Homeಕರ್ನಾಟಕಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

- Advertisement -
- Advertisement -

ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಬೆಂಗಾಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಅಕ್ರಮವಾಗಿ ಹೊರಹಾಕಲು ಯತ್ನಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸೋಮವಾರ ದೂರು ದಾಖಲಾಗಿದೆ.

ಬೆಂಗಾಲಿ ಮುಸ್ಲಿಮರು ಶಿಕಾರಿಪಾಳ್ಯದಲ್ಲಿ ನಡೆಸುತ್ತಿದ್ದ ಕಸ ವಿಂಗಡಣೆ ಘಟಕಗಳಿಗೆ ಜೂನ್ 17 ಮತ್ತು 18ರಂದು ಹೆಬ್ಬಗೋಡಿ ಪೊಲೀಸರು ದಾಳಿ ನಡೆಸಿದರು. ಬೆಂಗಳೂರನ್ನು ತೊರೆಯುವಂತೆ ಸೂಚಿಸಿ ಲಾಠಿ ಚಾರ್ಜ್ ಮಾಡಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವಿದ್ದ ಜಾಗದ ಮೇಲೆ ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ತಮ್ಮ ಆಸ್ತಿಗಳಿಗೆ ಹಾನಿಯಾಗಿದೆ ಎಂದು ಮುರ್ಷಿದಾಬಾದ್‌ನ ಬಂಗಾಳಿ ಮುಸ್ಲಿಮರಾದ ರಬ್ಬಾನಿ ಸರ್ದಾರ್ (52) ಮತ್ತು ಅನೀಸ್ (38) ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಾವು ಭಾರತೀಯರಲ್ಲ ಎಂದು ಸಾಬೀತುಪಡಿಸಲು ಪೊಲೀಸರು ಯತ್ನಿಸಿದ್ದಾರೆ. ಪೊಲೀಸ್ ತಂಡಗಳು ನಮ್ಮ ಆಹಾರ ಸಾಮಗ್ರಿಗಳನ್ನು ನಾಶಪಡಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳಿಗೆ ಬೆದರಿಕೆ ಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಾರ್ಮಿಕರಿಗೆ ಕಾನೂನು ನೆರವು ನೀಡಿದ ಸ್ವರಾಜ್ ಇಂಡಿಯಾ ಪಕ್ಷದ ಮುಖಂಡರಾದ ಕಲೀಮುಲ್ಲಾ ಪ್ರತಿಕ್ರಿಯೆ ನೀಡಿದ್ದು, “ಪೊಲೀಸರು ಧರ್ಮದ ಕಾರಣಕ್ಕಾಗಿ ಬಂಗಾಳಿ ಮುಸ್ಲಿಮರನ್ನು ಟಾರ್ಗೆಟ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಇದು ದೇಶದ ರಾಜಕೀಯ ಪರಿಸ್ಥಿತಿಯ ಪರಿಣಾಮವಾಗಿದೆ. ಬಂಗಾಳಿ ಮುಸ್ಲಿಮರಾಗಿರುವುದು ಅಪರಾಧವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೆಬ್ಬಗೋಡಿ ಪೊಲೀಸರು ಹದಿನೈದು ದಿನಗಳಿಗೂ ಹೆಚ್ಚು ಕಾಲ ತಮ್ಮ ವ್ಯಾಪ್ತಿಯಲ್ಲಿರುವ ವಲಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಕಸ ವಿಂಗಡಣಾ ಘಟಕದ ಮಾಲೀಕ ಯಾರ್ ಅಲಿ (46) ದೂರಿದ್ದಾರೆ.

“ನಾನು ನನ್ನ ಎಲ್ಲಾ ಐಡಿಗಳನ್ನು ಹಾಜರುಪಡಿಸಿದರೂ ಅವರು ನನ್ನ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಅಂತಿಮವಾಗಿ ನಾನು ನನ್ನ ಗ್ರಾಮದ ಸ್ಥಳೀಯ ಪೊಲೀಸ್ ಠಾಣೆಯಿಂದ ಪಡೆದ ಪತ್ರವನ್ನು ಸಲ್ಲಿಸಬೇಕಾಯಿತು. ನನಗೆ ನಮ್ಮ ಕ್ಷೇತ್ರದ ಸಂಸದೆ ಪ್ರೊತಿಮಾ ಮೊಂಡಲ್ ಅವರಿಂದಲೂ ಪತ್ರ ಬಂದಿತು. ಆದರೆ ಪೊಲೀಸರು ಇನ್ನೂ ಪ್ರಕರಣವನ್ನು ಮುಂದುವರಿಸುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

