Homeಮುಖಪುಟಬೆಂಗಳೂರು: ಗುಡಿಸಲುಗಳ ಧ್ವಂಸಗೈದ ಸರ್ಕಾರದಿಂದ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ!

ಬೆಂಗಳೂರು: ಗುಡಿಸಲುಗಳ ಧ್ವಂಸಗೈದ ಸರ್ಕಾರದಿಂದ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ!

ಅಕ್ರಮವಾಗಿ ಬಾಂಗ್ಲಾದೇಶಿಯರು ನೆಲೆಸಿದ್ದಾರೆ ಎಂಬ ಸುಳ್ಳು ವರದಿ ನಂಬಿ ಬಿಬಿಎಂಪಿ ಮಾಡಿದ ಧ್ವಂಸ ಕಾರ್ಯಾಚರಣೆಯಿಂದಾಗಿ ಒಬ್ಬೇ ಒಬ್ಬ ಅಕ್ರಮ ಬಾಂಗ್ಲಾದೇಶಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

- Advertisement -
- Advertisement -

ಬೆಂಗಳೂರಿನ ಮಾರತ್ತಹಳ್ಳಿ, ಬೆಳ್ಳಂದೂರು ಬಳಿಯ ಕರಿಯಮ್ಮನ ಅಗ್ರಹಾರ ಎಂಬ ಸ್ಲಂ ಒಂದರಲ್ಲಿ ತಮ್ಮ ಪಾಡಿಗೆ ತಾವು ದುಡಿದು ಬದುಕುತ್ತಿದ್ದ 200ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳ ಗುಡಿಸಲುಗಳನ್ನು ಜನವರಿ 19, 2020ರಂದು ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಬಲದೊಂದಿಗೆ ಧ್ವಂಸಗೊಳಿಸಿದ್ದರು. ಅದಕ್ಕೆ ಸರ್ಕಾರ ಕೊಟ್ಟಿದ್ದ ಕಾರಣ ಅಲ್ಲಿ ಬಾಂಗ್ಲದೇಶಿಯರು ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು. ಅದಕ್ಕೆ ಆಧಾರವಾಗಿದ್ದು ಎರಡು ದಿನಗಳ ಹಿಂದೆ ತಾನೇ ಸುವರ್ಣ ನ್ಯೂಸ್ ಮಾಡಿದ್ದು ಕಪೋಲಕಲ್ಪಿತ ಸುದ್ದಿ. ಆದರೆ ಸರ್ಕಾರದ ಈ ಕಾರ್ಯಾಚರಣೆಯಿಂದ ಬೀದಿಗೆ ಬಿದ್ದವರು ಮಾತ್ರ ಉತ್ತರ ಕರ್ನಾಟಕದಿಂದ ವಲಸೆ ಬಂದು ಬದುಕು ಕಟ್ಟಿಕೊಂಡಿದ್ದ ಅಮಾಯಕ ಕುಟುಂಬಗಳು. ಪಿಯುಸಿಎಲ್ ಸಂಘಟನೆಯು ಈ ವಿಚಾರದಲ್ಲಿ ಬಾಧಿತರಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಮಾತ್ರವಲ್ಲದೇ ಗುಡಿಸಲು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡುವಂತೆ ತಾಕೀತು ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಜಸ್ಟೀಸ್ ಶ್ರೀನಿವಾಸ ಶೆಟ್ಟಿಯವರನ್ನೊಳಗೊಂಡ ಪೀಠವು ಗುಡಿಸಲು ಧ್ವಂಸದಿಂದ ಬಾಧಿತರಾದ 131 ಕುಟುಂಬಗಳಿಗೆ ತಲಾ 14,100/- ರೂ ಪರಿಹಾರ ಹಣ ಮತ್ತು ಹೊಸದಾಗಿ ಗುಡಿಸಲು ನಿರ್ಮಾಣ ಮಾಡಲು ತಲಾ 29,000/- ಸೇರಿ ಕುಟುಂಬವೊಂದಕ್ಕೆ 43,100/- ರೂ ಬಿಡುಗಡೆ ಮಾಡುವಂತೆ ನವೆಂಬರ್ 19 ರಂದು ಆದೇಶಿಸಿತ್ತು. ಇದಕ್ಕೆ ಕರ್ನಾಟಕ ಸರ್ಕಾರ ಒಪ್ಪಿಕೊಂಡಿದ್ದು, ಇದೀಗ 11 ತಿಂಗಳುಗಳ ನಂತರ ಪರಿಹಾರ ಹಣ ಬಿಡುಗಡೆ ಮಾಡಲು ಮುಂದಾಗಿದೆ.


ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್


ಈ ವರ್ಷದ ಜನವರಿಯಲ್ಲಿ ನಡೆದ ಸರ್ಕಾರದ ಅನಾಗರಿಕ ಈ ಧ್ವಂಸ ಕಾರ್ಯಾಚರಣೆಯಿಂದಾಗಿ ನೂರಾರು ವಲಸೆ ಕುಟುಂಬಗಳು ಸಮರ್ಪಕ ನೆಲೆಯಿಲ್ಲದೆ ಇಂದಿಗೂ ಪರಿತಪಿಸುತ್ತಿವೆ. ಅಲ್ಲಿ ಅಕ್ರಮವಾಗಿ ಬಾಂಗ್ಲಾದೇಶಿಯರು ನೆಲೆಸಿದ್ದಾರೆ ಎಂಬ ಸುಳ್ಳು ವರದಿ ನಂಬಿದ ಬಿಬಿಎಂಪಿ ಕನಿಷ್ಠ ಪರಿಶೀಲಿಸದೇ ನಡೆಸಿದ ದಾಳಿಯಿಂದಾಗಿ ಸಾವಿರಾರು ಜನ ನಿರಾಶ್ರಿತರಾಗಿದ್ದರು. ಆಗ ನಾನುಗೌರಿ ಪತ್ರಿಕೆ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಆದರೆ ಅಲ್ಲಿದ್ದವರು ಕರ್ನಾಟಕದ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರುಗಳಿಂದ ವಲಸೆ ಬಂದಿದ್ದ ಕಾರ್ಮಿಕರಾಗಿದ್ದರು. ಅವರ ಬಳಿ ವೋಟರ್ ಐಟಿ, ಆಧಾರ್ ಕಾರ್ಡ್, ವಿದ್ಯುತ್ ಬಿಲ್ ಎಲ್ಲ ಇದ್ದರೂ ಸಹ ಲೆಕ್ಕಿಸದೇ ಅವರ ಗುಡಿಸಲುಗಳನ್ನು ಧ್ವಂಸ ಮಾಡಲಾಗಿತ್ತು. ಆದರೆ ಒಬ್ಬೇ ಒಬ್ಬ ಅಕ್ರಮ ಬಾಂಗ್ಲಾದೇಶಿಯನ್ನು ಪತ್ತೆ ಹಚ್ಚಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ.

ಅಂದು ಆ ಜನರ ಆಕ್ರೋಶ ಯಾವ ರೀತಿ ಇತ್ತು ಎಂಬುದನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಬಹುದು.

ಮಾರತ್‌ಹಳ್ಳಿ, ವೈಟ್‌ಫೀಲ್ಡ್, ಮಹದೇವಪುರ, ಕಾಡುಗೋಡಿ, ಕೆ.ಆರ್.ಪುರ ಸೇರಿದಂತೆ ಬೆಂಗಳೂರು ನಗರದ ಹೊರವಲಯದಲ್ಲಿ ಉತ್ತರ ಭಾರತ ಮತ್ತು ಉತ್ತರ ಕರ್ನಾಟಕದಿಂದ ವಲಸೆ ಬಂದ ಸಾವಿರಾರು ಜನ ಕೂಲಿ ಕಾರ್ಮಿಕರು ಹಲವು ಸ್ಲಂಗಳಲ್ಲಿ ಬದುಕುತ್ತಿದ್ದಾರೆ. ಈ ‘ಸ್ಲಂ’ಗಳನ್ನು ನೆಲಬಾಡಿಗೆ ಸ್ಲಂಗಳೆಂದು ಕರೆಯುತ್ತಾರೆ. ಏಕೆಂದರೆ ಈ ಬಡವರು ಭೂಮಿಯ ಮಾಲೀಕರಿಗೆ ನೆಲಬಾಡಿಗೆ ಕೊಡುತ್ತಾ, ಅಲ್ಲಿ ಷೆಡ್ ನಿರ್ಮಿಸಿಕೊಂಡು ವಾಸಿಸುತ್ತಾರೆ.

ತುತ್ತು ಅನ್ನ ನೀಡುತ್ತಿರುವ ಬೆಂಗಳೂರು ಅವರಿಗೆ ಎಷ್ಟು ಅನಿವಾರ್ಯವೋ, ಬೆಂಗಳೂರಿಗೂ ಅವರು ಅಷ್ಟೇ ಅನಿವಾರ್ಯ ಎನ್ನುವುದು ಕಟು ಸತ್ಯ. ಏಕೆಂದರೆ ಮೇಲೆ ಹೆಸರಿಸಿದ ಏರಿಯಾಗಳಲ್ಲಿನ ಪೌರಕಾರ್ಮಿಕ ಕೆಲಸ, ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ, ಅಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗ ಮತ್ತು ಮೇಲ್ವರ್ಗದ ಮನೆ ಚಾಕರಿ, ಕಸವಿಂಗಡಣೆ, ಚಿಂದಿ ಆಯುವುದರಿಂದ ಹಿಡಿದು ಶಾಲಾ ವಾಹನಗಳ ಡ್ರೈವರ್‌ಗಳು, ಸೆಕ್ಯುರಿಟಿ ಗಾರ್ಡ್ ಕೆಲಸ, ಹೀಗೆ ವಿವಿಧ ರೀತಿಯ ಜೀವನೋಪಾಯ ಚಟುವಟಿಕೆಗಳಲ್ಲಿ ಕಡಿಮೆ ಕೂಲಿಗೆ ಈ ಜನ ದುಡಿಯುತ್ತಿದ್ದಾರೆ. ಇಂತಹ ಜನ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನೆಲೆಯೂ ಇಲ್ಲದೆ, ಕೆಲಸವೂ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದರು.

ಇದೀಗ ಈ ವಿಷಯದಲ್ಲಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ಅದು ಎಚ್ಚೆತ್ತುಕೊಂಡಿದೆ. ಆದರೆ ಕರಿಯಮ್ಮನ ಅಗ್ರಹಾರದಿಂದ 35 ಕಿ.ಮೀ ದೂರದ ಆನೇಕಲ್ ಬಳಿ ಪುನರ್ವಸತಿ ನಿರ್ಮಿಸಿಕೊಡುವುದಾಗಿ ಹೇಳುತ್ತಿದೆ. ಆದರೆ ಇಲ್ಲೆ ತಮ್ಮ ಕೆಲಸಗಳನ್ನು ಕಂಡುಕೊಂಡಿರುವ ಕಾರ್ಮಿಕರು ಅಲ್ಲಿಗೆ ತೆರಳಲು ನಿರಾಕರಿಸಿದ್ದಾರೆ. ಸದ್ಯಕ್ಕೆ 48 ಕುಟುಂಬಗಳಿಗೆ ತಲಾ 14,100/ ರೂ ಪರಿಹಾರ ಹಣ ನೀಡಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಗುಡಿಸಲು ಧ್ವಂಸದ ನೋವಿನ ದಿನಗಳು

