Homeಮುಖಪುಟಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಉಂಟಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇರಬೇಕೆಂಬುದು ಕಡ್ಡಾಯವೇ?

- Advertisement -
- Advertisement -

ಕಳೆದ ತಿಂಗಳು ಸಂಭವಿಸಿದ ಬೆಂಗಳೂರಿನ ಕೆ.ಜೆ.ಹಳ್ಳಿ ಡಿಜೆಹಳ್ಳಿ ಗಲಭೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಶ್ರೀಕಾಂತ್ ಡಿ ಬಬಲಾಡಿ ನೇತೃತ್ವದಲ್ಲಿ ಒಂದು ತಂಡವು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆ ಹೆಸರಿನಲ್ಲಿ ಸತ್ಯಶೋಧನೆ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ವರದಿಯಲ್ಲಿ ಗಲಭೆ ಪೂರ್ವನಿಯೋಜಿತವಾಗಿದ್ದು, ಇದಕ್ಕೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನೇರ ಕಾರಣ ಎಂದು ತಿಳಿಸಲಾಗಿದೆ. ಆದರೆ ಸತ್ಯಶೋಧನೆಗೆ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಹೆಸರು ಬಳಸಿದ್ದಕ್ಕೆ ಅದರ ಅಧ್ಯಕ್ಷರಾದ ಖ್ಯಾತ ಹೋರಾಟಗಾರ ಎಸ್‌.ಆರ್ ಹಿರೇಮಠ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಿತಿಯಲ್ಲಿದ್ದ ಬಹುತೇಕರು ಬಿಜೆಪಿ – ಸಂಘಪರಿವಾರದ ಒಡನಾಟ ಹೊಂದಿರುವವರಾಗಿರುವುದರಿಂದ ಕೆ.ಜೆ.ಹಳ್ಳಿಯಲ್ಲಿ ಸತ್ಯಶೋಧನೆ ಹೆಸರಿನಲ್ಲಿ ಸುಳ್ಳನ್ನು ಬಿತ್ತಿದರೇ ಎಂಬ ಅನುಮಾನ ಹುಟ್ಟುವಂತಾಗಿದೆ ಮತ್ತು ಅದನ್ನು ಬಲಗೊಳಿಸುವ ಇನ್ನೂ ಹಲವು ಸಂಗತಿಗಳು ಹೊರಬಂದಿವೆ.

ಮುಖ್ಯವಾಗಿ ಸತ್ಯಶೋಧನಾ ಸಮಿತಿಯಲ್ಲಿ ಯಾರು ಯಾರು ಇದ್ದರು ಎಂಬುದು ವರದಿಯ ಉದ್ದೇಶವನ್ನು ತಿಳಿಸುತ್ತದೆ. ಆದರೆ ಇದರಲ್ಲಿ ಯಾರು ಯಾರಿದ್ದರು ನೋಡೋಣ ಬನ್ನಿ.

ಯಡಿಯೂರಪ್ಪನವರಿಗೆ ವರದಿ ಸಲ್ಲಿಸಿದ ನಂತರ ನಿವೃತ್ತ ಐಎಸ್‌ಎಸ್‌ ಅಧಿಕಾರಿ ಮದನ್ ಗೋಪಾಲ್ “ಇದು ನಿರ್ದಿಷ್ಠ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು, ಭೀತಿ ಸೃಷ್ಟಿಸಲು, ಆ ಮೂಲಕ ದೇಶದ ಆರ್ಥಿಕತೆ ಕೆಡವಲು ನಡೆಸಿದ ಪೂರ್ವಯೋಜಿತ ಗಲಭೆ” ಎಂದು ಹೇಳಿದ್ದಾರೆ. ಇದೇ ಮದನ್ ಗೋಪಾಲ್‌ರವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುಂಚೆ 2017ರಲ್ಲಿ ಬಿಜೆಪಿ ರಚಿಸಿದ ಪ್ರಣಾಳಿಕೆ ಸಮಿತಿಯ ಸಕ್ರಿಯ ಸದಸ್ಯರಾಗಿದ್ದವರು. ಅಂದರೆ ಬಿಜೆಪಿಯ ಪ್ರಬಲ ಬೆಂಬಲಿಗರು ಸತ್ಯಶೋಧನಾ ಸಮಿತಿಯ ಭಾಗವಾಗಿದ್ದರು ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

