Homeಮುಖಪುಟಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಉಂಟಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇರಬೇಕೆಂಬುದು ಕಡ್ಡಾಯವೇ?

- Advertisement -
- Advertisement -

ಕಳೆದ ತಿಂಗಳು ಸಂಭವಿಸಿದ ಬೆಂಗಳೂರಿನ ಕೆ.ಜೆ.ಹಳ್ಳಿ ಡಿಜೆಹಳ್ಳಿ ಗಲಭೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಶ್ರೀಕಾಂತ್ ಡಿ ಬಬಲಾಡಿ ನೇತೃತ್ವದಲ್ಲಿ ಒಂದು ತಂಡವು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆ ಹೆಸರಿನಲ್ಲಿ ಸತ್ಯಶೋಧನೆ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ವರದಿಯಲ್ಲಿ ಗಲಭೆ ಪೂರ್ವನಿಯೋಜಿತವಾಗಿದ್ದು, ಇದಕ್ಕೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನೇರ ಕಾರಣ ಎಂದು ತಿಳಿಸಲಾಗಿದೆ. ಆದರೆ ಸತ್ಯಶೋಧನೆಗೆ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಹೆಸರು ಬಳಸಿದ್ದಕ್ಕೆ ಅದರ ಅಧ್ಯಕ್ಷರಾದ ಖ್ಯಾತ ಹೋರಾಟಗಾರ ಎಸ್‌.ಆರ್ ಹಿರೇಮಠ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಿತಿಯಲ್ಲಿದ್ದ ಬಹುತೇಕರು ಬಿಜೆಪಿ – ಸಂಘಪರಿವಾರದ ಒಡನಾಟ ಹೊಂದಿರುವವರಾಗಿರುವುದರಿಂದ ಕೆ.ಜೆ.ಹಳ್ಳಿಯಲ್ಲಿ ಸತ್ಯಶೋಧನೆ ಹೆಸರಿನಲ್ಲಿ ಸುಳ್ಳನ್ನು ಬಿತ್ತಿದರೇ ಎಂಬ ಅನುಮಾನ ಹುಟ್ಟುವಂತಾಗಿದೆ ಮತ್ತು ಅದನ್ನು ಬಲಗೊಳಿಸುವ ಇನ್ನೂ ಹಲವು ಸಂಗತಿಗಳು ಹೊರಬಂದಿವೆ.

ಮುಖ್ಯವಾಗಿ ಸತ್ಯಶೋಧನಾ ಸಮಿತಿಯಲ್ಲಿ ಯಾರು ಯಾರು ಇದ್ದರು ಎಂಬುದು ವರದಿಯ ಉದ್ದೇಶವನ್ನು ತಿಳಿಸುತ್ತದೆ. ಆದರೆ ಇದರಲ್ಲಿ ಯಾರು ಯಾರಿದ್ದರು ನೋಡೋಣ ಬನ್ನಿ.

ಯಡಿಯೂರಪ್ಪನವರಿಗೆ ವರದಿ ಸಲ್ಲಿಸಿದ ನಂತರ ನಿವೃತ್ತ ಐಎಸ್‌ಎಸ್‌ ಅಧಿಕಾರಿ ಮದನ್ ಗೋಪಾಲ್ “ಇದು ನಿರ್ದಿಷ್ಠ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು, ಭೀತಿ ಸೃಷ್ಟಿಸಲು, ಆ ಮೂಲಕ ದೇಶದ ಆರ್ಥಿಕತೆ ಕೆಡವಲು ನಡೆಸಿದ ಪೂರ್ವಯೋಜಿತ ಗಲಭೆ” ಎಂದು ಹೇಳಿದ್ದಾರೆ. ಇದೇ ಮದನ್ ಗೋಪಾಲ್‌ರವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುಂಚೆ 2017ರಲ್ಲಿ ಬಿಜೆಪಿ ರಚಿಸಿದ ಪ್ರಣಾಳಿಕೆ ಸಮಿತಿಯ ಸಕ್ರಿಯ ಸದಸ್ಯರಾಗಿದ್ದವರು. ಅಂದರೆ ಬಿಜೆಪಿಯ ಪ್ರಬಲ ಬೆಂಬಲಿಗರು ಸತ್ಯಶೋಧನಾ ಸಮಿತಿಯ ಭಾಗವಾಗಿದ್ದರು ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

