Homeಮುಖಪುಟಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಉಂಟಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇರಬೇಕೆಂಬುದು ಕಡ್ಡಾಯವೇ?

- Advertisement -
- Advertisement -

ಕಳೆದ ತಿಂಗಳು ಸಂಭವಿಸಿದ ಬೆಂಗಳೂರಿನ ಕೆ.ಜೆ.ಹಳ್ಳಿ ಡಿಜೆಹಳ್ಳಿ ಗಲಭೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಶ್ರೀಕಾಂತ್ ಡಿ ಬಬಲಾಡಿ ನೇತೃತ್ವದಲ್ಲಿ ಒಂದು ತಂಡವು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆ ಹೆಸರಿನಲ್ಲಿ ಸತ್ಯಶೋಧನೆ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ವರದಿಯಲ್ಲಿ ಗಲಭೆ ಪೂರ್ವನಿಯೋಜಿತವಾಗಿದ್ದು, ಇದಕ್ಕೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನೇರ ಕಾರಣ ಎಂದು ತಿಳಿಸಲಾಗಿದೆ. ಆದರೆ ಸತ್ಯಶೋಧನೆಗೆ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಹೆಸರು ಬಳಸಿದ್ದಕ್ಕೆ ಅದರ ಅಧ್ಯಕ್ಷರಾದ ಖ್ಯಾತ ಹೋರಾಟಗಾರ ಎಸ್‌.ಆರ್ ಹಿರೇಮಠ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಿತಿಯಲ್ಲಿದ್ದ ಬಹುತೇಕರು ಬಿಜೆಪಿ – ಸಂಘಪರಿವಾರದ ಒಡನಾಟ ಹೊಂದಿರುವವರಾಗಿರುವುದರಿಂದ ಕೆ.ಜೆ.ಹಳ್ಳಿಯಲ್ಲಿ ಸತ್ಯಶೋಧನೆ ಹೆಸರಿನಲ್ಲಿ ಸುಳ್ಳನ್ನು ಬಿತ್ತಿದರೇ ಎಂಬ ಅನುಮಾನ ಹುಟ್ಟುವಂತಾಗಿದೆ ಮತ್ತು ಅದನ್ನು ಬಲಗೊಳಿಸುವ ಇನ್ನೂ ಹಲವು ಸಂಗತಿಗಳು ಹೊರಬಂದಿವೆ.

ಮುಖ್ಯವಾಗಿ ಸತ್ಯಶೋಧನಾ ಸಮಿತಿಯಲ್ಲಿ ಯಾರು ಯಾರು ಇದ್ದರು ಎಂಬುದು ವರದಿಯ ಉದ್ದೇಶವನ್ನು ತಿಳಿಸುತ್ತದೆ. ಆದರೆ ಇದರಲ್ಲಿ ಯಾರು ಯಾರಿದ್ದರು ನೋಡೋಣ ಬನ್ನಿ.

ಯಡಿಯೂರಪ್ಪನವರಿಗೆ ವರದಿ ಸಲ್ಲಿಸಿದ ನಂತರ ನಿವೃತ್ತ ಐಎಸ್‌ಎಸ್‌ ಅಧಿಕಾರಿ ಮದನ್ ಗೋಪಾಲ್ “ಇದು ನಿರ್ದಿಷ್ಠ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು, ಭೀತಿ ಸೃಷ್ಟಿಸಲು, ಆ ಮೂಲಕ ದೇಶದ ಆರ್ಥಿಕತೆ ಕೆಡವಲು ನಡೆಸಿದ ಪೂರ್ವಯೋಜಿತ ಗಲಭೆ” ಎಂದು ಹೇಳಿದ್ದಾರೆ. ಇದೇ ಮದನ್ ಗೋಪಾಲ್‌ರವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುಂಚೆ 2017ರಲ್ಲಿ ಬಿಜೆಪಿ ರಚಿಸಿದ ಪ್ರಣಾಳಿಕೆ ಸಮಿತಿಯ ಸಕ್ರಿಯ ಸದಸ್ಯರಾಗಿದ್ದವರು. ಅಂದರೆ ಬಿಜೆಪಿಯ ಪ್ರಬಲ ಬೆಂಬಲಿಗರು ಸತ್ಯಶೋಧನಾ ಸಮಿತಿಯ ಭಾಗವಾಗಿದ್ದರು ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

