Homeಮುಖಪುಟಬೆಂಗಳೂರು: ಗುಡಿಸಲುಗಳ ಧ್ವಂಸಗೈದ ಸರ್ಕಾರದಿಂದ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ!

ಬೆಂಗಳೂರು: ಗುಡಿಸಲುಗಳ ಧ್ವಂಸಗೈದ ಸರ್ಕಾರದಿಂದ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ!

ಅಕ್ರಮವಾಗಿ ಬಾಂಗ್ಲಾದೇಶಿಯರು ನೆಲೆಸಿದ್ದಾರೆ ಎಂಬ ಸುಳ್ಳು ವರದಿ ನಂಬಿ ಬಿಬಿಎಂಪಿ ಮಾಡಿದ ಧ್ವಂಸ ಕಾರ್ಯಾಚರಣೆಯಿಂದಾಗಿ ಒಬ್ಬೇ ಒಬ್ಬ ಅಕ್ರಮ ಬಾಂಗ್ಲಾದೇಶಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

- Advertisement -
- Advertisement -

ಬೆಂಗಳೂರಿನ ಮಾರತ್ತಹಳ್ಳಿ, ಬೆಳ್ಳಂದೂರು ಬಳಿಯ ಕರಿಯಮ್ಮನ ಅಗ್ರಹಾರ ಎಂಬ ಸ್ಲಂ ಒಂದರಲ್ಲಿ ತಮ್ಮ ಪಾಡಿಗೆ ತಾವು ದುಡಿದು ಬದುಕುತ್ತಿದ್ದ 200ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳ ಗುಡಿಸಲುಗಳನ್ನು ಜನವರಿ 19, 2020ರಂದು ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಬಲದೊಂದಿಗೆ ಧ್ವಂಸಗೊಳಿಸಿದ್ದರು. ಅದಕ್ಕೆ ಸರ್ಕಾರ ಕೊಟ್ಟಿದ್ದ ಕಾರಣ ಅಲ್ಲಿ ಬಾಂಗ್ಲದೇಶಿಯರು ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು. ಅದಕ್ಕೆ ಆಧಾರವಾಗಿದ್ದು ಎರಡು ದಿನಗಳ ಹಿಂದೆ ತಾನೇ ಸುವರ್ಣ ನ್ಯೂಸ್ ಮಾಡಿದ್ದು ಕಪೋಲಕಲ್ಪಿತ ಸುದ್ದಿ. ಆದರೆ ಸರ್ಕಾರದ ಈ ಕಾರ್ಯಾಚರಣೆಯಿಂದ ಬೀದಿಗೆ ಬಿದ್ದವರು ಮಾತ್ರ ಉತ್ತರ ಕರ್ನಾಟಕದಿಂದ ವಲಸೆ ಬಂದು ಬದುಕು ಕಟ್ಟಿಕೊಂಡಿದ್ದ ಅಮಾಯಕ ಕುಟುಂಬಗಳು. ಪಿಯುಸಿಎಲ್ ಸಂಘಟನೆಯು ಈ ವಿಚಾರದಲ್ಲಿ ಬಾಧಿತರಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಮಾತ್ರವಲ್ಲದೇ ಗುಡಿಸಲು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡುವಂತೆ ತಾಕೀತು ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಜಸ್ಟೀಸ್ ಶ್ರೀನಿವಾಸ ಶೆಟ್ಟಿಯವರನ್ನೊಳಗೊಂಡ ಪೀಠವು ಗುಡಿಸಲು ಧ್ವಂಸದಿಂದ ಬಾಧಿತರಾದ 131 ಕುಟುಂಬಗಳಿಗೆ ತಲಾ 14,100/- ರೂ ಪರಿಹಾರ ಹಣ ಮತ್ತು ಹೊಸದಾಗಿ ಗುಡಿಸಲು ನಿರ್ಮಾಣ ಮಾಡಲು ತಲಾ 29,000/- ಸೇರಿ ಕುಟುಂಬವೊಂದಕ್ಕೆ 43,100/- ರೂ ಬಿಡುಗಡೆ ಮಾಡುವಂತೆ ನವೆಂಬರ್ 19 ರಂದು ಆದೇಶಿಸಿತ್ತು. ಇದಕ್ಕೆ ಕರ್ನಾಟಕ ಸರ್ಕಾರ ಒಪ್ಪಿಕೊಂಡಿದ್ದು, ಇದೀಗ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ ಮಾಡಲು ಮುಂದಾಗಿದೆ.


ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್


ಈ ವರ್ಷದ ಜನವರಿಯಲ್ಲಿ ನಡೆದ ಸರ್ಕಾರದ ಅನಾಗರಿಕ ಈ ಧ್ವಂಸ ಕಾರ್ಯಾಚರಣೆಯಿಂದಾಗಿ ನೂರಾರು ವಲಸೆ ಕುಟುಂಬಗಳು ಸಮರ್ಪಕ ನೆಲೆಯಿಲ್ಲದೆ ಇಂದಿಗೂ ಪರಿತಪಿಸುತ್ತಿವೆ. ಅಲ್ಲಿ ಅಕ್ರಮವಾಗಿ ಬಾಂಗ್ಲಾದೇಶಿಯರು ನೆಲೆಸಿದ್ದಾರೆ ಎಂಬ ಸುಳ್ಳು ವರದಿ ನಂಬಿದ ಬಿಬಿಎಂಪಿ ಕನಿಷ್ಠ ಪರಿಶೀಲಿಸದೇ ನಡೆಸಿದ ದಾಳಿಯಿಂದಾಗಿ ಸಾವಿರಾರು ಜನ ನಿರಾಶ್ರಿತರಾಗಿದ್ದರು. ಆಗ ನಾನುಗೌರಿ ಪತ್ರಿಕೆ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಆದರೆ ಅಲ್ಲಿದ್ದವರು ಕರ್ನಾಟಕದ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರುಗಳಿಂದ ವಲಸೆ ಬಂದಿದ್ದ ಕಾರ್ಮಿಕರಾಗಿದ್ದರು. ಅವರ ಬಳಿ ವೋಟರ್ ಐಟಿ, ಆಧಾರ್ ಕಾರ್ಡ್, ವಿದ್ಯುತ್ ಬಿಲ್ ಎಲ್ಲ ಇದ್ದರೂ ಸಹ ಲೆಕ್ಕಿಸದೇ ಅವರ ಗುಡಿಸಲುಗಳನ್ನು ಧ್ವಂಸ ಮಾಡಲಾಗಿತ್ತು. ಆದರೆ ಒಬ್ಬೇ ಒಬ್ಬ ಅಕ್ರಮ ಬಾಂಗ್ಲಾದೇಶಿಯನ್ನು ಪತ್ತೆ ಹಚ್ಚಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ.

ಅಂದು ಆ ಜನರ ಆಕ್ರೋಶ ಯಾವ ರೀತಿ ಇತ್ತು ಎಂಬುದನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಬಹುದು.

ಮಾರತ್‌ಹಳ್ಳಿ, ವೈಟ್‌ಫೀಲ್ಡ್, ಮಹದೇವಪುರ, ಕಾಡುಗೋಡಿ, ಕೆ.ಆರ್.ಪುರ ಸೇರಿದಂತೆ ಬೆಂಗಳೂರು ನಗರದ ಹೊರವಲಯದಲ್ಲಿ ಉತ್ತರ ಭಾರತ ಮತ್ತು ಉತ್ತರ ಕರ್ನಾಟಕದಿಂದ ವಲಸೆ ಬಂದ ಸಾವಿರಾರು ಜನ ಕೂಲಿ ಕಾರ್ಮಿಕರು ಹಲವು ಸ್ಲಂಗಳಲ್ಲಿ ಬದುಕುತ್ತಿದ್ದಾರೆ. ಈ ‘ಸ್ಲಂ’ಗಳನ್ನು ನೆಲಬಾಡಿಗೆ ಸ್ಲಂಗಳೆಂದು ಕರೆಯುತ್ತಾರೆ. ಏಕೆಂದರೆ ಈ ಬಡವರು ಭೂಮಿಯ ಮಾಲೀಕರಿಗೆ ನೆಲಬಾಡಿಗೆ ಕೊಡುತ್ತಾ, ಅಲ್ಲಿ ಷೆಡ್ ನಿರ್ಮಿಸಿಕೊಂಡು ವಾಸಿಸುತ್ತಾರೆ.

