Homeಮುಖಪುಟಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಉಂಟಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇರಬೇಕೆಂಬುದು ಕಡ್ಡಾಯವೇ?

- Advertisement -
- Advertisement -

ಕಳೆದ ತಿಂಗಳು ಸಂಭವಿಸಿದ ಬೆಂಗಳೂರಿನ ಕೆ.ಜೆ.ಹಳ್ಳಿ ಡಿಜೆಹಳ್ಳಿ ಗಲಭೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಶ್ರೀಕಾಂತ್ ಡಿ ಬಬಲಾಡಿ ನೇತೃತ್ವದಲ್ಲಿ ಒಂದು ತಂಡವು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆ ಹೆಸರಿನಲ್ಲಿ ಸತ್ಯಶೋಧನೆ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ವರದಿಯಲ್ಲಿ ಗಲಭೆ ಪೂರ್ವನಿಯೋಜಿತವಾಗಿದ್ದು, ಇದಕ್ಕೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನೇರ ಕಾರಣ ಎಂದು ತಿಳಿಸಲಾಗಿದೆ. ಆದರೆ ಸತ್ಯಶೋಧನೆಗೆ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಹೆಸರು ಬಳಸಿದ್ದಕ್ಕೆ ಅದರ ಅಧ್ಯಕ್ಷರಾದ ಖ್ಯಾತ ಹೋರಾಟಗಾರ ಎಸ್‌.ಆರ್ ಹಿರೇಮಠ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಿತಿಯಲ್ಲಿದ್ದ ಬಹುತೇಕರು ಬಿಜೆಪಿ – ಸಂಘಪರಿವಾರದ ಒಡನಾಟ ಹೊಂದಿರುವವರಾಗಿರುವುದರಿಂದ ಕೆ.ಜೆ.ಹಳ್ಳಿಯಲ್ಲಿ ಸತ್ಯಶೋಧನೆ ಹೆಸರಿನಲ್ಲಿ ಸುಳ್ಳನ್ನು ಬಿತ್ತಿದರೇ ಎಂಬ ಅನುಮಾನ ಹುಟ್ಟುವಂತಾಗಿದೆ ಮತ್ತು ಅದನ್ನು ಬಲಗೊಳಿಸುವ ಇನ್ನೂ ಹಲವು ಸಂಗತಿಗಳು ಹೊರಬಂದಿವೆ.

ಮುಖ್ಯವಾಗಿ ಸತ್ಯಶೋಧನಾ ಸಮಿತಿಯಲ್ಲಿ ಯಾರು ಯಾರು ಇದ್ದರು ಎಂಬುದು ವರದಿಯ ಉದ್ದೇಶವನ್ನು ತಿಳಿಸುತ್ತದೆ. ಆದರೆ ಇದರಲ್ಲಿ ಯಾರು ಯಾರಿದ್ದರು ನೋಡೋಣ ಬನ್ನಿ.

ಯಡಿಯೂರಪ್ಪನವರಿಗೆ ವರದಿ ಸಲ್ಲಿಸಿದ ನಂತರ ನಿವೃತ್ತ ಐಎಸ್‌ಎಸ್‌ ಅಧಿಕಾರಿ ಮದನ್ ಗೋಪಾಲ್ “ಇದು ನಿರ್ದಿಷ್ಠ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು, ಭೀತಿ ಸೃಷ್ಟಿಸಲು, ಆ ಮೂಲಕ ದೇಶದ ಆರ್ಥಿಕತೆ ಕೆಡವಲು ನಡೆಸಿದ ಪೂರ್ವಯೋಜಿತ ಗಲಭೆ” ಎಂದು ಹೇಳಿದ್ದಾರೆ. ಇದೇ ಮದನ್ ಗೋಪಾಲ್‌ರವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುಂಚೆ 2017ರಲ್ಲಿ ಬಿಜೆಪಿ ರಚಿಸಿದ ಪ್ರಣಾಳಿಕೆ ಸಮಿತಿಯ ಸಕ್ರಿಯ ಸದಸ್ಯರಾಗಿದ್ದವರು. ಅಂದರೆ ಬಿಜೆಪಿಯ ಪ್ರಬಲ ಬೆಂಬಲಿಗರು ಸತ್ಯಶೋಧನಾ ಸಮಿತಿಯ ಭಾಗವಾಗಿದ್ದರು ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

