Homeಕರ್ನಾಟಕಬೆಂಗಳೂರು: ಇಬ್ಬರು ಸಹೋದರಿಯರನ್ನು ಬೆತ್ತಲುಗೊಳಿಸಿ ಹಲ್ಲೆ?

ಬೆಂಗಳೂರು: ಇಬ್ಬರು ಸಹೋದರಿಯರನ್ನು ಬೆತ್ತಲುಗೊಳಿಸಿ ಹಲ್ಲೆ?

- Advertisement -
- Advertisement -

ಮಕ್ಕಳ ಶಿಕ್ಷಣಕ್ಕಾಗಿ ಪಡೆದಿದ್ದ ಸಾಲವನ್ನು ಮರುಪಾವತಿಸಿಲ್ಲವೆಂದು ಆರೋಪಿಸಿ ಇಬ್ಬರು ಸಹೋದರಿಯರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಸಹೋದರಿಯರ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಎರಡು ದಿನಗಳ ಕಾಲ ಪೊಲೀಸರು ದೂರು ಪಡೆಯಲು ನಿರಾಕರಿಸಿದ್ದರು. ಹಲ್ಲೆಯ ವೀಡಿಯೊಗಳು ವೈರಲ್ ಆದ ನಂತರವೇ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆನೇಕಲ್ ತಾಲೂಕಿನ ದೊಡ್ಡಬೊಮ್ಮಸಂದ್ರ ವ್ಯಾಪ್ತಿಯಲ್ಲಿ ಮನಕಲಕುವ ಘಟನೆ ನಡೆದಿದ್ದು, ರಾಮಕೃಷ್ಣ ರೆಡ್ಡಿ, ಸುನೀಲ್ ಕುಮಾರ್, ಇಂದ್ರಮ್ಮ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ದೊಡ್ಡಬೊಮ್ಮಸಂದ್ರ ಸಮೀಪದ ನೆರಿಗಾ ಗ್ರಾಮದ ರಾಮಕೃಷ್ಣ ರೆಡ್ಡಿ ಎಂಬುವವರಿಂದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಹಿಳೆಯೊಬ್ಬರು ಶೇ.30ರ ಬಡ್ಡಿಗೆ 1 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.

ಸಂಪೂರ್ಣ ಸಾಲದ ಮೊತ್ತವನ್ನು ಒಂದೇ ಬಾರಿಗೆ ಮರುಪಾವತಿಸುವಂತೆ ಸಾಲ ನೀಡಿದವರು ಒತ್ತಾಯಿಸಿದ್ದರು. ತಮ್ಮ ಜಮೀನು ಮಾರಾಟ ಮಾಡಿದ ನಂತರ ಸಾಲದ ಮೊತ್ತವನ್ನು ಮರುಪಾವತಿಸುವುದಾಗಿ ಸಂತ್ರಸ್ತರು ಶಾಂತಿ ಒಪ್ಪಂದ ಮಾಡಿಕೊಂಡಿದ್ದರು.

ಇದರ ಹೊರತಾಗಿಯೂ, ಆರೋಪಿಗಳು ನಿವಾಸದೊಳಗೆ ನುಗ್ಗಿ ಸಂತ್ರಸ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ್ದಾರೆ. ಬಳಿಕ ಸಂತ್ರಸ್ತರು ಸರ್ಜಾಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರು. ಆದರೆ ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಇಂಬ್ರಾಪುರ ಅವರು ದೂರು ಸ್ವೀಕರಿಸಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ.

ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಸಾಲ ನೀಡಿದವರೊಂದಿಗೆ ಮಾತನಾಡಿ ಎಂದು ಇನ್ಸ್‌ಪೆಕ್ಟರ್ ಸಂತ್ರಸ್ತರಿಗೆ ಸೂಚಿಸಿದ್ದರು. ಅಮಾನುಷವಾಗಿ ಹಲ್ಲೆ ನಡೆಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಹಾಗೂ ಆರೋಪಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಅಯೋಧ್ಯಾ: ಪತಿ ತನ್ನ ಪತ್ನಿಗೆ ‘ಮುತ್ತು’ ಕೊಟ್ಟಿದ್ದಕ್ಕೆ ಗುಂಪು ಹಲ್ಲೆ!

ಪ್ರಕರಣ ಮತ್ತೊಂದು ತಿರುವು ಪಡೆದ ಬಳಿಕ ಪೊಲೀಸರು ಸಂತ್ರಸ್ತರನ್ನು ಠಾಣೆಗೆ ಕರೆಸಿ ಮಂಗಳವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ ಎಂದು ರಾಷ್ಟ್ರೀಯ ಮಟ್ಟದ ಮಾಧ್ಯಮಗಳು ವರದಿ ಮಾಡಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಇನ್‌ಸ್ಪೆಕ್ಟರ್‌ ರಾಘವೇಂದ್ರ ಇಂಬ್ರಾಪುರ, “ಸಂತ್ರಸ್ತರು ಸುಮಾರು ಜನರ ಬಳಿ ಸಾಲ ಪಡೆದಿದ್ದಾರೆ. ಪಡೆದ ಸಾಲ ವಾಪಸ್‌ ನೀಡಲ್ಲವೆಂದು ಅನೇಕರು ಆರೋಪಿಸಿದ್ದಾರೆ. ನೀಡಿದ ದುಡ್ಡನ್ನು ವಾಪಸ್ ಕೇಳಲು ಹೋದಾಗ ಗಲಾಟೆಯಾಗಿದೆ. ಸಾಲ ನೀಡಿದವರು ಹೊಡೆದಿರುವುದು ನಿಜ. ಆದರೆ ಬಟ್ಟೆ ಬಿಚ್ಚಿ ಹೊಡೆದಿರುವುದು ಸುಳ್ಳು. ತಮ್ಮ ಮೇಲಾಗಿರುವ ದಾಳಿಯಿಂದಾಗಿ ಮೈಮೇಲಾಗಿರುವ ಬಾಸುಂಡೆಗಳನ್ನು ಬಟ್ಟೆ ಬಿಚ್ಚಿ ಸಂತ್ರಸ್ತರು ತೋರಿಸಿದ್ದಾರೆಯೇ ಹೊರತು ವಿವಸ್ತ್ರಗೊಳಿಸಿ ಯಾರೂ ಹಲ್ಲೆ ಮಾಡಿಲ್ಲ. ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆಂಬುದು ಸುