Homeಕರ್ನಾಟಕಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

ಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನ ಹೆಮ್ಮಿಗೆಪುರದಲ್ಲಿ ನಿರ್ಮಿಸಲು ಉದ್ದೇಶಿಲಾಗಿರುವ 250-ಮೀಟರ್ ಸ್ಕೈ ಡೆಕ್ ಕುರಿತು ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿ ಸಾರ್ವಜನಿಕರಿಗೆ ಕೇಳಿದೆ. ಸ್ಕೈ ಡೆಕ್ ನಿರ್ಮಾಣಕ್ಕೆ ಅನುಕೂಲಕರವಾಗುವ ಹಲವು ಪ್ರದೇಶಗಳಲ್ಲಿ ಹೆಮ್ಮಿಗೆಪುರ ಕೂಡಾ ಒಂದಾಗಿದೆ. ಬರೋಬ್ಬರಿ 500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಉದ್ದೇಶಿತ ಸ್ಕೈ ಡೆಕ್ ಯೋಜನೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯಲ್ಲೊಂದಾಗಿದೆ. ಬೆಂಗಳೂರು

ನಗರದ ವಿಶಿಷ್ಟ ವಿಹಂಗಮ ನೋಟವನ್ನು ನೀಡಲು ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಜೊತೆಗೆ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಸರ್ಕಾರ ವಾದಿಸುತ್ತದೆ. ಇದು ಫುಡ್ ಕೋರ್ಟ್‌ಗಳು ಮತ್ತು ಇತರ ಸೌಕರ್ಯಗಳ ಜೊತೆಗೆ ಆಟದ ಮೈದಾನಗಳನ್ನು ಸಹ ಹೊಂದಿರುತ್ತದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆನ್ನಿಗಾನಹಳ್ಳಿಯಲ್ಲಿ ಎನ್‌ಜಿಇಎಫ್, ಯಶವಂತಪುರದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್, ವೈಟ್‌ಫೀಲ್ಡ್‌ನಲ್ಲಿರುವ ಕರ್ನಾಟಕ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಮತ್ತು ಜಕ್ಕೂರುನಲ್ಲಿರುವ ಜಿಕೆವಿಕೆ ಸೇರಿದಂತೆ ಯೋಜನೆಗಾಗಿ ಹಲವು ಸಂಭಾವ್ಯ ಸ್ಥಳಗಳನ್ನು ಬಿಬಿಎಂಪಿ ಗುರುತಿಸಿದೆ.

ಆದಾಗ್ಯೂ, ಯೋಜನೆಗೆ ಉದ್ದೇಶಿಸಿರುವ ಹಲವಾರು ಪ್ರದೇಶಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಯಲಹಂಕ ರಕ್ಷಣಾ ವಿಮಾನ ನಿಲ್ದಾಣ ಮತ್ತು HAL ರಕ್ಷಣಾ ವಿಮಾನ ನಿಲ್ದಾಣದಂತಹ ಸೂಕ್ಷ್ಮ ವಲಯಗಳ ಬಳಿ ಬರುತ್ತವೆ. ಈ ಪ್ರದೇಶಗಳಲ್ಲಿ ಕಲರ್ ಕೋಡೆಡ್ ಝೋನಿಂಗ್ ಮ್ಯಾಪ್ (CCZM) ನಿರ್ಬಂಧವಿದ್ದು, ಇದು ಎತ್ತರದ ಕಟ್ಟಡಗಳ ನಿರ್ಮಾಣಗಳಿಗೆ ನಿಷೇಧವಿದೆ.

ಹಾಗಾಗಿ ಬೆಂಗಳೂರಿನ ಪಶ್ಚಿಮ ಮತ್ತು ನೈಋತ್ಯ ಭಾಗಗಳಿಗೆ ಸ್ಕೈ ಡೆಕ್‌ಗೆ ಕಾರ್ಯಸಾಧ್ಯವಾದ ಪ್ರದೇಶಗಳು ಮಿತಿಯಲ್ಲಿವೆ. ಇದಕ್ಕೆ ಪ್ರತಿಯಾಗಿ, ಬಿಬಿಎಂಪಿಯು ನೈಸ್ ಕ್ಲೋವರ್ ಲೀಫ್ ಬಳಿಯ ಹೆಮ್ಮಿಗೆಪುರ, ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಮತ್ತು ನೈಸ್ ರಸ್ತೆ ಬಳಿಯ ಕೊಮ್ಮಘಟ್ಟದಂತಹ ಪರ್ಯಾಯ ಸ್ಥಳಗಳನ್ನು ಪರಿಗಣಿಸುತ್ತಿದೆ.

