Homeಕರ್ನಾಟಕಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

- Advertisement -
- Advertisement -

ಖ್ಯಾತ ಪತ್ರಕರ್ತ, ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌‌ ಅವರನ್ನು ಕ್ಷುಲ್ಲಕ ಪ್ರಕರಣವೊಂದರಲ್ಲಿ ಸಿಲುಕಿಸಿ, ಬಂಧಿಸಿರುವುದನ್ನು ಖಂಡಿಸಿ ಬೆಂಗಳೂರಿನ ವಿವಿಧೆಡೆ ಮಂಗಳವಾರ ಸಂಜೆ ಶಾಂತಿಯುತ ಪ್ರತಿಭಟನೆಗಳು ನಡೆದವು.

ಬೆಂಗಳೂರಿನ ಸೆಂಟ್‌ ಜಾನ್ಸ್‌ ರೋಡ್‌, ಇನ್‌ಫ್ಯಾಂಟ್ರಿ ರೋಡ್‌, ಆರ್‌.ಟಿ.ನಗರ, ಸೆಂಟ್ರಲ್‌ ಸ್ಟ್ರೀಟ್‌ ಸೇರಿದಂತೆ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟಿಸಲಾಗಿದೆ. ರಾಜ್ಯದ ಕೆಲವೆಡೆ ಪ್ರತಿಭಟನೆಗಳಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್ ಅವರ ಬಂಧನ ಭಾರತದ ಪ್ರಜಾಪ್ರಭುತ್ವ ಮೇಲೆ ಆಗುತ್ತಿರುವ ಮತ್ತೊಂದು ದಾಳಿಯಾಗಿದೆ. ದ್ವೇಷ ಸೃಷ್ಟಿ ಹಾಗೂ ಫೇಕ್ ನ್ಯೂಸ್‌ಗಳ ವಿರುದ್ಧ ಆಲ್ಟ್ ನ್ಯೂಸ್ ಸಂಸ್ಥೆಯ ಮೂಲಕ ಜುಬೇರ್ ಅವರು ಹಲವು ವರ್ಷಗಳಿಂದ  ಹೋರಾಡುತ್ತಿದ್ದಾರೆ. ಅವರ ಬಂಧನ ಖಂಡನೀಯ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಮೌನ ಪ್ರತಿಭಟನೆ

ನಾಲ್ಕು ವರ್ಷಗಳ ಹಿಂದೆ ಹಳೆಯ ಹಿಂದಿ ಚಲನಚಿತ್ರದಲ್ಲಿನ ದೃಶ್ಯವನ್ನು ಜುಬೈರ್‌‌ ಟ್ವೀಟ್ ಮಾಡಿದ್ದರು. ಇದರ ಬಗ್ಗೆ ನಾಲ್ಕು ವರ್ಷದ ನಂತರ ವ್ಯಕ್ತಿಯೊಬ್ಬರು ದಿಲ್ಲಿ ಪೊಲೀಸರಿಗೆ ದೂರು ನೀಡುತ್ತಾರೆ. ಈ ವಿಷಯವಾಗಿ ಜುಬೇರ್ ಅವರಿಗೆ ನೋಟಿಸ್ ಸಹ ನೀಡದೆ ಪೊಲೀಸರು ಬಂಧಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಂಧನ ಮಾಡುವಾಗ ಪೊಲೀಸರು ತಮ್ಮ ಬ್ಯಾಡ್ಜ್ ಸಹ ಹಾಕಿರಲಿಲ್ಲ. ಪ್ರಥಮ ಮಾಹಿತಿ ವರದಿ (ಎಫ್.ಐ.ಆರ್‌‌) ಪ್ರತಿ ಸಹ ನೀಡಲಿಲ್ಲ. ಇದೆಲ್ಲ ಕಾನೂನಿನ ಉಲ್ಲಂಘನೆ. ಜುಬೇರ್ ಅವನ್ನು ಕ್ಷುಲ್ಲಕ ಕಾರಣಕ್ಕೆ ಅಕ್ರಮವಾಗಿ ಬಂಧಿಸಿ, ದೇಶದಲ್ಲಿ ವಾಕ್ ಸ್ವಾತಂತ್ರ್ಯವನ್ನು ಅಪಾಯದಲ್ಲಿ ತಂದಿಟ್ಟಿರುವ ದಿಲ್ಲಿ ಪೊಲೀಸರ ಕ್ರಮ ಖಂಡನೀಯ ಎಂದು ತಿಳಿಸಿದ್ದಾರೆ.