ಇನ್ನು ಸತ್ಯಶೋಧನ ಸಮಿತಿಯಲ್ಲಿದ್ದ ಮತ್ತೋರ್ವ ವ್ಯಕ್ತಿ ಡಾ.ಆರ್‌ರಾಜು. ಇವರು ನಿವೃತ್ತ ಐಎಫ್‌ಎಸ್‌ ಅಧಿಕಾರಿಗಳಾಗಿದ್ದು 2019ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾಗಿದ್ದರು. ಕಾಂಗ್ರೆಸ್‌ನ ಆರ್‌ ಧೃವನಾರಾಯಣ್‌ರವರನ್ನು ಎದುರಿಸುವುದಕ್ಕಾಗಿ ಟಿಕೆಟ್‌ಗಾಗಿ ಇವರು ಭಾರೀ ಪೈಪೋಟಿ ನಡೆಸಿದ್ದರು.

ಈ ಮೇಲಿನ ಎರಡು ಹೆಸರುಗಳು ಮಾಜಿ‌ ಅಧಿಕಾರಿಗಳದ್ದಾದರೆ ಸತ್ಯಶೋಧನಾ ಸಮಿತಿಯಲ್ಲಿದ್ದ ಮತ್ತೊಂದು ಹೆಸರು ಪತ್ರಕರ್ತರ ಕೋಟಾದ ಸಂತೋಷ್ ತಮ್ಮಯ್ಯ. ಇವರು ಮಡಿಕೇರಿಯವರಾಗಿದ್ದು ಪ್ರವಾದಿ ನಿಂದನೆ ಪೋಸ್ಟ್ ಮಾಡಿದ ಆರೋಪದಲ್ಲಿ ಇವರ ವಿರುದ್ಧ ದೂರು ದಾಖಲಾಗಿ 2018ರ ನವೆಂಬರ್ 13 ರಂದು ಗೋಣಿಕೊಪ್ಪದಲ್ಲಿ ಆತನನ್ನು ಬಂಧಿಸಲಾಗಿತ್ತು. ಅಂದರೆ ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಆರಂಭವಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇದ್ದಾರೆ. ಸತ್ಯಶೋಧನೆಯ ಮೂಲ ಉದ್ದೇಶದ ಬಗ್ಗೆಯೇ ಸಂಶಯ ಏಳುವುದು ಇಲ್ಲಿ.

ಈ ಸಂತೋಷ್ ತಮ್ಮಯ್ಯ ಎನ್ನುವ ಪತ್ರಕರ್ತ, ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ವಿರೋಧಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದವರು. ಅಲ್ಲದೇ ತಮ್ಮ ಹಲವು ಲೇಖನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ಬಿಜೆಪಿ ಪಕ್ಷವನ್ನು ಹೊಗಳಿರುವವರು. ಇಂತವರು ಸತ್ಯಶೋಧನಾ ಸಮಿತಿಯ ಭಾಗವಾದರೆ ವರದಿ ಹೇಗಿರುತ್ತದೆ?

ಇನ್ನು ಬಹಳ ಮುಖ್ಯವಾದ ವಿಚಾರ ಎಂದರೆ ಸಮಿತಿಯು ತನ್ನ ವರದಿಯನ್ನು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ಹೆಸರಿನಲ್ಲಿ ಹೊರತಂದಿದೆ. ಅದರ ಹಾಲಿ ಅಧ್ಯಕ್ಷ ಎಸ್‌.ಆರ್‌ ಹಿರೇಮಠ್‌ರವರು ‘ಸಿಟಿಜನ್ ಫಾರ್ ಡೆಮಾಕ್ರಸಿ’ಗೂ ಸತ್ಯಶೋಧನಾ ವರದಿಗೂ ಯಾವುದೇ ಸಂಬಂಧವಿಲ್ಲ. ಕೂಡಲೇ ವರದಿಯನ್ನು ಹಿಂಪಡೆದು ನಮ್ಮ ಸಂಘಟನೆಯ ಹೆಸರು ಕೈಬಿಟ್ಟು ಬೇರೆ ಸಂಘಟನೆಗಳ ಹೆಸರಿನಲ್ಲಿ ಪ್ರಕಟಿಸಬೇಕು ಎಂದು ತಾಕೀತು ಮಾಡಿದ್ದಾರೆ.

