Homeಕರ್ನಾಟಕಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ದರ ಮತ್ತೆ ಹೆಚ್ಚಳ

ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ದರ ಮತ್ತೆ ಹೆಚ್ಚಳ

- Advertisement -
- Advertisement -

ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ದರವನ್ನು ಶೇ.22% ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.

ಕಾರ್, ವ್ಯಾನ್‌, ಜೀಪ್‌ಗಳ ಏಕಮುಖ ಸಂಚಾರ ಟೋಲ್ ದರವನ್ನು ₹135 ರಿಂದ ₹165ಕ್ಕೆ ಏರಿಸಲಾಗಿದೆ. ಆ ಮೂಲಕ ಏಕಾಏಕಿ 30 ರೂ ಹೆಚ್ಚಿಸಲಾಗಿದೆ. ದ್ವಿಮುಖ ಸಂಚಾರ ದರವು ₹205ರಿಂದ ₹250ಕ್ಕೆ ಏರಿಕೆಗೊಂಡಿದೆ (45 ರೂ ಹೆಚ್ಚಳವಾಗಿದೆ). ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್‌ ₹220ರಿಂದ ₹270ಕ್ಕೆ (50ರೂ ಹೆಚ್ಚಳ) ಹಾಗೂ ದ್ವಿಮುಖ ಸಂಚಾರಕ್ಕೆ ₹405 (₹75 ಹೆಚ್ಚಳ) ನಿಗದಿ ಮಾಡಲಾಗಿದೆ.

ಟ್ರಕ್‌, ಬಸ್, ಎರಡು ಆಕ್ಸೆಲ್‌ ವಾಹನಗಳ ಏಕಮುಖ ಟೋಲ್‌ ಬರೋಬ್ಬರಿ ₹565ಕ್ಕೆ ಏರಿಕೆ ಆಗಿದೆ (₹105 ಹೆಚ್ಚಳ). ದ್ವಿಮುಖ ಸಂಚಾರಕ್ಕೆ ₹850 ನಿಗದಿಪಡಿಸಲಾಗಿದೆ (₹ 160 ಹೆಚ್ಚಳವಾಗಿದೆ).

ಅದೇ ರೀತಿಯಾಗಿ 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ ದರವು ₹615 (₹115 ಏರಿಕೆ) ಆಗಿದ್ದು,  ದ್ವಿಮುಖ ಸಂಚಾರ ದರ ₹925 ಕ್ಕೆ (₹225 ಹೆಚ್ಚಳ) ಏರಿದೆ. ಭಾರಿ ವಾಹನಗಳ ಏಕಮುಖ ಟೋಲ್‌ 720 ರೂಗಳಿಂದ ₹885 (₹165 ಹೆಚ್ಚಳ), ದ್ವಿಮುಖ ಸಂಚಾರಕ್ಕೆ ₹1,330 (₹250 ಹೆಚ್ಚಳ) ನಿಗದಿ ಮಾಡಲಾಗಿದೆ.  7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್‌ ವಾಹನಗಳ ದರವು ₹1,080 (₹200 ಹೆಚ್ಚಳ) ಹಾಗೂ ದ್ವಿಮುಖ ಸಂಚಾರಕ್ಕೆ ₹1,620 (₹305 ಏರಿಕೆ) ನಿಗದಿ ಮಾಡಲಾಗಿದೆ.

ಏಪ್ರಿಲ್ 1 ರಂದು ಈ ದರ ಹೆಚ್ಚಳಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿತ್ತು. ಆದರೆ ಚುನಾವಣೆ ಮತ್ತು ಜನಾಕ್ರೋಶಕ್ಕೆ ಮಣಿದು ಆದೇಶ ಹಿಂಪಡೆದಿತ್ತು. ಈಗ ಜೂನ್ 1 ರಿಂದಲೇ ಈ ದರ ಹೆಚ್ಚಳ ಮಾಡಲಾಗಿದೆ. ಆದರೆ ಫಾಸ್ಟ್‌ ಟ್ಯಾಗ್‌ ಬಳಸುವುದರಿಂದ ಸವಾರರ ಗಮನಕ್ಕೆ ಬಂದಿರಲಿಲ್ಲ ಎನ್ನಲಾಗಿದೆ.

ಟೋಲ್ ದರ ಹೆಚ್ಚಳ – ಸಂಸದ ಪ್ರತಾಪ್ ಸಿಂಹ ಸಮರ್ಥನೆ

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳವನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಮಾಡುವುದು ಸಹಜ. ಈ ಹೈವೆಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ನಾವು ಇನ್ನೂ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿ ಟೋಲ್ ದರ ಹೆಚ್ಚಳ ಕೈಬಿಡುವಂತೆ ಮನವಿ ಮಾಡಿದ್ದೆವು. ಹಾಗಾಗಿ ಆಗ ಟೋಲ್ ದರ ಹೆಚ್ಚಳ ಆಗಿರಲಿಲ್ಲ. ಈಗ 22% ಏರಿಕೆ ಆಗಿದೆ” ಎಂದಿದ್ದಾರೆ.

ಇದನ್ನೂ ಓದಿ: ದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ ನಿರ್ದೇಶಕರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...