Homeಕರ್ನಾಟಕಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪ ನಿರಾಕರಿಸಿದ ಮೃತ ಅತುಲ್ ಪತ್ನಿ

ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪ ನಿರಾಕರಿಸಿದ ಮೃತ ಅತುಲ್ ಪತ್ನಿ

- Advertisement -
- Advertisement -

ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ಪೊಲೀಸ್ ವಿಚಾರಣೆ ವೇಳೆ ಕಿರುಕುಳದ ಆರೋಪವನ್ನು ನಿರಾಕರಿಸಿದ್ದಾರೆ.

ನಿಕಿತಾ ಮತ್ತು ಅವರ ಕುಟುಂಬದ ವಿರುದ್ಧ ಕಿರುಕುಳ-ಸುಲಿಗೆ ಆರೋಪದ ವೀಡಿಯೊ ಜೊತೆಗೆ, 48 ಪುಟಗಳ ಡೆತ್‌ನೋಟ್ ಬರೆದಿಟ್ಟಿದ್ದ 34 ವರ್ಷದ ಸುಭಾಷ್ ಡಿಸೆಂಬರ್ 9 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸುಮಾರು ಮೂರು ವರ್ಷಗಳಿಂದ ಪತಿಯಿಂದ ದೂರವಾಗಿ ಬದುಕುತ್ತಿದ್ದೇನೆ ಎಂದು ನಿಕಿತಾ ಅವರು ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. “ನಾನು ಹಣಕ್ಕಾಗಿ ಕಿರುಕುಳ ನೀಡಿದರೆ, ನಾನು ಅವನಿಂದ ಏಕೆ ದೂರ ಉಳಿಯುತ್ತೇನೆ” ಎಂದು ಪ್ರಶ್ನಿಸಿರುವ ನಿಕಿತಾ, ತಮ್ಮ ಮದುವೆಯ ಸಮಯದಲ್ಲಿ ಕಿರುಕುಳಕ್ಕೊಳಗಾದವರು ನಾನೆ ಎಂದು ಆರೋಪಿಸಿದ್ದಾರ ಎಂದು ತಿಳಿದುಬಂದಿದೆ. 2022 ರಲ್ಲಿ ಅತುಲ್ ವರದಕ್ಷಿಣೆ ಸಂಬಂಧಿತ ಕಿರುಕುಳ ಮತ್ತು ಹಲ್ಲೆಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದರು.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ನಿಕಿತಾ ಸಿಂಘಾನಿಯಾ (29), ಆಕೆಯ ತಾಯಿ ನಿಶಾ (54) ಮತ್ತು ಸಹೋದರ ಅನುರಾಗ್ (27) ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಿಕಿತಾ ಅವರನ್ನು ಗುರುಗ್ರಾಮ್‌ನ ಹಾಂಗ್‌ಕಾಂಗ್ ಬಜಾರ್ ರಸ್ತೆಯ ಬಳಿ ಬಂಧಿಸಿದ್ದರೆ, ಆಕೆಯ ತಾಯಿ ಮತ್ತು ಸಹೋದರನನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಕರೆದೊಯ್ಯಲಾಯಿತು. ಮೂವರನ್ನೂ ಬೆಂಗಳೂರಿಗೆ ತರಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅವರ ಬಂಧನದ ನಂತರ, ಅತುಲ್ ಸುಭಾಷ್ ಅವರ ತಂದೆ ಮತ್ತು ಸಹೋದರ ಸುಭಾಷ್ ಅವರು, 4 ವರ್ಷದ ಮಗನ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿ, ಆತ ಇರುವ ಸ್ಥಳ ತಿಳಿದಿಲ್ಲ ಎಂದು ಹೇಳಿದ್ದಾರೆ.

ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದ್ದು, ನಿಕಿತಾ ಮತ್ತು ಅವರ ಕುಟುಂಬದ ವಿರುದ್ಧ ಆರೋಪ ಸಾಬೀತಾದರೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಉಪ ಪೊಲೀಸ್ ಆಯುಕ್ತ (ವೈಟ್‌ಫೀಲ್ಡ್) ಶಿವಕುಮಾರ್ ಗುಣಾರೆ ತಿಳಿಸಿದ್ದಾರೆ.

ಅತುಲ್‌ನ ಕೈಬರಹದ ಮತ್ತು ಡಿಜಿಟಲ್ ಆತ್ಮಹತ್ಯೆ ನೋಟ್, ಆತನ ಎಲೆಕ್ಟ್ರಾನಿಕ್ ಸಾಧನಗಳನ್ನು ಸಾಕ್ಷ್ಯವಾಗಿ ತೆಗೆದುಕೊಂಡು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ. ಪೊಲೀಸರು ಕಾಣೆಯಾದ ಸಾಕ್ಷ್ಯದ ಬಗ್ಗೆ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಎಲ್ಲಾ ದಾಖಲೆಗಳು ಸುರಕ್ಷಿತವಾಗಿವೆ ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಒತ್ತಿ ಹೇಳಿದರು.

ವರದಕ್ಷಿಣೆ ಕಿರುಕುಳ ಹಾಗೂ ಹಲ್ಲೆ ಆರೋಪ ಮಾಡಿದ್ದನಿಕಿತಾ ಸಿಂಘಾನಿಯಾ,  2022 ರಲ್ಲಿ ಪೊಲೀಸ್ ದೂರು ನೀಡಿದ್ದರು. ಅತುಲ್ ಸುಭಾಷ್ ತನ್ನನ್ನು ಥಳಿಸುತ್ತಿದ್ದರು ಮತ್ತು ಪತಿ-ಪತ್ನಿ ಸಂಬಂಧವನ್ನು ಮೃಗದಂತೆ ಪರಿಗಣಿಸಲು ಪ್ರಾರಂಭಿಸಿದರು ಎಂದು ಆರೋಪಿಸಿದ್ದಾರೆ. ಮದುವೆಯ ಉಡುಗೊರೆಗಳ ಬಗ್ಗೆ ಅತೃಪ್ತಿ ಮತ್ತು ಹೆಚ್ಚುವರಿ 10 ಲಕ್ಷ ರೂ. ಸೇರಿದಂತೆ ಅತ್ತೆಯ ಬೇಡಿಕೆಗಳು ತನ್ನ ತಂದೆಯ ಆರೋಗ್ಯ ಕ್ಷೀಣಿಸಲು ಮತ್ತು ಅಂತಿಮವಾಗಿ ಸಾವಿಗೆ ಕಾರಣವಾಗಿವೆ ಎಂದು ನಿಕಿತಾ ಆರೋಪಿಸಿದ್ದಾರೆ.

ಕುಟುಂಬ ವರದಕ್ಷಿಣೆಗಾಗಿ ಒತ್ತಾಯಿಸಿದ ಆಘಾತದಿಂದ ತನ್ನ ತಂದೆ ನಿಧನರಾದರು ಎಂಬ ನಿಕಿತಾ ಅವರ ಹೇಳಿಕೆ ಸುಳ್ಳು ಎಂದು ಸುಭಾಷ್ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಿಕಿತಾ ಅವರ ತಂದೆ ಹೃದಯ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ; ಬೆಂಗಳೂರು ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಪತ್ನಿ ನಿಕಿತಾ, ಆಕೆಯ ತಾಯಿ-ಸಹೋದರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...