Homeಕರ್ನಾಟಕಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

ಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನ ಹೆಮ್ಮಿಗೆಪುರದಲ್ಲಿ ನಿರ್ಮಿಸಲು ಉದ್ದೇಶಿಲಾಗಿರುವ 250-ಮೀಟರ್ ಸ್ಕೈ ಡೆಕ್ ಕುರಿತು ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿ ಸಾರ್ವಜನಿಕರಿಗೆ ಕೇಳಿದೆ. ಸ್ಕೈ ಡೆಕ್ ನಿರ್ಮಾಣಕ್ಕೆ ಅನುಕೂಲಕರವಾಗುವ ಹಲವು ಪ್ರದೇಶಗಳಲ್ಲಿ ಹೆಮ್ಮಿಗೆಪುರ ಕೂಡಾ ಒಂದಾಗಿದೆ. ಬರೋಬ್ಬರಿ 500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಉದ್ದೇಶಿತ ಸ್ಕೈ ಡೆಕ್ ಯೋಜನೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯಲ್ಲೊಂದಾಗಿದೆ. ಬೆಂಗಳೂರು

ನಗರದ ವಿಶಿಷ್ಟ ವಿಹಂಗಮ ನೋಟವನ್ನು ನೀಡಲು ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಜೊತೆಗೆ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಸರ್ಕಾರ ವಾದಿಸುತ್ತದೆ. ಇದು ಫುಡ್ ಕೋರ್ಟ್‌ಗಳು ಮತ್ತು ಇತರ ಸೌಕರ್ಯಗಳ ಜೊತೆಗೆ ಆಟದ ಮೈದಾನಗಳನ್ನು ಸಹ ಹೊಂದಿರುತ್ತದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆನ್ನಿಗಾನಹಳ್ಳಿಯಲ್ಲಿ ಎನ್‌ಜಿಇಎಫ್, ಯಶವಂತಪುರದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್, ವೈಟ್‌ಫೀಲ್ಡ್‌ನಲ್ಲಿರುವ ಕರ್ನಾಟಕ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಮತ್ತು ಜಕ್ಕೂರುನಲ್ಲಿರುವ ಜಿಕೆವಿಕೆ ಸೇರಿದಂತೆ ಯೋಜನೆಗಾಗಿ ಹಲವು ಸಂಭಾವ್ಯ ಸ್ಥಳಗಳನ್ನು ಬಿಬಿಎಂಪಿ ಗುರುತಿಸಿದೆ.

ಆದಾಗ್ಯೂ, ಯೋಜನೆಗೆ ಉದ್ದೇಶಿಸಿರುವ ಹಲವಾರು ಪ್ರದೇಶಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಯಲಹಂಕ ರಕ್ಷಣಾ ವಿಮಾನ ನಿಲ್ದಾಣ ಮತ್ತು HAL ರಕ್ಷಣಾ ವಿಮಾನ ನಿಲ್ದಾಣದಂತಹ ಸೂಕ್ಷ್ಮ ವಲಯಗಳ ಬಳಿ ಬರುತ್ತವೆ. ಈ ಪ್ರದೇಶಗಳಲ್ಲಿ ಕಲರ್ ಕೋಡೆಡ್ ಝೋನಿಂಗ್ ಮ್ಯಾಪ್ (CCZM) ನಿರ್ಬಂಧವಿದ್ದು, ಇದು ಎತ್ತರದ ಕಟ್ಟಡಗಳ ನಿರ್ಮಾಣಗಳಿಗೆ ನಿಷೇಧವಿದೆ.

ಹಾಗಾಗಿ ಬೆಂಗಳೂರಿನ ಪಶ್ಚಿಮ ಮತ್ತು ನೈಋತ್ಯ ಭಾಗಗಳಿಗೆ ಸ್ಕೈ ಡೆಕ್‌ಗೆ ಕಾರ್ಯಸಾಧ್ಯವಾದ ಪ್ರದೇಶಗಳು ಮಿತಿಯಲ್ಲಿವೆ. ಇದಕ್ಕೆ ಪ್ರತಿಯಾಗಿ, ಬಿಬಿಎಂಪಿಯು ನೈಸ್ ಕ್ಲೋವರ್ ಲೀಫ್ ಬಳಿಯ ಹೆಮ್ಮಿಗೆಪುರ, ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಮತ್ತು ನೈಸ್ ರಸ್ತೆ ಬಳಿಯ ಕೊಮ್ಮಘಟ್ಟದಂತಹ ಪರ್ಯಾಯ ಸ್ಥಳಗಳನ್ನು ಪರಿಗಣಿಸುತ್ತಿದೆ.

