Homeಮುಖಪುಟಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಉಂಟಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇರಬೇಕೆಂಬುದು ಕಡ್ಡಾಯವೇ?

- Advertisement -
- Advertisement -

ಕಳೆದ ತಿಂಗಳು ಸಂಭವಿಸಿದ ಬೆಂಗಳೂರಿನ ಕೆ.ಜೆ.ಹಳ್ಳಿ ಡಿಜೆಹಳ್ಳಿ ಗಲಭೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಶ್ರೀಕಾಂತ್ ಡಿ ಬಬಲಾಡಿ ನೇತೃತ್ವದಲ್ಲಿ ಒಂದು ತಂಡವು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆ ಹೆಸರಿನಲ್ಲಿ ಸತ್ಯಶೋಧನೆ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ವರದಿಯಲ್ಲಿ ಗಲಭೆ ಪೂರ್ವನಿಯೋಜಿತವಾಗಿದ್ದು, ಇದಕ್ಕೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನೇರ ಕಾರಣ ಎಂದು ತಿಳಿಸಲಾಗಿದೆ. ಆದರೆ ಸತ್ಯಶೋಧನೆಗೆ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಹೆಸರು ಬಳಸಿದ್ದಕ್ಕೆ ಅದರ ಅಧ್ಯಕ್ಷರಾದ ಖ್ಯಾತ ಹೋರಾಟಗಾರ ಎಸ್‌.ಆರ್ ಹಿರೇಮಠ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಿತಿಯಲ್ಲಿದ್ದ ಬಹುತೇಕರು ಬಿಜೆಪಿ – ಸಂಘಪರಿವಾರದ ಒಡನಾಟ ಹೊಂದಿರುವವರಾಗಿರುವುದರಿಂದ ಕೆ.ಜೆ.ಹಳ್ಳಿಯಲ್ಲಿ ಸತ್ಯಶೋಧನೆ ಹೆಸರಿನಲ್ಲಿ ಸುಳ್ಳನ್ನು ಬಿತ್ತಿದರೇ ಎಂಬ ಅನುಮಾನ ಹುಟ್ಟುವಂತಾಗಿದೆ ಮತ್ತು ಅದನ್ನು ಬಲಗೊಳಿಸುವ ಇನ್ನೂ ಹಲವು ಸಂಗತಿಗಳು ಹೊರಬಂದಿವೆ.

ಮುಖ್ಯವಾಗಿ ಸತ್ಯಶೋಧನಾ ಸಮಿತಿಯಲ್ಲಿ ಯಾರು ಯಾರು ಇದ್ದರು ಎಂಬುದು ವರದಿಯ ಉದ್ದೇಶವನ್ನು ತಿಳಿಸುತ್ತದೆ. ಆದರೆ ಇದರಲ್ಲಿ ಯಾರು ಯಾರಿದ್ದರು ನೋಡೋಣ ಬನ್ನಿ.

ಯಡಿಯೂರಪ್ಪನವರಿಗೆ ವರದಿ ಸಲ್ಲಿಸಿದ ನಂತರ ನಿವೃತ್ತ ಐಎಸ್‌ಎಸ್‌ ಅಧಿಕಾರಿ ಮದನ್ ಗೋಪಾಲ್ “ಇದು ನಿರ್ದಿಷ್ಠ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು, ಭೀತಿ ಸೃಷ್ಟಿಸಲು, ಆ ಮೂಲಕ ದೇಶದ ಆರ್ಥಿಕತೆ ಕೆಡವಲು ನಡೆಸಿದ ಪೂರ್ವಯೋಜಿತ ಗಲಭೆ” ಎಂದು ಹೇಳಿದ್ದಾರೆ. ಇದೇ ಮದನ್ ಗೋಪಾಲ್‌ರವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುಂಚೆ 2017ರಲ್ಲಿ ಬಿಜೆಪಿ ರಚಿಸಿದ ಪ್ರಣಾಳಿಕೆ ಸಮಿತಿಯ ಸಕ್ರಿಯ ಸದಸ್ಯರಾಗಿದ್ದವರು. ಅಂದರೆ ಬಿಜೆಪಿಯ ಪ್ರಬಲ ಬೆಂಬಲಿಗರು ಸತ್ಯಶೋಧನಾ ಸಮಿತಿಯ ಭಾಗವಾಗಿದ್ದರು ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

ಇನ್ನು ಸತ್ಯಶೋಧನ ಸಮಿತಿಯಲ್ಲಿದ್ದ ಮತ್ತೋರ್ವ ವ್ಯಕ್ತಿ ಡಾ.ಆರ್‌ರಾಜು. ಇವರು ನಿವೃತ್ತ ಐಎಫ್‌ಎಸ್‌ ಅಧಿಕಾರಿಗಳಾಗಿದ್ದು 2019ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾಗಿದ್ದರು. ಕಾಂಗ್ರೆಸ್‌ನ ಆರ್‌ ಧೃವನಾರಾಯಣ್‌ರವರನ್ನು ಎದುರಿಸುವುದಕ್ಕಾಗಿ ಟಿಕೆಟ್‌ಗಾಗಿ ಇವರು ಭಾರೀ ಪೈಪೋಟಿ ನಡೆಸಿದ್ದರು.

ಈ ಮೇಲಿನ ಎರಡು ಹೆಸರುಗಳು ಮಾಜಿ‌ ಅಧಿಕಾರಿಗಳದ್ದಾದರೆ ಸತ್ಯಶೋಧನಾ ಸಮಿತಿಯಲ್ಲಿದ್ದ ಮತ್ತೊಂದು ಹೆಸರು ಪತ್ರಕರ್ತರ ಕೋಟಾದ ಸಂತೋಷ್ ತಮ್ಮಯ್ಯ. ಇವರು ಮಡಿಕೇರಿಯವರಾಗಿದ್ದು ಪ್ರವಾದಿ ನಿಂದನೆ ಪೋಸ್ಟ್ ಮಾಡಿದ ಆರೋಪದಲ್ಲಿ ಇವರ ವಿರುದ್ಧ ದೂರು ದಾಖಲಾಗಿ 2018ರ ನವೆಂಬರ್ 13 ರಂದು ಗೋಣಿಕೊಪ್ಪದಲ್ಲಿ ಆತನನ್ನು ಬಂಧಿಸಲಾಗಿತ್ತು. ಅಂದರೆ ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಆರಂಭವಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇದ್ದಾರೆ. ಸತ್ಯಶೋಧನೆಯ ಮೂಲ ಉದ್ದೇಶದ ಬಗ್ಗೆಯೇ ಸಂಶಯ ಏಳುವುದು ಇಲ್ಲಿ.

ಈ ಸಂತೋಷ್ ತಮ್ಮಯ್ಯ ಎನ್ನುವ ಪತ್ರಕರ್ತ, ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ವಿರೋಧಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದವರು. ಅಲ್ಲದೇ ತಮ್ಮ ಹಲವು ಲೇಖನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ಬಿಜೆಪಿ ಪಕ್ಷವನ್ನು ಹೊಗಳಿರುವವರು. ಇಂತವರು ಸತ್ಯಶೋಧನಾ ಸಮಿತಿಯ ಭಾಗವಾದರೆ ವರದಿ ಹೇಗಿರುತ್ತದೆ?

ಇನ್ನು ಬಹಳ ಮುಖ್ಯವಾದ ವಿಚಾರ ಎಂದರೆ ಸಮಿತಿಯು ತನ್ನ ವರದಿಯನ್ನು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ಹೆಸರಿನಲ್ಲಿ ಹೊರತಂದಿದೆ. ಅದರ ಹಾಲಿ ಅಧ್ಯಕ್ಷ ಎಸ್‌.ಆರ್‌ ಹಿರೇಮಠ್‌ರವರು ‘ಸಿಟಿಜನ್ ಫಾರ್ ಡೆಮಾಕ್ರಸಿ’ಗೂ ಸತ್ಯಶೋಧನಾ ವರದಿಗೂ ಯಾವುದೇ ಸಂಬಂಧವಿಲ್ಲ. ಕೂಡಲೇ ವರದಿಯನ್ನು ಹಿಂಪಡೆದು ನಮ್ಮ ಸಂಘಟನೆಯ ಹೆಸರು ಕೈಬಿಟ್ಟು ಬೇರೆ ಸಂಘಟನೆಗಳ ಹೆಸರಿನಲ್ಲಿ ಪ್ರಕಟಿಸಬೇಕು ಎಂದು ತಾಕೀತು ಮಾಡಿದ್ದಾರೆ.

1974ರಲ್ಲಿ ಜಯಪ್ರಕಾಶ್ ನಾರಾಯಣ್‌ರವರ ಮೊದಲ ಅಧ್ಯಕ್ಷರಾಗಿ ಸ್ಥಾಪನೆಯಾಗಿದ್ದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ತುರ್ತುಪರಿಸ್ಥಿತಿಯ ವಿರುದ್ಧ ದಿಟ್ಟ ಹೋರಾಟ ನಡೆಸಿತ್ತು. ಆನಂತರವೂ ಸಹ ಹಲವು ಜನಪರ ಖ್ಯಾತನಾಮರು ಅದರ ಅಧ್ಯಕ್ಷರಾಗಿ ತುಳಿತಕ್ಕೊಳಗಾದವರ ಪರ ದನಿ ಎತ್ತಿದ್ದಾರೆ. ಅಂತಹ ಸಂಘಟನೆಯ ಹೆಸರನ್ನು ಬಿಜೆಪಿಯು ಬಳಸಿಕೊಂಡು ವರದಿ ತಯಾರಿಸಿದೆ ಎಂದರೆ ಏನರ್ಥ ಬರಬಹುದು ಎಂದು ಸಮಿತಿಯಲ್ಲಿದ್ದ ಘಟಾನುಘಟಿಗಳು ಯೋಚಿಸಿಲ್ಲವೇ? ಬಿಜೆಪಿ ಹೆಸರಿನಲ್ಲಿ ಪ್ರಕಟಿಸಿದರೆ ಜನ ಒಪ್ಪುವುದಿಲ್ಲ ಎಂದು ತಿಳಿದು ಜನಪರ ಸಂಘಟನೆಗಳ ಹೆಸರಿನಲ್ಲಿ ಬಿಜೆಪಿಯವರೆ ತಯಾರಿಸಿದ ವರದಿ ಪ್ರಕಟಿಸಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ….. ಹೇಳುತ್ತಾರೆ.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ


ಇನ್ನು ಸತ್ಯಶೋಧನಾ ತಂಡವು ವರದಿಯಲ್ಲಿ ತನ್ನ ಕಚೇರಿ ವಿಳಾಸವನ್ನು ನಮೂದಿಸಿದೆ. ಅದರ ಜಾಡು ಹಿಡಿದು ಹೊರಟರೆ ಅದು ನಿಮ್ಮನ್ನು ಬೆಂಗಳೂರಿನ ಚಾಮರಾಜಪೇಟೆಯ ‘ವಿಕ್ರಮ’ ಪತ್ರಿಕಾ ಕಚೇರಿಗೆ ಕರೆದುಕೊಂಡು ಹೋಗುತ್ತದೆ. ತನ್ನನ್ನು ತಾನು ಹಿಂದೂತ್ವ ಪತ್ರಿಕೆ ಎಂದು ಕರೆದುಕೊಳ್ಳುತ್ತದೆ. “ಹಿಂದು ಸಂಘಟನೆ ಮತ್ತು ವ್ಯಕ್ತಿತ್ವ ನಿರ್ಮಾಣದ ಕೆಲಸವನ್ನು ವಿವಿಧ ಸಂಘಟನೆಗಳು ಮಾಡುತ್ತಿವೆ ಮತ್ತು ಅದರಲ್ಲಿ ಯಶಸ್ವಿಯೂ ಆಗಿದೆ. ಆದರೆ ವೈಚಾರಿಕ ಜಾಗೃತಿಯ ಜವಾಬ್ದಾರಿ ಇರುವುದು ಪತ್ರಿಕೆಗಳು ಮತ್ತು ಕೃತಿಗಳ ಹೆಗಲ ಮೇಲೆ. ಈ ಉದ್ದೇಶದಿಂದಲೇ 1948ರ ವಿಜಯದಶಮಿಯಂದು ವಿಕ್ರಮ ವಾರಪತ್ರಿಕೆ ಸ್ಥಾಪನೆಯಾಯಿತು” ಎಂದು ಘೋಷಿಸಿಕೊಂಡ ಪತ್ರಿಕೆಯ ವಿಳಾಸವನ್ನು ಸತ್ಯಶೋಧನೆಯ ವರದಿಗೆ ಏಕೆ ನೀಡಲಾಯಿತು? ಆರೆಸ್ಸಸ್ ಮುಖಂಡರು ಹೇಳಲು ಅಂಜುವಂತಹ ಸಂಗತಿಗಳನ್ನೂ ವಿಕ್ರಮ ಪ್ರಕಟಿಸುತ್ತದೆ.

ಇನ್ನು ಈ ಸತ್ಯಶೋಧನಾ ತಂಡದ ಮುಖ್ಯ ಸಮನ್ವಯಕಾರರು ಕ್ಷಮಾ ನರಗುಂದ್. ಅವರು ಆರ್‌ಎಸ್‌ಎಸ್‌ನ ಮಹಿಳಾ ವಿಭಾಗ ದುರ್ಗಾವಾಹಿನಿಯ ಸದಸ್ಯೆ ಎನ್ನಲಾಗುತ್ತಿದೆ. ಅವರು ತಮ್ಮ ಟ್ವಿಟ್ಟರ್ ಬಯೋದಲ್ಲಿ ತಾವೊಬ್ಬ ಆರ್‌ಎಸ್‌ಎಸ್‌ ಸೇವಿಕ ಎಂದು ಘೋಷಿಸಿಕೊಂಡಿದ್ದಾರೆ.

ಸಮಿತಿಯಲ್ಲಿರುವ ಆರ್‌.ಕೆ.ಮಟ್ಟೂ ಎಂಬ ಪತ್ರಕರ್ತರು ಸಹ ಆರೆಸ್ಸೆಸ್ ಪರವಾದ ನಿಲುವಿಗೆ ಪ್ರಖ್ಯಾತರು.

ಇಷ್ಟೆಲ್ಲಾ ಸಂಘಪರಿವಾರದ ಮತ್ತು ಬಿಜೆಪಿಯ ವ್ಯಕ್ತಿಗಳು ಕೂತು ಬರೆದಿರುವ ವರದಿಯನ್ನು ‘ಸತ್ಯಶೋಧನೆ’ ಎಂದು ಕರೆಯಲಾಗುವುದೇ? ಆರೆಸ್ಸೆಸ್ ಪರಿವಾರವೇ ಹೋಗಿ ತಮ್ಮ ಪರವಾಗಿ ವರದಿ ಬರೆದುಕೊಂಡರೇ? ಎಂಬ ಪ್ರಶ್ನೆಗಳು ಉದ್ಭವವಾಗಿವೆ.

ಜೊತೆಗೆ ಇನ್ನೂ ಒಂದು ಗಮನಿಸಬೇಕಾದ ವಿಚಾರವಿದೆ: ಸಾಮಾನ್ಯವಾಗಿ ಆಡಳಿತ ನಡೆಸುವವರು ತಮ್ಮ ಅಡಿಯಲ್ಲೇ ಕೆಲಸ ಮಾಡುವ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟುಕೊಂಡಿರುತ್ತಾರೆ. ಹಾಗಾಗಿ ಆಡಳಿತ ವಿರೋಧಿಗಳು ಅಥವಾ ಆಡಳಿತದ ಬಗ್ಗೆ ಸಂಶಯ ಹೊಂದಿರುವವರು ‘ಸತ್ಯ ಶೋಧನೆ’ ನಡೆಸುತ್ತಾರೆ.‌ ಆದರೆ ಇಲ್ಲಿ ಆಡಳಿತ ಕೂಟವೇ ‘ಸತ್ಯ ಶೋಧನಾ ತಂಡ’ ರಚಿಸಿರುವುದನ್ನು ನೋಡಿದರೆ ಪೊಲೀಸರು ಹೇಳಬಹುದಾದ ಸತ್ಯಕ್ಕಿಂತ‌ ಹೆಚ್ಚಿನದ್ದನ್ನು ಬಿಜೆಪಿ ಪರಿವಾರ ಬಯಸಿದೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...