Homeಮುಖಪುಟಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಉಂಟಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇರಬೇಕೆಂಬುದು ಕಡ್ಡಾಯವೇ?

- Advertisement -
- Advertisement -

ಕಳೆದ ತಿಂಗಳು ಸಂಭವಿಸಿದ ಬೆಂಗಳೂರಿನ ಕೆ.ಜೆ.ಹಳ್ಳಿ ಡಿಜೆಹಳ್ಳಿ ಗಲಭೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಶ್ರೀಕಾಂತ್ ಡಿ ಬಬಲಾಡಿ ನೇತೃತ್ವದಲ್ಲಿ ಒಂದು ತಂಡವು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆ ಹೆಸರಿನಲ್ಲಿ ಸತ್ಯಶೋಧನೆ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ವರದಿಯಲ್ಲಿ ಗಲಭೆ ಪೂರ್ವನಿಯೋಜಿತವಾಗಿದ್ದು, ಇದಕ್ಕೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನೇರ ಕಾರಣ ಎಂದು ತಿಳಿಸಲಾಗಿದೆ. ಆದರೆ ಸತ್ಯಶೋಧನೆಗೆ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಹೆಸರು ಬಳಸಿದ್ದಕ್ಕೆ ಅದರ ಅಧ್ಯಕ್ಷರಾದ ಖ್ಯಾತ ಹೋರಾಟಗಾರ ಎಸ್‌.ಆರ್ ಹಿರೇಮಠ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಿತಿಯಲ್ಲಿದ್ದ ಬಹುತೇಕರು ಬಿಜೆಪಿ – ಸಂಘಪರಿವಾರದ ಒಡನಾಟ ಹೊಂದಿರುವವರಾಗಿರುವುದರಿಂದ ಕೆ.ಜೆ.ಹಳ್ಳಿಯಲ್ಲಿ ಸತ್ಯಶೋಧನೆ ಹೆಸರಿನಲ್ಲಿ ಸುಳ್ಳನ್ನು ಬಿತ್ತಿದರೇ ಎಂಬ ಅನುಮಾನ ಹುಟ್ಟುವಂತಾಗಿದೆ ಮತ್ತು ಅದನ್ನು ಬಲಗೊಳಿಸುವ ಇನ್ನೂ ಹಲವು ಸಂಗತಿಗಳು ಹೊರಬಂದಿವೆ.

ಮುಖ್ಯವಾಗಿ ಸತ್ಯಶೋಧನಾ ಸಮಿತಿಯಲ್ಲಿ ಯಾರು ಯಾರು ಇದ್ದರು ಎಂಬುದು ವರದಿಯ ಉದ್ದೇಶವನ್ನು ತಿಳಿಸುತ್ತದೆ. ಆದರೆ ಇದರಲ್ಲಿ ಯಾರು ಯಾರಿದ್ದರು ನೋಡೋಣ ಬನ್ನಿ.

ಯಡಿಯೂರಪ್ಪನವರಿಗೆ ವರದಿ ಸಲ್ಲಿಸಿದ ನಂತರ ನಿವೃತ್ತ ಐಎಸ್‌ಎಸ್‌ ಅಧಿಕಾರಿ ಮದನ್ ಗೋಪಾಲ್ “ಇದು ನಿರ್ದಿಷ್ಠ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು, ಭೀತಿ ಸೃಷ್ಟಿಸಲು, ಆ ಮೂಲಕ ದೇಶದ ಆರ್ಥಿಕತೆ ಕೆಡವಲು ನಡೆಸಿದ ಪೂರ್ವಯೋಜಿತ ಗಲಭೆ” ಎಂದು ಹೇಳಿದ್ದಾರೆ. ಇದೇ ಮದನ್ ಗೋಪಾಲ್‌ರವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುಂಚೆ 2017ರಲ್ಲಿ ಬಿಜೆಪಿ ರಚಿಸಿದ ಪ್ರಣಾಳಿಕೆ ಸಮಿತಿಯ ಸಕ್ರಿಯ ಸದಸ್ಯರಾಗಿದ್ದವರು. ಅಂದರೆ ಬಿಜೆಪಿಯ ಪ್ರಬಲ ಬೆಂಬಲಿಗರು ಸತ್ಯಶೋಧನಾ ಸಮಿತಿಯ ಭಾಗವಾಗಿದ್ದರು ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

