Homeಕರ್ನಾಟಕಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

- Advertisement -
- Advertisement -

ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಬೆಂಗಾಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಅಕ್ರಮವಾಗಿ ಹೊರಹಾಕಲು ಯತ್ನಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸೋಮವಾರ ದೂರು ದಾಖಲಾಗಿದೆ.

ಬೆಂಗಾಲಿ ಮುಸ್ಲಿಮರು ಶಿಕಾರಿಪಾಳ್ಯದಲ್ಲಿ ನಡೆಸುತ್ತಿದ್ದ ಕಸ ವಿಂಗಡಣೆ ಘಟಕಗಳಿಗೆ ಜೂನ್ 17 ಮತ್ತು 18ರಂದು ಹೆಬ್ಬಗೋಡಿ ಪೊಲೀಸರು ದಾಳಿ ನಡೆಸಿದರು. ಬೆಂಗಳೂರನ್ನು ತೊರೆಯುವಂತೆ ಸೂಚಿಸಿ ಲಾಠಿ ಚಾರ್ಜ್ ಮಾಡಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವಿದ್ದ ಜಾಗದ ಮೇಲೆ ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ತಮ್ಮ ಆಸ್ತಿಗಳಿಗೆ ಹಾನಿಯಾಗಿದೆ ಎಂದು ಮುರ್ಷಿದಾಬಾದ್‌ನ ಬಂಗಾಳಿ ಮುಸ್ಲಿಮರಾದ ರಬ್ಬಾನಿ ಸರ್ದಾರ್ (52) ಮತ್ತು ಅನೀಸ್ (38) ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಾವು ಭಾರತೀಯರಲ್ಲ ಎಂದು ಸಾಬೀತುಪಡಿಸಲು ಪೊಲೀಸರು ಯತ್ನಿಸಿದ್ದಾರೆ. ಪೊಲೀಸ್ ತಂಡಗಳು ನಮ್ಮ ಆಹಾರ ಸಾಮಗ್ರಿಗಳನ್ನು ನಾಶಪಡಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳಿಗೆ ಬೆದರಿಕೆ ಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಾರ್ಮಿಕರಿಗೆ ಕಾನೂನು ನೆರವು ನೀಡಿದ ಸ್ವರಾಜ್ ಇಂಡಿಯಾ ಪಕ್ಷದ ಮುಖಂಡರಾದ ಕಲೀಮುಲ್ಲಾ ಪ್ರತಿಕ್ರಿಯೆ ನೀಡಿದ್ದು, “ಪೊಲೀಸರು ಧರ್ಮದ ಕಾರಣಕ್ಕಾಗಿ ಬಂಗಾಳಿ ಮುಸ್ಲಿಮರನ್ನು ಟಾರ್ಗೆಟ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಇದು ದೇಶದ ರಾಜಕೀಯ ಪರಿಸ್ಥಿತಿಯ ಪರಿಣಾಮವಾಗಿದೆ. ಬಂಗಾಳಿ ಮುಸ್ಲಿಮರಾಗಿರುವುದು ಅಪರಾಧವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೆಬ್ಬಗೋಡಿ ಪೊಲೀಸರು ಹದಿನೈದು ದಿನಗಳಿಗೂ ಹೆಚ್ಚು ಕಾಲ ತಮ್ಮ ವ್ಯಾಪ್ತಿಯಲ್ಲಿರುವ ವಲಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಕಸ ವಿಂಗಡಣಾ ಘಟಕದ ಮಾಲೀಕ ಯಾರ್ ಅಲಿ (46) ದೂರಿದ್ದಾರೆ.

“ನಾನು ನನ್ನ ಎಲ್ಲಾ ಐಡಿಗಳನ್ನು ಹಾಜರುಪಡಿಸಿದರೂ ಅವರು ನನ್ನ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಅಂತಿಮವಾಗಿ ನಾನು ನನ್ನ ಗ್ರಾಮದ ಸ್ಥಳೀಯ ಪೊಲೀಸ್ ಠಾಣೆಯಿಂದ ಪಡೆದ ಪತ್ರವನ್ನು ಸಲ್ಲಿಸಬೇಕಾಯಿತು. ನನಗೆ ನಮ್ಮ ಕ್ಷೇತ್ರದ ಸಂಸದೆ ಪ್ರೊತಿಮಾ ಮೊಂಡಲ್ ಅವರಿಂದಲೂ ಪತ್ರ ಬಂದಿತು. ಆದರೆ ಪೊಲೀಸರು ಇನ್ನೂ ಪ್ರಕರಣವನ್ನು ಮುಂದುವರಿಸುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

