Homeಮುಖಪುಟಬೆಂಗಳೂರು: ಗುಡಿಸಲುಗಳ ಧ್ವಂಸಗೈದ ಸರ್ಕಾರದಿಂದ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ!

ಬೆಂಗಳೂರು: ಗುಡಿಸಲುಗಳ ಧ್ವಂಸಗೈದ ಸರ್ಕಾರದಿಂದ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ!

ಅಕ್ರಮವಾಗಿ ಬಾಂಗ್ಲಾದೇಶಿಯರು ನೆಲೆಸಿದ್ದಾರೆ ಎಂಬ ಸುಳ್ಳು ವರದಿ ನಂಬಿ ಬಿಬಿಎಂಪಿ ಮಾಡಿದ ಧ್ವಂಸ ಕಾರ್ಯಾಚರಣೆಯಿಂದಾಗಿ ಒಬ್ಬೇ ಒಬ್ಬ ಅಕ್ರಮ ಬಾಂಗ್ಲಾದೇಶಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

- Advertisement -
- Advertisement -

ಬೆಂಗಳೂರಿನ ಮಾರತ್ತಹಳ್ಳಿ, ಬೆಳ್ಳಂದೂರು ಬಳಿಯ ಕರಿಯಮ್ಮನ ಅಗ್ರಹಾರ ಎಂಬ ಸ್ಲಂ ಒಂದರಲ್ಲಿ ತಮ್ಮ ಪಾಡಿಗೆ ತಾವು ದುಡಿದು ಬದುಕುತ್ತಿದ್ದ 200ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳ ಗುಡಿಸಲುಗಳನ್ನು ಜನವರಿ 19, 2020ರಂದು ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಬಲದೊಂದಿಗೆ ಧ್ವಂಸಗೊಳಿಸಿದ್ದರು. ಅದಕ್ಕೆ ಸರ್ಕಾರ ಕೊಟ್ಟಿದ್ದ ಕಾರಣ ಅಲ್ಲಿ ಬಾಂಗ್ಲದೇಶಿಯರು ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು. ಅದಕ್ಕೆ ಆಧಾರವಾಗಿದ್ದು ಎರಡು ದಿನಗಳ ಹಿಂದೆ ತಾನೇ ಸುವರ್ಣ ನ್ಯೂಸ್ ಮಾಡಿದ್ದು ಕಪೋಲಕಲ್ಪಿತ ಸುದ್ದಿ. ಆದರೆ ಸರ್ಕಾರದ ಈ ಕಾರ್ಯಾಚರಣೆಯಿಂದ ಬೀದಿಗೆ ಬಿದ್ದವರು ಮಾತ್ರ ಉತ್ತರ ಕರ್ನಾಟಕದಿಂದ ವಲಸೆ ಬಂದು ಬದುಕು ಕಟ್ಟಿಕೊಂಡಿದ್ದ ಅಮಾಯಕ ಕುಟುಂಬಗಳು. ಪಿಯುಸಿಎಲ್ ಸಂಘಟನೆಯು ಈ ವಿಚಾರದಲ್ಲಿ ಬಾಧಿತರಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಮಾತ್ರವಲ್ಲದೇ ಗುಡಿಸಲು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡುವಂತೆ ತಾಕೀತು ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಜಸ್ಟೀಸ್ ಶ್ರೀನಿವಾಸ ಶೆಟ್ಟಿಯವರನ್ನೊಳಗೊಂಡ ಪೀಠವು ಗುಡಿಸಲು ಧ್ವಂಸದಿಂದ ಬಾಧಿತರಾದ 131 ಕುಟುಂಬಗಳಿಗೆ ತಲಾ 14,100/- ರೂ ಪರಿಹಾರ ಹಣ ಮತ್ತು ಹೊಸದಾಗಿ ಗುಡಿಸಲು ನಿರ್ಮಾಣ ಮಾಡಲು ತಲಾ 29,000/- ಸೇರಿ ಕುಟುಂಬವೊಂದಕ್ಕೆ 43,100/- ರೂ ಬಿಡುಗಡೆ ಮಾಡುವಂತೆ ನವೆಂಬರ್ 19 ರಂದು ಆದೇಶಿಸಿತ್ತು. ಇದಕ್ಕೆ ಕರ್ನಾಟಕ ಸರ್ಕಾರ ಒಪ್ಪಿಕೊಂಡಿದ್ದು, ಇದೀಗ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ ಮಾಡಲು ಮುಂದಾಗಿದೆ.


ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್


ಈ ವರ್ಷದ ಜನವರಿಯಲ್ಲಿ ನಡೆದ ಸರ್ಕಾರದ ಅನಾಗರಿಕ ಈ ಧ್ವಂಸ ಕಾರ್ಯಾಚರಣೆಯಿಂದಾಗಿ ನೂರಾರು ವಲಸೆ ಕುಟುಂಬಗಳು ಸಮರ್ಪಕ ನೆಲೆಯಿಲ್ಲದೆ ಇಂದಿಗೂ ಪರಿತಪಿಸುತ್ತಿವೆ. ಅಲ್ಲಿ ಅಕ್ರಮವಾಗಿ ಬಾಂಗ್ಲಾದೇಶಿಯರು ನೆಲೆಸಿದ್ದಾರೆ ಎಂಬ ಸುಳ್ಳು ವರದಿ ನಂಬಿದ ಬಿಬಿಎಂಪಿ ಕನಿಷ್ಠ ಪರಿಶೀಲಿಸದೇ ನಡೆಸಿದ ದಾಳಿಯಿಂದಾಗಿ ಸಾವಿರಾರು ಜನ ನಿರಾಶ್ರಿತರಾಗಿದ್ದರು. ಆಗ ನಾನುಗೌರಿ ಪತ್ರಿಕೆ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಆದರೆ ಅಲ್ಲಿದ್ದವರು ಕರ್ನಾಟಕದ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರುಗಳಿಂದ ವಲಸೆ ಬಂದಿದ್ದ ಕಾರ್ಮಿಕರಾಗಿದ್ದರು. ಅವರ ಬಳಿ ವೋಟರ್ ಐಟಿ, ಆಧಾರ್ ಕಾರ್ಡ್, ವಿದ್ಯುತ್ ಬಿಲ್ ಎಲ್ಲ ಇದ್ದರೂ ಸಹ ಲೆಕ್ಕಿಸದೇ ಅವರ ಗುಡಿಸಲುಗಳನ್ನು ಧ್ವಂಸ ಮಾಡಲಾಗಿತ್ತು. ಆದರೆ ಒಬ್ಬೇ ಒಬ್ಬ ಅಕ್ರಮ ಬಾಂಗ್ಲಾದೇಶಿಯನ್ನು ಪತ್ತೆ ಹಚ್ಚಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ.

ಅಂದು ಆ ಜನರ ಆಕ್ರೋಶ ಯಾವ ರೀತಿ ಇತ್ತು ಎಂಬುದನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಬಹುದು.

ಮಾರತ್‌ಹಳ್ಳಿ, ವೈಟ್‌ಫೀಲ್ಡ್, ಮಹದೇವಪುರ, ಕಾಡುಗೋಡಿ, ಕೆ.ಆರ್.ಪುರ ಸೇರಿದಂತೆ ಬೆಂಗಳೂರು ನಗರದ ಹೊರವಲಯದಲ್ಲಿ ಉತ್ತರ ಭಾರತ ಮತ್ತು ಉತ್ತರ ಕರ್ನಾಟಕದಿಂದ ವಲಸೆ ಬಂದ ಸಾವಿರಾರು ಜನ ಕೂಲಿ ಕಾರ್ಮಿಕರು ಹಲವು ಸ್ಲಂಗಳಲ್ಲಿ ಬದುಕುತ್ತಿದ್ದಾರೆ. ಈ ‘ಸ್ಲಂ’ಗಳನ್ನು ನೆಲಬಾಡಿಗೆ ಸ್ಲಂಗಳೆಂದು ಕರೆಯುತ್ತಾರೆ. ಏಕೆಂದರೆ ಈ ಬಡವರು ಭೂಮಿಯ ಮಾಲೀಕರಿಗೆ ನೆಲಬಾಡಿಗೆ ಕೊಡುತ್ತಾ, ಅಲ್ಲಿ ಷೆಡ್ ನಿರ್ಮಿಸಿಕೊಂಡು ವಾಸಿಸುತ್ತಾರೆ.