ಇನ್ನು ಸತ್ಯಶೋಧನ ಸಮಿತಿಯಲ್ಲಿದ್ದ ಮತ್ತೋರ್ವ ವ್ಯಕ್ತಿ ಡಾ.ಆರ್‌ರಾಜು. ಇವರು ನಿವೃತ್ತ ಐಎಫ್‌ಎಸ್‌ ಅಧಿಕಾರಿಗಳಾಗಿದ್ದು 2019ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾಗಿದ್ದರು. ಕಾಂಗ್ರೆಸ್‌ನ ಆರ್‌ ಧೃವನಾರಾಯಣ್‌ರವರನ್ನು ಎದುರಿಸುವುದಕ್ಕಾಗಿ ಟಿಕೆಟ್‌ಗಾಗಿ ಇವರು ಭಾರೀ ಪೈಪೋಟಿ ನಡೆಸಿದ್ದರು.

ಈ ಮೇಲಿನ ಎರಡು ಹೆಸರುಗಳು ಮಾಜಿ‌ ಅಧಿಕಾರಿಗಳದ್ದಾದರೆ ಸತ್ಯಶೋಧನಾ ಸಮಿತಿಯಲ್ಲಿದ್ದ ಮತ್ತೊಂದು ಹೆಸರು ಪತ್ರಕರ್ತರ ಕೋಟಾದ ಸಂತೋಷ್ ತಮ್ಮಯ್ಯ. ಇವರು ಮಡಿಕೇರಿಯವರಾಗಿದ್ದು ಪ್ರವಾದಿ ನಿಂದನೆ ಪೋಸ್ಟ್ ಮಾಡಿದ ಆರೋಪದಲ್ಲಿ ಇವರ ವಿರುದ್ಧ ದೂರು ದಾಖಲಾಗಿ 2018ರ ನವೆಂಬರ್ 13 ರಂದು ಗೋಣಿಕೊಪ್ಪದಲ್ಲಿ ಆತನನ್ನು ಬಂಧಿಸಲಾಗಿತ್ತು. ಅಂದರೆ ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಆರಂಭವಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇದ್ದಾರೆ. ಸತ್ಯಶೋಧನೆಯ ಮೂಲ ಉದ್ದೇಶದ ಬಗ್ಗೆಯೇ ಸಂಶಯ ಏಳುವುದು ಇಲ್ಲಿ.

ಈ ಸಂತೋಷ್ ತಮ್ಮಯ್ಯ ಎನ್ನುವ ಪತ್ರಕರ್ತ, ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ವಿರೋಧಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದವರು. ಅಲ್ಲದೇ ತಮ್ಮ ಹಲವು ಲೇಖನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ಬಿಜೆಪಿ ಪಕ್ಷವನ್ನು ಹೊಗಳಿರುವವರು. ಇಂತವರು ಸತ್ಯಶೋಧನಾ ಸಮಿತಿಯ ಭಾಗವಾದರೆ ವರದಿ ಹೇಗಿರುತ್ತದೆ?

ಇನ್ನು ಬಹಳ ಮುಖ್ಯವಾದ ವಿಚಾರ ಎಂದರೆ ಸಮಿತಿಯು ತನ್ನ ವರದಿಯನ್ನು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ಹೆಸರಿನಲ್ಲಿ ಹೊರತಂದಿದೆ. ಅದರ ಹಾಲಿ ಅಧ್ಯಕ್ಷ ಎಸ್‌.ಆರ್‌ ಹಿರೇಮಠ್‌ರವರು ‘ಸಿಟಿಜನ್ ಫಾರ್ ಡೆಮಾಕ್ರಸಿ’ಗೂ ಸತ್ಯಶೋಧನಾ ವರದಿಗೂ ಯಾವುದೇ ಸಂಬಂಧವಿಲ್ಲ. ಕೂಡಲೇ ವರದಿಯನ್ನು ಹಿಂಪಡೆದು ನಮ್ಮ ಸಂಘಟನೆಯ ಹೆಸರು ಕೈಬಿಟ್ಟು ಬೇರೆ ಸಂಘಟನೆಗಳ ಹೆಸರಿನಲ್ಲಿ ಪ್ರಕಟಿಸಬೇಕು ಎಂದು ತಾಕೀತು ಮಾಡಿದ್ದಾರೆ.

