Homeಕರ್ನಾಟಕಬೆಂಗಳೂರು: ಇಬ್ಬರು ಸಹೋದರಿಯರನ್ನು ಬೆತ್ತಲುಗೊಳಿಸಿ ಹಲ್ಲೆ?

ಬೆಂಗಳೂರು: ಇಬ್ಬರು ಸಹೋದರಿಯರನ್ನು ಬೆತ್ತಲುಗೊಳಿಸಿ ಹಲ್ಲೆ?

- Advertisement -
- Advertisement -

ಮಕ್ಕಳ ಶಿಕ್ಷಣಕ್ಕಾಗಿ ಪಡೆದಿದ್ದ ಸಾಲವನ್ನು ಮರುಪಾವತಿಸಿಲ್ಲವೆಂದು ಆರೋಪಿಸಿ ಇಬ್ಬರು ಸಹೋದರಿಯರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಸಹೋದರಿಯರ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಎರಡು ದಿನಗಳ ಕಾಲ ಪೊಲೀಸರು ದೂರು ಪಡೆಯಲು ನಿರಾಕರಿಸಿದ್ದರು. ಹಲ್ಲೆಯ ವೀಡಿಯೊಗಳು ವೈರಲ್ ಆದ ನಂತರವೇ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆನೇಕಲ್ ತಾಲೂಕಿನ ದೊಡ್ಡಬೊಮ್ಮಸಂದ್ರ ವ್ಯಾಪ್ತಿಯಲ್ಲಿ ಮನಕಲಕುವ ಘಟನೆ ನಡೆದಿದ್ದು, ರಾಮಕೃಷ್ಣ ರೆಡ್ಡಿ, ಸುನೀಲ್ ಕುಮಾರ್, ಇಂದ್ರಮ್ಮ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ದೊಡ್ಡಬೊಮ್ಮಸಂದ್ರ ಸಮೀಪದ ನೆರಿಗಾ ಗ್ರಾಮದ ರಾಮಕೃಷ್ಣ ರೆಡ್ಡಿ ಎಂಬುವವರಿಂದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಹಿಳೆಯೊಬ್ಬರು ಶೇ.30ರ ಬಡ್ಡಿಗೆ 1 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.

ಸಂಪೂರ್ಣ ಸಾಲದ ಮೊತ್ತವನ್ನು ಒಂದೇ ಬಾರಿಗೆ ಮರುಪಾವತಿಸುವಂತೆ ಸಾಲ ನೀಡಿದವರು ಒತ್ತಾಯಿಸಿದ್ದರು. ತಮ್ಮ ಜಮೀನು ಮಾರಾಟ ಮಾಡಿದ ನಂತರ ಸಾಲದ ಮೊತ್ತವನ್ನು ಮರುಪಾವತಿಸುವುದಾಗಿ ಸಂತ್ರಸ್ತರು ಶಾಂತಿ ಒಪ್ಪಂದ ಮಾಡಿಕೊಂಡಿದ್ದರು.

ಇದರ ಹೊರತಾಗಿಯೂ, ಆರೋಪಿಗಳು ನಿವಾಸದೊಳಗೆ ನುಗ್ಗಿ ಸಂತ್ರಸ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ್ದಾರೆ. ಬಳಿಕ ಸಂತ್ರಸ್ತರು ಸರ್ಜಾಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರು. ಆದರೆ ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಇಂಬ್ರಾಪುರ ಅವರು ದೂರು ಸ್ವೀಕರಿಸಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ.

ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಸಾಲ ನೀಡಿದವರೊಂದಿಗೆ ಮಾತನಾಡಿ ಎಂದು ಇನ್ಸ್‌ಪೆಕ್ಟರ್ ಸಂತ್ರಸ್ತರಿಗೆ ಸೂಚಿಸಿದ್ದರು. ಅಮಾನುಷವಾಗಿ ಹಲ್ಲೆ ನಡೆಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಹಾಗೂ ಆರೋಪಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಅಯೋಧ್ಯಾ: ಪತಿ ತನ್ನ ಪತ್ನಿಗೆ ‘ಮುತ್ತು’ ಕೊಟ್ಟಿದ್ದಕ್ಕೆ ಗುಂಪು ಹಲ್ಲೆ!

ಪ್ರಕರಣ ಮತ್ತೊಂದು ತಿರುವು ಪಡೆದ ಬಳಿಕ ಪೊಲೀಸರು ಸಂತ್ರಸ್ತರನ್ನು ಠಾಣೆಗೆ ಕರೆಸಿ ಮಂಗಳವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ ಎಂದು ರಾಷ್ಟ್ರೀಯ ಮಟ್ಟದ ಮಾಧ್ಯಮಗಳು ವರದಿ ಮಾಡಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಇನ್‌ಸ್ಪೆಕ್ಟರ್‌ ರಾಘವೇಂದ್ರ ಇಂಬ್ರಾಪುರ, “ಸಂತ್ರಸ್ತರು ಸುಮಾರು ಜನರ ಬಳಿ ಸಾಲ ಪಡೆದಿದ್ದಾರೆ. ಪಡೆದ ಸಾಲ ವಾಪಸ್‌ ನೀಡಲ್ಲವೆಂದು ಅನೇಕರು ಆರೋಪಿಸಿದ್ದಾರೆ. ನೀಡಿದ ದುಡ್ಡನ್ನು ವಾಪಸ್ ಕೇಳಲು ಹೋದಾಗ ಗಲಾಟೆಯಾಗಿದೆ. ಸಾಲ ನೀಡಿದವರು ಹೊಡೆದಿರುವುದು ನಿಜ. ಆದರೆ ಬಟ್ಟೆ ಬಿಚ್ಚಿ ಹೊಡೆದಿರುವುದು ಸುಳ್ಳು. ತಮ್ಮ ಮೇಲಾಗಿರುವ ದಾಳಿಯಿಂದಾಗಿ ಮೈಮೇಲಾಗಿರುವ ಬಾಸುಂಡೆಗಳನ್ನು ಬಟ್ಟೆ ಬಿಚ್ಚಿ ಸಂತ್ರಸ್ತರು ತೋರಿಸಿದ್ದಾರೆಯೇ ಹೊರತು ವಿವಸ್ತ್ರಗೊಳಿಸಿ ಯಾರೂ ಹಲ್ಲೆ ಮಾಡಿಲ್ಲ. ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆಂಬುದು ಸುಳ್ಳು ಸುದ್ದಿಯಾಗಿದೆ. ತಪ್ಪಿತಸ್ಥರ ವಿರುದ್ಧ ಐಪಿಸಿ ಸೆಕ್ಷನ್‌ 354 (ಬಿ), 504, 506, 323, 324 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪ್ರಕರಣದಲ್ಲಿ ಪೊಲೀಸರ ವಾದ ಸಮರ್ಥನೀಯವಲ್ಲ. ದುರ್ಬಲರ ದೂರುಗಳನ್ನು ದಾಕಲಿಸದಿರುವ ಕೆಟ್ಟ ಚಾಳಿಯನ್ನು ನಮ್ಮ ಪೊಲೀಸರು ಮೊದಲು ಕೈಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...