ತುತ್ತು ಅನ್ನ ನೀಡುತ್ತಿರುವ ಬೆಂಗಳೂರು ಅವರಿಗೆ ಎಷ್ಟು ಅನಿವಾರ್ಯವೋ, ಬೆಂಗಳೂರಿಗೂ ಅವರು ಅಷ್ಟೇ ಅನಿವಾರ್ಯ ಎನ್ನುವುದು ಕಟು ಸತ್ಯ. ಏಕೆಂದರೆ ಮೇಲೆ ಹೆಸರಿಸಿದ ಏರಿಯಾಗಳಲ್ಲಿನ ಪೌರಕಾರ್ಮಿಕ ಕೆಲಸ, ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ, ಅಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗ ಮತ್ತು ಮೇಲ್ವರ್ಗದ ಮನೆ ಚಾಕರಿ, ಕಸವಿಂಗಡಣೆ, ಚಿಂದಿ ಆಯುವುದರಿಂದ ಹಿಡಿದು ಶಾಲಾ ವಾಹನಗಳ ಡ್ರೈವರ್‌ಗಳು, ಸೆಕ್ಯುರಿಟಿ ಗಾರ್ಡ್ ಕೆಲಸ, ಹೀಗೆ ವಿವಿಧ ರೀತಿಯ ಜೀವನೋಪಾಯ ಚಟುವಟಿಕೆಗಳಲ್ಲಿ ಕಡಿಮೆ ಕೂಲಿಗೆ ಈ ಜನ ದುಡಿಯುತ್ತಿದ್ದಾರೆ. ಇಂತಹ ಜನ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನೆಲೆಯೂ ಇಲ್ಲದೆ, ಕೆಲಸವೂ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದರು.

ಇದೀಗ ಈ ವಿಷಯದಲ್ಲಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ಅದು ಎಚ್ಚೆತ್ತುಕೊಂಡಿದೆ. ಆದರೆ ಕರಿಯಮ್ಮನ ಅಗ್ರಹಾರದಿಂದ 35 ಕಿ.ಮೀ ದೂರದ ಆನೇಕಲ್ ಬಳಿ ಪುನರ್ವಸತಿ ನಿರ್ಮಿಸಿಕೊಡುವುದಾಗಿ ಹೇಳುತ್ತಿದೆ. ಆದರೆ ಇಲ್ಲೆ ತಮ್ಮ ಕೆಲಸಗಳನ್ನು ಕಂಡುಕೊಂಡಿರುವ ಕಾರ್ಮಿಕರು ಅಲ್ಲಿಗೆ ತೆರಳಲು ನಿರಾಕರಿಸಿದ್ದಾರೆ. ಸದ್ಯಕ್ಕೆ 48 ಕುಟುಂಬಗಳಿಗೆ ತಲಾ 14,100/ ರೂ ಪರಿಹಾರ ಹಣ ನೀಡಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಗುಡಿಸಲು ಧ್ವಂಸದ ನೋವಿನ ದಿನಗಳು