1974ರಲ್ಲಿ ಜಯಪ್ರಕಾಶ್ ನಾರಾಯಣ್‌ರವರ ಮೊದಲ ಅಧ್ಯಕ್ಷರಾಗಿ ಸ್ಥಾಪನೆಯಾಗಿದ್ದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ತುರ್ತುಪರಿಸ್ಥಿತಿಯ ವಿರುದ್ಧ ದಿಟ್ಟ ಹೋರಾಟ ನಡೆಸಿತ್ತು. ಆನಂತರವೂ ಸಹ ಹಲವು ಜನಪರ ಖ್ಯಾತನಾಮರು ಅದರ ಅಧ್ಯಕ್ಷರಾಗಿ ತುಳಿತಕ್ಕೊಳಗಾದವರ ಪರ ದನಿ ಎತ್ತಿದ್ದಾರೆ. ಅಂತಹ ಸಂಘಟನೆಯ ಹೆಸರನ್ನು ಬಿಜೆಪಿಯು ಬಳಸಿಕೊಂಡು ವರದಿ ತಯಾರಿಸಿದೆ ಎಂದರೆ ಏನರ್ಥ ಬರಬಹುದು ಎಂದು ಸಮಿತಿಯಲ್ಲಿದ್ದ ಘಟಾನುಘಟಿಗಳು ಯೋಚಿಸಿಲ್ಲವೇ? ಬಿಜೆಪಿ ಹೆಸರಿನಲ್ಲಿ ಪ್ರಕಟಿಸಿದರೆ ಜನ ಒಪ್ಪುವುದಿಲ್ಲ ಎಂದು ತಿಳಿದು ಜನಪರ ಸಂಘಟನೆಗಳ ಹೆಸರಿನಲ್ಲಿ ಬಿಜೆಪಿಯವರೆ ತಯಾರಿಸಿದ ವರದಿ ಪ್ರಕಟಿಸಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ….. ಹೇಳುತ್ತಾರೆ.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ


ಇನ್ನು ಸತ್ಯಶೋಧನಾ ತಂಡವು ವರದಿಯಲ್ಲಿ ತನ್ನ ಕಚೇರಿ ವಿಳಾಸವನ್ನು ನಮೂದಿಸಿದೆ. ಅದರ ಜಾಡು ಹಿಡಿದು ಹೊರಟರೆ ಅದು ನಿಮ್ಮನ್ನು ಬೆಂಗಳೂರಿನ ಚಾಮರಾಜಪೇಟೆಯ ‘ವಿಕ್ರಮ’ ಪತ್ರಿಕಾ ಕಚೇರಿಗೆ ಕರೆದುಕೊಂಡು ಹೋಗುತ್ತದೆ. ತನ್ನನ್ನು ತಾನು ಹಿಂದೂತ್ವ ಪತ್ರಿಕೆ ಎಂದು ಕರೆದುಕೊಳ್ಳುತ್ತದೆ. “ಹಿಂದು ಸಂಘಟನೆ ಮತ್ತು ವ್ಯಕ್ತಿತ್ವ ನಿರ್ಮಾಣದ ಕೆಲಸವನ್ನು ವಿವಿಧ ಸಂಘಟನೆಗಳು ಮಾಡುತ್ತಿವೆ ಮತ್ತು ಅದರಲ್ಲಿ ಯಶಸ್ವಿಯೂ ಆಗಿದೆ. ಆದರೆ ವೈಚಾರಿಕ ಜಾಗೃತಿಯ ಜವಾಬ್ದಾರಿ ಇರುವುದು ಪತ್ರಿಕೆಗಳು ಮತ್ತು ಕೃತಿಗಳ ಹೆಗಲ ಮೇಲೆ. ಈ ಉದ್ದೇಶದಿಂದಲೇ 1948ರ ವಿಜಯದಶಮಿಯಂದು ವಿಕ್ರಮ ವಾರಪತ್ರಿಕೆ ಸ್ಥಾಪನೆಯಾಯಿತು” ಎಂದು ಘೋಷಿಸಿಕೊಂಡ ಪತ್ರಿಕೆಯ ವಿಳಾಸವನ್ನು ಸತ್ಯಶೋಧನೆಯ ವರದಿಗೆ ಏಕೆ ನೀಡಲಾಯಿತು? ಆರೆಸ್ಸಸ್ ಮುಖಂಡರು ಹೇಳಲು ಅಂಜುವಂತಹ ಸಂಗತಿಗಳನ್ನೂ ವಿಕ್ರಮ ಪ್ರಕಟಿಸುತ್ತದೆ.