ತುತ್ತು ಅನ್ನ ನೀಡುತ್ತಿರುವ ಬೆಂಗಳೂರು ಅವರಿಗೆ ಎಷ್ಟು ಅನಿವಾರ್ಯವೋ, ಬೆಂಗಳೂರಿಗೂ ಅವರು ಅಷ್ಟೇ ಅನಿವಾರ್ಯ ಎನ್ನುವುದು ಕಟು ಸತ್ಯ. ಏಕೆಂದರೆ ಮೇಲೆ ಹೆಸರಿಸಿದ ಏರಿಯಾಗಳಲ್ಲಿನ ಪೌರಕಾರ್ಮಿಕ ಕೆಲಸ, ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ, ಅಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗ ಮತ್ತು ಮೇಲ್ವರ್ಗದ ಮನೆ ಚಾಕರಿ, ಕಸವಿಂಗಡಣೆ, ಚಿಂದಿ ಆಯುವುದರಿಂದ ಹಿಡಿದು ಶಾಲಾ ವಾಹನಗಳ ಡ್ರೈವರ್‌ಗಳು, ಸೆಕ್ಯುರಿಟಿ ಗಾರ್ಡ್ ಕೆಲಸ, ಹೀಗೆ ವಿವಿಧ ರೀತಿಯ ಜೀವನೋಪಾಯ ಚಟುವಟಿಕೆಗಳಲ್ಲಿ ಕಡಿಮೆ ಕೂಲಿಗೆ ಈ ಜನ ದುಡಿಯುತ್ತಿದ್ದಾರೆ. ಇಂತಹ ಜನ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನೆಲೆಯೂ ಇಲ್ಲದೆ, ಕೆಲಸವೂ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದರು.

ಇದೀಗ ಈ ವಿಷಯದಲ್ಲಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ಅದು ಎಚ್ಚೆತ್ತುಕೊಂಡಿದೆ. ಆದರೆ ಕರಿಯಮ್ಮನ ಅಗ್ರಹಾರದಿಂದ 35 ಕಿ.ಮೀ ದೂರದ ಆನೇಕಲ್ ಬಳಿ ಪುನರ್ವಸತಿ ನಿರ್ಮಿಸಿಕೊಡುವುದಾಗಿ ಹೇಳುತ್ತಿದೆ. ಆದರೆ ಇಲ್ಲೆ ತಮ್ಮ ಕೆಲಸಗಳನ್ನು ಕಂಡುಕೊಂಡಿರುವ ಕಾರ್ಮಿಕರು ಅಲ್ಲಿಗೆ ತೆರಳಲು ನಿರಾಕರಿಸಿದ್ದಾರೆ. ಸದ್ಯಕ್ಕೆ 48 ಕುಟುಂಬಗಳಿಗೆ ತಲಾ 14,100/ ರೂ ಪರಿಹಾರ ಹಣ ನೀಡಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಗುಡಿಸಲು ಧ್ವಂಸದ ನೋವಿನ ದಿನಗಳು

