Homeಕರ್ನಾಟಕಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

- Advertisement -
- Advertisement -

ಖ್ಯಾತ ಪತ್ರಕರ್ತ, ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌‌ ಅವರನ್ನು ಕ್ಷುಲ್ಲಕ ಪ್ರಕರಣವೊಂದರಲ್ಲಿ ಸಿಲುಕಿಸಿ, ಬಂಧಿಸಿರುವುದನ್ನು ಖಂಡಿಸಿ ಬೆಂಗಳೂರಿನ ವಿವಿಧೆಡೆ ಮಂಗಳವಾರ ಸಂಜೆ ಶಾಂತಿಯುತ ಪ್ರತಿಭಟನೆಗಳು ನಡೆದವು.

ಬೆಂಗಳೂರಿನ ಸೆಂಟ್‌ ಜಾನ್ಸ್‌ ರೋಡ್‌, ಇನ್‌ಫ್ಯಾಂಟ್ರಿ ರೋಡ್‌, ಆರ್‌.ಟಿ.ನಗರ, ಸೆಂಟ್ರಲ್‌ ಸ್ಟ್ರೀಟ್‌ ಸೇರಿದಂತೆ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟಿಸಲಾಗಿದೆ. ರಾಜ್ಯದ ಕೆಲವೆಡೆ ಪ್ರತಿಭಟನೆಗಳಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್ ಅವರ ಬಂಧನ ಭಾರತದ ಪ್ರಜಾಪ್ರಭುತ್ವ ಮೇಲೆ ಆಗುತ್ತಿರುವ ಮತ್ತೊಂದು ದಾಳಿಯಾಗಿದೆ. ದ್ವೇಷ ಸೃಷ್ಟಿ ಹಾಗೂ ಫೇಕ್ ನ್ಯೂಸ್‌ಗಳ ವಿರುದ್ಧ ಆಲ್ಟ್ ನ್ಯೂಸ್ ಸಂಸ್ಥೆಯ ಮೂಲಕ ಜುಬೇರ್ ಅವರು ಹಲವು ವರ್ಷಗಳಿಂದ  ಹೋರಾಡುತ್ತಿದ್ದಾರೆ. ಅವರ ಬಂಧನ ಖಂಡನೀಯ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಮೌನ ಪ್ರತಿಭಟನೆ

ನಾಲ್ಕು ವರ್ಷಗಳ ಹಿಂದೆ ಹಳೆಯ ಹಿಂದಿ ಚಲನಚಿತ್ರದಲ್ಲಿನ ದೃಶ್ಯವನ್ನು ಜುಬೈರ್‌‌ ಟ್ವೀಟ್ ಮಾಡಿದ್ದರು. ಇದರ ಬಗ್ಗೆ ನಾಲ್ಕು ವರ್ಷದ ನಂತರ ವ್ಯಕ್ತಿಯೊಬ್ಬರು ದಿಲ್ಲಿ ಪೊಲೀಸರಿಗೆ ದೂರು ನೀಡುತ್ತಾರೆ. ಈ ವಿಷಯವಾಗಿ ಜುಬೇರ್ ಅವರಿಗೆ ನೋಟಿಸ್ ಸಹ ನೀಡದೆ ಪೊಲೀಸರು ಬಂಧಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಂಧನ ಮಾಡುವಾಗ ಪೊಲೀಸರು ತಮ್ಮ ಬ್ಯಾಡ್ಜ್ ಸಹ ಹಾಕಿರಲಿಲ್ಲ. ಪ್ರಥಮ ಮಾಹಿತಿ ವರದಿ (ಎಫ್.ಐ.ಆರ್‌‌) ಪ್ರತಿ ಸಹ ನೀಡಲಿಲ್ಲ. ಇದೆಲ್ಲ ಕಾನೂನಿನ ಉಲ್ಲಂಘನೆ. ಜುಬೇರ್ ಅವನ್ನು ಕ್ಷುಲ್ಲಕ ಕಾರಣಕ್ಕೆ ಅಕ್ರಮವಾಗಿ ಬಂಧಿಸಿ, ದೇಶದಲ್ಲಿ ವಾಕ್ ಸ್ವಾತಂತ್ರ್ಯವನ್ನು ಅಪಾಯದಲ್ಲಿ ತಂದಿಟ್ಟಿರುವ ದಿಲ್ಲಿ ಪೊಲೀಸರ ಕ್ರಮ ಖಂಡನೀಯ ಎಂದು ತಿಳಿಸಿದ್ದಾರೆ.

