Homeಕರ್ನಾಟಕಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆಗಳು

ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆಗಳು

ಏಪ್ರಿಲ್ 28 ರ ಸುತ್ತೋಲೆಯಯಲ್ಲಿ, ಕೊರೊನಾ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಆರ್ಥಿಕ ಸಂಕಷ್ಟಗಳನ್ನು ಉಲ್ಲೇಖಿಸಿ ಪ್ರತಿವರ್ಷ ಹೆಚ್ಚಿಸುವ 15% ಶುಲ್ಕವನ್ನು ಹೆಚ್ಚಿಸದಂತೆ ಶಾಲೆಗಳನ್ನು ಕೇಳಿದೆ.

- Advertisement -
- Advertisement -

ಈ ವರ್ಷ ಶಾಲಾ ಶುಲ್ಕವನ್ನು ಹೆಚ್ಚಿಸಬೇಡಿ ಎಂದು ರಾಜ್ಯ ಸರ್ಕಾರ ಶಾಲೆಗಳನ್ನು ಕೇಳಿದ್ದರೂ, ಬೆಂಗಳೂರಿನ ಹೊರಮಾವುವಿನ ವಿಬ್ಗಯರ್ ಶಾಲೆ ಶುಲ್ಕವನ್ನು ಹೆಚ್ಚಿಸಿದೆ ಎಂದು ವಿದ್ಯಾರ್ಥಿಗಳ ಪಾಲಕರು ಆರೋಪಿಸಿದ್ದಾರೆ. ಇದಲ್ಲದೆ, ನಿರ್ದಿಷ್ಟ ಅವಧಿಯೊಳಗೆ ಶಾಲಾ ಶುಲ್ಕ ಪಾವತಿಸಲು ವಿಫಲವಾದರೆ ತಮ್ಮ ಮಕ್ಕಳ ದಾಖಲಾತಿಯನ್ನು ರದ್ದುಗೊಳಿಸಲಾಗುವುದು ಎಂದು ಬೆದರಿಸಿ ಪೋಷಕರಿಗೆ ನೊಟೀಸ್ ಕಳುಹಿಸಲಾಗಿದೆ.

ರಾಜ್ಯಸರ್ಕಾರದ ಆದೇಶದ ಉಲ್ಲಂಘಿಸಿ ಶಾಲೆಯು ಶುಲ್ಕ ಸಂಗ್ರಹಿಸುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ವಿಬ್ಗಯರ್ ಶಾಲೆಯ ಪ್ರಾಂಶುಪಾಲರು ಜುಲೈ 1 ರಂದು ಕಳುಹಿಸಿದ ನೋಟಿಸ್ ಅನ್ನು (ಸುತ್ತೋಲೆ ಸಂಖ್ಯೆ VH43-CIRNO2489) ಪೋಷಕರು ಹಂಚಿಕೊಂಡಿದ್ದಾರೆ, ಇದರಲ್ಲಿ “ಈ ಶೈಕ್ಷಣಿಕ ವರ್ಷಕ್ಕೆ ಕೆಲವು ಪೋಷಕರು ಯಾವುದೇ ಶುಲ್ಕವನ್ನು ಪಾವತಿಸಿಲ್ಲ. ಇದರಿಂದ ನಮ್ಮ ಶಾಲೆಯಲ್ಲಿ ನಿಮ್ಮ ಮಗು ಮುಂದುವರಿಯುವುದಕ್ಕೆ ನಿಮಗೆ ಆಸಕ್ತಿ ಹೊಂದಿಲ್ಲ ಎಂದು ಊಹಿಸಲಾಗುವುದು. ಇದರ ಪರಿಣಾಮವಾಗಿ, 2020-21ರ ಶೈಕ್ಷಣಿಕ ವರ್ಷಕ್ಕೆ  2020 ರ ಜುಲೈ 13 ರಿಂದ ದಾಖಲಾತಿ ರದ್ದು ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ. ನೀವು ಇನ್ನೂ ನಮ್ಮ ಶಾಲೆಯಲ್ಲಿ ಮುಂದುವರಿಯಲು ಬಯಸಿದರೆ, ಬಾಕಿ ಹಣವನ್ನು ತಕ್ಷಣ ಪಾವತಿಸಲು ನಾವು ವಿನಂತಿಸುತ್ತೇವೆ.” ಎಂದು ಬರೆಯಲಾಗಿದೆ.

