನೆ ನೀಡಿದೆ.

ಬೆಂಗಳೂರಿನಿಂದ ಕನಕಪುರದವರೆಗಿನ NH-209 ರ ಅಗಲೀಕರಣ ಮತ್ತು ನಿರ್ವಹಣಾ ಕಾಮಗಾರಿಗಳಲ್ಲಿ ವಿಳಂಬ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸದಿರುವುದುರ ಕುರಿತಾದ PIL ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪೀಠವು ಈ ನಿರ್ದೇಶನಗಳನ್ನು ನೀಡಿದೆ.

ಇದನ್ನೂ ಓದು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ಮರುದಿನವೇ ಕಿತ್ತೋದ ಟಾರ್; ಟೋಲ್ ಸಂಗ್ರಹಕ್ಕೆ ವಿರೋಧ

”ಕಾಮಗಾರಿ ಇನ್ನೂ ಪೂರ್ಣಗೊಳ್ಳದೇ ತೆರಿಗೆ ಅಥವಾ ಟೋಲ್‌ ವಸೂಲಿ ಮಾಡುವುದು ನ್ಯಾಯಸಮ್ಮತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸುದ್ದಿಯನ್ನು ನ್ಯಾಯಾಲಯ ಉಲ್ಲೇಖಿಸಿದೆ. ತಾಂತ್ರಿಕ ದೋಷಗಳಿಂದಾಗಿ ಟೋಲ್ ಬಳಿಯಿರುವ ಸೆನ್ಸಾರ್‌ಗಳು ಕೆಲಸ ಮಾಡುತ್ತಿಲ್ಲ. ಬೂಮ್ ಬ್ಯಾರಿಯರ್‌ಗಳು ಕಾರಿನ ಗಾಜು, ಡಿಕ್ಕಿಗಳ ಮೇಲೆ ಬೀಳುತ್ತವೆ.ಇದರಿಂದ ಸರ್ಕಾರಿ ವಾಹನಗಳು ಜಖಂಗೊಂಡಿವೆ ಇದಕ್ಕೆ ದೋಷಪೂರಿತ ಕಾರ್ಯನಿರ್ವಹಣೆ ಅಥವಾ ಕಾರ್ಯವಿಧಾನವೇ ಕಾರಣ” ಎಂದು ಪೀಠವು ಹೇಳಿದೆ.

ಸುದ್ದಿ ವರದಿಗಳನ್ನು ಉಲ್ಲೇಖಿಸಿದ ಪೀಠವು, ”ಫಾಸ್ಟ್-ಟ್ರ್ಯಾಕ್ ಗುರುತಿಸುವಿಕೆಯಲ್ಲಿ ತಾಂತ್ರಿಕ ದೋಷಗಳಿಂದಾಗಿ ವಾಹನ ಸವಾರರು ದೀರ್ಘ ಸರತಿ ಸಾಲಿನಲ್ಲಿ ಕಾಯುವಂತಾಗಿದೆ. ಇವೆಲ್ಲವೂ ವಾಹನಗಳ ದಟ್ಟಣೆಗೆ ಕಾರಣವಾಯಿತು ಮತ್ತು ವಾಹನ ಚಾಲಕರು ಸರ್ವಿಸ್ ರಸ್ತೆಯನ್ನು ಬಳಸಲು ಒತ್ತಾಯಿಸಿರುವ” ಬಗ್ಗೆಯೂ ಪೀಠವು ಉಲ್ಲೇಖಿಸಿದೆ.

ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು, 2008ಅನ್ನು ಉಲ್ಲೇಖಿಸಿದ ಪೀಠವು, ಎಲ್ಲಾ ನಿಯಮಗಳನ್ನು ಅನುಸರಿಸಲಾಗಿದೆಯೇ ಎಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿತು. “ರಾಷ್ಟ್ರೀಯ ಹೆದ್ದಾರಿಗಳ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ನಿಯಮಗಳು-2008ಕ್ಕಿಂತ ಇದು ಸ್ವಲ್ಪ ಭಿನ್ನವಾಗಿರಬಹುದು. ಆದರೆ ನಿಯಮ 3 ಶುಲ್ಕವನ್ನು ವಿಧಿಸುವುದನ್ನು ಉಲ್ಲೇಖಿಸುತ್ತದೆ. ಅಧಿಸೂಚನೆಯ ಪ್ರಕಟಣೆ ಮತ್ತು ಶುಲ್ಕದ ಅಧಿಸೂಚನೆ ಮತ್ತು ಸಂಗ್ರಹಣೆಯ ನಡುವಿನ ನಿಗದಿತ ಅವಧಿ ಸೇರಿದಂತೆ ವಿವಿಧ ಪೂರ್ವಾಪೇಕ್ಷಿತಗಳಿವೆ. ಆದರೆ ಈ ಅಂಶಗಳ ಬಗ್ಗೆ ಗಮನಹರಿಸದೆ ಪ್ರಯಾಣಿಕರಿಂದ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಪೀಠ ಹೇಳಿದೆ.

ಬೆಂಗಳೂರು-ಕನಕಪುರ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಈ ರಸ್ತೆಯ ವಿಸ್ತರಣೆಯನ್ನು ಪರಿಶೀಲಿಸಲು ನ್ಯಾಯಾಲಯದ ಆಯುಕ್ತರಾಗಿ ನ್ಯಾಯವಾದಿ ಶಿವಪ್ರಸಾದ್ ಶಾನನಗೌಡರನ್ನು ನೇಮಿಸಿತು.

ತಾಂತ್ರಿಕ ಅಂಶಗಳ ಕುರಿತು ನ್ಯಾಯಾಲಯದ ಆಯುಕ್ತರಿಗೆ ಸಹಾಯ ಮಾಡಲು ಸಹಾಯಕ ಅಭಿಯಂತರರನ್ನು ನಿಯೋಜಿಸುವಂತೆ ರಾಮನಗರ ವಿಭಾಗದ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ. ಕೆಲಸದ ಹಂತ, ಕೆಲಸದ ಗುಣಮಟ್ಟ ಮತ್ತು ಸುರಕ್ಷತಾ ಕ್ರಮಗಳ ಅನುಸರಣೆಯನ್ನು ಮೌಲ್ಯಮಾಪನ ಮಾಡಲು ಮತ್ತು ಮೂರು ವಾರಗಳಲ್ಲಿ ಅದರ ವರದಿ ನೀಡುವಂತೆ ನ್ಯಾಯಾಲಯವು ಆಯುಕ್ತರಿಗೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...