Homeಕರ್ನಾಟಕಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

ಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನ ಹೆಮ್ಮಿಗೆಪುರದಲ್ಲಿ ನಿರ್ಮಿಸಲು ಉದ್ದೇಶಿಲಾಗಿರುವ 250-ಮೀಟರ್ ಸ್ಕೈ ಡೆಕ್ ಕುರಿತು ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿ ಸಾರ್ವಜನಿಕರಿಗೆ ಕೇಳಿದೆ. ಸ್ಕೈ ಡೆಕ್ ನಿರ್ಮಾಣಕ್ಕೆ ಅನುಕೂಲಕರವಾಗುವ ಹಲವು ಪ್ರದೇಶಗಳಲ್ಲಿ ಹೆಮ್ಮಿಗೆಪುರ ಕೂಡಾ ಒಂದಾಗಿದೆ. ಬರೋಬ್ಬರಿ 500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಉದ್ದೇಶಿತ ಸ್ಕೈ ಡೆಕ್ ಯೋಜನೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯಲ್ಲೊಂದಾಗಿದೆ. ಬೆಂಗಳೂರು

ನಗರದ ವಿಶಿಷ್ಟ ವಿಹಂಗಮ ನೋಟವನ್ನು ನೀಡಲು ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಜೊತೆಗೆ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಸರ್ಕಾರ ವಾದಿಸುತ್ತದೆ. ಇದು ಫುಡ್ ಕೋರ್ಟ್‌ಗಳು ಮತ್ತು ಇತರ ಸೌಕರ್ಯಗಳ ಜೊತೆಗೆ ಆಟದ ಮೈದಾನಗಳನ್ನು ಸಹ ಹೊಂದಿರುತ್ತದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆನ್ನಿಗಾನಹಳ್ಳಿಯಲ್ಲಿ ಎನ್‌ಜಿಇಎಫ್, ಯಶವಂತಪುರದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್, ವೈಟ್‌ಫೀಲ್ಡ್‌ನಲ್ಲಿರುವ ಕರ್ನಾಟಕ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಮತ್ತು ಜಕ್ಕೂರುನಲ್ಲಿರುವ ಜಿಕೆವಿಕೆ ಸೇರಿದಂತೆ ಯೋಜನೆಗಾಗಿ ಹಲವು ಸಂಭಾವ್ಯ ಸ್ಥಳಗಳನ್ನು ಬಿಬಿಎಂಪಿ ಗುರುತಿಸಿದೆ.

ಆದಾಗ್ಯೂ, ಯೋಜನೆಗೆ ಉದ್ದೇಶಿಸಿರುವ ಹಲವಾರು ಪ್ರದೇಶಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಯಲಹಂಕ ರಕ್ಷಣಾ ವಿಮಾನ ನಿಲ್ದಾಣ ಮತ್ತು HAL ರಕ್ಷಣಾ ವಿಮಾನ ನಿಲ್ದಾಣದಂತಹ ಸೂಕ್ಷ್ಮ ವಲಯಗಳ ಬಳಿ ಬರುತ್ತವೆ. ಈ ಪ್ರದೇಶಗಳಲ್ಲಿ ಕಲರ್ ಕೋಡೆಡ್ ಝೋನಿಂಗ್ ಮ್ಯಾಪ್ (CCZM) ನಿರ್ಬಂಧವಿದ್ದು, ಇದು ಎತ್ತರದ ಕಟ್ಟಡಗಳ ನಿರ್ಮಾಣಗಳಿಗೆ ನಿಷೇಧವಿದೆ.

ಹಾಗಾಗಿ ಬೆಂಗಳೂರಿನ ಪಶ್ಚಿಮ ಮತ್ತು ನೈಋತ್ಯ ಭಾಗಗಳಿಗೆ ಸ್ಕೈ ಡೆಕ್‌ಗೆ ಕಾರ್ಯಸಾಧ್ಯವಾದ ಪ್ರದೇಶಗಳು ಮಿತಿಯಲ್ಲಿವೆ. ಇದಕ್ಕೆ ಪ್ರತಿಯಾಗಿ, ಬಿಬಿಎಂಪಿಯು ನೈಸ್ ಕ್ಲೋವರ್ ಲೀಫ್ ಬಳಿಯ ಹೆಮ್ಮಿಗೆಪುರ, ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಮತ್ತು ನೈಸ್ ರಸ್ತೆ ಬಳಿಯ ಕೊಮ್ಮಘಟ್ಟದಂತಹ ಪರ್ಯಾಯ ಸ್ಥಳಗಳನ್ನು ಪರಿಗಣಿಸುತ್ತಿದೆ.

