Homeಕರ್ನಾಟಕಬೆಂಗಳೂರು - 'ನಮ್ಮ ಮೆಟ್ರೊ' ಪ್ರಯಾಣ ದರ ಏರಿಕೆಗೆ ಗ್ರೀನ್ ಸಿಗ್ನಲ್

ಬೆಂಗಳೂರು – ‘ನಮ್ಮ ಮೆಟ್ರೊ’ ಪ್ರಯಾಣ ದರ ಏರಿಕೆಗೆ ಗ್ರೀನ್ ಸಿಗ್ನಲ್

- Advertisement -
- Advertisement -

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಂಡಳಿಯು ದರ ಏರಿಕೆಗೆ ಶಿಫಾರಸನ್ನು ಅನುಮೋದಿಸಿದ್ದು, ಹಾಗಾಗಿ ಬೆಂಗಳೂರಿನಲ್ಲಿ ಇನ್ನು ಮುಂದೆ ಮೆಟ್ರೊ ಪ್ರಯಾಣ ಕೂಡಾ ದುಬಾರಿಯಾಗಲಿದೆ. ಯಾವ ಮಟ್ಟದಲ್ಲಿ ದರ ಹೆಚ್ಚಳ ಆಗಲಿದೆ ಮತ್ತು ಯಾವತ್ತಿನಿಂದ ಇದು ಜಾರಿಯಾಗಲಿದೆ ಎಂಬ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಆಗಲಿದೆ ಎಂದು ವರದಿಯಾಗಿದೆ.

2017 ರಿಂದ ಬಿಎಂಆರ್‌ಸಿಎಲ್ ಮಾಡುತ್ತಿರುವ ಮೊದಲ ದರ ಪರಿಷ್ಕರಣೆ ಇದಾಗಿದೆ. ಎರಡು ವಾರಗಳ ಹಿಂದೆಯಷ್ಟೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಟಿಕೆಟ್ ಮತ್ತು ಪಾಸ್ ಬೆಲೆಗಳನ್ನು ಶೇಕಡಾ 15 ರಷ್ಟು ಹೆಚ್ಚಿಸಿತ್ತು. ಪ್ರಸ್ತುತ ಮೆಟ್ರೋ ದರಗಳು ರೂ. 10 ರಿಂದ ರೂ. 60 ರವರೆಗೆ ಇದ್ದು, ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ಶೇಕಡಾ 5 ರಷ್ಟು ರಿಯಾಯಿತಿ ಸಿಗುತ್ತದೆ.

“ಸ್ಮಾರ್ಟ್ ಕಾರ್ಡ್‌ಗಳು ಮತ್ತು ಇತರ ಟಿಕೆಟ್ ವ್ಯವಸ್ಥೆಗಳಿಗೆ ರಿಯಾಯಿತಿಗಳ ವಿವರಗಳೊಂದಿಗೆ ಯಾವ ಮಟ್ಟದಲ್ಲಿ ಹೆಚ್ಚಳವಾಗಲಿದೆ ಎಂಬುವುದನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು” ಎಂದು ಬಿಎಂಆರ್‌ಸಿಎಲ್ ವಕ್ತಾರರು ತಿಳಿಸಿದ್ದಾರೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಎಂಆರ್‌ಸಿಎಲ್ ಪ್ರಸ್ತುತ 77 ಕಿ.ಮೀ ಮೆಟ್ರೋ ರೈಲಿನ ಜಾಲವನ್ನು ನಿರ್ವಹಿಸುತ್ತಿದ್ದು, ಪರ್ಪಲ್ ಲೈನ್ 43.5 ಕಿ.ಮೀ ಮತ್ತು ಗ್ರೀನ್ ಲೈನ್ 33.5 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಬೈಯಪ್ಪನಹಳ್ಳಿ-ಎಂಜಿ ರಸ್ತೆ ಮಾರ್ಗದಲ್ಲಿ 2011 ರಲ್ಲಿ ಕಾರ್ಯಾಚರಣೆ ಆರಂಭಿಸಿದಾಗಿನಿಂದ, ಬಿಎಂಆರ್‌ಸಿಎಲ್ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದೆ ಎಂದು ವರದಿಯಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ಒಟ್ಟು 1,280 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಆದಾಗ್ಯೂ, 2022-23 ರಲ್ಲಿ 476 ಕೋಟಿ ರೂ. ನಷ್ಟವಾಗಿದ್ದು, 2023-24 ರಲ್ಲಿ ಇದು 341 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ ಎಂದು ನಿಗಮ ವರದಿ ಮಾಡಿದೆ. ರಜಾದಿನಗಳಲ್ಲದ ವಾರದ ದಿನಗಳಲ್ಲಿ ದೈನಂದಿನ ಮೊಟ್ರೋ ಪ್ರಯಾಣಿಕರ ಸಂಖ್ಯೆ 8.5 ಲಕ್ಷ ತಲುಪಿದ್ದು, ನಷ್ಟ ಇಳಿಕೆಗೆ ಕಾರಣ ಎಂದು ವರದಿ ಉಲ್ಲೇಖಿಸಿವೆ.