ಇನ್ನು ಸತ್ಯಶೋಧನ ಸಮಿತಿಯಲ್ಲಿದ್ದ ಮತ್ತೋರ್ವ ವ್ಯಕ್ತಿ ಡಾ.ಆರ್‌ರಾಜು. ಇವರು ನಿವೃತ್ತ ಐಎಫ್‌ಎಸ್‌ ಅಧಿಕಾರಿಗಳಾಗಿದ್ದು 2019ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾಗಿದ್ದರು. ಕಾಂಗ್ರೆಸ್‌ನ ಆರ್‌ ಧೃವನಾರಾಯಣ್‌ರವರನ್ನು ಎದುರಿಸುವುದಕ್ಕಾಗಿ ಟಿಕೆಟ್‌ಗಾಗಿ ಇವರು ಭಾರೀ ಪೈಪೋಟಿ ನಡೆಸಿದ್ದರು.

ಈ ಮೇಲಿನ ಎರಡು ಹೆಸರುಗಳು ಮಾಜಿ‌ ಅಧಿಕಾರಿಗಳದ್ದಾದರೆ ಸತ್ಯಶೋಧನಾ ಸಮಿತಿಯಲ್ಲಿದ್ದ ಮತ್ತೊಂದು ಹೆಸರು ಪತ್ರಕರ್ತರ ಕೋಟಾದ ಸಂತೋಷ್ ತಮ್ಮಯ್ಯ. ಇವರು ಮಡಿಕೇರಿಯವರಾಗಿದ್ದು ಪ್ರವಾದಿ ನಿಂದನೆ ಪೋಸ್ಟ್ ಮಾಡಿದ ಆರೋಪದಲ್ಲಿ ಇವರ ವಿರುದ್ಧ ದೂರು ದಾಖಲಾಗಿ 2018ರ ನವೆಂಬರ್ 13 ರಂದು ಗೋಣಿಕೊಪ್ಪದಲ್ಲಿ ಆತನನ್ನು ಬಂಧಿಸಲಾಗಿತ್ತು. ಅಂದರೆ ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಆರಂಭವಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇದ್ದಾರೆ. ಸತ್ಯಶೋಧನೆಯ ಮೂಲ ಉದ್ದೇಶದ ಬಗ್ಗೆಯೇ ಸಂಶಯ ಏಳುವುದು ಇಲ್ಲಿ.

ಈ ಸಂತೋಷ್ ತಮ್ಮಯ್ಯ ಎನ್ನುವ ಪತ್ರಕರ್ತ, ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ವಿರೋಧಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದವರು. ಅಲ್ಲದೇ ತಮ್ಮ ಹಲವು ಲೇಖನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ಬಿಜೆಪಿ ಪಕ್ಷವನ್ನು ಹೊಗಳಿರುವವರು. ಇಂತವರು ಸತ್ಯಶೋಧನಾ ಸಮಿತಿಯ ಭಾಗವಾದರೆ ವರದಿ ಹೇಗಿರುತ್ತದೆ?

ಇನ್ನು ಬಹಳ ಮುಖ್ಯವಾದ ವಿಚಾರ ಎಂದರೆ ಸಮಿತಿಯು ತನ್ನ ವರದಿಯನ್ನು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ಹೆಸರಿನಲ್ಲಿ ಹೊರತಂದಿದೆ. ಅದರ ಹಾಲಿ ಅಧ್ಯಕ್ಷ ಎಸ್‌.ಆರ್‌ ಹಿರೇಮಠ್‌ರವರು ‘ಸಿಟಿಜನ್ ಫಾರ್ ಡೆಮಾಕ್ರಸಿ’ಗೂ ಸತ್ಯಶೋಧನಾ ವರದಿಗೂ ಯಾವುದೇ ಸಂಬಂಧವಿಲ್ಲ. ಕೂಡಲೇ ವರದಿಯನ್ನು ಹಿಂಪಡೆದು ನಮ್ಮ ಸಂಘಟನೆಯ ಹೆಸರು ಕೈಬಿಟ್ಟು ಬೇರೆ ಸಂಘಟನೆಗಳ ಹೆಸರಿನಲ್ಲಿ ಪ್ರಕಟಿಸಬೇಕು ಎಂದು ತಾಕೀತು ಮಾಡಿದ್ದಾರೆ.

