Homeಕರ್ನಾಟಕಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

- Advertisement -
- Advertisement -

ಖ್ಯಾತ ಪತ್ರಕರ್ತ, ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌‌ ಅವರನ್ನು ಕ್ಷುಲ್ಲಕ ಪ್ರಕರಣವೊಂದರಲ್ಲಿ ಸಿಲುಕಿಸಿ, ಬಂಧಿಸಿರುವುದನ್ನು ಖಂಡಿಸಿ ಬೆಂಗಳೂರಿನ ವಿವಿಧೆಡೆ ಮಂಗಳವಾರ ಸಂಜೆ ಶಾಂತಿಯುತ ಪ್ರತಿಭಟನೆಗಳು ನಡೆದವು.

ಬೆಂಗಳೂರಿನ ಸೆಂಟ್‌ ಜಾನ್ಸ್‌ ರೋಡ್‌, ಇನ್‌ಫ್ಯಾಂಟ್ರಿ ರೋಡ್‌, ಆರ್‌.ಟಿ.ನಗರ, ಸೆಂಟ್ರಲ್‌ ಸ್ಟ್ರೀಟ್‌ ಸೇರಿದಂತೆ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟಿಸಲಾಗಿದೆ. ರಾಜ್ಯದ ಕೆಲವೆಡೆ ಪ್ರತಿಭಟನೆಗಳಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್ ಅವರ ಬಂಧನ ಭಾರತದ ಪ್ರಜಾಪ್ರಭುತ್ವ ಮೇಲೆ ಆಗುತ್ತಿರುವ ಮತ್ತೊಂದು ದಾಳಿಯಾಗಿದೆ. ದ್ವೇಷ ಸೃಷ್ಟಿ ಹಾಗೂ ಫೇಕ್ ನ್ಯೂಸ್‌ಗಳ ವಿರುದ್ಧ ಆಲ್ಟ್ ನ್ಯೂಸ್ ಸಂಸ್ಥೆಯ ಮೂಲಕ ಜುಬೇರ್ ಅವರು ಹಲವು ವರ್ಷಗಳಿಂದ  ಹೋರಾಡುತ್ತಿದ್ದಾರೆ. ಅವರ ಬಂಧನ ಖಂಡನೀಯ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಮೌನ ಪ್ರತಿಭಟನೆ

ನಾಲ್ಕು ವರ್ಷಗಳ ಹಿಂದೆ ಹಳೆಯ ಹಿಂದಿ ಚಲನಚಿತ್ರದಲ್ಲಿನ ದೃಶ್ಯವನ್ನು ಜುಬೈರ್‌‌ ಟ್ವೀಟ್ ಮಾಡಿದ್ದರು. ಇದರ ಬಗ್ಗೆ ನಾಲ್ಕು ವರ್ಷದ ನಂತರ ವ್ಯಕ್ತಿಯೊಬ್ಬರು ದಿಲ್ಲಿ ಪೊಲೀಸರಿಗೆ ದೂರು ನೀಡುತ್ತಾರೆ. ಈ ವಿಷಯವಾಗಿ ಜುಬೇರ್ ಅವರಿಗೆ ನೋಟಿಸ್ ಸಹ ನೀಡದೆ ಪೊಲೀಸರು ಬಂಧಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಂಧನ ಮಾಡುವಾಗ ಪೊಲೀಸರು ತಮ್ಮ ಬ್ಯಾಡ್ಜ್ ಸಹ ಹಾಕಿರಲಿಲ್ಲ. ಪ್ರಥಮ ಮಾಹಿತಿ ವರದಿ (ಎಫ್.ಐ.ಆರ್‌‌) ಪ್ರತಿ ಸಹ ನೀಡಲಿಲ್ಲ. ಇದೆಲ್ಲ ಕಾನೂನಿನ ಉಲ್ಲಂಘನೆ. ಜುಬೇರ್ ಅವನ್ನು ಕ್ಷುಲ್ಲಕ ಕಾರಣಕ್ಕೆ ಅಕ್ರಮವಾಗಿ ಬಂಧಿಸಿ, ದೇಶದಲ್ಲಿ ವಾಕ್ ಸ್ವಾತಂತ್ರ್ಯವನ್ನು ಅಪಾಯದಲ್ಲಿ ತಂದಿಟ್ಟಿರುವ ದಿಲ್ಲಿ ಪೊಲೀಸರ ಕ್ರಮ ಖಂಡನೀಯ ಎಂದು ತಿಳಿಸಿದ್ದಾರೆ.

ಜುಬೇರ್‌ ಅವರ ಬಂಧನದ ಮೂಲಕ ನಮ್ಮ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ. ನಾವೆಲ್ಲರೂ ಜುಬೇರ್ ಅವರ ಬಂಧನದ ವಿರುದ್ಧ ಮಾತನಾಡುವುದಲ್ಲದೆ, ದ್ವೇಷ ಸೃಷ್ಟಿಯ ವಿರುದ್ಧ ಹಾಗೂ ಫೇಕ್ ನ್ಯೂಸ್ ವಿರುದ್ಧ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

ಜುಬೇರ್‌‌ ಅವರನ್ನು ನ್ಯಾಯಾಲಯವು ಮತ್ತೇ ನಾಲ್ಕು ದಿನಗಳ ಪೊಲೀಸರ ವಶಕ್ಕೆ ನೀಡಿದೆ. ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದರು. ಅದರ ನಂತರ ಡ್ಯೂಟಿ ಮ್ಯಾಜಿಸ್ಟ್ರೇಟ್ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಇದನ್ನೂ ಓದಿರಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ಜುಬೇರ್‌‌ ಅವರು ಈ ಟ್ವೀಟ್ ಅನ್ನು 2018ರಲ್ಲಿ ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅನಾಮಧೇಯ ಟ್ವಿಟರ್‌ ಖಾತೆಯೊಂದು ದೆಹಲಿ ಪೊಲೀಸರಿಗೆ ದೂರಿಕೊಂಡಿತ್ತು. ಇದರ ನಂತರ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದಾರೆ.

“ಇದೇ ರೀತಿಯ ಟ್ವೀಟ್‌ಅನ್ನು ಅನೇಕರು ಮಾಡಿದ್ದಾರೆ. ಆದರೆ ಆ ಖಾತೆ ಮತ್ತು ನನ್ನ ನಡುವಿನ ಏಕೈಕ ವ್ಯತ್ಯಾಸವೆಂದರೆ ನನ್ನ ಧರ್ಮ, ನನ್ನ ಹೆಸರು ಮತ್ತು ನನ್ನ ವೃತ್ತಿ” ಎಂದು ಜುಬೇರ್ ಹೇಳಿರುವುದಾಗಿ ವರದಿಯಾಗಿದೆ.

ಜುಬೈರ್ ಅವರು ಟ್ವೀಟ್ ಮಾಡಿದ್ದ ಚಿತ್ರ, 1983ರ ಹೃಷಿಕೇಶ್ ಮುಖರ್ಜಿ ಅವರ ‘ಕಿಸಿ ಸೆ ನಾ ಕೆಹನಾ’ ಚಲನಚಿತ್ರದ ಸ್ಕ್ರೀನ್‌ ಶಾರ್ಟ್ ಆಗಿದೆ. ಅವರು ಮಾಡಿದ್ದ ಟ್ವೀಟ್‌ನಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸುವ ಚಿತ್ರಣವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಂತ ಕಳ್ಳನಿಗೆ ,ಅಯೋಗ್ಯನಿಗೆ ,ಸುಳ್ಳನಿಗೆ ದೇಶ ದ್ರೋಹಿಗೆ ನಿಮ್ಮಂತ ಅವನ ಬಳಗವೇ ಬೆಂಬಲಿಸಲು ಸಾಧ್ಯ ಅಯೋಗ್ಯರ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....