Homeರಾಷ್ಟ್ರೀಯಬೆಂಗಳೂರು ಕಾರ್ಯಕ್ರಮ ರದ್ದು - ಪ್ರೇಕ್ಷಕರ ವಿಡಿಯೊ ಬಿಡುಗಡೆ ಮಾಡಿದ ಹಾಸ್ಯನಟ ವೀರ್ ದಾಸ್!

ಬೆಂಗಳೂರು ಕಾರ್ಯಕ್ರಮ ರದ್ದು – ಪ್ರೇಕ್ಷಕರ ವಿಡಿಯೊ ಬಿಡುಗಡೆ ಮಾಡಿದ ಹಾಸ್ಯನಟ ವೀರ್ ದಾಸ್!

- Advertisement -
- Advertisement -

ಬೆಂಗಳೂರಿನಲ್ಲಿ ಗುರುವಾರ ನಡೆಯಬೇಕಿದ್ದ ಸ್ಟ್ಯಾಂಡ್‌ಅಪ್ ಕಾಮೇಡಿಯನ್‌ ವೀರ್‌‌ ದಾಸ್ ಅವರ ಕಾರ್ಯಕ್ರಮ ಮುಂದೂಡಿದ ನಂತರ ಅವರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ತನ್ನ ಕಾರ್ಯಕ್ರಮವೂ ಯಾವುದೇ ಸಮುದಾಯ, ನಾಯಕ, ಧರ್ಮದ ವಿರುದ್ಧ ಅಲ್ಲ ಎಂದು ಹೇಳಿದ್ದಾರೆ.

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ಹೇಳಿ ಈ ವಾರದ ಆರಂಭದಲ್ಲಿ ಬಲಪಂಥೀಯ ಸಂಘಟನೆಯಾದ ಹಚ್‌ಜೆಎಸ್‌‌ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, ಅವರ ವಿರುದ್ಧ ದೂರು ನೀಡಿತ್ತು. ಇದರ ನಂತರ ಅವರ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ವರದಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ವೀರ್‌ ದಾಸ್ “ಅನಿವಾರ್ಯವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುರುವಾರದಂದು ಬೆಂಗಳೂರಿನ ಮಲ್ಲೇಶ್ವರಂನ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ವೀರ್‌ ದಾಸ್ ಅವರ ಕಾರ್ಯಕ್ರಮ ನಡೆಯುವುದಾಗಿ ಘೋಷಣೆಯಾಗಿತ್ತು. ಈ ಬಗ್ಗೆ ಪ್ರತಿಕ್ರಿಸಿದ ಅವರು, “ನಾವು ಬೆಂಗಳೂರು ಕಾರ್ಯಕ್ರಮವನ್ನು ಮುಂದೂಡುತ್ತಿದ್ದೇವೆ. ಹೊಸ ವಿವರಗಳು ಮತ್ತು ದಿನಾಂಕಗಳು ಶೀಘ್ರದಲ್ಲೇ ಘೋಷಿಸುತ್ತೇವೆ. ಅನಾನುಕೂಲತೆಗಾಗಿ ಕ್ಷಮಿಸಿ” ಎಂದು ಇನ್ಸ್‌ಟ್ರಾಗ್ರಾಂನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕುನಾಲ್, ಮುನಾವರ್ ನಿಮಗಾಗಿ ಒಂದು ಶೋ ಏರ್ಪಡಿಸುತ್ತೇನೆ, ಆದರೆ ಒಂದೇ ಷರತ್ತು: ದಿಗ್ವಿಜಯ್ ಸಿಂಗ್

