Homeಕರ್ನಾಟಕಬೆಂಗಳೂರು: ಶನಿವಾರ ‘ಬರಗೂರು ಪ್ರಶಸ್ತಿ’ ಪ್ರದಾನ ಸಮಾರಂಭ

ಬೆಂಗಳೂರು: ಶನಿವಾರ ‘ಬರಗೂರು ಪ್ರಶಸ್ತಿ’ ಪ್ರದಾನ ಸಮಾರಂಭ

- Advertisement -
- Advertisement -

ನಾಡೋಜ ಡಾ. ಬರಗೂರು ಪ್ರತಿಷ್ಠಾನದ ವತಿಯಿಂದ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ‘ನಾಡೋಜ ಬರಗೂರು ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಅಕ್ಟೋಬರ್‌ 30 ರ ಶನಿವಾರದಂದು ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ.

ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತದೆಯಾದರೂ ಕೊರೊನಾ ನಿರ್ಭಂದದ ಹಿನ್ನೆಲೆಯಲ್ಲಿ 2020 ಮತ್ತು 2021 ರ ಪ್ರಶಸ್ತಿಯನ್ನು ಒಟ್ಟಿಗೆ ನೀಡಲಾಗುತ್ತಿದೆ.

ಇದನ್ನೂ ಓದಿ: ಲಿಪಿ, ಲಿಪಿಕಾರನ ಇತಿಹಾಸ ಹಿಡಿದಿಡುವ ಷ. ಶೆಟ್ಟರ್ ಅವರ ’ಹಳಗನ್ನಡ’

2020 ನೇ ಸಾಲಿನ ಬರಗೂರು ಪ್ರಶಸ್ತಿಯ ಸಿನಿಮಾ ಕ್ಷೇತ್ರ ವಿಭಾಗದಲ್ಲಿ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿ ಸಾರಾ ಅಬೂಬಕರ್‌ ಅವರು ಆಯ್ಕೆಯಾಗಿದ್ದಾರೆ. 2021 ನೇ ಸಾಲಿನಲ್ಲಿ ಸಿನಿಮಾ ಕ್ಷೇತ್ರದಲ್ಲಿ ಹಿನ್ನಲೆ ಗಾಯಕಿ ಬಿ.ಕೆ. ಸುಮಿತ್ರಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿ ಚಂದ್ರಕಾಂತ ಪೋಕಳೆ ಅವರಿಗೆ ನೀಡಲಾಗುತ್ತದೆ.

ಹಿರಿಯ ಸಿನಿಮಾ ನಿರ್ದೇಶಕ ಎಸ್‌.ಕೆ. ಭಗವಾನ್ ಅವರು ಪ್ರಶಸ್ತಿ ಸಮ್ಮಾನಿತರಿಗೆ ಪ್ರದಾನ ಮಾಡಲಿದ್ದಾರೆ.

ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು,  ಭಾರತದ ಅತ್ಯಂತ ಪ್ರತಿಭಾನ್ವಿತ ಚಲನಚಿತ್ರ ನಿರ್ದೇಶಕರಲ್ಲೊಬ್ಬರಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ಇವರು ತಮ್ಮ 27 ವರ್ಷಗಳ ವೃತ್ತಿ ಜೀವನದಲ್ಲಿ ಕೇವಲ 14 ಕನ್ನಡ ಚಿತ್ರಗಳನ್ನು ಮಾತ್ರ ನಿರ್ದೇಶಿಸಿದರೂ ದಕ್ಷಿಣ ಏಷ್ಯಾ ಫೆಡರೇಷನ್‌ನ ಕ್ರಿಸ್ಟಲ್ ಗ್ಲೋಬ್ ಪ್ರಶಸ್ತಿ, ರಜತ ಕಮಲ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸಾಹಿತಿ ಸಾರಾ ಅಬೂಬಕರ್‌ ಅವರು ಮೂಲತಃ ಕೇರಳದ ಕಾಸರಗೋಡಿನವರಾಗಿದ್ದಾರೆ. ‘ಚಂದ್ರಗಿರಿಯ ತೀರದಲ್ಲಿ’, ‘ಸಹನಾ’, ‘ಚಪ್ಪಲಿಗಳು’ ಸೇರಿದಂರೆ ಹಲವಾರು ಕಾದಂಬರಿ, ಕಥೆ, ಬಾನುಲಿ ನಾಟಕ, ಲೇಕನ ಮತ್ತು ಅನುವಾದವನ್ನು ಮಾಡಿರುವ ಅವರು ಕನ್ನಡ ಪ್ರಮುಖ ಲೇಖಕಿಯಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಸಂದಿವೆ.

ಚಿಕ್ಕಮಗಳೂರು ಜಿಲ್ಲೆಯ ಬಿ. ಕೆ. ಸುಮಿತ್ರ ಅವರು ಕನ್ನಡ ಚಿತ್ರರಂಗದ ಪ್ರಮುಖ ಹಿನ್ನೆಲೆ ಗಾಯಕಿಯರಲ್ಲಿ ಒಬ್ಬರು. ಸಂಗೀತದ ಎಲ್ಲ ಪ್ರಕಾರಗಳಲ್ಲೂ ಹಾಡಿರುವ ಹೆಗ್ಗಳಿಕೆ ಇವರದು. ಇವರಿಗೆ ಕೆಂಪೇಗೌಡ ಪ್ರಶಸ್ತಿ, ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶ್ತಸ್ತಿಗೆ ಲಭಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಚಂದ್ರಕಾಂತ ಪೋಕಳೆ ಅವರು 2007 ರವರೆಗೆ ಕನ್ನಡ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮರಾಠಿಯಿಂದ ಕನ್ನಡಕ್ಕೆ ಭಾಷಾಂತರಕಾರರಾಗಿ ಸಲ್ಲಿಸಿದ ಇವರ ಸೇವೆ ಗಮನಾರ್ಹವಾಗಿದೆ. ಇದುವರೆಗೆ ಸುಮಾರು 100 ಮರಾಠಿ ಕೃತಿಗಳನ್ನು ಭಾಷಾಂತರ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳು ಇವರಿಗೆ ಸಂದಿವೆ.

ಇದನ್ನೂ ಓದಿ: ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...