Homeಕರ್ನಾಟಕಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

- Advertisement -
- Advertisement -

ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಬೆಂಗಾಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಅಕ್ರಮವಾಗಿ ಹೊರಹಾಕಲು ಯತ್ನಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸೋಮವಾರ ದೂರು ದಾಖಲಾಗಿದೆ.

ಬೆಂಗಾಲಿ ಮುಸ್ಲಿಮರು ಶಿಕಾರಿಪಾಳ್ಯದಲ್ಲಿ ನಡೆಸುತ್ತಿದ್ದ ಕಸ ವಿಂಗಡಣೆ ಘಟಕಗಳಿಗೆ ಜೂನ್ 17 ಮತ್ತು 18ರಂದು ಹೆಬ್ಬಗೋಡಿ ಪೊಲೀಸರು ದಾಳಿ ನಡೆಸಿದರು. ಬೆಂಗಳೂರನ್ನು ತೊರೆಯುವಂತೆ ಸೂಚಿಸಿ ಲಾಠಿ ಚಾರ್ಜ್ ಮಾಡಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವಿದ್ದ ಜಾಗದ ಮೇಲೆ ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ತಮ್ಮ ಆಸ್ತಿಗಳಿಗೆ ಹಾನಿಯಾಗಿದೆ ಎಂದು ಮುರ್ಷಿದಾಬಾದ್‌ನ ಬಂಗಾಳಿ ಮುಸ್ಲಿಮರಾದ ರಬ್ಬಾನಿ ಸರ್ದಾರ್ (52) ಮತ್ತು ಅನೀಸ್ (38) ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಾವು ಭಾರತೀಯರಲ್ಲ ಎಂದು ಸಾಬೀತುಪಡಿಸಲು ಪೊಲೀಸರು ಯತ್ನಿಸಿದ್ದಾರೆ. ಪೊಲೀಸ್ ತಂಡಗಳು ನಮ್ಮ ಆಹಾರ ಸಾಮಗ್ರಿಗಳನ್ನು ನಾಶಪಡಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳಿಗೆ ಬೆದರಿಕೆ ಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಾರ್ಮಿಕರಿಗೆ ಕಾನೂನು ನೆರವು ನೀಡಿದ ಸ್ವರಾಜ್ ಇಂಡಿಯಾ ಪಕ್ಷದ ಮುಖಂಡರಾದ ಕಲೀಮುಲ್ಲಾ ಪ್ರತಿಕ್ರಿಯೆ ನೀಡಿದ್ದು, “ಪೊಲೀಸರು ಧರ್ಮದ ಕಾರಣಕ್ಕಾಗಿ ಬಂಗಾಳಿ ಮುಸ್ಲಿಮರನ್ನು ಟಾರ್ಗೆಟ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಇದು ದೇಶದ ರಾಜಕೀಯ ಪರಿಸ್ಥಿತಿಯ ಪರಿಣಾಮವಾಗಿದೆ. ಬಂಗಾಳಿ ಮುಸ್ಲಿಮರಾಗಿರುವುದು ಅಪರಾಧವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೆಬ್ಬಗೋಡಿ ಪೊಲೀಸರು ಹದಿನೈದು ದಿನಗಳಿಗೂ ಹೆಚ್ಚು ಕಾಲ ತಮ್ಮ ವ್ಯಾಪ್ತಿಯಲ್ಲಿರುವ ವಲಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಕಸ ವಿಂಗಡಣಾ ಘಟಕದ ಮಾಲೀಕ ಯಾರ್ ಅಲಿ (46) ದೂರಿದ್ದಾರೆ.

“ನಾನು ನನ್ನ ಎಲ್ಲಾ ಐಡಿಗಳನ್ನು ಹಾಜರುಪಡಿಸಿದರೂ ಅವರು ನನ್ನ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಅಂತಿಮವಾಗಿ ನಾನು ನನ್ನ ಗ್ರಾಮದ ಸ್ಥಳೀಯ ಪೊಲೀಸ್ ಠಾಣೆಯಿಂದ ಪಡೆದ ಪತ್ರವನ್ನು ಸಲ್ಲಿಸಬೇಕಾಯಿತು. ನನಗೆ ನಮ್ಮ ಕ್ಷೇತ್ರದ ಸಂಸದೆ ಪ್ರೊತಿಮಾ ಮೊಂಡಲ್ ಅವರಿಂದಲೂ ಪತ್ರ ಬಂದಿತು. ಆದರೆ ಪೊಲೀಸರು ಇನ್ನೂ ಪ್ರಕರಣವನ್ನು ಮುಂದುವರಿಸುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

“ನಾವು ಕಸ ಬೇರ್ಪಡಿಸಿ ಹೊಟ್ಟೆಪಾಡು ಮಾಡುತ್ತಿದ್ದೇವೆ. ಆದರೆ ಸರ್ಕಾರ ನಮಗೆ ಬೇರೆ ಕೆಲಸ ಕೊಡುತ್ತದೆಯೇ?” ಎಂದು ಮಹಿಳೆಯೊಬ್ಬರು ಕೇಳಿದ್ದಾರೆ.

“ನಾವು ಕೊಲ್ಕತ್ತದಿಂದ ಬಂದಿದ್ದೇವೆ. ಪೊಲೀಸರು ಲಾಠಿಯೊಂದಿಗೆ ಬಂದು ಗಂಡಸರು, ಹೆಂಗಸರೆನ್ನದೆ ದಾಳಿ ಮಾಡಿದರು. ನೀವ್ಯಾಕೆ ಇಲ್ಲಿದ್ದೀರಿ, ಇಲ್ಲಿಂದ ಹೋಗಿ ಎಂದರು. ನಾವು ಅಡುಗೆ ಮಾಡುತ್ತಿರುವ ಪಾತ್ರೆಗಳನ್ನೂ ಲಾಠಿಯಿಂದ ಉರುಳಿಸಿದರು” ಎಂದು ಮತ್ತೊಬ್ಬ ಮಹಿಳೆ ದೂರಿದ್ದಾರೆ.

ಪೊಲೀಸ್ ಕಾರ್ಯಾಚರಣೆ

ಬೆಂಗಳೂರು ಹೊರವಲಯದಲ್ಲಿರುವ ದಾಖಲೆ ರಹಿತ ನಿವಾಸಿಗಳನ್ನು ಹೊರಗೆ ಕಳುಹಿಸಲು ಪೊಲೀಸರು ಮೇ ತಿಂಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್‌ ವ್ಯಾಪ್ತಿಗೆ ಒಳಪಡುವ ಸರ್ಜಾಪುರ, ಅನುಗೊಂಡನಹಳ್ಳಿ ಮತ್ತು ಹೆಬ್ಬಗೋಡಿ ಪೊಲೀಸ್‌ ವ್ಯಾಪ್ತಿಯಲ್ಲಿನ ಗುಡಿಸಲುಗಳ ಮೇಲೆ ಮೇ ತಿಂಗಳಿನಿಂದಲೂ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

“ಮೇ 21ರಂದು ಸುಮಾರು ಎರಡು ಡಜನ್ ಪೊಲೀಸರು ಇದ್ದಕ್ಕಿದ್ದಂತೆ ನಮ್ಮ ಶಿಬಿರಕ್ಕೆ ನುಗ್ಗಿ ಲಾಠಿಗಳಿಂದ ದಾಳಿ ಮಾಡಿದರು. ಸಂಜೆ ಸುಮಾರು 4 ಗಂಟೆಯಾಗಿತ್ತು. ತಕ್ಷಣವೇ ಪ್ಯಾಕ್‌ಅಪ್‌ ಮಾಡಬೇಕು ಎಂದು ಸೂಚಿಸಿದರು” ಎಂದು ಬಂಗಾಲಿ ತುಬರ್ ಸೇಖ್ (34) ದೂರಿದ್ದರು.

ಬಂಗಾಳಿ ಮಾತನಾಡುವ ಸಾವಿರಾರು ಮುಸ್ಲಿಮರಲ್ಲಿ ಭೀತಿ ಉಂಟಾಗಿದೆ. ಈ ವಲಸೆ ಕಾರ್ಮಿಕರು ನಗರದ ಕಸವನ್ನು ಸಂಗ್ರಹಿಸುವ ಮತ್ತು ಬೇರ್ಪಡಿಸುವ ಮೂಲಕ ಜೀವನ ನಡೆಸುತ್ತಿದ್ದಾರೆ. ಬಾಂಗ್ಲಾ ದೇಶದ ಅಕ್ರಮ ವಲಸಿಗರೆಂದು ಆರೋಪಿಸಿ, ಬಂಗಾಲಿ ಮುಸ್ಲಿಮರ ಮೇಲೆ ನಿರಂತರ ದಾಳಿಗಳನ್ನು ಪೊಲೀಸರು ನಡೆಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...