ನೈಸ್ ರಸ್ತೆಯು ತುಮಕೂರು, ಕನಕಪುರ, ಮೈಸೂರು ಮತ್ತು ಹೊಸೂರಿನಂತಹ ಪ್ರಮುಖ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಹೆಮ್ಮಿಗೆಪುರದ ಬಗ್ಗೆ ಬಿಬಿಎಂಪಿ ವಿಶೇಷ ಒಲವು ತೋರಿದೆ. ಇಲ್ಲಿ ನಿರ್ಮಾಣದ ಸಮಯದಲ್ಲಿ ಟ್ರಾಫಿಕ್ ಅಡೆತಡೆಗಳು ಕೂಡಾ ಕಡಿಮೆ ಆಗಿರುತ್ತದೆ. ಅಲ್ಲದೆ, ತುರಹಳ್ಳಿ ಅರಣ್ಯಕ್ಕೆ ಈ ಪ್ರದೇಶ ಹತ್ತಿರ ಇರುವುದರಿಂದ, ಪ್ರವಾಸಿಗರಿಗೆ ಸ್ಕೈ ಡೆಕ್‌ನಿಂದ ರಮಣೀಯ ನೈಸರ್ಗಿಕ ನೋಟಗಳು ಕೂಡಾ ಒದಗುತ್ತದೆ.

ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿತ ಸ್ಥಳದ ಕುರಿತು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಲು ಬಿಬಿಎಂಪಿ ನಿವಾಸಿಗಳು, ನಾಗರಿಕೆ ಗುಂಪುಗಳು ಮತ್ತು ಇತರ ಮಧ್ಯಸ್ಥಗಾರರನ್ನು ಬಿಬಿಎಂಪಿ ಆಹ್ವಾನಿಸಿದೆ. ವಿಶೇಷವಾಗಿ ಹೆಮ್ಮಿಗೆಪುರವು ಸೂಕ್ತವಾದ ಸ್ಥಳವಾಗಿದೆಯೇ ಅಥವಾ ನಗರದ ಪಶ್ಚಿಮ ಅಥವಾ ನೈಋತ್ಯದಲ್ಲಿ ಇತರ ಆದ್ಯತೆಯ ಸ್ಥಳಗಳಿದ್ದರೆ ಅಭಿಪ್ರಾಯ ತಿಳಿಸುವಂತೆ ಅದು ಕೇಳಿದೆ.

ಪ್ರತಿಕ್ರಿಯೆಯನ್ನು [email protected] ಗೆ ಇಮೇಲ್ ಮೂಲಕ ಸಲ್ಲಿಸಬಹುದು ಅಥವಾ ಬೆಂಗಳೂರಿನ N R ಸ್ಕ್ವೇರ್‌ನಲ್ಲಿರುವ BBMP ಕೇಂದ್ರ ಕಚೇರಿಗೆ ವೈಯಕ್ತಿಕವಾಗಿ ತಲುಪಿಸಬಹುದು. ಮುಂದಿನ ಏಳು ದಿನಗಳವರೆಗೆ ಪ್ರತಿಕ್ರಿಯೆ ವಿಂಡೋ ತೆರೆದಿರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ, ಶಿವಕುಮಾರ್ ಅವರು ಅಮೆರಿಕಾಕ್ಕೆ ವೈಯಕ್ತಿಕ ಭೇಟಿ ನೀಡಿದ್ದ ಸಂದರ್ಭದಲ್ಲಿ ನ್ಯೂಯಾರ್ಕ್‌ನ ಸ್ಕೈ ಡೆಕ್‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಸ್ಕೈಡೆಕ್ ‘ದಿ ಎಡ್ಜ್’ ಮತ್ತು ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತು ಇತರ ಅಂಶಗಳನ್ನು ಪರಿಶೀಲಿಸಿ, ಬೆಂಗಳೂರಿನಲ್ಲಿ ಕೂಡಾ ಇದೇ ರೀತಿಯ ನಿರ್ಮಾಣವನ್ನು ತರುವ ಬಗ್ಗೆ ಸುಳಿವು ನೀಡಿದ್ದರು.

ಇದನ್ನೂ ಓದಿ: ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...