ಇನ್ನು ಸತ್ಯಶೋಧನ ಸಮಿತಿಯಲ್ಲಿದ್ದ ಮತ್ತೋರ್ವ ವ್ಯಕ್ತಿ ಡಾ.ಆರ್‌ರಾಜು. ಇವರು ನಿವೃತ್ತ ಐಎಫ್‌ಎಸ್‌ ಅಧಿಕಾರಿಗಳಾಗಿದ್ದು 2019ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾಗಿದ್ದರು. ಕಾಂಗ್ರೆಸ್‌ನ ಆರ್‌ ಧೃವನಾರಾಯಣ್‌ರವರನ್ನು ಎದುರಿಸುವುದಕ್ಕಾಗಿ ಟಿಕೆಟ್‌ಗಾಗಿ ಇವರು ಭಾರೀ ಪೈಪೋಟಿ ನಡೆಸಿದ್ದರು.

ಈ ಮೇಲಿನ ಎರಡು ಹೆಸರುಗಳು ಮಾಜಿ‌ ಅಧಿಕಾರಿಗಳದ್ದಾದರೆ ಸತ್ಯಶೋಧನಾ ಸಮಿತಿಯಲ್ಲಿದ್ದ ಮತ್ತೊಂದು ಹೆಸರು ಪತ್ರಕರ್ತರ ಕೋಟಾದ ಸಂತೋಷ್ ತಮ್ಮಯ್ಯ. ಇವರು ಮಡಿಕೇರಿಯವರಾಗಿದ್ದು ಪ್ರವಾದಿ ನಿಂದನೆ ಪೋಸ್ಟ್ ಮಾಡಿದ ಆರೋಪದಲ್ಲಿ ಇವರ ವಿರುದ್ಧ ದೂರು ದಾಖಲಾಗಿ 2018ರ ನವೆಂಬರ್ 13 ರಂದು ಗೋಣಿಕೊಪ್ಪದಲ್ಲಿ ಆತನನ್ನು ಬಂಧಿಸಲಾಗಿತ್ತು. ಅಂದರೆ ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಆರಂಭವಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇದ್ದಾರೆ. ಸತ್ಯಶೋಧನೆಯ ಮೂಲ ಉದ್ದೇಶದ ಬಗ್ಗೆಯೇ ಸಂಶಯ ಏಳುವುದು ಇಲ್ಲಿ.

ಈ ಸಂತೋಷ್ ತಮ್ಮಯ್ಯ ಎನ್ನುವ ಪತ್ರಕರ್ತ, ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ವಿರೋಧಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದವರು. ಅಲ್ಲದೇ ತಮ್ಮ ಹಲವು ಲೇಖನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ಬಿಜೆಪಿ ಪಕ್ಷವನ್ನು ಹೊಗಳಿರುವವರು. ಇಂತವರು ಸತ್ಯಶೋಧನಾ ಸಮಿತಿಯ ಭಾಗವಾದರೆ ವರದಿ ಹೇಗಿರುತ್ತದೆ?

ಇನ್ನು ಬಹಳ ಮುಖ್ಯವಾದ ವಿಚಾರ ಎಂದರೆ ಸಮಿತಿಯು ತನ್ನ ವರದಿಯನ್ನು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ಹೆಸರಿನಲ್ಲಿ ಹೊರತಂದಿದೆ. ಅದರ ಹಾಲಿ ಅಧ್ಯಕ್ಷ ಎಸ್‌.ಆರ್‌ ಹಿರೇಮಠ್‌ರವರು ‘ಸಿಟಿಜನ್ ಫಾರ್ ಡೆಮಾಕ್ರಸಿ’ಗೂ ಸತ್ಯಶೋಧನಾ ವರದಿಗೂ ಯಾವುದೇ ಸಂಬಂಧವಿಲ್ಲ. ಕೂಡಲೇ ವರದಿಯನ್ನು ಹಿಂಪಡೆದು ನಮ್ಮ ಸಂಘಟನೆಯ ಹೆಸರು ಕೈಬಿಟ್ಟು ಬೇರೆ ಸಂಘಟನೆಗಳ ಹೆಸರಿನಲ್ಲಿ ಪ್ರಕಟಿಸಬೇಕು ಎಂದು ತಾಕೀತು ಮಾಡಿದ್ದಾರೆ.

