Homeಮುಖಪುಟಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಉಂಟಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇರಬೇಕೆಂಬುದು ಕಡ್ಡಾಯವೇ?

- Advertisement -
- Advertisement -

ಕಳೆದ ತಿಂಗಳು ಸಂಭವಿಸಿದ ಬೆಂಗಳೂರಿನ ಕೆ.ಜೆ.ಹಳ್ಳಿ ಡಿಜೆಹಳ್ಳಿ ಗಲಭೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಶ್ರೀಕಾಂತ್ ಡಿ ಬಬಲಾಡಿ ನೇತೃತ್ವದಲ್ಲಿ ಒಂದು ತಂಡವು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆ ಹೆಸರಿನಲ್ಲಿ ಸತ್ಯಶೋಧನೆ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ವರದಿಯಲ್ಲಿ ಗಲಭೆ ಪೂರ್ವನಿಯೋಜಿತವಾಗಿದ್ದು, ಇದಕ್ಕೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನೇರ ಕಾರಣ ಎಂದು ತಿಳಿಸಲಾಗಿದೆ. ಆದರೆ ಸತ್ಯಶೋಧನೆಗೆ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಹೆಸರು ಬಳಸಿದ್ದಕ್ಕೆ ಅದರ ಅಧ್ಯಕ್ಷರಾದ ಖ್ಯಾತ ಹೋರಾಟಗಾರ ಎಸ್‌.ಆರ್ ಹಿರೇಮಠ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಿತಿಯಲ್ಲಿದ್ದ ಬಹುತೇಕರು ಬಿಜೆಪಿ – ಸಂಘಪರಿವಾರದ ಒಡನಾಟ ಹೊಂದಿರುವವರಾಗಿರುವುದರಿಂದ ಕೆ.ಜೆ.ಹಳ್ಳಿಯಲ್ಲಿ ಸತ್ಯಶೋಧನೆ ಹೆಸರಿನಲ್ಲಿ ಸುಳ್ಳನ್ನು ಬಿತ್ತಿದರೇ ಎಂಬ ಅನುಮಾನ ಹುಟ್ಟುವಂತಾಗಿದೆ ಮತ್ತು ಅದನ್ನು ಬಲಗೊಳಿಸುವ ಇನ್ನೂ ಹಲವು ಸಂಗತಿಗಳು ಹೊರಬಂದಿವೆ.

ಮುಖ್ಯವಾಗಿ ಸತ್ಯಶೋಧನಾ ಸಮಿತಿಯಲ್ಲಿ ಯಾರು ಯಾರು ಇದ್ದರು ಎಂಬುದು ವರದಿಯ ಉದ್ದೇಶವನ್ನು ತಿಳಿಸುತ್ತದೆ. ಆದರೆ ಇದರಲ್ಲಿ ಯಾರು ಯಾರಿದ್ದರು ನೋಡೋಣ ಬನ್ನಿ.

ಯಡಿಯೂರಪ್ಪನವರಿಗೆ ವರದಿ ಸಲ್ಲಿಸಿದ ನಂತರ ನಿವೃತ್ತ ಐಎಸ್‌ಎಸ್‌ ಅಧಿಕಾರಿ ಮದನ್ ಗೋಪಾಲ್ “ಇದು ನಿರ್ದಿಷ್ಠ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು, ಭೀತಿ ಸೃಷ್ಟಿಸಲು, ಆ ಮೂಲಕ ದೇಶದ ಆರ್ಥಿಕತೆ ಕೆಡವಲು ನಡೆಸಿದ ಪೂರ್ವಯೋಜಿತ ಗಲಭೆ” ಎಂದು ಹೇಳಿದ್ದಾರೆ. ಇದೇ ಮದನ್ ಗೋಪಾಲ್‌ರವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುಂಚೆ 2017ರಲ್ಲಿ ಬಿಜೆಪಿ ರಚಿಸಿದ ಪ್ರಣಾಳಿಕೆ ಸಮಿತಿಯ ಸಕ್ರಿಯ ಸದಸ್ಯರಾಗಿದ್ದವರು. ಅಂದರೆ ಬಿಜೆಪಿಯ ಪ್ರಬಲ ಬೆಂಬಲಿಗರು ಸತ್ಯಶೋಧನಾ ಸಮಿತಿಯ ಭಾಗವಾಗಿದ್ದರು ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

ಇನ್ನು ಸತ್ಯಶೋಧನ ಸಮಿತಿಯಲ್ಲಿದ್ದ ಮತ್ತೋರ್ವ ವ್ಯಕ್ತಿ ಡಾ.ಆರ್‌ರಾಜು. ಇವರು ನಿವೃತ್ತ ಐಎಫ್‌ಎಸ್‌ ಅಧಿಕಾರಿಗಳಾಗಿದ್ದು 2019ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾಗಿದ್ದರು. ಕಾಂಗ್ರೆಸ್‌ನ ಆರ್‌ ಧೃವನಾರಾಯಣ್‌ರವರನ್ನು ಎದುರಿಸುವುದಕ್ಕಾಗಿ ಟಿಕೆಟ್‌ಗಾಗಿ ಇವರು ಭಾರೀ ಪೈಪೋಟಿ ನಡೆಸಿದ್ದರು.

ಈ ಮೇಲಿನ ಎರಡು ಹೆಸರುಗಳು ಮಾಜಿ‌ ಅಧಿಕಾರಿಗಳದ್ದಾದರೆ ಸತ್ಯಶೋಧನಾ ಸಮಿತಿಯಲ್ಲಿದ್ದ ಮತ್ತೊಂದು ಹೆಸರು ಪತ್ರಕರ್ತರ ಕೋಟಾದ ಸಂತೋಷ್ ತಮ್ಮಯ್ಯ. ಇವರು ಮಡಿಕೇರಿಯವರಾಗಿದ್ದು ಪ್ರವಾದಿ ನಿಂದನೆ ಪೋಸ್ಟ್ ಮಾಡಿದ ಆರೋಪದಲ್ಲಿ ಇವರ ವಿರುದ್ಧ ದೂರು ದಾಖಲಾಗಿ 2018ರ ನವೆಂಬರ್ 13 ರಂದು ಗೋಣಿಕೊಪ್ಪದಲ್ಲಿ ಆತನನ್ನು ಬಂಧಿಸಲಾಗಿತ್ತು. ಅಂದರೆ ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಆರಂಭವಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇದ್ದಾರೆ. ಸತ್ಯಶೋಧನೆಯ ಮೂಲ ಉದ್ದೇಶದ ಬಗ್ಗೆಯೇ ಸಂಶಯ ಏಳುವುದು ಇಲ್ಲಿ.

ಈ ಸಂತೋಷ್ ತಮ್ಮಯ್ಯ ಎನ್ನುವ ಪತ್ರಕರ್ತ, ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ವಿರೋಧಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದವರು. ಅಲ್ಲದೇ ತಮ್ಮ ಹಲವು ಲೇಖನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ಬಿಜೆಪಿ ಪಕ್ಷವನ್ನು ಹೊಗಳಿರುವವರು. ಇಂತವರು ಸತ್ಯಶೋಧನಾ ಸಮಿತಿಯ ಭಾಗವಾದರೆ ವರದಿ ಹೇಗಿರುತ್ತದೆ?

ಇನ್ನು ಬಹಳ ಮುಖ್ಯವಾದ ವಿಚಾರ ಎಂದರೆ ಸಮಿತಿಯು ತನ್ನ ವರದಿಯನ್ನು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ಹೆಸರಿನಲ್ಲಿ ಹೊರತಂದಿದೆ. ಅದರ ಹಾಲಿ ಅಧ್ಯಕ್ಷ ಎಸ್‌.ಆರ್‌ ಹಿರೇಮಠ್‌ರವರು ‘ಸಿಟಿಜನ್ ಫಾರ್ ಡೆಮಾಕ್ರಸಿ’ಗೂ ಸತ್ಯಶೋಧನಾ ವರದಿಗೂ ಯಾವುದೇ ಸಂಬಂಧವಿಲ್ಲ. ಕೂಡಲೇ ವರದಿಯನ್ನು ಹಿಂಪಡೆದು ನಮ್ಮ ಸಂಘಟನೆಯ ಹೆಸರು ಕೈಬಿಟ್ಟು ಬೇರೆ ಸಂಘಟನೆಗಳ ಹೆಸರಿನಲ್ಲಿ ಪ್ರಕಟಿಸಬೇಕು ಎಂದು ತಾಕೀತು ಮಾಡಿದ್ದಾರೆ.