“ನಾವು ಕಸ ಬೇರ್ಪಡಿಸಿ ಹೊಟ್ಟೆಪಾಡು ಮಾಡುತ್ತಿದ್ದೇವೆ. ಆದರೆ ಸರ್ಕಾರ ನಮಗೆ ಬೇರೆ ಕೆಲಸ ಕೊಡುತ್ತದೆಯೇ?” ಎಂದು ಮಹಿಳೆಯೊಬ್ಬರು ಕೇಳಿದ್ದಾರೆ.

“ನಾವು ಕೊಲ್ಕತ್ತದಿಂದ ಬಂದಿದ್ದೇವೆ. ಪೊಲೀಸರು ಲಾಠಿಯೊಂದಿಗೆ ಬಂದು ಗಂಡಸರು, ಹೆಂಗಸರೆನ್ನದೆ ದಾಳಿ ಮಾಡಿದರು. ನೀವ್ಯಾಕೆ ಇಲ್ಲಿದ್ದೀರಿ, ಇಲ್ಲಿಂದ ಹೋಗಿ ಎಂದರು. ನಾವು ಅಡುಗೆ ಮಾಡುತ್ತಿರುವ ಪಾತ್ರೆಗಳನ್ನೂ ಲಾಠಿಯಿಂದ ಉರುಳಿಸಿದರು” ಎಂದು ಮತ್ತೊಬ್ಬ ಮಹಿಳೆ ದೂರಿದ್ದಾರೆ.

ಪೊಲೀಸ್ ಕಾರ್ಯಾಚರಣೆ

ಬೆಂಗಳೂರು ಹೊರವಲಯದಲ್ಲಿರುವ ದಾಖಲೆ ರಹಿತ ನಿವಾಸಿಗಳನ್ನು ಹೊರಗೆ ಕಳುಹಿಸಲು ಪೊಲೀಸರು ಮೇ ತಿಂಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್‌ ವ್ಯಾಪ್ತಿಗೆ ಒಳಪಡುವ ಸರ್ಜಾಪುರ, ಅನುಗೊಂಡನಹಳ್ಳಿ ಮತ್ತು ಹೆಬ್ಬಗೋಡಿ ಪೊಲೀಸ್‌ ವ್ಯಾಪ್ತಿಯಲ್ಲಿನ ಗುಡಿಸಲುಗಳ ಮೇಲೆ ಮೇ ತಿಂಗಳಿನಿಂದಲೂ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

“ಮೇ 21ರಂದು ಸುಮಾರು ಎರಡು ಡಜನ್ ಪೊಲೀಸರು ಇದ್ದಕ್ಕಿದ್ದಂತೆ ನಮ್ಮ ಶಿಬಿರಕ್ಕೆ ನುಗ್ಗಿ ಲಾಠಿಗಳಿಂದ ದಾಳಿ ಮಾಡಿದರು. ಸಂಜೆ ಸುಮಾರು 4 ಗಂಟೆಯಾಗಿತ್ತು. ತಕ್ಷಣವೇ ಪ್ಯಾಕ್‌ಅಪ್‌ ಮಾಡಬೇಕು ಎಂದು ಸೂಚಿಸಿದರು” ಎಂದು ಬಂಗಾಲಿ ತುಬರ್ ಸೇಖ್ (34) ದೂರಿದ್ದರು.

ಬಂಗಾಳಿ ಮಾತನಾಡುವ ಸಾವಿರಾರು ಮುಸ್ಲಿಮರಲ್ಲಿ ಭೀತಿ ಉಂಟಾಗಿದೆ. ಈ ವಲಸೆ ಕಾರ್ಮಿಕರು ನಗರದ ಕಸವನ್ನು ಸಂಗ್ರಹಿಸುವ ಮತ್ತು ಬೇರ್ಪಡಿಸುವ ಮೂಲಕ ಜೀವನ ನಡೆಸುತ್ತಿದ್ದಾರೆ. ಬಾಂಗ್ಲಾ ದೇಶದ ಅಕ್ರಮ ವಲಸಿಗರೆಂದು ಆರೋಪಿಸಿ, ಬಂಗಾಲಿ ಮುಸ್ಲಿಮರ ಮೇಲೆ ನಿರಂತರ ದಾಳಿಗಳನ್ನು ಪೊಲೀಸರು ನಡೆಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...