ಇನ್ನು ಸತ್ಯಶೋಧನ ಸಮಿತಿಯಲ್ಲಿದ್ದ ಮತ್ತೋರ್ವ ವ್ಯಕ್ತಿ ಡಾ.ಆರ್‌ರಾಜು. ಇವರು ನಿವೃತ್ತ ಐಎಫ್‌ಎಸ್‌ ಅಧಿಕಾರಿಗಳಾಗಿದ್ದು 2019ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾಗಿದ್ದರು. ಕಾಂಗ್ರೆಸ್‌ನ ಆರ್‌ ಧೃವನಾರಾಯಣ್‌ರವರನ್ನು ಎದುರಿಸುವುದಕ್ಕಾಗಿ ಟಿಕೆಟ್‌ಗಾಗಿ ಇವರು ಭಾರೀ ಪೈಪೋಟಿ ನಡೆಸಿದ್ದರು.

ಈ ಮೇಲಿನ ಎರಡು ಹೆಸರುಗಳು ಮಾಜಿ‌ ಅಧಿಕಾರಿಗಳದ್ದಾದರೆ ಸತ್ಯಶೋಧನಾ ಸಮಿತಿಯಲ್ಲಿದ್ದ ಮತ್ತೊಂದು ಹೆಸರು ಪತ್ರಕರ್ತರ ಕೋಟಾದ ಸಂತೋಷ್ ತಮ್ಮಯ್ಯ. ಇವರು ಮಡಿಕೇರಿಯವರಾಗಿದ್ದು ಪ್ರವಾದಿ ನಿಂದನೆ ಪೋಸ್ಟ್ ಮಾಡಿದ ಆರೋಪದಲ್ಲಿ ಇವರ ವಿರುದ್ಧ ದೂರು ದಾಖಲಾಗಿ 2018ರ ನವೆಂಬರ್ 13 ರಂದು ಗೋಣಿಕೊಪ್ಪದಲ್ಲಿ ಆತನನ್ನು ಬಂಧಿಸಲಾಗಿತ್ತು. ಅಂದರೆ ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಆರಂಭವಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇದ್ದಾರೆ. ಸತ್ಯಶೋಧನೆಯ ಮೂಲ ಉದ್ದೇಶದ ಬಗ್ಗೆಯೇ ಸಂಶಯ ಏಳುವುದು ಇಲ್ಲಿ.

ಈ ಸಂತೋಷ್ ತಮ್ಮಯ್ಯ ಎನ್ನುವ ಪತ್ರಕರ್ತ, ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ವಿರೋಧಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದವರು. ಅಲ್ಲದೇ ತಮ್ಮ ಹಲವು ಲೇಖನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ಬಿಜೆಪಿ ಪಕ್ಷವನ್ನು ಹೊಗಳಿರುವವರು. ಇಂತವರು ಸತ್ಯಶೋಧನಾ ಸಮಿತಿಯ ಭಾಗವಾದರೆ ವರದಿ ಹೇಗಿರುತ್ತದೆ?

ಇನ್ನು ಬಹಳ ಮುಖ್ಯವಾದ ವಿಚಾರ ಎಂದರೆ ಸಮಿತಿಯು ತನ್ನ ವರದಿಯನ್ನು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ಹೆಸರಿನಲ್ಲಿ ಹೊರತಂದಿದೆ. ಅದರ ಹಾಲಿ ಅಧ್ಯಕ್ಷ ಎಸ್‌.ಆರ್‌ ಹಿರೇಮಠ್‌ರವರು ‘ಸಿಟಿಜನ್ ಫಾರ್ ಡೆಮಾಕ್ರಸಿ’ಗೂ ಸತ್ಯಶೋಧನಾ ವರದಿಗೂ ಯಾವುದೇ ಸಂಬಂಧವಿಲ್ಲ. ಕೂಡಲೇ ವರದಿಯನ್ನು ಹಿಂಪಡೆದು ನಮ್ಮ ಸಂಘಟನೆಯ ಹೆಸರು ಕೈಬಿಟ್ಟು ಬೇರೆ ಸಂಘಟನೆಗಳ ಹೆಸರಿನಲ್ಲಿ ಪ್ರಕಟಿಸಬೇಕು ಎಂದು ತಾಕೀತು ಮಾಡಿದ್ದಾರೆ.