1974ರಲ್ಲಿ ಜಯಪ್ರಕಾಶ್ ನಾರಾಯಣ್‌ರವರ ಮೊದಲ ಅಧ್ಯಕ್ಷರಾಗಿ ಸ್ಥಾಪನೆಯಾಗಿದ್ದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ತುರ್ತುಪರಿಸ್ಥಿತಿಯ ವಿರುದ್ಧ ದಿಟ್ಟ ಹೋರಾಟ ನಡೆಸಿತ್ತು. ಆನಂತರವೂ ಸಹ ಹಲವು ಜನಪರ ಖ್ಯಾತನಾಮರು ಅದರ ಅಧ್ಯಕ್ಷರಾಗಿ ತುಳಿತಕ್ಕೊಳಗಾದವರ ಪರ ದನಿ ಎತ್ತಿದ್ದಾರೆ. ಅಂತಹ ಸಂಘಟನೆಯ ಹೆಸರನ್ನು ಬಿಜೆಪಿಯು ಬಳಸಿಕೊಂಡು ವರದಿ ತಯಾರಿಸಿದೆ ಎಂದರೆ ಏನರ್ಥ ಬರಬಹುದು ಎಂದು ಸಮಿತಿಯಲ್ಲಿದ್ದ ಘಟಾನುಘಟಿಗಳು ಯೋಚಿಸಿಲ್ಲವೇ? ಬಿಜೆಪಿ ಹೆಸರಿನಲ್ಲಿ ಪ್ರಕಟಿಸಿದರೆ ಜನ ಒಪ್ಪುವುದಿಲ್ಲ ಎಂದು ತಿಳಿದು ಜನಪರ ಸಂಘಟನೆಗಳ ಹೆಸರಿನಲ್ಲಿ ಬಿಜೆಪಿಯವರೆ ತಯಾರಿಸಿದ ವರದಿ ಪ್ರಕಟಿಸಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ….. ಹೇಳುತ್ತಾರೆ.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ


ಇನ್ನು ಸತ್ಯಶೋಧನಾ ತಂಡವು ವರದಿಯಲ್ಲಿ ತನ್ನ ಕಚೇರಿ ವಿಳಾಸವನ್ನು ನಮೂದಿಸಿದೆ. ಅದರ ಜಾಡು ಹಿಡಿದು ಹೊರಟರೆ ಅದು ನಿಮ್ಮನ್ನು ಬೆಂಗಳೂರಿನ ಚಾಮರಾಜಪೇಟೆಯ ‘ವಿಕ್ರಮ’ ಪತ್ರಿಕಾ ಕಚೇರಿಗೆ ಕರೆದುಕೊಂಡು ಹೋಗುತ್ತದೆ. ತನ್ನನ್ನು ತಾನು ಹಿಂದೂತ್ವ ಪತ್ರಿಕೆ ಎಂದು ಕರೆದುಕೊಳ್ಳುತ್ತದೆ. “ಹಿಂದು ಸಂಘಟನೆ ಮತ್ತು ವ್ಯಕ್ತಿತ್ವ ನಿರ್ಮಾಣದ ಕೆಲಸವನ್ನು ವಿವಿಧ ಸಂಘಟನೆಗಳು ಮಾಡುತ್ತಿವೆ ಮತ್ತು ಅದರಲ್ಲಿ ಯಶಸ್ವಿಯೂ ಆಗಿದೆ. ಆದರೆ ವೈಚಾರಿಕ ಜಾಗೃತಿಯ ಜವಾಬ್ದಾರಿ ಇರುವುದು ಪತ್ರಿಕೆಗಳು ಮತ್ತು ಕೃತಿಗಳ ಹೆಗಲ ಮೇಲೆ. ಈ ಉದ್ದೇಶದಿಂದಲೇ 1948ರ ವಿಜಯದಶಮಿಯಂದು ವಿಕ್ರಮ ವಾರಪತ್ರಿಕೆ ಸ್ಥಾಪನೆಯಾಯಿತು” ಎಂದು ಘೋಷಿಸಿಕೊಂಡ ಪತ್ರಿಕೆಯ ವಿಳಾಸವನ್ನು ಸತ್ಯಶೋಧನೆಯ ವರದಿಗೆ ಏಕೆ ನೀಡಲಾಯಿತು? ಆರೆಸ್ಸಸ್ ಮುಖಂಡರು ಹೇಳಲು ಅಂಜುವಂತಹ ಸಂಗತಿಗಳನ್ನೂ ವಿಕ್ರಮ ಪ್ರಕಟಿಸುತ್ತದೆ.