ನೈಸ್ ರಸ್ತೆಯು ತುಮಕೂರು, ಕನಕಪುರ, ಮೈಸೂರು ಮತ್ತು ಹೊಸೂರಿನಂತಹ ಪ್ರಮುಖ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಹೆಮ್ಮಿಗೆಪುರದ ಬಗ್ಗೆ ಬಿಬಿಎಂಪಿ ವಿಶೇಷ ಒಲವು ತೋರಿದೆ. ಇಲ್ಲಿ ನಿರ್ಮಾಣದ ಸಮಯದಲ್ಲಿ ಟ್ರಾಫಿಕ್ ಅಡೆತಡೆಗಳು ಕೂಡಾ ಕಡಿಮೆ ಆಗಿರುತ್ತದೆ. ಅಲ್ಲದೆ, ತುರಹಳ್ಳಿ ಅರಣ್ಯಕ್ಕೆ ಈ ಪ್ರದೇಶ ಹತ್ತಿರ ಇರುವುದರಿಂದ, ಪ್ರವಾಸಿಗರಿಗೆ ಸ್ಕೈ ಡೆಕ್‌ನಿಂದ ರಮಣೀಯ ನೈಸರ್ಗಿಕ ನೋಟಗಳು ಕೂಡಾ ಒದಗುತ್ತದೆ.

ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿತ ಸ್ಥಳದ ಕುರಿತು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಲು ಬಿಬಿಎಂಪಿ ನಿವಾಸಿಗಳು, ನಾಗರಿಕೆ ಗುಂಪುಗಳು ಮತ್ತು ಇತರ ಮಧ್ಯಸ್ಥಗಾರರನ್ನು ಬಿಬಿಎಂಪಿ ಆಹ್ವಾನಿಸಿದೆ. ವಿಶೇಷವಾಗಿ ಹೆಮ್ಮಿಗೆಪುರವು ಸೂಕ್ತವಾದ ಸ್ಥಳವಾಗಿದೆಯೇ ಅಥವಾ ನಗರದ ಪಶ್ಚಿಮ ಅಥವಾ ನೈಋತ್ಯದಲ್ಲಿ ಇತರ ಆದ್ಯತೆಯ ಸ್ಥಳಗಳಿದ್ದರೆ ಅಭಿಪ್ರಾಯ ತಿಳಿಸುವಂತೆ ಅದು ಕೇಳಿದೆ.

ಪ್ರತಿಕ್ರಿಯೆಯನ್ನು [email protected] ಗೆ ಇಮೇಲ್ ಮೂಲಕ ಸಲ್ಲಿಸಬಹುದು ಅಥವಾ ಬೆಂಗಳೂರಿನ N R ಸ್ಕ್ವೇರ್‌ನಲ್ಲಿರುವ BBMP ಕೇಂದ್ರ ಕಚೇರಿಗೆ ವೈಯಕ್ತಿಕವಾಗಿ ತಲುಪಿಸಬಹುದು. ಮುಂದಿನ ಏಳು ದಿನಗಳವರೆಗೆ ಪ್ರತಿಕ್ರಿಯೆ ವಿಂಡೋ ತೆರೆದಿರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ, ಶಿವಕುಮಾರ್ ಅವರು ಅಮೆರಿಕಾಕ್ಕೆ ವೈಯಕ್ತಿಕ ಭೇಟಿ ನೀಡಿದ್ದ ಸಂದರ್ಭದಲ್ಲಿ ನ್ಯೂಯಾರ್ಕ್‌ನ ಸ್ಕೈ ಡೆಕ್‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಸ್ಕೈಡೆಕ್ ‘ದಿ ಎಡ್ಜ್’ ಮತ್ತು ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತು ಇತರ ಅಂಶಗಳನ್ನು ಪರಿಶೀಲಿಸಿ, ಬೆಂಗಳೂರಿನಲ್ಲಿ ಕೂಡಾ ಇದೇ ರೀತಿಯ ನಿರ್ಮಾಣವನ್ನು ತರುವ ಬಗ್ಗೆ ಸುಳಿವು ನೀಡಿದ್ದರು.

ಇದನ್ನೂ ಓದಿ: ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...