Homeರಾಷ್ಟ್ರೀಯಬೆಂಗಳೂರು ಕಾರ್ಯಕ್ರಮ ರದ್ದು - ಪ್ರೇಕ್ಷಕರ ವಿಡಿಯೊ ಬಿಡುಗಡೆ ಮಾಡಿದ ಹಾಸ್ಯನಟ ವೀರ್ ದಾಸ್!

ಬೆಂಗಳೂರು ಕಾರ್ಯಕ್ರಮ ರದ್ದು – ಪ್ರೇಕ್ಷಕರ ವಿಡಿಯೊ ಬಿಡುಗಡೆ ಮಾಡಿದ ಹಾಸ್ಯನಟ ವೀರ್ ದಾಸ್!

- Advertisement -
- Advertisement -

ಬೆಂಗಳೂರಿನಲ್ಲಿ ಗುರುವಾರ ನಡೆಯಬೇಕಿದ್ದ ಸ್ಟ್ಯಾಂಡ್‌ಅಪ್ ಕಾಮೇಡಿಯನ್‌ ವೀರ್‌‌ ದಾಸ್ ಅವರ ಕಾರ್ಯಕ್ರಮ ಮುಂದೂಡಿದ ನಂತರ ಅವರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ತನ್ನ ಕಾರ್ಯಕ್ರಮವೂ ಯಾವುದೇ ಸಮುದಾಯ, ನಾಯಕ, ಧರ್ಮದ ವಿರುದ್ಧ ಅಲ್ಲ ಎಂದು ಹೇಳಿದ್ದಾರೆ.

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ಹೇಳಿ ಈ ವಾರದ ಆರಂಭದಲ್ಲಿ ಬಲಪಂಥೀಯ ಸಂಘಟನೆಯಾದ ಹಚ್‌ಜೆಎಸ್‌‌ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, ಅವರ ವಿರುದ್ಧ ದೂರು ನೀಡಿತ್ತು. ಇದರ ನಂತರ ಅವರ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ವರದಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ವೀರ್‌ ದಾಸ್ “ಅನಿವಾರ್ಯವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುರುವಾರದಂದು ಬೆಂಗಳೂರಿನ ಮಲ್ಲೇಶ್ವರಂನ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ವೀರ್‌ ದಾಸ್ ಅವರ ಕಾರ್ಯಕ್ರಮ ನಡೆಯುವುದಾಗಿ ಘೋಷಣೆಯಾಗಿತ್ತು. ಈ ಬಗ್ಗೆ ಪ್ರತಿಕ್ರಿಸಿದ ಅವರು, “ನಾವು ಬೆಂಗಳೂರು ಕಾರ್ಯಕ್ರಮವನ್ನು ಮುಂದೂಡುತ್ತಿದ್ದೇವೆ. ಹೊಸ ವಿವರಗಳು ಮತ್ತು ದಿನಾಂಕಗಳು ಶೀಘ್ರದಲ್ಲೇ ಘೋಷಿಸುತ್ತೇವೆ. ಅನಾನುಕೂಲತೆಗಾಗಿ ಕ್ಷಮಿಸಿ” ಎಂದು ಇನ್ಸ್‌ಟ್ರಾಗ್ರಾಂನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಇದರ ನಂತರ ಅವರು ಟ್ವಿಟರ್‌ನಲ್ಲಿ ಒಂದು ವಿಡಿಯೊ ಪೋಸ್ಟ್‌ ಮಾಡಿದ್ದು, “ಯಾವುದಕ್ಕೂಇರಲಿ ಎಂದು ನನ್ನ ಶೋ ಒಂದರ ನಂತರ ನಾನು ಈ ವೀಡಿಯೊವನ್ನು ಮಾಡಿದ್ದೇನೆ. ಮಾಧ್ಯಮದ ಕನ್ನಡಕಗಳಲ್ಲಿ ಅಥವಾ ಮುಖ್ಯಾಂಶಗಳಿಗೆ ಬಳಸುವುದರಲ್ಲಿ ನನಗೆ ಆಸಕ್ತಿಯಿಲ್ಲ. ನಾನೊಬ್ಬ ಕಲಾವಿದ. ನಾನು ಸುದ್ದಿಯಲ್ಲಿ ಇರಬಾರದು. ನನ್ನ ವಿಷಯದ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗಿದೆ. ನನ್ನ ಕಲೆ ಮತ್ತು ನನ್ನ ಪ್ರೇಕ್ಷಕರು ನನ್ನ ಪರವಾಗಿ ಮಾತನಾಡುತ್ತಾರೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಅವರು ತಮ್ಮ ಪ್ರಶ್ನೆಗಳಿಗೆ “ಹೌದು” ಅಥವಾ “ಇಲ್ಲ” ಎಂದು ಒಂದೇ ವಾಕ್ಯದಲ್ಲಿ ಉತ್ತರಿಸುವಂತೆ ಪ್ರೇಕ್ಷಕರನ್ನು ಕೇಳಿದ್ದಾರೆ. “ಇದನ್ನು ಮಾಡಲು ನಾನು ಯಾರಿಗೂ ಹಣ ನೀಡಿಲ್ಲ. ಇವರಲ್ಲಿ ಯಾರೂ ಭಯೋತ್ಪಾದಕರು ಅಥವಾ ಪಾಕಿಸ್ತಾನಿ ಏಜೆಂಟ್‌ಗಳಲ್ಲ” ಎಂದು ಅವರು ಹೇಳುತ್ತಾರೆ.

