Homeರಾಷ್ಟ್ರೀಯಬೆಂಗಳೂರು ಕಾರ್ಯಕ್ರಮ ರದ್ದು - ಪ್ರೇಕ್ಷಕರ ವಿಡಿಯೊ ಬಿಡುಗಡೆ ಮಾಡಿದ ಹಾಸ್ಯನಟ ವೀರ್ ದಾಸ್!

ಬೆಂಗಳೂರು ಕಾರ್ಯಕ್ರಮ ರದ್ದು – ಪ್ರೇಕ್ಷಕರ ವಿಡಿಯೊ ಬಿಡುಗಡೆ ಮಾಡಿದ ಹಾಸ್ಯನಟ ವೀರ್ ದಾಸ್!

- Advertisement -
- Advertisement -

ಬೆಂಗಳೂರಿನಲ್ಲಿ ಗುರುವಾರ ನಡೆಯಬೇಕಿದ್ದ ಸ್ಟ್ಯಾಂಡ್‌ಅಪ್ ಕಾಮೇಡಿಯನ್‌ ವೀರ್‌‌ ದಾಸ್ ಅವರ ಕಾರ್ಯಕ್ರಮ ಮುಂದೂಡಿದ ನಂತರ ಅವರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ತನ್ನ ಕಾರ್ಯಕ್ರಮವೂ ಯಾವುದೇ ಸಮುದಾಯ, ನಾಯಕ, ಧರ್ಮದ ವಿರುದ್ಧ ಅಲ್ಲ ಎಂದು ಹೇಳಿದ್ದಾರೆ.

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ಹೇಳಿ ಈ ವಾರದ ಆರಂಭದಲ್ಲಿ ಬಲಪಂಥೀಯ ಸಂಘಟನೆಯಾದ ಹಚ್‌ಜೆಎಸ್‌‌ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, ಅವರ ವಿರುದ್ಧ ದೂರು ನೀಡಿತ್ತು. ಇದರ ನಂತರ ಅವರ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ವರದಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ವೀರ್‌ ದಾಸ್ “ಅನಿವಾರ್ಯವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುರುವಾರದಂದು ಬೆಂಗಳೂರಿನ ಮಲ್ಲೇಶ್ವರಂನ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ವೀರ್‌ ದಾಸ್ ಅವರ ಕಾರ್ಯಕ್ರಮ ನಡೆಯುವುದಾಗಿ ಘೋಷಣೆಯಾಗಿತ್ತು. ಈ ಬಗ್ಗೆ ಪ್ರತಿಕ್ರಿಸಿದ ಅವರು, “ನಾವು ಬೆಂಗಳೂರು ಕಾರ್ಯಕ್ರಮವನ್ನು ಮುಂದೂಡುತ್ತಿದ್ದೇವೆ. ಹೊಸ ವಿವರಗಳು ಮತ್ತು ದಿನಾಂಕಗಳು ಶೀಘ್ರದಲ್ಲೇ ಘೋಷಿಸುತ್ತೇವೆ. ಅನಾನುಕೂಲತೆಗಾಗಿ ಕ್ಷಮಿಸಿ” ಎಂದು ಇನ್ಸ್‌ಟ್ರಾಗ್ರಾಂನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಇದರ ನಂತರ ಅವರು ಟ್ವಿಟರ್‌ನಲ್ಲಿ ಒಂದು ವಿಡಿಯೊ ಪೋಸ್ಟ್‌ ಮಾಡಿದ್ದು, “ಯಾವುದಕ್ಕೂಇರಲಿ ಎಂದು ನನ್ನ ಶೋ ಒಂದರ ನಂತರ ನಾನು ಈ ವೀಡಿಯೊವನ್ನು ಮಾಡಿದ್ದೇನೆ. ಮಾಧ್ಯಮದ ಕನ್ನಡಕಗಳಲ್ಲಿ ಅಥವಾ ಮುಖ್ಯಾಂಶಗಳಿಗೆ ಬಳಸುವುದರಲ್ಲಿ ನನಗೆ ಆಸಕ್ತಿಯಿಲ್ಲ. ನಾನೊಬ್ಬ ಕಲಾವಿದ. ನಾನು ಸುದ್ದಿಯಲ್ಲಿ ಇರಬಾರದು. ನನ್ನ ವಿಷಯದ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗಿದೆ. ನನ್ನ ಕಲೆ ಮತ್ತು ನನ್ನ ಪ್ರೇಕ್ಷಕರು ನನ್ನ ಪರವಾಗಿ ಮಾತನಾಡುತ್ತಾರೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಅವರು ತಮ್ಮ ಪ್ರಶ್ನೆಗಳಿಗೆ “ಹೌದು” ಅಥವಾ “ಇಲ್ಲ” ಎಂದು ಒಂದೇ ವಾಕ್ಯದಲ್ಲಿ ಉತ್ತರಿಸುವಂತೆ ಪ್ರೇಕ್ಷಕರನ್ನು ಕೇಳಿದ್ದಾರೆ. “ಇದನ್ನು ಮಾಡಲು ನಾನು ಯಾರಿಗೂ ಹಣ ನೀಡಿಲ್ಲ. ಇವರಲ್ಲಿ ಯಾರೂ ಭಯೋತ್ಪಾದಕರು ಅಥವಾ ಪಾಕಿಸ್ತಾನಿ ಏಜೆಂಟ್‌ಗಳಲ್ಲ” ಎಂದು ಅವರು ಹೇಳುತ್ತಾರೆ.

