Homeಕರ್ನಾಟಕಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

ಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನ ಹೆಮ್ಮಿಗೆಪುರದಲ್ಲಿ ನಿರ್ಮಿಸಲು ಉದ್ದೇಶಿಲಾಗಿರುವ 250-ಮೀಟರ್ ಸ್ಕೈ ಡೆಕ್ ಕುರಿತು ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿ ಸಾರ್ವಜನಿಕರಿಗೆ ಕೇಳಿದೆ. ಸ್ಕೈ ಡೆಕ್ ನಿರ್ಮಾಣಕ್ಕೆ ಅನುಕೂಲಕರವಾಗುವ ಹಲವು ಪ್ರದೇಶಗಳಲ್ಲಿ ಹೆಮ್ಮಿಗೆಪುರ ಕೂಡಾ ಒಂದಾಗಿದೆ. ಬರೋಬ್ಬರಿ 500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಉದ್ದೇಶಿತ ಸ್ಕೈ ಡೆಕ್ ಯೋಜನೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯಲ್ಲೊಂದಾಗಿದೆ. ಬೆಂಗಳೂರು

ನಗರದ ವಿಶಿಷ್ಟ ವಿಹಂಗಮ ನೋಟವನ್ನು ನೀಡಲು ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಜೊತೆಗೆ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಸರ್ಕಾರ ವಾದಿಸುತ್ತದೆ. ಇದು ಫುಡ್ ಕೋರ್ಟ್‌ಗಳು ಮತ್ತು ಇತರ ಸೌಕರ್ಯಗಳ ಜೊತೆಗೆ ಆಟದ ಮೈದಾನಗಳನ್ನು ಸಹ ಹೊಂದಿರುತ್ತದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆನ್ನಿಗಾನಹಳ್ಳಿಯಲ್ಲಿ ಎನ್‌ಜಿಇಎಫ್, ಯಶವಂತಪುರದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್, ವೈಟ್‌ಫೀಲ್ಡ್‌ನಲ್ಲಿರುವ ಕರ್ನಾಟಕ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಮತ್ತು ಜಕ್ಕೂರುನಲ್ಲಿರುವ ಜಿಕೆವಿಕೆ ಸೇರಿದಂತೆ ಯೋಜನೆಗಾಗಿ ಹಲವು ಸಂಭಾವ್ಯ ಸ್ಥಳಗಳನ್ನು ಬಿಬಿಎಂಪಿ ಗುರುತಿಸಿದೆ.

ಆದಾಗ್ಯೂ, ಯೋಜನೆಗೆ ಉದ್ದೇಶಿಸಿರುವ ಹಲವಾರು ಪ್ರದೇಶಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಯಲಹಂಕ ರಕ್ಷಣಾ ವಿಮಾನ ನಿಲ್ದಾಣ ಮತ್ತು HAL ರಕ್ಷಣಾ ವಿಮಾನ ನಿಲ್ದಾಣದಂತಹ ಸೂಕ್ಷ್ಮ ವಲಯಗಳ ಬಳಿ ಬರುತ್ತವೆ. ಈ ಪ್ರದೇಶಗಳಲ್ಲಿ ಕಲರ್ ಕೋಡೆಡ್ ಝೋನಿಂಗ್ ಮ್ಯಾಪ್ (CCZM) ನಿರ್ಬಂಧವಿದ್ದು, ಇದು ಎತ್ತರದ ಕಟ್ಟಡಗಳ ನಿರ್ಮಾಣಗಳಿಗೆ ನಿಷೇಧವಿದೆ.

ಹಾಗಾಗಿ ಬೆಂಗಳೂರಿನ ಪಶ್ಚಿಮ ಮತ್ತು ನೈಋತ್ಯ ಭಾಗಗಳಿಗೆ ಸ್ಕೈ ಡೆಕ್‌ಗೆ ಕಾರ್ಯಸಾಧ್ಯವಾದ ಪ್ರದೇಶಗಳು ಮಿತಿಯಲ್ಲಿವೆ. ಇದಕ್ಕೆ ಪ್ರತಿಯಾಗಿ, ಬಿಬಿಎಂಪಿಯು ನೈಸ್ ಕ್ಲೋವರ್ ಲೀಫ್ ಬಳಿಯ ಹೆಮ್ಮಿಗೆಪುರ, ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಮತ್ತು ನೈಸ್ ರಸ್ತೆ ಬಳಿಯ ಕೊಮ್ಮಘಟ್ಟದಂತಹ ಪರ್ಯಾಯ ಸ್ಥಳಗಳನ್ನು ಪರಿಗಣಿಸುತ್ತಿದೆ.

ನೈಸ್ ರಸ್ತೆಯು ತುಮಕೂರು, ಕನಕಪುರ, ಮೈಸೂರು ಮತ್ತು ಹೊಸೂರಿನಂತಹ ಪ್ರಮುಖ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಹೆಮ್ಮಿಗೆಪುರದ ಬಗ್ಗೆ ಬಿಬಿಎಂಪಿ ವಿಶೇಷ ಒಲವು ತೋರಿದೆ. ಇಲ್ಲಿ ನಿರ್ಮಾಣದ ಸಮಯದಲ್ಲಿ ಟ್ರಾಫಿಕ್ ಅಡೆತಡೆಗಳು ಕೂಡಾ ಕಡಿಮೆ ಆಗಿರುತ್ತದೆ. ಅಲ್ಲದೆ, ತುರಹಳ್ಳಿ ಅರಣ್ಯಕ್ಕೆ ಈ ಪ್ರದೇಶ ಹತ್ತಿರ ಇರುವುದರಿಂದ, ಪ್ರವಾಸಿಗರಿಗೆ ಸ್ಕೈ ಡೆಕ್‌ನಿಂದ ರಮಣೀಯ ನೈಸರ್ಗಿಕ ನೋಟಗಳು ಕೂಡಾ ಒದಗುತ್ತದೆ.

ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿತ ಸ್ಥಳದ ಕುರಿತು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಲು ಬಿಬಿಎಂಪಿ ನಿವಾಸಿಗಳು, ನಾಗರಿಕೆ ಗುಂಪುಗಳು ಮತ್ತು ಇತರ ಮಧ್ಯಸ್ಥಗಾರರನ್ನು ಬಿಬಿಎಂಪಿ ಆಹ್ವಾನಿಸಿದೆ. ವಿಶೇಷವಾಗಿ ಹೆಮ್ಮಿಗೆಪುರವು ಸೂಕ್ತವಾದ ಸ್ಥಳವಾಗಿದೆಯೇ ಅಥವಾ ನಗರದ ಪಶ್ಚಿಮ ಅಥವಾ ನೈಋತ್ಯದಲ್ಲಿ ಇತರ ಆದ್ಯತೆಯ ಸ್ಥಳಗಳಿದ್ದರೆ ಅಭಿಪ್ರಾಯ ತಿಳಿಸುವಂತೆ ಅದು ಕೇಳಿದೆ.

ಪ್ರತಿಕ್ರಿಯೆಯನ್ನು [email protected] ಗೆ ಇಮೇಲ್ ಮೂಲಕ ಸಲ್ಲಿಸಬಹುದು ಅಥವಾ ಬೆಂಗಳೂರಿನ N R ಸ್ಕ್ವೇರ್‌ನಲ್ಲಿರುವ BBMP ಕೇಂದ್ರ ಕಚೇರಿಗೆ ವೈಯಕ್ತಿಕವಾಗಿ ತಲುಪಿಸಬಹುದು. ಮುಂದಿನ ಏಳು ದಿನಗಳವರೆಗೆ ಪ್ರತಿಕ್ರಿಯೆ ವಿಂಡೋ ತೆರೆದಿರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ, ಶಿವಕುಮಾರ್ ಅವರು ಅಮೆರಿಕಾಕ್ಕೆ ವೈಯಕ್ತಿಕ ಭೇಟಿ ನೀಡಿದ್ದ ಸಂದರ್ಭದಲ್ಲಿ ನ್ಯೂಯಾರ್ಕ್‌ನ ಸ್ಕೈ ಡೆಕ್‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಸ್ಕೈಡೆಕ್ ‘ದಿ ಎಡ್ಜ್’ ಮತ್ತು ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತು ಇತರ ಅಂಶಗಳನ್ನು ಪರಿಶೀಲಿಸಿ, ಬೆಂಗಳೂರಿನಲ್ಲಿ ಕೂಡಾ ಇದೇ ರೀತಿಯ ನಿರ್ಮಾಣವನ್ನು ತರುವ ಬಗ್ಗೆ ಸುಳಿವು ನೀಡಿದ್ದರು.

ಇದನ್ನೂ ಓದಿ: ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...