Homeಕರ್ನಾಟಕಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

- Advertisement -
- Advertisement -

ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಬೆಂಗಾಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಅಕ್ರಮವಾಗಿ ಹೊರಹಾಕಲು ಯತ್ನಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸೋಮವಾರ ದೂರು ದಾಖಲಾಗಿದೆ.

ಬೆಂಗಾಲಿ ಮುಸ್ಲಿಮರು ಶಿಕಾರಿಪಾಳ್ಯದಲ್ಲಿ ನಡೆಸುತ್ತಿದ್ದ ಕಸ ವಿಂಗಡಣೆ ಘಟಕಗಳಿಗೆ ಜೂನ್ 17 ಮತ್ತು 18ರಂದು ಹೆಬ್ಬಗೋಡಿ ಪೊಲೀಸರು ದಾಳಿ ನಡೆಸಿದರು. ಬೆಂಗಳೂರನ್ನು ತೊರೆಯುವಂತೆ ಸೂಚಿಸಿ ಲಾಠಿ ಚಾರ್ಜ್ ಮಾಡಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವಿದ್ದ ಜಾಗದ ಮೇಲೆ ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ತಮ್ಮ ಆಸ್ತಿಗಳಿಗೆ ಹಾನಿಯಾಗಿದೆ ಎಂದು ಮುರ್ಷಿದಾಬಾದ್‌ನ ಬಂಗಾಳಿ ಮುಸ್ಲಿಮರಾದ ರಬ್ಬಾನಿ ಸರ್ದಾರ್ (52) ಮತ್ತು ಅನೀಸ್ (38) ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಾವು ಭಾರತೀಯರಲ್ಲ ಎಂದು ಸಾಬೀತುಪಡಿಸಲು ಪೊಲೀಸರು ಯತ್ನಿಸಿದ್ದಾರೆ. ಪೊಲೀಸ್ ತಂಡಗಳು ನಮ್ಮ ಆಹಾರ ಸಾಮಗ್ರಿಗಳನ್ನು ನಾಶಪಡಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳಿಗೆ ಬೆದರಿಕೆ ಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಾರ್ಮಿಕರಿಗೆ ಕಾನೂನು ನೆರವು ನೀಡಿದ ಸ್ವರಾಜ್ ಇಂಡಿಯಾ ಪಕ್ಷದ ಮುಖಂಡರಾದ ಕಲೀಮುಲ್ಲಾ ಪ್ರತಿಕ್ರಿಯೆ ನೀಡಿದ್ದು, “ಪೊಲೀಸರು ಧರ್ಮದ ಕಾರಣಕ್ಕಾಗಿ ಬಂಗಾಳಿ ಮುಸ್ಲಿಮರನ್ನು ಟಾರ್ಗೆಟ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಇದು ದೇಶದ ರಾಜಕೀಯ ಪರಿಸ್ಥಿತಿಯ ಪರಿಣಾಮವಾಗಿದೆ. ಬಂಗಾಳಿ ಮುಸ್ಲಿಮರಾಗಿರುವುದು ಅಪರಾಧವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೆಬ್ಬಗೋಡಿ ಪೊಲೀಸರು ಹದಿನೈದು ದಿನಗಳಿಗೂ ಹೆಚ್ಚು ಕಾಲ ತಮ್ಮ ವ್ಯಾಪ್ತಿಯಲ್ಲಿರುವ ವಲಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಕಸ ವಿಂಗಡಣಾ ಘಟಕದ ಮಾಲೀಕ ಯಾರ್ ಅಲಿ (46) ದೂರಿದ್ದಾರೆ.

“ನಾನು ನನ್ನ ಎಲ್ಲಾ ಐಡಿಗಳನ್ನು ಹಾಜರುಪಡಿಸಿದರೂ ಅವರು ನನ್ನ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಅಂತಿಮವಾಗಿ ನಾನು ನನ್ನ ಗ್ರಾಮದ ಸ್ಥಳೀಯ ಪೊಲೀಸ್ ಠಾಣೆಯಿಂದ ಪಡೆದ ಪತ್ರವನ್ನು ಸಲ್ಲಿಸಬೇಕಾಯಿತು. ನನಗೆ ನಮ್ಮ ಕ್ಷೇತ್ರದ ಸಂಸದೆ ಪ್ರೊತಿಮಾ ಮೊಂಡಲ್ ಅವರಿಂದಲೂ ಪತ್ರ ಬಂದಿತು. ಆದರೆ ಪೊಲೀಸರು ಇನ್ನೂ ಪ್ರಕರಣವನ್ನು ಮುಂದುವರಿಸುತ್ತಿದ್ದಾರೆ” ಎಂದು ವಿಷಾದಿಸಿದ್ದಾರೆ.