ಇನ್ನು ಈ ಸತ್ಯಶೋಧನಾ ತಂಡದ ಮುಖ್ಯ ಸಮನ್ವಯಕಾರರು ಕ್ಷಮಾ ನರಗುಂದ್. ಅವರು ಆರ್‌ಎಸ್‌ಎಸ್‌ನ ಮಹಿಳಾ ವಿಭಾಗ ದುರ್ಗಾವಾಹಿನಿಯ ಸದಸ್ಯೆ ಎನ್ನಲಾಗುತ್ತಿದೆ. ಅವರು ತಮ್ಮ ಟ್ವಿಟ್ಟರ್ ಬಯೋದಲ್ಲಿ ತಾವೊಬ್ಬ ಆರ್‌ಎಸ್‌ಎಸ್‌ ಸೇವಿಕ ಎಂದು ಘೋಷಿಸಿಕೊಂಡಿದ್ದಾರೆ.

ಸಮಿತಿಯಲ್ಲಿರುವ ಆರ್‌.ಕೆ.ಮಟ್ಟೂ ಎಂಬ ಪತ್ರಕರ್ತರು ಸಹ ಆರೆಸ್ಸೆಸ್ ಪರವಾದ ನಿಲುವಿಗೆ ಪ್ರಖ್ಯಾತರು.

ಇಷ್ಟೆಲ್ಲಾ ಸಂಘಪರಿವಾರದ ಮತ್ತು ಬಿಜೆಪಿಯ ವ್ಯಕ್ತಿಗಳು ಕೂತು ಬರೆದಿರುವ ವರದಿಯನ್ನು ‘ಸತ್ಯಶೋಧನೆ’ ಎಂದು ಕರೆಯಲಾಗುವುದೇ? ಆರೆಸ್ಸೆಸ್ ಪರಿವಾರವೇ ಹೋಗಿ ತಮ್ಮ ಪರವಾಗಿ ವರದಿ ಬರೆದುಕೊಂಡರೇ? ಎಂಬ ಪ್ರಶ್ನೆಗಳು ಉದ್ಭವವಾಗಿವೆ.

ಜೊತೆಗೆ ಇನ್ನೂ ಒಂದು ಗಮನಿಸಬೇಕಾದ ವಿಚಾರವಿದೆ: ಸಾಮಾನ್ಯವಾಗಿ ಆಡಳಿತ ನಡೆಸುವವರು ತಮ್ಮ ಅಡಿಯಲ್ಲೇ ಕೆಲಸ ಮಾಡುವ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟುಕೊಂಡಿರುತ್ತಾರೆ. ಹಾಗಾಗಿ ಆಡಳಿತ ವಿರೋಧಿಗಳು ಅಥವಾ ಆಡಳಿತದ ಬಗ್ಗೆ ಸಂಶಯ ಹೊಂದಿರುವವರು ‘ಸತ್ಯ ಶೋಧನೆ’ ನಡೆಸುತ್ತಾರೆ.‌ ಆದರೆ ಇಲ್ಲಿ ಆಡಳಿತ ಕೂಟವೇ ‘ಸತ್ಯ ಶೋಧನಾ ತಂಡ’ ರಚಿಸಿರುವುದನ್ನು ನೋಡಿದರೆ ಪೊಲೀಸರು ಹೇಳಬಹುದಾದ ಸತ್ಯಕ್ಕಿಂತ‌ ಹೆಚ್ಚಿನದ್ದನ್ನು ಬಿಜೆಪಿ ಪರಿವಾರ ಬಯಸಿದೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...