ಈ ಅಮಾನುಷ ದಾಳಿ ನಡೆದ ಸಂದರ್ಭದಲ್ಲಿ ದೇಶಾದ್ಯಂತ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ತೀವ್ರ ಹೋರಾಟ ಆರಂಭವಾಗಿತ್ತು. ನೀವು ಭಾರತೀಯರೆಸಿಕೊಳ್ಳಲು ಸರ್ಕಾರ ಕೇಳುವ ದಾಖಲೆ ತೋರಿಸಬೇಕಾಗ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದೇ ಸಂದರ್ಭದಲ್ಲಿ ಜನವರಿ 12ರಂದು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯವರು ಟ್ವೀಟ್ ಮಾಡಿ ನನ್ನ ಕ್ಷೇತ್ರದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ಹಾಕಿಕೊಳ್ಳಲಾಗಿದೆ. ಅಲ್ಲಿ ಕಾನೂನುಬಾಹಿರ ಕೃತ್ಯಗಳು ನಡೆಯುತ್ತಿವೆ. ಇದರಿಂದ ಅಲ್ಲಿನ ನೈರ್ಮಲ್ಯ ಹಾಳಾಗಿದೆ. ಶಂಕಿತ ಬಾಂಗ್ಲಾದೇಶಿಯರಿದ್ದಾರೆ, ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದು ಹೇಳಿದ್ದರು.

ಅಂದು ಬಿಜೆಪಿ ಸಂಸದರೊಬ್ಬರ ಮಾಲೀಕತ್ವದಲ್ಲಿದ್ದು ಮುಸ್ಲಿಂ ವಿರೋಧಿ ಸುದ್ದಿ ಬಿತ್ತರಿಸುವ ಚಾನೆಲ್, ಬಿಜೆಪಿಯ ಸ್ಥಳೀಯ ಶಾಸಕ ಮತ್ತು ಬಿಜೆಪಿ ಆಡಳಿತದಡಿಯ ಪೊಲೀಸ್ ಕಮೀಷನರ್ ಮೂವರೂ ಸೇರಿ ಕಾನೂನಿಗೆ ವಿರುದ್ಧವಾದ ರೀತಿಯಲ್ಲಿ ಸುಮಾರು 200 ಗುಡಿಸಲುಗಳನ್ನು ಧ್ವಂಸವಾಗಲು ಕಾರಣರಾಗಿದ್ದಾರೆ.

ಇದೇ ಉತ್ತರ ಕರ್ನಾಟಕದಿಂದ ಬಂದ ಅರವಿಂದ ಲಿಂಬಾವಳಿಯವರಿಗೆ ಆಗ ಸಚಿವಗಿರಿ ಪಡೆಯುವುದೇ ಮುಖ್ಯವಾಗಿತ್ತು. ಅವರು ಗೆಲ್ಲುತ್ತಾ ಬಂದಿರುವುದು ಬೆಂಗಳೂರಿನ ಮಹದೇವಪುರ ಮೀಸಲು ಕ್ಷೇತ್ರದಿಂದ. ಮೊದಲ ಬಾರಿ ಅವರು ಗೆದ್ದಾಗ ‘ಬಾಂಗ್ಲಾದೇಶೀಯರು ವಾಸವಿದ್ದ ಈ ಜೋಪಡಿಗಳಿಂದಲೂ ಮತ ಪಡೆದಿದ್ದರು. ಇಲ್ಲಿ ಹಲವಾರು ಬಿಜೆಪಿ ಏಜೆಂಟರಿದ್ದು ಅವರೇ ಇವರಿಗೆ ವೋಟರ್‌ಐಡಿಯನ್ನೂ ಕೊಡಿಸಿದ್ದರು. ನಂತರ ಅವರಿಗೆ ಇಲ್ಲಿಂದ ಮತವೂ ಬೀಳಲಿಲ್ಲ. ಬಾಂಗ್ಲಾದೇಶೀಯರ ಕಥೆಯೂ ಶುರುವಾಯಿತು’ ಎಂದಿದ್ದರು ಸ್ಥಳೀಯ ಕಾರ್ಯಕರ್ತರು.

ಸದ್ಯಕ್ಕಾದರೂ ಬಾಧಿತ ಜನರಿಗೆ ಚೂರುಪಾರು ಪರಿಹಾರ ಸಿಗುತ್ತಿದೆ. ಶೆಡ್ಡುಗಳು ದೊರಕುತ್ತಿವೆ ಎನ್ನುವುದು ಸಮಾಧಾನದ ಸಂಗತಿಯಾಗಿದೆ.


ಇದನ್ನೂ ಓದಿ; ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...