ಈ ಅಮಾನುಷ ದಾಳಿ ನಡೆದ ಸಂದರ್ಭದಲ್ಲಿ ದೇಶಾದ್ಯಂತ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ತೀವ್ರ ಹೋರಾಟ ಆರಂಭವಾಗಿತ್ತು. ನೀವು ಭಾರತೀಯರೆಸಿಕೊಳ್ಳಲು ಸರ್ಕಾರ ಕೇಳುವ ದಾಖಲೆ ತೋರಿಸಬೇಕಾಗ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದೇ ಸಂದರ್ಭದಲ್ಲಿ ಜನವರಿ 12ರಂದು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯವರು ಟ್ವೀಟ್ ಮಾಡಿ ನನ್ನ ಕ್ಷೇತ್ರದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ಹಾಕಿಕೊಳ್ಳಲಾಗಿದೆ. ಅಲ್ಲಿ ಕಾನೂನುಬಾಹಿರ ಕೃತ್ಯಗಳು ನಡೆಯುತ್ತಿವೆ. ಇದರಿಂದ ಅಲ್ಲಿನ ನೈರ್ಮಲ್ಯ ಹಾಳಾಗಿದೆ. ಶಂಕಿತ ಬಾಂಗ್ಲಾದೇಶಿಯರಿದ್ದಾರೆ, ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದು ಹೇಳಿದ್ದರು.

ಅಂದು ಬಿಜೆಪಿ ಸಂಸದರೊಬ್ಬರ ಮಾಲೀಕತ್ವದಲ್ಲಿದ್ದು ಮುಸ್ಲಿಂ ವಿರೋಧಿ ಸುದ್ದಿ ಬಿತ್ತರಿಸುವ ಚಾನೆಲ್, ಬಿಜೆಪಿಯ ಸ್ಥಳೀಯ ಶಾಸಕ ಮತ್ತು ಬಿಜೆಪಿ ಆಡಳಿತದಡಿಯ ಪೊಲೀಸ್ ಕಮೀಷನರ್ ಮೂವರೂ ಸೇರಿ ಕಾನೂನಿಗೆ ವಿರುದ್ಧವಾದ ರೀತಿಯಲ್ಲಿ ಸುಮಾರು 200 ಗುಡಿಸಲುಗಳನ್ನು ಧ್ವಂಸವಾಗಲು ಕಾರಣರಾಗಿದ್ದಾರೆ.

ಇದೇ ಉತ್ತರ ಕರ್ನಾಟಕದಿಂದ ಬಂದ ಅರವಿಂದ ಲಿಂಬಾವಳಿಯವರಿಗೆ ಆಗ ಸಚಿವಗಿರಿ ಪಡೆಯುವುದೇ ಮುಖ್ಯವಾಗಿತ್ತು. ಅವರು ಗೆಲ್ಲುತ್ತಾ ಬಂದಿರುವುದು ಬೆಂಗಳೂರಿನ ಮಹದೇವಪುರ ಮೀಸಲು ಕ್ಷೇತ್ರದಿಂದ. ಮೊದಲ ಬಾರಿ ಅವರು ಗೆದ್ದಾಗ ‘ಬಾಂಗ್ಲಾದೇಶೀಯರು ವಾಸವಿದ್ದ ಈ ಜೋಪಡಿಗಳಿಂದಲೂ ಮತ ಪಡೆದಿದ್ದರು. ಇಲ್ಲಿ ಹಲವಾರು ಬಿಜೆಪಿ ಏಜೆಂಟರಿದ್ದು ಅವರೇ ಇವರಿಗೆ ವೋಟರ್‌ಐಡಿಯನ್ನೂ ಕೊಡಿಸಿದ್ದರು. ನಂತರ ಅವರಿಗೆ ಇಲ್ಲಿಂದ ಮತವೂ ಬೀಳಲಿಲ್ಲ. ಬಾಂಗ್ಲಾದೇಶೀಯರ ಕಥೆಯೂ ಶುರುವಾಯಿತು’ ಎಂದಿದ್ದರು ಸ್ಥಳೀಯ ಕಾರ್ಯಕರ್ತರು.

ಸದ್ಯಕ್ಕಾದರೂ ಬಾಧಿತ ಜನರಿಗೆ ಚೂರುಪಾರು ಪರಿಹಾರ ಸಿಗುತ್ತಿದೆ. ಶೆಡ್ಡುಗಳು ದೊರಕುತ್ತಿವೆ ಎನ್ನುವುದು ಸಮಾಧಾನದ ಸಂಗತಿಯಾಗಿದೆ.


ಇದನ್ನೂ ಓದಿ; ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...