ಪ್ರಸ್ತುತ ಆರೋಪಗಳ ಬಗ್ಗೆ ಶಾಲೆಯ ಪ್ರತಿನಿಧಿಯೊಬ್ಬರು ಈ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಲಾ ಆಡಳಿತ ಮಂಡಳಿಯು ಪೋಷಕರೊಂದಿಗೆ ನೇರವಾಗಿ ನಿಭಾಯಿಸುತ್ತದೆ ಎಂದು ಅವರು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಉಂಟಾಗುವ ಆರ್ಥಿಕ ತೊಂದರೆಯಿಂದಾಗಿ ಪ್ರಸ್ತುತ ವರ್ಷದ ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಪೋಷಕರಿಗೆ ಶಾಲೆಯು ಯಾವ ರಿಯಾಯಿತಿಗಳನ್ನು ನೀಡಿದೆ ಎಂಬುದು ಸಹ ಸ್ಪಷ್ಟವಾಗಿಲ್ಲ.

ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ ಏಪ್ರಿಲ್ 28 ರ ಸುತ್ತೋಲೆಯಯಲ್ಲಿ, ಕೊರೊನಾ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಆರ್ಥಿಕ ಸಂಕಷ್ಟಗಳನ್ನು ಉಲ್ಲೇಖಿಸಿ ಪ್ರತಿವರ್ಷ ಹೆಚ್ಚಿಸುವ 15% ಶುಲ್ಕವನ್ನು ಹೆಚ್ಚಿಸದಂತೆ ಶಾಲೆಗಳನ್ನು ಕೇಳಿದೆ. ಇಲಾಖೆಯು ತರುವಾಯ ಇದೇ ವಿಷಯದ ಬಗ್ಗೆ ಸಹಾಯವಾಣಿ ಮತ್ತು ದೂರು ವಿಭಾಗಗಳನ್ನು ಪ್ರಾರಂಭಿಸಿತ್ತು. ವರದಿಗಳ ಪ್ರಕಾರ, ಮೇ ಅಂತ್ಯದ ವೇಳೆಗೆ ಸುಮಾರು 1,000 ದೂರುಗಳು ದಾಖಲಾಗಿವೆ.

ಮೇ 19 ರಂದು ಇಲಾಖೆ ಹೊರಡಿಸಿದ ಮತ್ತೊಂದು ಟಿಪ್ಪಣಿಯಲ್ಲಿ ಶಾಲೆಗಳು ಸಾಧ್ಯವಿರುವ ಪೋಷಕರಿಂದ ಮಾತ್ರ ಶುಲ್ಕವನ್ನು ಸಂಗ್ರಹಿಸಬಹುದು ಮತ್ತು ಕಳೆದ ವರ್ಷ ವಿಧಿಸಲಾಗಿದ್ದ ಶುಲ್ಕವನ್ನು ಹೆಚ್ಚಿಸಲು ಸಾಧ್ಯವಿಲ್ಲ ಮತ್ತು ಆರ್ಥಿಕವಾಗಿ ತೊಂದರೆಗೀಡಾದ ಪೋಷಕರಿಗೆ ಅವರು ರಿಯಾಯಿತಿ ವ್ಯವಸ್ಥೆಗಳನ್ನು ಮಾಡಬೇಕು ಎಂದು ಹೇಳಿದೆ.

“ಸರ್ಕಾರದಿಂದ ಸ್ಪಷ್ಟವಾದ ಸೂಚನೆಗಳ ಹೊರತಾಗಿಯೂ, ಶಾಲೆಯು ಶುಲ್ಕವನ್ನು ಹೆಚ್ಚಿಸಿದೆ. ಮುಂದಿನ ತರಗತಿಯ ಶುಲ್ಕವು ಹಿಂದಿನ ವರ್ಷಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹೇಳುತ್ತದೆ. ಕಳೆದ ವರ್ಷಕ್ಕಿಂತ 68,000 ರೂ. ಹೆಚ್ಚು ಪಾವತಿಸಲು ನಾನು ಸಿದ್ಧನಾಗಿದ್ದೇನೆ” ಎಂದು ಪೋಷಕರೊಬ್ಬರು ಹೇಳಿದ್ದಾರೆ.


ಓದಿ: ಶಾಲೆಗಳು ಸಮಾಜ ಒಡೆಯುತ್ತಿವೆ: ಶಿಕ್ಷಣ ವ್ಯವಸ್ಥೆಯನ್ನು ತಲೆಕೆಳಗು ಮಾಡಬೇಕಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...