1974ರಲ್ಲಿ ಜಯಪ್ರಕಾಶ್ ನಾರಾಯಣ್‌ರವರ ಮೊದಲ ಅಧ್ಯಕ್ಷರಾಗಿ ಸ್ಥಾಪನೆಯಾಗಿದ್ದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ತುರ್ತುಪರಿಸ್ಥಿತಿಯ ವಿರುದ್ಧ ದಿಟ್ಟ ಹೋರಾಟ ನಡೆಸಿತ್ತು. ಆನಂತರವೂ ಸಹ ಹಲವು ಜನಪರ ಖ್ಯಾತನಾಮರು ಅದರ ಅಧ್ಯಕ್ಷರಾಗಿ ತುಳಿತಕ್ಕೊಳಗಾದವರ ಪರ ದನಿ ಎತ್ತಿದ್ದಾರೆ. ಅಂತಹ ಸಂಘಟನೆಯ ಹೆಸರನ್ನು ಬಿಜೆಪಿಯು ಬಳಸಿಕೊಂಡು ವರದಿ ತಯಾರಿಸಿದೆ ಎಂದರೆ ಏನರ್ಥ ಬರಬಹುದು ಎಂದು ಸಮಿತಿಯಲ್ಲಿದ್ದ ಘಟಾನುಘಟಿಗಳು ಯೋಚಿಸಿಲ್ಲವೇ? ಬಿಜೆಪಿ ಹೆಸರಿನಲ್ಲಿ ಪ್ರಕಟಿಸಿದರೆ ಜನ ಒಪ್ಪುವುದಿಲ್ಲ ಎಂದು ತಿಳಿದು ಜನಪರ ಸಂಘಟನೆಗಳ ಹೆಸರಿನಲ್ಲಿ ಬಿಜೆಪಿಯವರೆ ತಯಾರಿಸಿದ ವರದಿ ಪ್ರಕಟಿಸಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ….. ಹೇಳುತ್ತಾರೆ.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ


ಇನ್ನು ಸತ್ಯಶೋಧನಾ ತಂಡವು ವರದಿಯಲ್ಲಿ ತನ್ನ ಕಚೇರಿ ವಿಳಾಸವನ್ನು ನಮೂದಿಸಿದೆ. ಅದರ ಜಾಡು ಹಿಡಿದು ಹೊರಟರೆ ಅದು ನಿಮ್ಮನ್ನು ಬೆಂಗಳೂರಿನ ಚಾಮರಾಜಪೇಟೆಯ ‘ವಿಕ್ರಮ’ ಪತ್ರಿಕಾ ಕಚೇರಿಗೆ ಕರೆದುಕೊಂಡು ಹೋಗುತ್ತದೆ. ತನ್ನನ್ನು ತಾನು ಹಿಂದೂತ್ವ ಪತ್ರಿಕೆ ಎಂದು ಕರೆದುಕೊಳ್ಳುತ್ತದೆ. “ಹಿಂದು ಸಂಘಟನೆ ಮತ್ತು ವ್ಯಕ್ತಿತ್ವ ನಿರ್ಮಾಣದ ಕೆಲಸವನ್ನು ವಿವಿಧ ಸಂಘಟನೆಗಳು ಮಾಡುತ್ತಿವೆ ಮತ್ತು ಅದರಲ್ಲಿ ಯಶಸ್ವಿಯೂ ಆಗಿದೆ. ಆದರೆ ವೈಚಾರಿಕ ಜಾಗೃತಿಯ ಜವಾಬ್ದಾರಿ ಇರುವುದು ಪತ್ರಿಕೆಗಳು ಮತ್ತು ಕೃತಿಗಳ ಹೆಗಲ ಮೇಲೆ. ಈ ಉದ್ದೇಶದಿಂದಲೇ 1948ರ ವಿಜಯದಶಮಿಯಂದು ವಿಕ್ರಮ ವಾರಪತ್ರಿಕೆ ಸ್ಥಾಪನೆಯಾಯಿತು” ಎಂದು ಘೋಷಿಸಿಕೊಂಡ ಪತ್ರಿಕೆಯ ವಿಳಾಸವನ್ನು ಸತ್ಯಶೋಧನೆಯ ವರದಿಗೆ ಏಕೆ ನೀಡಲಾಯಿತು? ಆರೆಸ್ಸಸ್ ಮುಖಂಡರು ಹೇಳಲು ಅಂಜುವಂತಹ ಸಂಗತಿಗಳನ್ನೂ ವಿಕ್ರಮ ಪ್ರಕಟಿಸುತ್ತದೆ.

ಇನ್ನು ಈ ಸತ್ಯಶೋಧನಾ ತಂಡದ ಮುಖ್ಯ ಸಮನ್ವಯಕಾರರು ಕ್ಷಮಾ ನರಗುಂದ್. ಅವರು ಆರ್‌ಎಸ್‌ಎಸ್‌ನ ಮಹಿಳಾ ವಿಭಾಗ ದುರ್ಗಾವಾಹಿನಿಯ ಸದಸ್ಯೆ ಎನ್ನಲಾಗುತ್ತಿದೆ. ಅವರು ತಮ್ಮ ಟ್ವಿಟ್ಟರ್ ಬಯೋದಲ್ಲಿ ತಾವೊಬ್ಬ ಆರ್‌ಎಸ್‌ಎಸ್‌ ಸೇವಿಕ ಎಂದು ಘೋಷಿಸಿಕೊಂಡಿದ್ದಾರೆ.

ಸಮಿತಿಯಲ್ಲಿರುವ ಆರ್‌.ಕೆ.ಮಟ್ಟೂ ಎಂಬ ಪತ್ರಕರ್ತರು ಸಹ ಆರೆಸ್ಸೆಸ್ ಪರವಾದ ನಿಲುವಿಗೆ ಪ್ರಖ್ಯಾತರು.

ಇಷ್ಟೆಲ್ಲಾ ಸಂಘಪರಿವಾರದ ಮತ್ತು ಬಿಜೆಪಿಯ ವ್ಯಕ್ತಿಗಳು ಕೂತು ಬರೆದಿರುವ ವರದಿಯನ್ನು ‘ಸತ್ಯಶೋಧನೆ’ ಎಂದು ಕರೆಯಲಾಗುವುದೇ? ಆರೆಸ್ಸೆಸ್ ಪರಿವಾರವೇ ಹೋಗಿ ತಮ್ಮ ಪರವಾಗಿ ವರದಿ ಬರೆದುಕೊಂಡರೇ? ಎಂಬ ಪ್ರಶ್ನೆಗಳು ಉದ್ಭವವಾಗಿವೆ.

ಜೊತೆಗೆ ಇನ್ನೂ ಒಂದು ಗಮನಿಸಬೇಕಾದ ವಿಚಾರವಿದೆ: ಸಾಮಾನ್ಯವಾಗಿ ಆಡಳಿತ ನಡೆಸುವವರು ತಮ್ಮ ಅಡಿಯಲ್ಲೇ ಕೆಲಸ ಮಾಡುವ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟುಕೊಂಡಿರುತ್ತಾರೆ. ಹಾಗಾಗಿ ಆಡಳಿತ ವಿರೋಧಿಗಳು ಅಥವಾ ಆಡಳಿತದ ಬಗ್ಗೆ ಸಂಶಯ ಹೊಂದಿರುವವರು ‘ಸತ್ಯ ಶೋಧನೆ’ ನಡೆಸುತ್ತಾರೆ.‌ ಆದರೆ ಇಲ್ಲಿ ಆಡಳಿತ ಕೂಟವೇ ‘ಸತ್ಯ ಶೋಧನಾ ತಂಡ’ ರಚಿಸಿರುವುದನ್ನು ನೋಡಿದರೆ ಪೊಲೀಸರು ಹೇಳಬಹುದಾದ ಸತ್ಯಕ್ಕಿಂತ‌ ಹೆಚ್ಚಿನದ್ದನ್ನು ಬಿಜೆಪಿ ಪರಿವಾರ ಬಯಸಿದೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ...

ನಕಾರಾತ್ಮಕ ಪರಿಣಾಮ ಕಡಿಮೆ ಮಾಡಲು ಸಾಮಾಜಿಕ ಮಾಧ್ಯಮ ನಿಯಂತ್ರಣ ಅಗತ್ಯ: ಕೈಲಾಶ್‌ ಸತ್ಯಾರ್ಥಿ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅಪ್ರಾಪ್ತರಿಗೆ ಸಾಮಾಜಿಕ ಮಾಧ್ಯಮದ ನಿಯಂತ್ರಣ ನಿರ್ಧಾರವನ್ನು ಬೆಂಬಲಿಸಿದ್ದಾರೆ. 'ಇದರ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು, ಸಕಾರಾತ್ಮಕವಾಗಿ ನೈತಿಕ ಮೌಲ್ಯಗಳನ್ನು ಹರಡಲು ಮತ್ತು ಸಮುದಾಯಗಳನ್ನು...

ನ್ಯೂಸ್ ಲಾಂಡ್ರಿ ಸಂಪಾದಕಿ ಬಗ್ಗೆ ತಪ್ಪು ವರದಿ: ದೆಹಲಿ ಹೈಕೋರ್ಟ್ ಅಸಮಾಧಾನ

ನ್ಯೂಸ್ ಲಾಂಡ್ರಿ ವ್ಯವಸ್ಥಾಪಕ ಸಂಪಾದಕಿ ಮನೀಷಾ ಪಾಂಡೆ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ, ಕೋರ್ಟ್‌ನ ಮೌಖಿಕ ಅವಲೋಕನಗಳ ಕುರಿತು ಕೆಲ ಮಾಧ್ಯಮಗಳ ವರದಿ ಮಾಡಿದ ರೀತಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಅಸಮಾಧಾನ...

ಇಬ್ಬರು ಬಂಗಾಳಿ ವಲಸೆ ಕಾರ್ಮಿಕರ ಶವ ಪತ್ತೆ : ಒಬ್ಬರನ್ನು ಹಿಂದುತ್ವ ಗುಂಪು ಥಳಿಸಿ ಕೊಂದಿರುವ ಆರೋಪ

ಪ್ರತ್ಯೇಕ ರಾಜ್ಯಗಳಲ್ಲಿ ಇಬ್ಬರು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ದೇಶದಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರ ವಿರುದ್ದ ಹೆಚ್ಚುತ್ತಿರುವ ಹಿಂಸಾಚಾರದ ಭಾಗವಾಗಿ ಇಬ್ಬರನ್ನೂ ಕೊಲ್ಲಲಾಗಿದೆ ಎಂದು ಅವರ ಕುಟುಂಬಗಳು ಆರೋಪಿಸಿವೆ. ಆಂಧ್ರ ಪ್ರದೇಶದ...

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್...

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ...

ಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

ಆಧಾರ್ ಕಾರ್ಡ್‌ ಇಲ್ಲದ ಕಾರಣ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದು, ಪರಿಣಾಮ ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಸಮುದಾಯದ ಮಹಿಳೆಯೊಬ್ಬರು ಪರದಾಡುತ್ತಿರುವ ಬಗ್ಗೆ ತೆಲಂಗಾಣದ ಕರೀಂನಗರ ಜಿಲ್ಲೆಯಿಂದ ವರದಿಯಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ...

ಲ್ಯಾಂಡ್‌ಲಾರ್ಡ್: ಜಮೀನ್ದಾರಿ ವ್ಯವಸ್ಥೆ, ಜಾತಿ ಪ್ರಶ್ನೆ ಮತ್ತು ಸಂವಿಧಾನ – ಕನ್ನಡ ಚಿತ್ರರಂಗದ ಒಂದು ಮಹತ್ವದ ತಿರುವು

ಕನ್ನಡ ಮುಖ್ಯವಾಹಿನಿ ಸಿನೆಮಾ ಅಪರೂಪಕ್ಕೊಮ್ಮೆ ಮಾತ್ರ ಸಮಾಜದ ಮೂಲಭೂತ ಪ್ರಶ್ನೆಗಳತ್ತ ನೇರವಾಗಿ ಮುಖ ಮಾಡುತ್ತದೆ. ಜಾತಿ, ಭೂಮಿ, ಅಧಿಕಾರ ಎಲ್ಲವನ್ನು ಒಟ್ಟಿಗೆ ಹಿಡಿದು ಪ್ರಶ್ನಿಸುವ ಚಿತ್ರಗಳು ಇನ್ನೂ ವಿರಳ. ನಿರ್ದೇಶಕ–ಕಥಾಲೇಖಕ ಜಡೆಶ್ ಕೆ....

ಕುಡುಪು ಗುಂಪು ಹತ್ಯೆ : ಮತ್ತೊಬ್ಬ ಆರೋಪಿಗೆ ಜಾಮೀನು

ಮಂಗಳೂರು ಹೊರವಲಯದ ಕುಡುಪು ಬಳಿ 2025ರ ಏಪ್ರಿಲ್ 27ರಂದು ನಡೆದ ಕೇರಳ ಮೂಲದ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಆರೋಪಿ ನಟೇಶ್ ಕುಮಾರ್‌ಗೆ ಹೈಕೋರ್ಟ್ ಶುಕ್ರವಾರ (ಜ.23) ಜಾಮೀನು ಮಂಜೂರು...

ಬಂಗಾಳದಲ್ಲಿ ಎಸ್‌ಐಆರ್ ಭಯದಿಂದ 110 ಮಂದಿ ಆತ್ಮಹತ್ಯೆ : ಸಿಎಂ ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಭಯದಿಂದ ಪ್ರತಿದಿನ ಪಶ್ಚಿಮ ಬಂಗಾಳದಲ್ಲಿ ಮೂರ್ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ (ಜ.23) ಹೇಳಿದ್ದಾರೆ. ಚುನಾವಣಾ ಆಯೋಗ ಮತ್ತು ಕೇಂದ್ರ...