ನೈಸ್ ರಸ್ತೆಯು ತುಮಕೂರು, ಕನಕಪುರ, ಮೈಸೂರು ಮತ್ತು ಹೊಸೂರಿನಂತಹ ಪ್ರಮುಖ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಹೆಮ್ಮಿಗೆಪುರದ ಬಗ್ಗೆ ಬಿಬಿಎಂಪಿ ವಿಶೇಷ ಒಲವು ತೋರಿದೆ. ಇಲ್ಲಿ ನಿರ್ಮಾಣದ ಸಮಯದಲ್ಲಿ ಟ್ರಾಫಿಕ್ ಅಡೆತಡೆಗಳು ಕೂಡಾ ಕಡಿಮೆ ಆಗಿರುತ್ತದೆ. ಅಲ್ಲದೆ, ತುರಹಳ್ಳಿ ಅರಣ್ಯಕ್ಕೆ ಈ ಪ್ರದೇಶ ಹತ್ತಿರ ಇರುವುದರಿಂದ, ಪ್ರವಾಸಿಗರಿಗೆ ಸ್ಕೈ ಡೆಕ್‌ನಿಂದ ರಮಣೀಯ ನೈಸರ್ಗಿಕ ನೋಟಗಳು ಕೂಡಾ ಒದಗುತ್ತದೆ.

ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿತ ಸ್ಥಳದ ಕುರಿತು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಲು ಬಿಬಿಎಂಪಿ ನಿವಾಸಿಗಳು, ನಾಗರಿಕೆ ಗುಂಪುಗಳು ಮತ್ತು ಇತರ ಮಧ್ಯಸ್ಥಗಾರರನ್ನು ಬಿಬಿಎಂಪಿ ಆಹ್ವಾನಿಸಿದೆ. ವಿಶೇಷವಾಗಿ ಹೆಮ್ಮಿಗೆಪುರವು ಸೂಕ್ತವಾದ ಸ್ಥಳವಾಗಿದೆಯೇ ಅಥವಾ ನಗರದ ಪಶ್ಚಿಮ ಅಥವಾ ನೈಋತ್ಯದಲ್ಲಿ ಇತರ ಆದ್ಯತೆಯ ಸ್ಥಳಗಳಿದ್ದರೆ ಅಭಿಪ್ರಾಯ ತಿಳಿಸುವಂತೆ ಅದು ಕೇಳಿದೆ.

ಪ್ರತಿಕ್ರಿಯೆಯನ್ನು [email protected] ಗೆ ಇಮೇಲ್ ಮೂಲಕ ಸಲ್ಲಿಸಬಹುದು ಅಥವಾ ಬೆಂಗಳೂರಿನ N R ಸ್ಕ್ವೇರ್‌ನಲ್ಲಿರುವ BBMP ಕೇಂದ್ರ ಕಚೇರಿಗೆ ವೈಯಕ್ತಿಕವಾಗಿ ತಲುಪಿಸಬಹುದು. ಮುಂದಿನ ಏಳು ದಿನಗಳವರೆಗೆ ಪ್ರತಿಕ್ರಿಯೆ ವಿಂಡೋ ತೆರೆದಿರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ, ಶಿವಕುಮಾರ್ ಅವರು ಅಮೆರಿಕಾಕ್ಕೆ ವೈಯಕ್ತಿಕ ಭೇಟಿ ನೀಡಿದ್ದ ಸಂದರ್ಭದಲ್ಲಿ ನ್ಯೂಯಾರ್ಕ್‌ನ ಸ್ಕೈ ಡೆಕ್‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಸ್ಕೈಡೆಕ್ ‘ದಿ ಎಡ್ಜ್’ ಮತ್ತು ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತು ಇತರ ಅಂಶಗಳನ್ನು ಪರಿಶೀಲಿಸಿ, ಬೆಂಗಳೂರಿನಲ್ಲಿ ಕೂಡಾ ಇದೇ ರೀತಿಯ ನಿರ್ಮಾಣವನ್ನು ತರುವ ಬಗ್ಗೆ ಸುಳಿವು ನೀಡಿದ್ದರು.

ಇದನ್ನೂ ಓದಿ: ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...