“ನಾವು ಕಸ ಬೇರ್ಪಡಿಸಿ ಹೊಟ್ಟೆಪಾಡು ಮಾಡುತ್ತಿದ್ದೇವೆ. ಆದರೆ ಸರ್ಕಾರ ನಮಗೆ ಬೇರೆ ಕೆಲಸ ಕೊಡುತ್ತದೆಯೇ?” ಎಂದು ಮಹಿಳೆಯೊಬ್ಬರು ಕೇಳಿದ್ದಾರೆ.

“ನಾವು ಕೊಲ್ಕತ್ತದಿಂದ ಬಂದಿದ್ದೇವೆ. ಪೊಲೀಸರು ಲಾಠಿಯೊಂದಿಗೆ ಬಂದು ಗಂಡಸರು, ಹೆಂಗಸರೆನ್ನದೆ ದಾಳಿ ಮಾಡಿದರು. ನೀವ್ಯಾಕೆ ಇಲ್ಲಿದ್ದೀರಿ, ಇಲ್ಲಿಂದ ಹೋಗಿ ಎಂದರು. ನಾವು ಅಡುಗೆ ಮಾಡುತ್ತಿರುವ ಪಾತ್ರೆಗಳನ್ನೂ ಲಾಠಿಯಿಂದ ಉರುಳಿಸಿದರು” ಎಂದು ಮತ್ತೊಬ್ಬ ಮಹಿಳೆ ದೂರಿದ್ದಾರೆ.

ಪೊಲೀಸ್ ಕಾರ್ಯಾಚರಣೆ

ಬೆಂಗಳೂರು ಹೊರವಲಯದಲ್ಲಿರುವ ದಾಖಲೆ ರಹಿತ ನಿವಾಸಿಗಳನ್ನು ಹೊರಗೆ ಕಳುಹಿಸಲು ಪೊಲೀಸರು ಮೇ ತಿಂಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್‌ ವ್ಯಾಪ್ತಿಗೆ ಒಳಪಡುವ ಸರ್ಜಾಪುರ, ಅನುಗೊಂಡನಹಳ್ಳಿ ಮತ್ತು ಹೆಬ್ಬಗೋಡಿ ಪೊಲೀಸ್‌ ವ್ಯಾಪ್ತಿಯಲ್ಲಿನ ಗುಡಿಸಲುಗಳ ಮೇಲೆ ಮೇ ತಿಂಗಳಿನಿಂದಲೂ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

“ಮೇ 21ರಂದು ಸುಮಾರು ಎರಡು ಡಜನ್ ಪೊಲೀಸರು ಇದ್ದಕ್ಕಿದ್ದಂತೆ ನಮ್ಮ ಶಿಬಿರಕ್ಕೆ ನುಗ್ಗಿ ಲಾಠಿಗಳಿಂದ ದಾಳಿ ಮಾಡಿದರು. ಸಂಜೆ ಸುಮಾರು 4 ಗಂಟೆಯಾಗಿತ್ತು. ತಕ್ಷಣವೇ ಪ್ಯಾಕ್‌ಅಪ್‌ ಮಾಡಬೇಕು ಎಂದು ಸೂಚಿಸಿದರು” ಎಂದು ಬಂಗಾಲಿ ತುಬರ್ ಸೇಖ್ (34) ದೂರಿದ್ದರು.

ಬಂಗಾಳಿ ಮಾತನಾಡುವ ಸಾವಿರಾರು ಮುಸ್ಲಿಮರಲ್ಲಿ ಭೀತಿ ಉಂಟಾಗಿದೆ. ಈ ವಲಸೆ ಕಾರ್ಮಿಕರು ನಗರದ ಕಸವನ್ನು ಸಂಗ್ರಹಿಸುವ ಮತ್ತು ಬೇರ್ಪಡಿಸುವ ಮೂಲಕ ಜೀವನ ನಡೆಸುತ್ತಿದ್ದಾರೆ. ಬಾಂಗ್ಲಾ ದೇಶದ ಅಕ್ರಮ ವಲಸಿಗರೆಂದು ಆರೋಪಿಸಿ, ಬಂಗಾಲಿ ಮುಸ್ಲಿಮರ ಮೇಲೆ ನಿರಂತರ ದಾಳಿಗಳನ್ನು ಪೊಲೀಸರು ನಡೆಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...