“ನಾವು ಈ ರಾತ್ರಿ ಇಲ್ಲಿ ಯಾವುದಾದರೂ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡಿದ್ದೇವೆಯೇ? ನಾವು ಇಂದು ರಾತ್ರಿ ಇಲ್ಲಿ ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ನಾಯಕನನ್ನು ಗುರಿಯಾಗಿಸಿಕೊಂಡಿದ್ದೇವೆಯೇ? ಈ ಕಾರ್ಯಕ್ರಮವೂ ಭಾರತವನ್ನು ಅವಮಾನಿಸಿದೆಯ? ನೀವು ಭಾರತೀಯರಾಗಿರಲು ನಾಚಿಕೆಪಡುವಂತೆ ಮಾಡಿದೆಯೇ?” ಎಂದು ಅವರು ಕೇಳುತ್ತಾರೆ. ಈ ವೇಳೆ ಪ್ರೇಕ್ಷಕರು ಇಲ್ಲ ಎಂದು ಹೇಳುತ್ತಾರೆ.

ಇದನ್ನೂ ಓದಿ: ಮುನವ್ವರ್ ಫಾರೂಕಿ ಮತ್ತು ಮಾಬ್

“ಈ ಪ್ರದರ್ಶನವು ನಿಮಗೆ ಭಾರತೀಯರಾಗಿರುವುದಕ್ಕೆ ಹೆಮ್ಮೆ ತಂದಿದೆಯೇ?’’ ಅವರು ಕೇಳುತ್ತಾರೆ. ಅದಕ್ಕೆ ಪ್ರೇಕ್ಷಕರು ‘ಹೌದು’ ಎಂದು ಕಿರುಚುತ್ತಾರೆ. ಇದರ ನಂತರ ವೀರ್‌ ದಾಸ್ ಅವರು ‘ಕೇವಲ ಪ್ರೇಕ್ಷಕರನ್ನು ನಂಬಿ’ ಎಂದು ವೀಡಿಯೊವನ್ನು ಮುಗಿಸುತ್ತಾರೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮೆಡಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ಇದೇ ಮೊದಲಲ್ಲ. ಮುನಾವರ್‌ ಫಾರೂಕಿ ಅವರ ಎರಡು ಕಾರ್ಯಕ್ರಮಗಳು ಮತ್ತು ಕುನಾಲ್ ಕಮ್ರಾ ಅವರು ಒಂದು ಕಾರ್ಯಕ್ರಮ ಈ ಹಿಂದೆ ರದ್ದುಗೊಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...