1974ರಲ್ಲಿ ಜಯಪ್ರಕಾಶ್ ನಾರಾಯಣ್‌ರವರ ಮೊದಲ ಅಧ್ಯಕ್ಷರಾಗಿ ಸ್ಥಾಪನೆಯಾಗಿದ್ದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ತುರ್ತುಪರಿಸ್ಥಿತಿಯ ವಿರುದ್ಧ ದಿಟ್ಟ ಹೋರಾಟ ನಡೆಸಿತ್ತು. ಆನಂತರವೂ ಸಹ ಹಲವು ಜನಪರ ಖ್ಯಾತನಾಮರು ಅದರ ಅಧ್ಯಕ್ಷರಾಗಿ ತುಳಿತಕ್ಕೊಳಗಾದವರ ಪರ ದನಿ ಎತ್ತಿದ್ದಾರೆ. ಅಂತಹ ಸಂಘಟನೆಯ ಹೆಸರನ್ನು ಬಿಜೆಪಿಯು ಬಳಸಿಕೊಂಡು ವರದಿ ತಯಾರಿಸಿದೆ ಎಂದರೆ ಏನರ್ಥ ಬರಬಹುದು ಎಂದು ಸಮಿತಿಯಲ್ಲಿದ್ದ ಘಟಾನುಘಟಿಗಳು ಯೋಚಿಸಿಲ್ಲವೇ? ಬಿಜೆಪಿ ಹೆಸರಿನಲ್ಲಿ ಪ್ರಕಟಿಸಿದರೆ ಜನ ಒಪ್ಪುವುದಿಲ್ಲ ಎಂದು ತಿಳಿದು ಜನಪರ ಸಂಘಟನೆಗಳ ಹೆಸರಿನಲ್ಲಿ ಬಿಜೆಪಿಯವರೆ ತಯಾರಿಸಿದ ವರದಿ ಪ್ರಕಟಿಸಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ….. ಹೇಳುತ್ತಾರೆ.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ


ಇನ್ನು ಸತ್ಯಶೋಧನಾ ತಂಡವು ವರದಿಯಲ್ಲಿ ತನ್ನ ಕಚೇರಿ ವಿಳಾಸವನ್ನು ನಮೂದಿಸಿದೆ. ಅದರ ಜಾಡು ಹಿಡಿದು ಹೊರಟರೆ ಅದು ನಿಮ್ಮನ್ನು ಬೆಂಗಳೂರಿನ ಚಾಮರಾಜಪೇಟೆಯ ‘ವಿಕ್ರಮ’ ಪತ್ರಿಕಾ ಕಚೇರಿಗೆ ಕರೆದುಕೊಂಡು ಹೋಗುತ್ತದೆ. ತನ್ನನ್ನು ತಾನು ಹಿಂದೂತ್ವ ಪತ್ರಿಕೆ ಎಂದು ಕರೆದುಕೊಳ್ಳುತ್ತದೆ. “ಹಿಂದು ಸಂಘಟನೆ ಮತ್ತು ವ್ಯಕ್ತಿತ್ವ ನಿರ್ಮಾಣದ ಕೆಲಸವನ್ನು ವಿವಿಧ ಸಂಘಟನೆಗಳು ಮಾಡುತ್ತಿವೆ ಮತ್ತು ಅದರಲ್ಲಿ ಯಶಸ್ವಿಯೂ ಆಗಿದೆ. ಆದರೆ ವೈಚಾರಿಕ ಜಾಗೃತಿಯ ಜವಾಬ್ದಾರಿ ಇರುವುದು ಪತ್ರಿಕೆಗಳು ಮತ್ತು ಕೃತಿಗಳ ಹೆಗಲ ಮೇಲೆ. ಈ ಉದ್ದೇಶದಿಂದಲೇ 1948ರ ವಿಜಯದಶಮಿಯಂದು ವಿಕ್ರಮ ವಾರಪತ್ರಿಕೆ ಸ್ಥಾಪನೆಯಾಯಿತು” ಎಂದು ಘೋಷಿಸಿಕೊಂಡ ಪತ್ರಿಕೆಯ ವಿಳಾಸವನ್ನು ಸತ್ಯಶೋಧನೆಯ ವರದಿಗೆ ಏಕೆ ನೀಡಲಾಯಿತು? ಆರೆಸ್ಸಸ್ ಮುಖಂಡರು ಹೇಳಲು ಅಂಜುವಂತಹ ಸಂಗತಿಗಳನ್ನೂ ವಿಕ್ರಮ ಪ್ರಕಟಿಸುತ್ತದೆ.