ಜುಬೇರ್‌ ಅವರ ಬಂಧನದ ಮೂಲಕ ನಮ್ಮ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ. ನಾವೆಲ್ಲರೂ ಜುಬೇರ್ ಅವರ ಬಂಧನದ ವಿರುದ್ಧ ಮಾತನಾಡುವುದಲ್ಲದೆ, ದ್ವೇಷ ಸೃಷ್ಟಿಯ ವಿರುದ್ಧ ಹಾಗೂ ಫೇಕ್ ನ್ಯೂಸ್ ವಿರುದ್ಧ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

ಜುಬೇರ್‌‌ ಅವರನ್ನು ನ್ಯಾಯಾಲಯವು ಮತ್ತೇ ನಾಲ್ಕು ದಿನಗಳ ಪೊಲೀಸರ ವಶಕ್ಕೆ ನೀಡಿದೆ. ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದರು. ಅದರ ನಂತರ ಡ್ಯೂಟಿ ಮ್ಯಾಜಿಸ್ಟ್ರೇಟ್ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಇದನ್ನೂ ಓದಿರಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ಜುಬೇರ್‌‌ ಅವರು ಈ ಟ್ವೀಟ್ ಅನ್ನು 2018ರಲ್ಲಿ ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅನಾಮಧೇಯ ಟ್ವಿಟರ್‌ ಖಾತೆಯೊಂದು ದೆಹಲಿ ಪೊಲೀಸರಿಗೆ ದೂರಿಕೊಂಡಿತ್ತು. ಇದರ ನಂತರ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದಾರೆ.

“ಇದೇ ರೀತಿಯ ಟ್ವೀಟ್‌ಅನ್ನು ಅನೇಕರು ಮಾಡಿದ್ದಾರೆ. ಆದರೆ ಆ ಖಾತೆ ಮತ್ತು ನನ್ನ ನಡುವಿನ ಏಕೈಕ ವ್ಯತ್ಯಾಸವೆಂದರೆ ನನ್ನ ಧರ್ಮ, ನನ್ನ ಹೆಸರು ಮತ್ತು ನನ್ನ ವೃತ್ತಿ” ಎಂದು ಜುಬೇರ್ ಹೇಳಿರುವುದಾಗಿ ವರದಿಯಾಗಿದೆ.

ಜುಬೈರ್ ಅವರು ಟ್ವೀಟ್ ಮಾಡಿದ್ದ ಚಿತ್ರ, 1983ರ ಹೃಷಿಕೇಶ್ ಮುಖರ್ಜಿ ಅವರ ‘ಕಿಸಿ ಸೆ ನಾ ಕೆಹನಾ’ ಚಲನಚಿತ್ರದ ಸ್ಕ್ರೀನ್‌ ಶಾರ್ಟ್ ಆಗಿದೆ. ಅವರು ಮಾಡಿದ್ದ ಟ್ವೀಟ್‌ನಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸುವ ಚಿತ್ರಣವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಂತ ಕಳ್ಳನಿಗೆ ,ಅಯೋಗ್ಯನಿಗೆ ,ಸುಳ್ಳನಿಗೆ ದೇಶ ದ್ರೋಹಿಗೆ ನಿಮ್ಮಂತ ಅವನ ಬಳಗವೇ ಬೆಂಬಲಿಸಲು ಸಾಧ್ಯ ಅಯೋಗ್ಯರ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...