Homeಕರ್ನಾಟಕಬೆಂಗಳೂರು - 'ನಮ್ಮ ಮೆಟ್ರೊ' ಪ್ರಯಾಣ ದರ ಏರಿಕೆಗೆ ಗ್ರೀನ್ ಸಿಗ್ನಲ್

ಬೆಂಗಳೂರು – ‘ನಮ್ಮ ಮೆಟ್ರೊ’ ಪ್ರಯಾಣ ದರ ಏರಿಕೆಗೆ ಗ್ರೀನ್ ಸಿಗ್ನಲ್

- Advertisement -
- Advertisement -

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಂಡಳಿಯು ದರ ಏರಿಕೆಗೆ ಶಿಫಾರಸನ್ನು ಅನುಮೋದಿಸಿದ್ದು, ಹಾಗಾಗಿ ಬೆಂಗಳೂರಿನಲ್ಲಿ ಇನ್ನು ಮುಂದೆ ಮೆಟ್ರೊ ಪ್ರಯಾಣ ಕೂಡಾ ದುಬಾರಿಯಾಗಲಿದೆ. ಯಾವ ಮಟ್ಟದಲ್ಲಿ ದರ ಹೆಚ್ಚಳ ಆಗಲಿದೆ ಮತ್ತು ಯಾವತ್ತಿನಿಂದ ಇದು ಜಾರಿಯಾಗಲಿದೆ ಎಂಬ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಆಗಲಿದೆ ಎಂದು ವರದಿಯಾಗಿದೆ.

2017 ರಿಂದ ಬಿಎಂಆರ್‌ಸಿಎಲ್ ಮಾಡುತ್ತಿರುವ ಮೊದಲ ದರ ಪರಿಷ್ಕರಣೆ ಇದಾಗಿದೆ. ಎರಡು ವಾರಗಳ ಹಿಂದೆಯಷ್ಟೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಟಿಕೆಟ್ ಮತ್ತು ಪಾಸ್ ಬೆಲೆಗಳನ್ನು ಶೇಕಡಾ 15 ರಷ್ಟು ಹೆಚ್ಚಿಸಿತ್ತು. ಪ್ರಸ್ತುತ ಮೆಟ್ರೋ ದರಗಳು ರೂ. 10 ರಿಂದ ರೂ. 60 ರವರೆಗೆ ಇದ್ದು, ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ಶೇಕಡಾ 5 ರಷ್ಟು ರಿಯಾಯಿತಿ ಸಿಗುತ್ತದೆ.

“ಸ್ಮಾರ್ಟ್ ಕಾರ್ಡ್‌ಗಳು ಮತ್ತು ಇತರ ಟಿಕೆಟ್ ವ್ಯವಸ್ಥೆಗಳಿಗೆ ರಿಯಾಯಿತಿಗಳ ವಿವರಗಳೊಂದಿಗೆ ಯಾವ ಮಟ್ಟದಲ್ಲಿ ಹೆಚ್ಚಳವಾಗಲಿದೆ ಎಂಬುವುದನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು” ಎಂದು ಬಿಎಂಆರ್‌ಸಿಎಲ್ ವಕ್ತಾರರು ತಿಳಿಸಿದ್ದಾರೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಎಂಆರ್‌ಸಿಎಲ್ ಪ್ರಸ್ತುತ 77 ಕಿ.ಮೀ ಮೆಟ್ರೋ ರೈಲಿನ ಜಾಲವನ್ನು ನಿರ್ವಹಿಸುತ್ತಿದ್ದು, ಪರ್ಪಲ್ ಲೈನ್ 43.5 ಕಿ.ಮೀ ಮತ್ತು ಗ್ರೀನ್ ಲೈನ್ 33.5 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಬೈಯಪ್ಪನಹಳ್ಳಿ-ಎಂಜಿ ರಸ್ತೆ ಮಾರ್ಗದಲ್ಲಿ 2011 ರಲ್ಲಿ ಕಾರ್ಯಾಚರಣೆ ಆರಂಭಿಸಿದಾಗಿನಿಂದ, ಬಿಎಂಆರ್‌ಸಿಎಲ್ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದೆ ಎಂದು ವರದಿಯಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ಒಟ್ಟು 1,280 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಆದಾಗ್ಯೂ, 2022-23 ರಲ್ಲಿ 476 ಕೋಟಿ ರೂ. ನಷ್ಟವಾಗಿದ್ದು, 2023-24 ರಲ್ಲಿ ಇದು 341 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ ಎಂದು ನಿಗಮ ವರದಿ ಮಾಡಿದೆ. ರಜಾದಿನಗಳಲ್ಲದ ವಾರದ ದಿನಗಳಲ್ಲಿ ದೈನಂದಿನ ಮೊಟ್ರೋ ಪ್ರಯಾಣಿಕರ ಸಂಖ್ಯೆ 8.5 ಲಕ್ಷ ತಲುಪಿದ್ದು, ನಷ್ಟ ಇಳಿಕೆಗೆ ಕಾರಣ ಎಂದು ವರದಿ ಉಲ್ಲೇಖಿಸಿವೆ.