ಇನ್ನು ಈ ಸತ್ಯಶೋಧನಾ ತಂಡದ ಮುಖ್ಯ ಸಮನ್ವಯಕಾರರು ಕ್ಷಮಾ ನರಗುಂದ್. ಅವರು ಆರ್‌ಎಸ್‌ಎಸ್‌ನ ಮಹಿಳಾ ವಿಭಾಗ ದುರ್ಗಾವಾಹಿನಿಯ ಸದಸ್ಯೆ ಎನ್ನಲಾಗುತ್ತಿದೆ. ಅವರು ತಮ್ಮ ಟ್ವಿಟ್ಟರ್ ಬಯೋದಲ್ಲಿ ತಾವೊಬ್ಬ ಆರ್‌ಎಸ್‌ಎಸ್‌ ಸೇವಿಕ ಎಂದು ಘೋಷಿಸಿಕೊಂಡಿದ್ದಾರೆ.

ಸಮಿತಿಯಲ್ಲಿರುವ ಆರ್‌.ಕೆ.ಮಟ್ಟೂ ಎಂಬ ಪತ್ರಕರ್ತರು ಸಹ ಆರೆಸ್ಸೆಸ್ ಪರವಾದ ನಿಲುವಿಗೆ ಪ್ರಖ್ಯಾತರು.

ಇಷ್ಟೆಲ್ಲಾ ಸಂಘಪರಿವಾರದ ಮತ್ತು ಬಿಜೆಪಿಯ ವ್ಯಕ್ತಿಗಳು ಕೂತು ಬರೆದಿರುವ ವರದಿಯನ್ನು ‘ಸತ್ಯಶೋಧನೆ’ ಎಂದು ಕರೆಯಲಾಗುವುದೇ? ಆರೆಸ್ಸೆಸ್ ಪರಿವಾರವೇ ಹೋಗಿ ತಮ್ಮ ಪರವಾಗಿ ವರದಿ ಬರೆದುಕೊಂಡರೇ? ಎಂಬ ಪ್ರಶ್ನೆಗಳು ಉದ್ಭವವಾಗಿವೆ.

ಜೊತೆಗೆ ಇನ್ನೂ ಒಂದು ಗಮನಿಸಬೇಕಾದ ವಿಚಾರವಿದೆ: ಸಾಮಾನ್ಯವಾಗಿ ಆಡಳಿತ ನಡೆಸುವವರು ತಮ್ಮ ಅಡಿಯಲ್ಲೇ ಕೆಲಸ ಮಾಡುವ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟುಕೊಂಡಿರುತ್ತಾರೆ. ಹಾಗಾಗಿ ಆಡಳಿತ ವಿರೋಧಿಗಳು ಅಥವಾ ಆಡಳಿತದ ಬಗ್ಗೆ ಸಂಶಯ ಹೊಂದಿರುವವರು ‘ಸತ್ಯ ಶೋಧನೆ’ ನಡೆಸುತ್ತಾರೆ.‌ ಆದರೆ ಇಲ್ಲಿ ಆಡಳಿತ ಕೂಟವೇ ‘ಸತ್ಯ ಶೋಧನಾ ತಂಡ’ ರಚಿಸಿರುವುದನ್ನು ನೋಡಿದರೆ ಪೊಲೀಸರು ಹೇಳಬಹುದಾದ ಸತ್ಯಕ್ಕಿಂತ‌ ಹೆಚ್ಚಿನದ್ದನ್ನು ಬಿಜೆಪಿ ಪರಿವಾರ ಬಯಸಿದೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...