ಇದರ ನಂತರ ಅವರು ಟ್ವಿಟರ್‌ನಲ್ಲಿ ಒಂದು ವಿಡಿಯೊ ಪೋಸ್ಟ್‌ ಮಾಡಿದ್ದು, “ಯಾವುದಕ್ಕೂಇರಲಿ ಎಂದು ನನ್ನ ಶೋ ಒಂದರ ನಂತರ ನಾನು ಈ ವೀಡಿಯೊವನ್ನು ಮಾಡಿದ್ದೇನೆ. ಮಾಧ್ಯಮದ ಕನ್ನಡಕಗಳಲ್ಲಿ ಅಥವಾ ಮುಖ್ಯಾಂಶಗಳಿಗೆ ಬಳಸುವುದರಲ್ಲಿ ನನಗೆ ಆಸಕ್ತಿಯಿಲ್ಲ. ನಾನೊಬ್ಬ ಕಲಾವಿದ. ನಾನು ಸುದ್ದಿಯಲ್ಲಿ ಇರಬಾರದು. ನನ್ನ ವಿಷಯದ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗಿದೆ. ನನ್ನ ಕಲೆ ಮತ್ತು ನನ್ನ ಪ್ರೇಕ್ಷಕರು ನನ್ನ ಪರವಾಗಿ ಮಾತನಾಡುತ್ತಾರೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಅವರು ತಮ್ಮ ಪ್ರಶ್ನೆಗಳಿಗೆ “ಹೌದು” ಅಥವಾ “ಇಲ್ಲ” ಎಂದು ಒಂದೇ ವಾಕ್ಯದಲ್ಲಿ ಉತ್ತರಿಸುವಂತೆ ಪ್ರೇಕ್ಷಕರನ್ನು ಕೇಳಿದ್ದಾರೆ. “ಇದನ್ನು ಮಾಡಲು ನಾನು ಯಾರಿಗೂ ಹಣ ನೀಡಿಲ್ಲ. ಇವರಲ್ಲಿ ಯಾರೂ ಭಯೋತ್ಪಾದಕರು ಅಥವಾ ಪಾಕಿಸ್ತಾನಿ ಏಜೆಂಟ್‌ಗಳಲ್ಲ” ಎಂದು ಅವರು ಹೇಳುತ್ತಾರೆ.

“ನಾವು ಈ ರಾತ್ರಿ ಇಲ್ಲಿ ಯಾವುದಾದರೂ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡಿದ್ದೇವೆಯೇ? ನಾವು ಇಂದು ರಾತ್ರಿ ಇಲ್ಲಿ ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ನಾಯಕನನ್ನು ಗುರಿಯಾಗಿಸಿಕೊಂಡಿದ್ದೇವೆಯೇ? ಈ ಕಾರ್ಯಕ್ರಮವೂ ಭಾರತವನ್ನು ಅವಮಾನಿಸಿದೆಯ? ನೀವು ಭಾರತೀಯರಾಗಿರಲು ನಾಚಿಕೆಪಡುವಂತೆ ಮಾಡಿದೆಯೇ?” ಎಂದು ಅವರು ಕೇಳುತ್ತಾರೆ. ಈ ವೇಳೆ ಪ್ರೇಕ್ಷಕರು ಇಲ್ಲ ಎಂದು ಹೇಳುತ್ತಾರೆ.

ಇದನ್ನೂ ಓದಿ: ಮುನವ್ವರ್ ಫಾರೂಕಿ ಮತ್ತು ಮಾಬ್

“ಈ ಪ್ರದರ್ಶನವು ನಿಮಗೆ ಭಾರತೀಯರಾಗಿರುವುದಕ್ಕೆ ಹೆಮ್ಮೆ ತಂದಿದೆಯೇ?’’ ಅವರು ಕೇಳುತ್ತಾರೆ. ಅದಕ್ಕೆ ಪ್ರೇಕ್ಷಕರು ‘ಹೌದು’ ಎಂದು ಕಿರುಚುತ್ತಾರೆ. ಇದರ ನಂತರ ವೀರ್‌ ದಾಸ್ ಅವರು ‘ಕೇವಲ ಪ್ರೇಕ್ಷಕರನ್ನು ನಂಬಿ’ ಎಂದು ವೀಡಿಯೊವನ್ನು ಮುಗಿಸುತ್ತಾರೆ.

ಇದನ್ನೂ ಓದಿ: ಪುನೀತ್‌ ರಾಜ್‌ಕುಮಾರ್‌‌ ಸಂಸ್ಥೆಯ ದೇಣಿಗೆಗಾಗಿ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಿದ ಪೊಲೀಸರು

ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮೆಡಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ಇದೇ ಮೊದಲಲ್ಲ. ಮುನಾವರ್‌ ಫಾರೂಕಿ ಅವರ ಎರಡು ಕಾರ್ಯಕ್ರಮಗಳು ಮತ್ತು ಕುನಾಲ್ ಕಮ್ರಾ ಅವರು ಒಂದು ಕಾರ್ಯಕ್ರಮ ಈ ಹಿಂದೆ ರದ್ದುಗೊಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...