Homeಕರ್ನಾಟಕಬೆಂಗಳೂರು - 'ನಮ್ಮ ಮೆಟ್ರೊ' ಪ್ರಯಾಣ ದರ ಏರಿಕೆಗೆ ಗ್ರೀನ್ ಸಿಗ್ನಲ್

ಬೆಂಗಳೂರು – ‘ನಮ್ಮ ಮೆಟ್ರೊ’ ಪ್ರಯಾಣ ದರ ಏರಿಕೆಗೆ ಗ್ರೀನ್ ಸಿಗ್ನಲ್

- Advertisement -
- Advertisement -

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಂಡಳಿಯು ದರ ಏರಿಕೆಗೆ ಶಿಫಾರಸನ್ನು ಅನುಮೋದಿಸಿದ್ದು, ಹಾಗಾಗಿ ಬೆಂಗಳೂರಿನಲ್ಲಿ ಇನ್ನು ಮುಂದೆ ಮೆಟ್ರೊ ಪ್ರಯಾಣ ಕೂಡಾ ದುಬಾರಿಯಾಗಲಿದೆ. ಯಾವ ಮಟ್ಟದಲ್ಲಿ ದರ ಹೆಚ್ಚಳ ಆಗಲಿದೆ ಮತ್ತು ಯಾವತ್ತಿನಿಂದ ಇದು ಜಾರಿಯಾಗಲಿದೆ ಎಂಬ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಆಗಲಿದೆ ಎಂದು ವರದಿಯಾಗಿದೆ.

2017 ರಿಂದ ಬಿಎಂಆರ್‌ಸಿಎಲ್ ಮಾಡುತ್ತಿರುವ ಮೊದಲ ದರ ಪರಿಷ್ಕರಣೆ ಇದಾಗಿದೆ. ಎರಡು ವಾರಗಳ ಹಿಂದೆಯಷ್ಟೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಟಿಕೆಟ್ ಮತ್ತು ಪಾಸ್ ಬೆಲೆಗಳನ್ನು ಶೇಕಡಾ 15 ರಷ್ಟು ಹೆಚ್ಚಿಸಿತ್ತು. ಪ್ರಸ್ತುತ ಮೆಟ್ರೋ ದರಗಳು ರೂ. 10 ರಿಂದ ರೂ. 60 ರವರೆಗೆ ಇದ್ದು, ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ಶೇಕಡಾ 5 ರಷ್ಟು ರಿಯಾಯಿತಿ ಸಿಗುತ್ತದೆ.

“ಸ್ಮಾರ್ಟ್ ಕಾರ್ಡ್‌ಗಳು ಮತ್ತು ಇತರ ಟಿಕೆಟ್ ವ್ಯವಸ್ಥೆಗಳಿಗೆ ರಿಯಾಯಿತಿಗಳ ವಿವರಗಳೊಂದಿಗೆ ಯಾವ ಮಟ್ಟದಲ್ಲಿ ಹೆಚ್ಚಳವಾಗಲಿದೆ ಎಂಬುವುದನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು” ಎಂದು ಬಿಎಂಆರ್‌ಸಿಎಲ್ ವಕ್ತಾರರು ತಿಳಿಸಿದ್ದಾರೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಎಂಆರ್‌ಸಿಎಲ್ ಪ್ರಸ್ತುತ 77 ಕಿ.ಮೀ ಮೆಟ್ರೋ ರೈಲಿನ ಜಾಲವನ್ನು ನಿರ್ವಹಿಸುತ್ತಿದ್ದು, ಪರ್ಪಲ್ ಲೈನ್ 43.5 ಕಿ.ಮೀ ಮತ್ತು ಗ್ರೀನ್ ಲೈನ್ 33.5 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಬೈಯಪ್ಪನಹಳ್ಳಿ-ಎಂಜಿ ರಸ್ತೆ ಮಾರ್ಗದಲ್ಲಿ 2011 ರಲ್ಲಿ ಕಾರ್ಯಾಚರಣೆ ಆರಂಭಿಸಿದಾಗಿನಿಂದ, ಬಿಎಂಆರ್‌ಸಿಎಲ್ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದೆ ಎಂದು ವರದಿಯಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ಒಟ್ಟು 1,280 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಆದಾಗ್ಯೂ, 2022-23 ರಲ್ಲಿ 476 ಕೋಟಿ ರೂ. ನಷ್ಟವಾಗಿದ್ದು, 2023-24 ರಲ್ಲಿ ಇದು 341 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ ಎಂದು ನಿಗಮ ವರದಿ ಮಾಡಿದೆ. ರಜಾದಿನಗಳಲ್ಲದ ವಾರದ ದಿನಗಳಲ್ಲಿ ದೈನಂದಿನ ಮೊಟ್ರೋ ಪ್ರಯಾಣಿಕರ ಸಂಖ್ಯೆ 8.5 ಲಕ್ಷ ತಲುಪಿದ್ದು, ನಷ್ಟ ಇಳಿಕೆಗೆ ಕಾರಣ ಎಂದು ವರದಿ ಉಲ್ಲೇಖಿಸಿವೆ.