ಜುಬೇರ್‌ ಅವರ ಬಂಧನದ ಮೂಲಕ ನಮ್ಮ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ. ನಾವೆಲ್ಲರೂ ಜುಬೇರ್ ಅವರ ಬಂಧನದ ವಿರುದ್ಧ ಮಾತನಾಡುವುದಲ್ಲದೆ, ದ್ವೇಷ ಸೃಷ್ಟಿಯ ವಿರುದ್ಧ ಹಾಗೂ ಫೇಕ್ ನ್ಯೂಸ್ ವಿರುದ್ಧ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

ಜುಬೇರ್‌‌ ಅವರನ್ನು ನ್ಯಾಯಾಲಯವು ಮತ್ತೇ ನಾಲ್ಕು ದಿನಗಳ ಪೊಲೀಸರ ವಶಕ್ಕೆ ನೀಡಿದೆ. ಸೆನ್ಸಾರ್ ಮಂಡಳಿಯಿಂದ ‘ಯು’ (ಎಲ್ಲರೂ ನೋಡಬಹುದು) ಪ್ರಮಾಣಪತ್ರ ಪಡೆದಿರುವ 1983ರ ಚಲನಚಿತ್ರದ ಸ್ಕ್ರೀನ್‌ಶಾಟ್ ಅನ್ನು ಹಂಚಿದ್ದಕ್ಕಾಗಿ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದರು. ಅದರ ನಂತರ ಡ್ಯೂಟಿ ಮ್ಯಾಜಿಸ್ಟ್ರೇಟ್ ರಾತ್ರಿ ಅವರನ್ನು ಪೊಲೀಸರಿಗೆ ಒಂದು ದಿನದ ಕಸ್ಟಡಿ ನೀಡಿದ್ದರು.

ಇದನ್ನೂ ಓದಿರಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ಜುಬೇರ್‌‌ ಅವರು ಈ ಟ್ವೀಟ್ ಅನ್ನು 2018ರಲ್ಲಿ ಟ್ವೀಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅನಾಮಧೇಯ ಟ್ವಿಟರ್‌ ಖಾತೆಯೊಂದು ದೆಹಲಿ ಪೊಲೀಸರಿಗೆ ದೂರಿಕೊಂಡಿತ್ತು. ಇದರ ನಂತರ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರು ಅವರನ್ನು ಸೋಮವಾರ ಬಂಧಿಸಿದ್ದಾರೆ.

“ಇದೇ ರೀತಿಯ ಟ್ವೀಟ್‌ಅನ್ನು ಅನೇಕರು ಮಾಡಿದ್ದಾರೆ. ಆದರೆ ಆ ಖಾತೆ ಮತ್ತು ನನ್ನ ನಡುವಿನ ಏಕೈಕ ವ್ಯತ್ಯಾಸವೆಂದರೆ ನನ್ನ ಧರ್ಮ, ನನ್ನ ಹೆಸರು ಮತ್ತು ನನ್ನ ವೃತ್ತಿ” ಎಂದು ಜುಬೇರ್ ಹೇಳಿರುವುದಾಗಿ ವರದಿಯಾಗಿದೆ.

ಜುಬೈರ್ ಅವರು ಟ್ವೀಟ್ ಮಾಡಿದ್ದ ಚಿತ್ರ, 1983ರ ಹೃಷಿಕೇಶ್ ಮುಖರ್ಜಿ ಅವರ ‘ಕಿಸಿ ಸೆ ನಾ ಕೆಹನಾ’ ಚಲನಚಿತ್ರದ ಸ್ಕ್ರೀನ್‌ ಶಾರ್ಟ್ ಆಗಿದೆ. ಅವರು ಮಾಡಿದ್ದ ಟ್ವೀಟ್‌ನಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸುವ ಚಿತ್ರಣವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಂತ ಕಳ್ಳನಿಗೆ ,ಅಯೋಗ್ಯನಿಗೆ ,ಸುಳ್ಳನಿಗೆ ದೇಶ ದ್ರೋಹಿಗೆ ನಿಮ್ಮಂತ ಅವನ ಬಳಗವೇ ಬೆಂಬಲಿಸಲು ಸಾಧ್ಯ ಅಯೋಗ್ಯರ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...