ಇನ್ನು ಈ ಸತ್ಯಶೋಧನಾ ತಂಡದ ಮುಖ್ಯ ಸಮನ್ವಯಕಾರರು ಕ್ಷಮಾ ನರಗುಂದ್. ಅವರು ಆರ್‌ಎಸ್‌ಎಸ್‌ನ ಮಹಿಳಾ ವಿಭಾಗ ದುರ್ಗಾವಾಹಿನಿಯ ಸದಸ್ಯೆ ಎನ್ನಲಾಗುತ್ತಿದೆ. ಅವರು ತಮ್ಮ ಟ್ವಿಟ್ಟರ್ ಬಯೋದಲ್ಲಿ ತಾವೊಬ್ಬ ಆರ್‌ಎಸ್‌ಎಸ್‌ ಸೇವಿಕ ಎಂದು ಘೋಷಿಸಿಕೊಂಡಿದ್ದಾರೆ.

ಸಮಿತಿಯಲ್ಲಿರುವ ಆರ್‌.ಕೆ.ಮಟ್ಟೂ ಎಂಬ ಪತ್ರಕರ್ತರು ಸಹ ಆರೆಸ್ಸೆಸ್ ಪರವಾದ ನಿಲುವಿಗೆ ಪ್ರಖ್ಯಾತರು.

ಇಷ್ಟೆಲ್ಲಾ ಸಂಘಪರಿವಾರದ ಮತ್ತು ಬಿಜೆಪಿಯ ವ್ಯಕ್ತಿಗಳು ಕೂತು ಬರೆದಿರುವ ವರದಿಯನ್ನು ‘ಸತ್ಯಶೋಧನೆ’ ಎಂದು ಕರೆಯಲಾಗುವುದೇ? ಆರೆಸ್ಸೆಸ್ ಪರಿವಾರವೇ ಹೋಗಿ ತಮ್ಮ ಪರವಾಗಿ ವರದಿ ಬರೆದುಕೊಂಡರೇ? ಎಂಬ ಪ್ರಶ್ನೆಗಳು ಉದ್ಭವವಾಗಿವೆ.

ಜೊತೆಗೆ ಇನ್ನೂ ಒಂದು ಗಮನಿಸಬೇಕಾದ ವಿಚಾರವಿದೆ: ಸಾಮಾನ್ಯವಾಗಿ ಆಡಳಿತ ನಡೆಸುವವರು ತಮ್ಮ ಅಡಿಯಲ್ಲೇ ಕೆಲಸ ಮಾಡುವ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟುಕೊಂಡಿರುತ್ತಾರೆ. ಹಾಗಾಗಿ ಆಡಳಿತ ವಿರೋಧಿಗಳು ಅಥವಾ ಆಡಳಿತದ ಬಗ್ಗೆ ಸಂಶಯ ಹೊಂದಿರುವವರು ‘ಸತ್ಯ ಶೋಧನೆ’ ನಡೆಸುತ್ತಾರೆ.‌ ಆದರೆ ಇಲ್ಲಿ ಆಡಳಿತ ಕೂಟವೇ ‘ಸತ್ಯ ಶೋಧನಾ ತಂಡ’ ರಚಿಸಿರುವುದನ್ನು ನೋಡಿದರೆ ಪೊಲೀಸರು ಹೇಳಬಹುದಾದ ಸತ್ಯಕ್ಕಿಂತ‌ ಹೆಚ್ಚಿನದ್ದನ್ನು ಬಿಜೆಪಿ ಪರಿವಾರ ಬಯಸಿದೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...