ಸಾರ್ವಜನಿಕ ಸಮಾಲೋಚನೆಯ ನಂತರ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ದರ ಪರಿಷ್ಕರಣೆ ಮಾಡಲಾಗಿದೆ. ಸಮಿತಿಯು ದರಗಳಲ್ಲಿ 15-20 ಪ್ರತಿಶತದಷ್ಟು ಹೆಚ್ಚಳವನ್ನು ಪ್ರಸ್ತಾಪಿಸಿದೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ “45% ದರ ಏರಿಕೆ ಮಾಡುವ” ಕ್ರಮವನ್ನು ಟೀಕಿಸಿದ್ದು, ಈ ನಿರ್ಧಾರದಿಂದ ಅವರು “ನಿರಾಶೆ”ಗೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ಕಳೆದ ವಾರ, ಮೋಹನ್ ಅವರು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಮೆಟ್ರೋ ದರ ಪರಿಷ್ಕರಣೆಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದರು. ದರ ಪರಿಷ್ಕರಣೆಯು ಜನರನ್ನು ಸಾರ್ವಜನಿಕ ಸಾರಿಗೆಯಿಂದ ಖಾಸಗಿ ಸಾರಿಗೆಗೆ ಹೊರಳುವಂತೆ ಮಾಡುತ್ತದೆ, ಇದು ಕೊನೆಗೆ ನಗರದಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

“ಬಿಎಂಆರ್‌ಸಿಎಲ್ ತನ್ನ ಸೇವೆಗಳಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ತುರ್ತಾಗಿ ಕಾರ್ಯನಿರ್ವಹಿಸಬೇಕು. ನಮ್ಮ ಮೆಟ್ರೋದಲ್ಲಿ ಜನದಟ್ಟಣೆಯಿಂದಾಗಿ ಬಾಗಿಲುಗಳ ಅಸಮರ್ಪಕ ಕಾರ್ಯಗಳು ಮತ್ತು ಪ್ರಯಾಣಿಕರಲ್ಲಿ ವಿವಾದಗಳು ಉಂಟಾಗಿದ್ದು, ಇದು ಸ್ವೀಕಾರಾರ್ಹವಲ್ಲ. ಬಿಎಂಆರ್‌ಸಿಎಲ್ ಮೆಟ್ರೋ ಬೋಗಿಗಳನ್ನು ಸೇರಿಸುವುದು, ವಿಳಂಬವಾದ ಮಾರ್ಗಗಳನ್ನು ತ್ವರಿತಗೊಳಿಸುವುದು ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸಲು ಆದ್ಯತೆ ನೀಡಬೇಕು” ಎಂದು ಸಂಸದ ಮೋಹನ್ ಹೇಳಿದ್ದಾರೆ.

“ಮಟ್ರೋ ಭದ್ರತೆಯನ್ನು ಹೆಚ್ಚಿಸಿ, ಪ್ರವೇಶ ಮತ್ತು ನಿರ್ಗಮನವನ್ನು ಸುಗಮಗೊಳಿಸಬೇಕು. ಪಾರ್ಕಿಂಗ್, ಕ್ಯೂ ವ್ಯವಸ್ಥೆಗಳು ಮತ್ತು ಕೊನೆಯ ಮೈಲಿ ಸಂಪರ್ಕವನ್ನು ಸುಧಾರಿಸಬೇಕು. ಈ ಸಮಸ್ಯೆಗಳನ್ನು ಸರಿಪಡಿಸದೆ ಪ್ರಯಾಣ ದರಗಳನ್ನು ಹೆಚ್ಚಿಸಿದರೆ ಜನರು ಖಾಸಗಿ ವಾಹನಗಳತ್ತ ಹೊರಳುತ್ತಾರೆ. ನಗರದ ದಟ್ಟಣೆ ಇನ್ನಷ್ಟು ಹದಗೆಡುತ್ತದೆ. ಬಿಎಂಆರ್‌ಸಿಎಲ್ ತನ್ನ ಆದ್ಯತೆಗಳನ್ನು ಪುನರ್ವಿಮರ್ಶಿಸಬೇಕು” ಎಂದು ಅವರು ಶುಕ್ರವಾರ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂಓದಿ:  ‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...