Homeಕರ್ನಾಟಕಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ದರ ಮತ್ತೆ ಹೆಚ್ಚಳ

ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ದರ ಮತ್ತೆ ಹೆಚ್ಚಳ

- Advertisement -
- Advertisement -

ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ದರವನ್ನು ಶೇ.22% ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.

ಕಾರ್, ವ್ಯಾನ್‌, ಜೀಪ್‌ಗಳ ಏಕಮುಖ ಸಂಚಾರ ಟೋಲ್ ದರವನ್ನು ₹135 ರಿಂದ ₹165ಕ್ಕೆ ಏರಿಸಲಾಗಿದೆ. ಆ ಮೂಲಕ ಏಕಾಏಕಿ 30 ರೂ ಹೆಚ್ಚಿಸಲಾಗಿದೆ. ದ್ವಿಮುಖ ಸಂಚಾರ ದರವು ₹205ರಿಂದ ₹250ಕ್ಕೆ ಏರಿಕೆಗೊಂಡಿದೆ (45 ರೂ ಹೆಚ್ಚಳವಾಗಿದೆ). ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್‌ ₹220ರಿಂದ ₹270ಕ್ಕೆ (50ರೂ ಹೆಚ್ಚಳ) ಹಾಗೂ ದ್ವಿಮುಖ ಸಂಚಾರಕ್ಕೆ ₹405 (₹75 ಹೆಚ್ಚಳ) ನಿಗದಿ ಮಾಡಲಾಗಿದೆ.

ಟ್ರಕ್‌, ಬಸ್, ಎರಡು ಆಕ್ಸೆಲ್‌ ವಾಹನಗಳ ಏಕಮುಖ ಟೋಲ್‌ ಬರೋಬ್ಬರಿ ₹565ಕ್ಕೆ ಏರಿಕೆ ಆಗಿದೆ (₹105 ಹೆಚ್ಚಳ). ದ್ವಿಮುಖ ಸಂಚಾರಕ್ಕೆ ₹850 ನಿಗದಿಪಡಿಸಲಾಗಿದೆ (₹ 160 ಹೆಚ್ಚಳವಾಗಿದೆ).

ಅದೇ ರೀತಿಯಾಗಿ 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ ದರವು ₹615 (₹115 ಏರಿಕೆ) ಆಗಿದ್ದು,  ದ್ವಿಮುಖ ಸಂಚಾರ ದರ ₹925 ಕ್ಕೆ (₹225 ಹೆಚ್ಚಳ) ಏರಿದೆ. ಭಾರಿ ವಾಹನಗಳ ಏಕಮುಖ ಟೋಲ್‌ 720 ರೂಗಳಿಂದ ₹885 (₹165 ಹೆಚ್ಚಳ), ದ್ವಿಮುಖ ಸಂಚಾರಕ್ಕೆ ₹1,330 (₹250 ಹೆಚ್ಚಳ) ನಿಗದಿ ಮಾಡಲಾಗಿದೆ.  7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್‌ ವಾಹನಗಳ ದರವು ₹1,080 (₹200 ಹೆಚ್ಚಳ) ಹಾಗೂ ದ್ವಿಮುಖ ಸಂಚಾರಕ್ಕೆ ₹1,620 (₹305 ಏರಿಕೆ) ನಿಗದಿ ಮಾಡಲಾಗಿದೆ.

ಏಪ್ರಿಲ್ 1 ರಂದು ಈ ದರ ಹೆಚ್ಚಳಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿತ್ತು. ಆದರೆ ಚುನಾವಣೆ ಮತ್ತು ಜನಾಕ್ರೋಶಕ್ಕೆ ಮಣಿದು ಆದೇಶ ಹಿಂಪಡೆದಿತ್ತು. ಈಗ ಜೂನ್ 1 ರಿಂದಲೇ ಈ ದರ ಹೆಚ್ಚಳ ಮಾಡಲಾಗಿದೆ. ಆದರೆ ಫಾಸ್ಟ್‌ ಟ್ಯಾಗ್‌ ಬಳಸುವುದರಿಂದ ಸವಾರರ ಗಮನಕ್ಕೆ ಬಂದಿರಲಿಲ್ಲ ಎನ್ನಲಾಗಿದೆ.

ಟೋಲ್ ದರ ಹೆಚ್ಚಳ – ಸಂಸದ ಪ್ರತಾಪ್ ಸಿಂಹ ಸಮರ್ಥನೆ

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳವನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಮಾಡುವುದು ಸಹಜ. ಈ ಹೈವೆಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ನಾವು ಇನ್ನೂ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿ ಟೋಲ್ ದರ ಹೆಚ್ಚಳ ಕೈಬಿಡುವಂತೆ ಮನವಿ ಮಾಡಿದ್ದೆವು. ಹಾಗಾಗಿ ಆಗ ಟೋಲ್ ದರ ಹೆಚ್ಚಳ ಆಗಿರಲಿಲ್ಲ. ಈಗ 22% ಏರಿಕೆ ಆಗಿದೆ” ಎಂದಿದ್ದಾರೆ.

ಇದನ್ನೂ ಓದಿ: ದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ ನಿರ್ದೇಶಕರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...