Homeಮುಖಪುಟಬೆಂಗಳೂರು: ಗುಡಿಸಲುಗಳ ಧ್ವಂಸಗೈದ ಸರ್ಕಾರದಿಂದ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ!

ಬೆಂಗಳೂರು: ಗುಡಿಸಲುಗಳ ಧ್ವಂಸಗೈದ ಸರ್ಕಾರದಿಂದ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ!

ಅಕ್ರಮವಾಗಿ ಬಾಂಗ್ಲಾದೇಶಿಯರು ನೆಲೆಸಿದ್ದಾರೆ ಎಂಬ ಸುಳ್ಳು ವರದಿ ನಂಬಿ ಬಿಬಿಎಂಪಿ ಮಾಡಿದ ಧ್ವಂಸ ಕಾರ್ಯಾಚರಣೆಯಿಂದಾಗಿ ಒಬ್ಬೇ ಒಬ್ಬ ಅಕ್ರಮ ಬಾಂಗ್ಲಾದೇಶಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

- Advertisement -
- Advertisement -

ಬೆಂಗಳೂರಿನ ಮಾರತ್ತಹಳ್ಳಿ, ಬೆಳ್ಳಂದೂರು ಬಳಿಯ ಕರಿಯಮ್ಮನ ಅಗ್ರಹಾರ ಎಂಬ ಸ್ಲಂ ಒಂದರಲ್ಲಿ ತಮ್ಮ ಪಾಡಿಗೆ ತಾವು ದುಡಿದು ಬದುಕುತ್ತಿದ್ದ 200ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳ ಗುಡಿಸಲುಗಳನ್ನು ಜನವರಿ 19, 2020ರಂದು ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಬಲದೊಂದಿಗೆ ಧ್ವಂಸಗೊಳಿಸಿದ್ದರು. ಅದಕ್ಕೆ ಸರ್ಕಾರ ಕೊಟ್ಟಿದ್ದ ಕಾರಣ ಅಲ್ಲಿ ಬಾಂಗ್ಲದೇಶಿಯರು ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು. ಅದಕ್ಕೆ ಆಧಾರವಾಗಿದ್ದು ಎರಡು ದಿನಗಳ ಹಿಂದೆ ತಾನೇ ಸುವರ್ಣ ನ್ಯೂಸ್ ಮಾಡಿದ್ದು ಕಪೋಲಕಲ್ಪಿತ ಸುದ್ದಿ. ಆದರೆ ಸರ್ಕಾರದ ಈ ಕಾರ್ಯಾಚರಣೆಯಿಂದ ಬೀದಿಗೆ ಬಿದ್ದವರು ಮಾತ್ರ ಉತ್ತರ ಕರ್ನಾಟಕದಿಂದ ವಲಸೆ ಬಂದು ಬದುಕು ಕಟ್ಟಿಕೊಂಡಿದ್ದ ಅಮಾಯಕ ಕುಟುಂಬಗಳು. ಪಿಯುಸಿಎಲ್ ಸಂಘಟನೆಯು ಈ ವಿಚಾರದಲ್ಲಿ ಬಾಧಿತರಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಮಾತ್ರವಲ್ಲದೇ ಗುಡಿಸಲು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡುವಂತೆ ತಾಕೀತು ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಜಸ್ಟೀಸ್ ಶ್ರೀನಿವಾಸ ಶೆಟ್ಟಿಯವರನ್ನೊಳಗೊಂಡ ಪೀಠವು ಗುಡಿಸಲು ಧ್ವಂಸದಿಂದ ಬಾಧಿತರಾದ 131 ಕುಟುಂಬಗಳಿಗೆ ತಲಾ 14,100/- ರೂ ಪರಿಹಾರ ಹಣ ಮತ್ತು ಹೊಸದಾಗಿ ಗುಡಿಸಲು ನಿರ್ಮಾಣ ಮಾಡಲು ತಲಾ 29,000/- ಸೇರಿ ಕುಟುಂಬವೊಂದಕ್ಕೆ 43,100/- ರೂ ಬಿಡುಗಡೆ ಮಾಡುವಂತೆ ನವೆಂಬರ್ 19 ರಂದು ಆದೇಶಿಸಿತ್ತು. ಇದಕ್ಕೆ ಕರ್ನಾಟಕ ಸರ್ಕಾರ ಒಪ್ಪಿಕೊಂಡಿದ್ದು, ಇದೀಗ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ ಮಾಡಲು ಮುಂದಾಗಿದೆ.


ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್


ಈ ವರ್ಷದ ಜನವರಿಯಲ್ಲಿ ನಡೆದ ಸರ್ಕಾರದ ಅನಾಗರಿಕ ಈ ಧ್ವಂಸ ಕಾರ್ಯಾಚರಣೆಯಿಂದಾಗಿ ನೂರಾರು ವಲಸೆ ಕುಟುಂಬಗಳು ಸಮರ್ಪಕ ನೆಲೆಯಿಲ್ಲದೆ ಇಂದಿಗೂ ಪರಿತಪಿಸುತ್ತಿವೆ. ಅಲ್ಲಿ ಅಕ್ರಮವಾಗಿ ಬಾಂಗ್ಲಾದೇಶಿಯರು ನೆಲೆಸಿದ್ದಾರೆ ಎಂಬ ಸುಳ್ಳು ವರದಿ ನಂಬಿದ ಬಿಬಿಎಂಪಿ ಕನಿಷ್ಠ ಪರಿಶೀಲಿಸದೇ ನಡೆಸಿದ ದಾಳಿಯಿಂದಾಗಿ ಸಾವಿರಾರು ಜನ ನಿರಾಶ್ರಿತರಾಗಿದ್ದರು. ಆಗ ನಾನುಗೌರಿ ಪತ್ರಿಕೆ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಆದರೆ ಅಲ್ಲಿದ್ದವರು ಕರ್ನಾಟಕದ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರುಗಳಿಂದ ವಲಸೆ ಬಂದಿದ್ದ ಕಾರ್ಮಿಕರಾಗಿದ್ದರು. ಅವರ ಬಳಿ ವೋಟರ್ ಐಟಿ, ಆಧಾರ್ ಕಾರ್ಡ್, ವಿದ್ಯುತ್ ಬಿಲ್ ಎಲ್ಲ ಇದ್ದರೂ ಸಹ ಲೆಕ್ಕಿಸದೇ ಅವರ ಗುಡಿಸಲುಗಳನ್ನು ಧ್ವಂಸ ಮಾಡಲಾಗಿತ್ತು. ಆದರೆ ಒಬ್ಬೇ ಒಬ್ಬ ಅಕ್ರಮ ಬಾಂಗ್ಲಾದೇಶಿಯನ್ನು ಪತ್ತೆ ಹಚ್ಚಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ.

ಅಂದು ಆ ಜನರ ಆಕ್ರೋಶ ಯಾವ ರೀತಿ ಇತ್ತು ಎಂಬುದನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಬಹುದು.

ಮಾರತ್‌ಹಳ್ಳಿ, ವೈಟ್‌ಫೀಲ್ಡ್, ಮಹದೇವಪುರ, ಕಾಡುಗೋಡಿ, ಕೆ.ಆರ್.ಪುರ ಸೇರಿದಂತೆ ಬೆಂಗಳೂರು ನಗರದ ಹೊರವಲಯದಲ್ಲಿ ಉತ್ತರ ಭಾರತ ಮತ್ತು ಉತ್ತರ ಕರ್ನಾಟಕದಿಂದ ವಲಸೆ ಬಂದ ಸಾವಿರಾರು ಜನ ಕೂಲಿ ಕಾರ್ಮಿಕರು ಹಲವು ಸ್ಲಂಗಳಲ್ಲಿ ಬದುಕುತ್ತಿದ್ದಾರೆ. ಈ ‘ಸ್ಲಂ’ಗಳನ್ನು ನೆಲಬಾಡಿಗೆ ಸ್ಲಂಗಳೆಂದು ಕರೆಯುತ್ತಾರೆ. ಏಕೆಂದರೆ ಈ ಬಡವರು ಭೂಮಿಯ ಮಾಲೀಕರಿಗೆ ನೆಲಬಾಡಿಗೆ ಕೊಡುತ್ತಾ, ಅಲ್ಲಿ ಷೆಡ್ ನಿರ್ಮಿಸಿಕೊಂಡು ವಾಸಿಸುತ್ತಾರೆ.