1974ರಲ್ಲಿ ಜಯಪ್ರಕಾಶ್ ನಾರಾಯಣ್‌ರವರ ಮೊದಲ ಅಧ್ಯಕ್ಷರಾಗಿ ಸ್ಥಾಪನೆಯಾಗಿದ್ದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ತುರ್ತುಪರಿಸ್ಥಿತಿಯ ವಿರುದ್ಧ ದಿಟ್ಟ ಹೋರಾಟ ನಡೆಸಿತ್ತು. ಆನಂತರವೂ ಸಹ ಹಲವು ಜನಪರ ಖ್ಯಾತನಾಮರು ಅದರ ಅಧ್ಯಕ್ಷರಾಗಿ ತುಳಿತಕ್ಕೊಳಗಾದವರ ಪರ ದನಿ ಎತ್ತಿದ್ದಾರೆ. ಅಂತಹ ಸಂಘಟನೆಯ ಹೆಸರನ್ನು ಬಿಜೆಪಿಯು ಬಳಸಿಕೊಂಡು ವರದಿ ತಯಾರಿಸಿದೆ ಎಂದರೆ ಏನರ್ಥ ಬರಬಹುದು ಎಂದು ಸಮಿತಿಯಲ್ಲಿದ್ದ ಘಟಾನುಘಟಿಗಳು ಯೋಚಿಸಿಲ್ಲವೇ? ಬಿಜೆಪಿ ಹೆಸರಿನಲ್ಲಿ ಪ್ರಕಟಿಸಿದರೆ ಜನ ಒಪ್ಪುವುದಿಲ್ಲ ಎಂದು ತಿಳಿದು ಜನಪರ ಸಂಘಟನೆಗಳ ಹೆಸರಿನಲ್ಲಿ ಬಿಜೆಪಿಯವರೆ ತಯಾರಿಸಿದ ವರದಿ ಪ್ರಕಟಿಸಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ….. ಹೇಳುತ್ತಾರೆ.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ


ಇನ್ನು ಸತ್ಯಶೋಧನಾ ತಂಡವು ವರದಿಯಲ್ಲಿ ತನ್ನ ಕಚೇರಿ ವಿಳಾಸವನ್ನು ನಮೂದಿಸಿದೆ. ಅದರ ಜಾಡು ಹಿಡಿದು ಹೊರಟರೆ ಅದು ನಿಮ್ಮನ್ನು ಬೆಂಗಳೂರಿನ ಚಾಮರಾಜಪೇಟೆಯ ‘ವಿಕ್ರಮ’ ಪತ್ರಿಕಾ ಕಚೇರಿಗೆ ಕರೆದುಕೊಂಡು ಹೋಗುತ್ತದೆ. ತನ್ನನ್ನು ತಾನು ಹಿಂದೂತ್ವ ಪತ್ರಿಕೆ ಎಂದು ಕರೆದುಕೊಳ್ಳುತ್ತದೆ. “ಹಿಂದು ಸಂಘಟನೆ ಮತ್ತು ವ್ಯಕ್ತಿತ್ವ ನಿರ್ಮಾಣದ ಕೆಲಸವನ್ನು ವಿವಿಧ ಸಂಘಟನೆಗಳು ಮಾಡುತ್ತಿವೆ ಮತ್ತು ಅದರಲ್ಲಿ ಯಶಸ್ವಿಯೂ ಆಗಿದೆ. ಆದರೆ ವೈಚಾರಿಕ ಜಾಗೃತಿಯ ಜವಾಬ್ದಾರಿ ಇರುವುದು ಪತ್ರಿಕೆಗಳು ಮತ್ತು ಕೃತಿಗಳ ಹೆಗಲ ಮೇಲೆ. ಈ ಉದ್ದೇಶದಿಂದಲೇ 1948ರ ವಿಜಯದಶಮಿಯಂದು ವಿಕ್ರಮ ವಾರಪತ್ರಿಕೆ ಸ್ಥಾಪನೆಯಾಯಿತು” ಎಂದು ಘೋಷಿಸಿಕೊಂಡ ಪತ್ರಿಕೆಯ ವಿಳಾಸವನ್ನು ಸತ್ಯಶೋಧನೆಯ ವರದಿಗೆ ಏಕೆ ನೀಡಲಾಯಿತು? ಆರೆಸ್ಸಸ್ ಮುಖಂಡರು ಹೇಳಲು ಅಂಜುವಂತಹ ಸಂಗತಿಗಳನ್ನೂ ವಿಕ್ರಮ ಪ್ರಕಟಿಸುತ್ತದೆ.