ಈ ಅಮಾನುಷ ದಾಳಿ ನಡೆದ ಸಂದರ್ಭದಲ್ಲಿ ದೇಶಾದ್ಯಂತ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ತೀವ್ರ ಹೋರಾಟ ಆರಂಭವಾಗಿತ್ತು. ನೀವು ಭಾರತೀಯರೆಸಿಕೊಳ್ಳಲು ಸರ್ಕಾರ ಕೇಳುವ ದಾಖಲೆ ತೋರಿಸಬೇಕಾಗ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದೇ ಸಂದರ್ಭದಲ್ಲಿ ಜನವರಿ 12ರಂದು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯವರು ಟ್ವೀಟ್ ಮಾಡಿ ನನ್ನ ಕ್ಷೇತ್ರದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ಹಾಕಿಕೊಳ್ಳಲಾಗಿದೆ. ಅಲ್ಲಿ ಕಾನೂನುಬಾಹಿರ ಕೃತ್ಯಗಳು ನಡೆಯುತ್ತಿವೆ. ಇದರಿಂದ ಅಲ್ಲಿನ ನೈರ್ಮಲ್ಯ ಹಾಳಾಗಿದೆ. ಶಂಕಿತ ಬಾಂಗ್ಲಾದೇಶಿಯರಿದ್ದಾರೆ, ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದು ಹೇಳಿದ್ದರು.

ಅಂದು ಬಿಜೆಪಿ ಸಂಸದರೊಬ್ಬರ ಮಾಲೀಕತ್ವದಲ್ಲಿದ್ದು ಮುಸ್ಲಿಂ ವಿರೋಧಿ ಸುದ್ದಿ ಬಿತ್ತರಿಸುವ ಚಾನೆಲ್, ಬಿಜೆಪಿಯ ಸ್ಥಳೀಯ ಶಾಸಕ ಮತ್ತು ಬಿಜೆಪಿ ಆಡಳಿತದಡಿಯ ಪೊಲೀಸ್ ಕಮೀಷನರ್ ಮೂವರೂ ಸೇರಿ ಕಾನೂನಿಗೆ ವಿರುದ್ಧವಾದ ರೀತಿಯಲ್ಲಿ ಸುಮಾರು 200 ಗುಡಿಸಲುಗಳನ್ನು ಧ್ವಂಸವಾಗಲು ಕಾರಣರಾಗಿದ್ದಾರೆ.

ಇದೇ ಉತ್ತರ ಕರ್ನಾಟಕದಿಂದ ಬಂದ ಅರವಿಂದ ಲಿಂಬಾವಳಿಯವರಿಗೆ ಆಗ ಸಚಿವಗಿರಿ ಪಡೆಯುವುದೇ ಮುಖ್ಯವಾಗಿತ್ತು. ಅವರು ಗೆಲ್ಲುತ್ತಾ ಬಂದಿರುವುದು ಬೆಂಗಳೂರಿನ ಮಹದೇವಪುರ ಮೀಸಲು ಕ್ಷೇತ್ರದಿಂದ. ಮೊದಲ ಬಾರಿ ಅವರು ಗೆದ್ದಾಗ ‘ಬಾಂಗ್ಲಾದೇಶೀಯರು ವಾಸವಿದ್ದ ಈ ಜೋಪಡಿಗಳಿಂದಲೂ ಮತ ಪಡೆದಿದ್ದರು. ಇಲ್ಲಿ ಹಲವಾರು ಬಿಜೆಪಿ ಏಜೆಂಟರಿದ್ದು ಅವರೇ ಇವರಿಗೆ ವೋಟರ್‌ಐಡಿಯನ್ನೂ ಕೊಡಿಸಿದ್ದರು. ನಂತರ ಅವರಿಗೆ ಇಲ್ಲಿಂದ ಮತವೂ ಬೀಳಲಿಲ್ಲ. ಬಾಂಗ್ಲಾದೇಶೀಯರ ಕಥೆಯೂ ಶುರುವಾಯಿತು’ ಎಂದಿದ್ದರು ಸ್ಥಳೀಯ ಕಾರ್ಯಕರ್ತರು.

ಸದ್ಯಕ್ಕಾದರೂ ಬಾಧಿತ ಜನರಿಗೆ ಚೂರುಪಾರು ಪರಿಹಾರ ಸಿಗುತ್ತಿದೆ. ಶೆಡ್ಡುಗಳು ದೊರಕುತ್ತಿವೆ ಎನ್ನುವುದು ಸಮಾಧಾನದ ಸಂಗತಿಯಾಗಿದೆ.


ಇದನ್ನೂ ಓದಿ; ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...