ತುತ್ತು ಅನ್ನ ನೀಡುತ್ತಿರುವ ಬೆಂಗಳೂರು ಅವರಿಗೆ ಎಷ್ಟು ಅನಿವಾರ್ಯವೋ, ಬೆಂಗಳೂರಿಗೂ ಅವರು ಅಷ್ಟೇ ಅನಿವಾರ್ಯ ಎನ್ನುವುದು ಕಟು ಸತ್ಯ. ಏಕೆಂದರೆ ಮೇಲೆ ಹೆಸರಿಸಿದ ಏರಿಯಾಗಳಲ್ಲಿನ ಪೌರಕಾರ್ಮಿಕ ಕೆಲಸ, ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ, ಅಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗ ಮತ್ತು ಮೇಲ್ವರ್ಗದ ಮನೆ ಚಾಕರಿ, ಕಸವಿಂಗಡಣೆ, ಚಿಂದಿ ಆಯುವುದರಿಂದ ಹಿಡಿದು ಶಾಲಾ ವಾಹನಗಳ ಡ್ರೈವರ್‌ಗಳು, ಸೆಕ್ಯುರಿಟಿ ಗಾರ್ಡ್ ಕೆಲಸ, ಹೀಗೆ ವಿವಿಧ ರೀತಿಯ ಜೀವನೋಪಾಯ ಚಟುವಟಿಕೆಗಳಲ್ಲಿ ಕಡಿಮೆ ಕೂಲಿಗೆ ಈ ಜನ ದುಡಿಯುತ್ತಿದ್ದಾರೆ. ಇಂತಹ ಜನ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನೆಲೆಯೂ ಇಲ್ಲದೆ, ಕೆಲಸವೂ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದರು.

ಇದೀಗ ಈ ವಿಷಯದಲ್ಲಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ಅದು ಎಚ್ಚೆತ್ತುಕೊಂಡಿದೆ. ಆದರೆ ಕರಿಯಮ್ಮನ ಅಗ್ರಹಾರದಿಂದ 35 ಕಿ.ಮೀ ದೂರದ ಆನೇಕಲ್ ಬಳಿ ಪುನರ್ವಸತಿ ನಿರ್ಮಿಸಿಕೊಡುವುದಾಗಿ ಹೇಳುತ್ತಿದೆ. ಆದರೆ ಇಲ್ಲೆ ತಮ್ಮ ಕೆಲಸಗಳನ್ನು ಕಂಡುಕೊಂಡಿರುವ ಕಾರ್ಮಿಕರು ಅಲ್ಲಿಗೆ ತೆರಳಲು ನಿರಾಕರಿಸಿದ್ದಾರೆ. ಸದ್ಯಕ್ಕೆ 48 ಕುಟುಂಬಗಳಿಗೆ ತಲಾ 14,100/ ರೂ ಪರಿಹಾರ ಹಣ ನೀಡಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಗುಡಿಸಲು ಧ್ವಂಸದ ನೋವಿನ ದಿನಗಳು