1974ರಲ್ಲಿ ಜಯಪ್ರಕಾಶ್ ನಾರಾಯಣ್‌ರವರ ಮೊದಲ ಅಧ್ಯಕ್ಷರಾಗಿ ಸ್ಥಾಪನೆಯಾಗಿದ್ದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ತುರ್ತುಪರಿಸ್ಥಿತಿಯ ವಿರುದ್ಧ ದಿಟ್ಟ ಹೋರಾಟ ನಡೆಸಿತ್ತು. ಆನಂತರವೂ ಸಹ ಹಲವು ಜನಪರ ಖ್ಯಾತನಾಮರು ಅದರ ಅಧ್ಯಕ್ಷರಾಗಿ ತುಳಿತಕ್ಕೊಳಗಾದವರ ಪರ ದನಿ ಎತ್ತಿದ್ದಾರೆ. ಅಂತಹ ಸಂಘಟನೆಯ ಹೆಸರನ್ನು ಬಿಜೆಪಿಯು ಬಳಸಿಕೊಂಡು ವರದಿ ತಯಾರಿಸಿದೆ ಎಂದರೆ ಏನರ್ಥ ಬರಬಹುದು ಎಂದು ಸಮಿತಿಯಲ್ಲಿದ್ದ ಘಟಾನುಘಟಿಗಳು ಯೋಚಿಸಿಲ್ಲವೇ? ಬಿಜೆಪಿ ಹೆಸರಿನಲ್ಲಿ ಪ್ರಕಟಿಸಿದರೆ ಜನ ಒಪ್ಪುವುದಿಲ್ಲ ಎಂದು ತಿಳಿದು ಜನಪರ ಸಂಘಟನೆಗಳ ಹೆಸರಿನಲ್ಲಿ ಬಿಜೆಪಿಯವರೆ ತಯಾರಿಸಿದ ವರದಿ ಪ್ರಕಟಿಸಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ….. ಹೇಳುತ್ತಾರೆ.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ


ಇನ್ನು ಸತ್ಯಶೋಧನಾ ತಂಡವು ವರದಿಯಲ್ಲಿ ತನ್ನ ಕಚೇರಿ ವಿಳಾಸವನ್ನು ನಮೂದಿಸಿದೆ. ಅದರ ಜಾಡು ಹಿಡಿದು ಹೊರಟರೆ ಅದು ನಿಮ್ಮನ್ನು ಬೆಂಗಳೂರಿನ ಚಾಮರಾಜಪೇಟೆಯ ‘ವಿಕ್ರಮ’ ಪತ್ರಿಕಾ ಕಚೇರಿಗೆ ಕರೆದುಕೊಂಡು ಹೋಗುತ್ತದೆ. ತನ್ನನ್ನು ತಾನು ಹಿಂದೂತ್ವ ಪತ್ರಿಕೆ ಎಂದು ಕರೆದುಕೊಳ್ಳುತ್ತದೆ. “ಹಿಂದು ಸಂಘಟನೆ ಮತ್ತು ವ್ಯಕ್ತಿತ್ವ ನಿರ್ಮಾಣದ ಕೆಲಸವನ್ನು ವಿವಿಧ ಸಂಘಟನೆಗಳು ಮಾಡುತ್ತಿವೆ ಮತ್ತು ಅದರಲ್ಲಿ ಯಶಸ್ವಿಯೂ ಆಗಿದೆ. ಆದರೆ ವೈಚಾರಿಕ ಜಾಗೃತಿಯ ಜವಾಬ್ದಾರಿ ಇರುವುದು ಪತ್ರಿಕೆಗಳು ಮತ್ತು ಕೃತಿಗಳ ಹೆಗಲ ಮೇಲೆ. ಈ ಉದ್ದೇಶದಿಂದಲೇ 1948ರ ವಿಜಯದಶಮಿಯಂದು ವಿಕ್ರಮ ವಾರಪತ್ರಿಕೆ ಸ್ಥಾಪನೆಯಾಯಿತು” ಎಂದು ಘೋಷಿಸಿಕೊಂಡ ಪತ್ರಿಕೆಯ ವಿಳಾಸವನ್ನು ಸತ್ಯಶೋಧನೆಯ ವರದಿಗೆ ಏಕೆ ನೀಡಲಾಯಿತು? ಆರೆಸ್ಸಸ್ ಮುಖಂಡರು ಹೇಳಲು ಅಂಜುವಂತಹ ಸಂಗತಿಗಳನ್ನೂ ವಿಕ್ರಮ ಪ್ರಕಟಿಸುತ್ತದೆ.