ಸಾರ್ವಜನಿಕ ಸಮಾಲೋಚನೆಯ ನಂತರ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ದರ ಪರಿಷ್ಕರಣೆ ಮಾಡಲಾಗಿದೆ. ಸಮಿತಿಯು ದರಗಳಲ್ಲಿ 15-20 ಪ್ರತಿಶತದಷ್ಟು ಹೆಚ್ಚಳವನ್ನು ಪ್ರಸ್ತಾಪಿಸಿದೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ “45% ದರ ಏರಿಕೆ ಮಾಡುವ” ಕ್ರಮವನ್ನು ಟೀಕಿಸಿದ್ದು, ಈ ನಿರ್ಧಾರದಿಂದ ಅವರು “ನಿರಾಶೆ”ಗೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ಕಳೆದ ವಾರ, ಮೋಹನ್ ಅವರು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಮೆಟ್ರೋ ದರ ಪರಿಷ್ಕರಣೆಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದರು. ದರ ಪರಿಷ್ಕರಣೆಯು ಜನರನ್ನು ಸಾರ್ವಜನಿಕ ಸಾರಿಗೆಯಿಂದ ಖಾಸಗಿ ಸಾರಿಗೆಗೆ ಹೊರಳುವಂತೆ ಮಾಡುತ್ತದೆ, ಇದು ಕೊನೆಗೆ ನಗರದಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

“ಬಿಎಂಆರ್‌ಸಿಎಲ್ ತನ್ನ ಸೇವೆಗಳಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ತುರ್ತಾಗಿ ಕಾರ್ಯನಿರ್ವಹಿಸಬೇಕು. ನಮ್ಮ ಮೆಟ್ರೋದಲ್ಲಿ ಜನದಟ್ಟಣೆಯಿಂದಾಗಿ ಬಾಗಿಲುಗಳ ಅಸಮರ್ಪಕ ಕಾರ್ಯಗಳು ಮತ್ತು ಪ್ರಯಾಣಿಕರಲ್ಲಿ ವಿವಾದಗಳು ಉಂಟಾಗಿದ್ದು, ಇದು ಸ್ವೀಕಾರಾರ್ಹವಲ್ಲ. ಬಿಎಂಆರ್‌ಸಿಎಲ್ ಮೆಟ್ರೋ ಬೋಗಿಗಳನ್ನು ಸೇರಿಸುವುದು, ವಿಳಂಬವಾದ ಮಾರ್ಗಗಳನ್ನು ತ್ವರಿತಗೊಳಿಸುವುದು ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸಲು ಆದ್ಯತೆ ನೀಡಬೇಕು” ಎಂದು ಸಂಸದ ಮೋಹನ್ ಹೇಳಿದ್ದಾರೆ.

“ಮಟ್ರೋ ಭದ್ರತೆಯನ್ನು ಹೆಚ್ಚಿಸಿ, ಪ್ರವೇಶ ಮತ್ತು ನಿರ್ಗಮನವನ್ನು ಸುಗಮಗೊಳಿಸಬೇಕು. ಪಾರ್ಕಿಂಗ್, ಕ್ಯೂ ವ್ಯವಸ್ಥೆಗಳು ಮತ್ತು ಕೊನೆಯ ಮೈಲಿ ಸಂಪರ್ಕವನ್ನು ಸುಧಾರಿಸಬೇಕು. ಈ ಸಮಸ್ಯೆಗಳನ್ನು ಸರಿಪಡಿಸದೆ ಪ್ರಯಾಣ ದರಗಳನ್ನು ಹೆಚ್ಚಿಸಿದರೆ ಜನರು ಖಾಸಗಿ ವಾಹನಗಳತ್ತ ಹೊರಳುತ್ತಾರೆ. ನಗರದ ದಟ್ಟಣೆ ಇನ್ನಷ್ಟು ಹದಗೆಡುತ್ತದೆ. ಬಿಎಂಆರ್‌ಸಿಎಲ್ ತನ್ನ ಆದ್ಯತೆಗಳನ್ನು ಪುನರ್ವಿಮರ್ಶಿಸಬೇಕು” ಎಂದು ಅವರು ಶುಕ್ರವಾರ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂಓದಿ:  ‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...