ಇನ್ನು ಈ ಸತ್ಯಶೋಧನಾ ತಂಡದ ಮುಖ್ಯ ಸಮನ್ವಯಕಾರರು ಕ್ಷಮಾ ನರಗುಂದ್. ಅವರು ಆರ್‌ಎಸ್‌ಎಸ್‌ನ ಮಹಿಳಾ ವಿಭಾಗ ದುರ್ಗಾವಾಹಿನಿಯ ಸದಸ್ಯೆ ಎನ್ನಲಾಗುತ್ತಿದೆ. ಅವರು ತಮ್ಮ ಟ್ವಿಟ್ಟರ್ ಬಯೋದಲ್ಲಿ ತಾವೊಬ್ಬ ಆರ್‌ಎಸ್‌ಎಸ್‌ ಸೇವಿಕ ಎಂದು ಘೋಷಿಸಿಕೊಂಡಿದ್ದಾರೆ.

ಸಮಿತಿಯಲ್ಲಿರುವ ಆರ್‌.ಕೆ.ಮಟ್ಟೂ ಎಂಬ ಪತ್ರಕರ್ತರು ಸಹ ಆರೆಸ್ಸೆಸ್ ಪರವಾದ ನಿಲುವಿಗೆ ಪ್ರಖ್ಯಾತರು.

ಇಷ್ಟೆಲ್ಲಾ ಸಂಘಪರಿವಾರದ ಮತ್ತು ಬಿಜೆಪಿಯ ವ್ಯಕ್ತಿಗಳು ಕೂತು ಬರೆದಿರುವ ವರದಿಯನ್ನು ‘ಸತ್ಯಶೋಧನೆ’ ಎಂದು ಕರೆಯಲಾಗುವುದೇ? ಆರೆಸ್ಸೆಸ್ ಪರಿವಾರವೇ ಹೋಗಿ ತಮ್ಮ ಪರವಾಗಿ ವರದಿ ಬರೆದುಕೊಂಡರೇ? ಎಂಬ ಪ್ರಶ್ನೆಗಳು ಉದ್ಭವವಾಗಿವೆ.

ಜೊತೆಗೆ ಇನ್ನೂ ಒಂದು ಗಮನಿಸಬೇಕಾದ ವಿಚಾರವಿದೆ: ಸಾಮಾನ್ಯವಾಗಿ ಆಡಳಿತ ನಡೆಸುವವರು ತಮ್ಮ ಅಡಿಯಲ್ಲೇ ಕೆಲಸ ಮಾಡುವ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟುಕೊಂಡಿರುತ್ತಾರೆ. ಹಾಗಾಗಿ ಆಡಳಿತ ವಿರೋಧಿಗಳು ಅಥವಾ ಆಡಳಿತದ ಬಗ್ಗೆ ಸಂಶಯ ಹೊಂದಿರುವವರು ‘ಸತ್ಯ ಶೋಧನೆ’ ನಡೆಸುತ್ತಾರೆ.‌ ಆದರೆ ಇಲ್ಲಿ ಆಡಳಿತ ಕೂಟವೇ ‘ಸತ್ಯ ಶೋಧನಾ ತಂಡ’ ರಚಿಸಿರುವುದನ್ನು ನೋಡಿದರೆ ಪೊಲೀಸರು ಹೇಳಬಹುದಾದ ಸತ್ಯಕ್ಕಿಂತ‌ ಹೆಚ್ಚಿನದ್ದನ್ನು ಬಿಜೆಪಿ ಪರಿವಾರ ಬಯಸಿದೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...