“ನಾವು ಈ ರಾತ್ರಿ ಇಲ್ಲಿ ಯಾವುದಾದರೂ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡಿದ್ದೇವೆಯೇ? ನಾವು ಇಂದು ರಾತ್ರಿ ಇಲ್ಲಿ ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ನಾಯಕನನ್ನು ಗುರಿಯಾಗಿಸಿಕೊಂಡಿದ್ದೇವೆಯೇ? ಈ ಕಾರ್ಯಕ್ರಮವೂ ಭಾರತವನ್ನು ಅವಮಾನಿಸಿದೆಯ? ನೀವು ಭಾರತೀಯರಾಗಿರಲು ನಾಚಿಕೆಪಡುವಂತೆ ಮಾಡಿದೆಯೇ?” ಎಂದು ಅವರು ಕೇಳುತ್ತಾರೆ. ಈ ವೇಳೆ ಪ್ರೇಕ್ಷಕರು ಇಲ್ಲ ಎಂದು ಹೇಳುತ್ತಾರೆ.

ಇದನ್ನೂ ಓದಿ: ಮುನವ್ವರ್ ಫಾರೂಕಿ ಮತ್ತು ಮಾಬ್

“ಈ ಪ್ರದರ್ಶನವು ನಿಮಗೆ ಭಾರತೀಯರಾಗಿರುವುದಕ್ಕೆ ಹೆಮ್ಮೆ ತಂದಿದೆಯೇ?’’ ಅವರು ಕೇಳುತ್ತಾರೆ. ಅದಕ್ಕೆ ಪ್ರೇಕ್ಷಕರು ‘ಹೌದು’ ಎಂದು ಕಿರುಚುತ್ತಾರೆ. ಇದರ ನಂತರ ವೀರ್‌ ದಾಸ್ ಅವರು ‘ಕೇವಲ ಪ್ರೇಕ್ಷಕರನ್ನು ನಂಬಿ’ ಎಂದು ವೀಡಿಯೊವನ್ನು ಮುಗಿಸುತ್ತಾರೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮೆಡಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ಇದೇ ಮೊದಲಲ್ಲ. ಮುನಾವರ್‌ ಫಾರೂಕಿ ಅವರ ಎರಡು ಕಾರ್ಯಕ್ರಮಗಳು ಮತ್ತು ಕುನಾಲ್ ಕಮ್ರಾ ಅವರು ಒಂದು ಕಾರ್ಯಕ್ರಮ ಈ ಹಿಂದೆ ರದ್ದುಗೊಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...