“ನಾವು ಕಸ ಬೇರ್ಪಡಿಸಿ ಹೊಟ್ಟೆಪಾಡು ಮಾಡುತ್ತಿದ್ದೇವೆ. ಆದರೆ ಸರ್ಕಾರ ನಮಗೆ ಬೇರೆ ಕೆಲಸ ಕೊಡುತ್ತದೆಯೇ?” ಎಂದು ಮಹಿಳೆಯೊಬ್ಬರು ಕೇಳಿದ್ದಾರೆ.

“ನಾವು ಕೊಲ್ಕತ್ತದಿಂದ ಬಂದಿದ್ದೇವೆ. ಪೊಲೀಸರು ಲಾಠಿಯೊಂದಿಗೆ ಬಂದು ಗಂಡಸರು, ಹೆಂಗಸರೆನ್ನದೆ ದಾಳಿ ಮಾಡಿದರು. ನೀವ್ಯಾಕೆ ಇಲ್ಲಿದ್ದೀರಿ, ಇಲ್ಲಿಂದ ಹೋಗಿ ಎಂದರು. ನಾವು ಅಡುಗೆ ಮಾಡುತ್ತಿರುವ ಪಾತ್ರೆಗಳನ್ನೂ ಲಾಠಿಯಿಂದ ಉರುಳಿಸಿದರು” ಎಂದು ಮತ್ತೊಬ್ಬ ಮಹಿಳೆ ದೂರಿದ್ದಾರೆ.

ಪೊಲೀಸ್ ಕಾರ್ಯಾಚರಣೆ

ಬೆಂಗಳೂರು ಹೊರವಲಯದಲ್ಲಿರುವ ದಾಖಲೆ ರಹಿತ ನಿವಾಸಿಗಳನ್ನು ಹೊರಗೆ ಕಳುಹಿಸಲು ಪೊಲೀಸರು ಮೇ ತಿಂಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್‌ ವ್ಯಾಪ್ತಿಗೆ ಒಳಪಡುವ ಸರ್ಜಾಪುರ, ಅನುಗೊಂಡನಹಳ್ಳಿ ಮತ್ತು ಹೆಬ್ಬಗೋಡಿ ಪೊಲೀಸ್‌ ವ್ಯಾಪ್ತಿಯಲ್ಲಿನ ಗುಡಿಸಲುಗಳ ಮೇಲೆ ಮೇ ತಿಂಗಳಿನಿಂದಲೂ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

“ಮೇ 21ರಂದು ಸುಮಾರು ಎರಡು ಡಜನ್ ಪೊಲೀಸರು ಇದ್ದಕ್ಕಿದ್ದಂತೆ ನಮ್ಮ ಶಿಬಿರಕ್ಕೆ ನುಗ್ಗಿ ಲಾಠಿಗಳಿಂದ ದಾಳಿ ಮಾಡಿದರು. ಸಂಜೆ ಸುಮಾರು 4 ಗಂಟೆಯಾಗಿತ್ತು. ತಕ್ಷಣವೇ ಪ್ಯಾಕ್‌ಅಪ್‌ ಮಾಡಬೇಕು ಎಂದು ಸೂಚಿಸಿದರು” ಎಂದು ಬಂಗಾಲಿ ತುಬರ್ ಸೇಖ್ (34) ದೂರಿದ್ದರು.

ಬಂಗಾಳಿ ಮಾತನಾಡುವ ಸಾವಿರಾರು ಮುಸ್ಲಿಮರಲ್ಲಿ ಭೀತಿ ಉಂಟಾಗಿದೆ. ಈ ವಲಸೆ ಕಾರ್ಮಿಕರು ನಗರದ ಕಸವನ್ನು ಸಂಗ್ರಹಿಸುವ ಮತ್ತು ಬೇರ್ಪಡಿಸುವ ಮೂಲಕ ಜೀವನ ನಡೆಸುತ್ತಿದ್ದಾರೆ. ಬಾಂಗ್ಲಾ ದೇಶದ ಅಕ್ರಮ ವಲಸಿಗರೆಂದು ಆರೋಪಿಸಿ, ಬಂಗಾಲಿ ಮುಸ್ಲಿಮರ ಮೇಲೆ ನಿರಂತರ ದಾಳಿಗಳನ್ನು ಪೊಲೀಸರು ನಡೆಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....