ಇನ್ನು ಈ ಸತ್ಯಶೋಧನಾ ತಂಡದ ಮುಖ್ಯ ಸಮನ್ವಯಕಾರರು ಕ್ಷಮಾ ನರಗುಂದ್. ಅವರು ಆರ್‌ಎಸ್‌ಎಸ್‌ನ ಮಹಿಳಾ ವಿಭಾಗ ದುರ್ಗಾವಾಹಿನಿಯ ಸದಸ್ಯೆ ಎನ್ನಲಾಗುತ್ತಿದೆ. ಅವರು ತಮ್ಮ ಟ್ವಿಟ್ಟರ್ ಬಯೋದಲ್ಲಿ ತಾವೊಬ್ಬ ಆರ್‌ಎಸ್‌ಎಸ್‌ ಸೇವಿಕ ಎಂದು ಘೋಷಿಸಿಕೊಂಡಿದ್ದಾರೆ.

ಸಮಿತಿಯಲ್ಲಿರುವ ಆರ್‌.ಕೆ.ಮಟ್ಟೂ ಎಂಬ ಪತ್ರಕರ್ತರು ಸಹ ಆರೆಸ್ಸೆಸ್ ಪರವಾದ ನಿಲುವಿಗೆ ಪ್ರಖ್ಯಾತರು.

ಇಷ್ಟೆಲ್ಲಾ ಸಂಘಪರಿವಾರದ ಮತ್ತು ಬಿಜೆಪಿಯ ವ್ಯಕ್ತಿಗಳು ಕೂತು ಬರೆದಿರುವ ವರದಿಯನ್ನು ‘ಸತ್ಯಶೋಧನೆ’ ಎಂದು ಕರೆಯಲಾಗುವುದೇ? ಆರೆಸ್ಸೆಸ್ ಪರಿವಾರವೇ ಹೋಗಿ ತಮ್ಮ ಪರವಾಗಿ ವರದಿ ಬರೆದುಕೊಂಡರೇ? ಎಂಬ ಪ್ರಶ್ನೆಗಳು ಉದ್ಭವವಾಗಿವೆ.

ಜೊತೆಗೆ ಇನ್ನೂ ಒಂದು ಗಮನಿಸಬೇಕಾದ ವಿಚಾರವಿದೆ: ಸಾಮಾನ್ಯವಾಗಿ ಆಡಳಿತ ನಡೆಸುವವರು ತಮ್ಮ ಅಡಿಯಲ್ಲೇ ಕೆಲಸ ಮಾಡುವ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟುಕೊಂಡಿರುತ್ತಾರೆ. ಹಾಗಾಗಿ ಆಡಳಿತ ವಿರೋಧಿಗಳು ಅಥವಾ ಆಡಳಿತದ ಬಗ್ಗೆ ಸಂಶಯ ಹೊಂದಿರುವವರು ‘ಸತ್ಯ ಶೋಧನೆ’ ನಡೆಸುತ್ತಾರೆ.‌ ಆದರೆ ಇಲ್ಲಿ ಆಡಳಿತ ಕೂಟವೇ ‘ಸತ್ಯ ಶೋಧನಾ ತಂಡ’ ರಚಿಸಿರುವುದನ್ನು ನೋಡಿದರೆ ಪೊಲೀಸರು ಹೇಳಬಹುದಾದ ಸತ್ಯಕ್ಕಿಂತ‌ ಹೆಚ್ಚಿನದ್ದನ್ನು ಬಿಜೆಪಿ ಪರಿವಾರ ಬಯಸಿದೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...