ಸಾರ್ವಜನಿಕ ಸಮಾಲೋಚನೆಯ ನಂತರ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ದರ ಪರಿಷ್ಕರಣೆ ಮಾಡಲಾಗಿದೆ. ಸಮಿತಿಯು ದರಗಳಲ್ಲಿ 15-20 ಪ್ರತಿಶತದಷ್ಟು ಹೆಚ್ಚಳವನ್ನು ಪ್ರಸ್ತಾಪಿಸಿದೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ “45% ದರ ಏರಿಕೆ ಮಾಡುವ” ಕ್ರಮವನ್ನು ಟೀಕಿಸಿದ್ದು, ಈ ನಿರ್ಧಾರದಿಂದ ಅವರು “ನಿರಾಶೆ”ಗೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ಕಳೆದ ವಾರ, ಮೋಹನ್ ಅವರು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಮೆಟ್ರೋ ದರ ಪರಿಷ್ಕರಣೆಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದರು. ದರ ಪರಿಷ್ಕರಣೆಯು ಜನರನ್ನು ಸಾರ್ವಜನಿಕ ಸಾರಿಗೆಯಿಂದ ಖಾಸಗಿ ಸಾರಿಗೆಗೆ ಹೊರಳುವಂತೆ ಮಾಡುತ್ತದೆ, ಇದು ಕೊನೆಗೆ ನಗರದಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

“ಬಿಎಂಆರ್‌ಸಿಎಲ್ ತನ್ನ ಸೇವೆಗಳಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ತುರ್ತಾಗಿ ಕಾರ್ಯನಿರ್ವಹಿಸಬೇಕು. ನಮ್ಮ ಮೆಟ್ರೋದಲ್ಲಿ ಜನದಟ್ಟಣೆಯಿಂದಾಗಿ ಬಾಗಿಲುಗಳ ಅಸಮರ್ಪಕ ಕಾರ್ಯಗಳು ಮತ್ತು ಪ್ರಯಾಣಿಕರಲ್ಲಿ ವಿವಾದಗಳು ಉಂಟಾಗಿದ್ದು, ಇದು ಸ್ವೀಕಾರಾರ್ಹವಲ್ಲ. ಬಿಎಂಆರ್‌ಸಿಎಲ್ ಮೆಟ್ರೋ ಬೋಗಿಗಳನ್ನು ಸೇರಿಸುವುದು, ವಿಳಂಬವಾದ ಮಾರ್ಗಗಳನ್ನು ತ್ವರಿತಗೊಳಿಸುವುದು ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸಲು ಆದ್ಯತೆ ನೀಡಬೇಕು” ಎಂದು ಸಂಸದ ಮೋಹನ್ ಹೇಳಿದ್ದಾರೆ.

“ಮಟ್ರೋ ಭದ್ರತೆಯನ್ನು ಹೆಚ್ಚಿಸಿ, ಪ್ರವೇಶ ಮತ್ತು ನಿರ್ಗಮನವನ್ನು ಸುಗಮಗೊಳಿಸಬೇಕು. ಪಾರ್ಕಿಂಗ್, ಕ್ಯೂ ವ್ಯವಸ್ಥೆಗಳು ಮತ್ತು ಕೊನೆಯ ಮೈಲಿ ಸಂಪರ್ಕವನ್ನು ಸುಧಾರಿಸಬೇಕು. ಈ ಸಮಸ್ಯೆಗಳನ್ನು ಸರಿಪಡಿಸದೆ ಪ್ರಯಾಣ ದರಗಳನ್ನು ಹೆಚ್ಚಿಸಿದರೆ ಜನರು ಖಾಸಗಿ ವಾಹನಗಳತ್ತ ಹೊರಳುತ್ತಾರೆ. ನಗರದ ದಟ್ಟಣೆ ಇನ್ನಷ್ಟು ಹದಗೆಡುತ್ತದೆ. ಬಿಎಂಆರ್‌ಸಿಎಲ್ ತನ್ನ ಆದ್ಯತೆಗಳನ್ನು ಪುನರ್ವಿಮರ್ಶಿಸಬೇಕು” ಎಂದು ಅವರು ಶುಕ್ರವಾರ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂಓದಿ:  ‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...