ಈ ಅಮಾನುಷ ದಾಳಿ ನಡೆದ ಸಂದರ್ಭದಲ್ಲಿ ದೇಶಾದ್ಯಂತ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ತೀವ್ರ ಹೋರಾಟ ಆರಂಭವಾಗಿತ್ತು. ನೀವು ಭಾರತೀಯರೆಸಿಕೊಳ್ಳಲು ಸರ್ಕಾರ ಕೇಳುವ ದಾಖಲೆ ತೋರಿಸಬೇಕಾಗ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದೇ ಸಂದರ್ಭದಲ್ಲಿ ಜನವರಿ 12ರಂದು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯವರು ಟ್ವೀಟ್ ಮಾಡಿ ನನ್ನ ಕ್ಷೇತ್ರದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ಹಾಕಿಕೊಳ್ಳಲಾಗಿದೆ. ಅಲ್ಲಿ ಕಾನೂನುಬಾಹಿರ ಕೃತ್ಯಗಳು ನಡೆಯುತ್ತಿವೆ. ಇದರಿಂದ ಅಲ್ಲಿನ ನೈರ್ಮಲ್ಯ ಹಾಳಾಗಿದೆ. ಶಂಕಿತ ಬಾಂಗ್ಲಾದೇಶಿಯರಿದ್ದಾರೆ, ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದು ಹೇಳಿದ್ದರು.

ಅಂದು ಬಿಜೆಪಿ ಸಂಸದರೊಬ್ಬರ ಮಾಲೀಕತ್ವದಲ್ಲಿದ್ದು ಮುಸ್ಲಿಂ ವಿರೋಧಿ ಸುದ್ದಿ ಬಿತ್ತರಿಸುವ ಚಾನೆಲ್, ಬಿಜೆಪಿಯ ಸ್ಥಳೀಯ ಶಾಸಕ ಮತ್ತು ಬಿಜೆಪಿ ಆಡಳಿತದಡಿಯ ಪೊಲೀಸ್ ಕಮೀಷನರ್ ಮೂವರೂ ಸೇರಿ ಕಾನೂನಿಗೆ ವಿರುದ್ಧವಾದ ರೀತಿಯಲ್ಲಿ ಸುಮಾರು 200 ಗುಡಿಸಲುಗಳನ್ನು ಧ್ವಂಸವಾಗಲು ಕಾರಣರಾಗಿದ್ದಾರೆ.

ಇದೇ ಉತ್ತರ ಕರ್ನಾಟಕದಿಂದ ಬಂದ ಅರವಿಂದ ಲಿಂಬಾವಳಿಯವರಿಗೆ ಆಗ ಸಚಿವಗಿರಿ ಪಡೆಯುವುದೇ ಮುಖ್ಯವಾಗಿತ್ತು. ಅವರು ಗೆಲ್ಲುತ್ತಾ ಬಂದಿರುವುದು ಬೆಂಗಳೂರಿನ ಮಹದೇವಪುರ ಮೀಸಲು ಕ್ಷೇತ್ರದಿಂದ. ಮೊದಲ ಬಾರಿ ಅವರು ಗೆದ್ದಾಗ ‘ಬಾಂಗ್ಲಾದೇಶೀಯರು ವಾಸವಿದ್ದ ಈ ಜೋಪಡಿಗಳಿಂದಲೂ ಮತ ಪಡೆದಿದ್ದರು. ಇಲ್ಲಿ ಹಲವಾರು ಬಿಜೆಪಿ ಏಜೆಂಟರಿದ್ದು ಅವರೇ ಇವರಿಗೆ ವೋಟರ್‌ಐಡಿಯನ್ನೂ ಕೊಡಿಸಿದ್ದರು. ನಂತರ ಅವರಿಗೆ ಇಲ್ಲಿಂದ ಮತವೂ ಬೀಳಲಿಲ್ಲ. ಬಾಂಗ್ಲಾದೇಶೀಯರ ಕಥೆಯೂ ಶುರುವಾಯಿತು’ ಎಂದಿದ್ದರು ಸ್ಥಳೀಯ ಕಾರ್ಯಕರ್ತರು.

ಸದ್ಯಕ್ಕಾದರೂ ಬಾಧಿತ ಜನರಿಗೆ ಚೂರುಪಾರು ಪರಿಹಾರ ಸಿಗುತ್ತಿದೆ. ಶೆಡ್ಡುಗಳು ದೊರಕುತ್ತಿವೆ ಎನ್ನುವುದು ಸಮಾಧಾನದ ಸಂಗತಿಯಾಗಿದೆ.


ಇದನ್ನೂ ಓದಿ; ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...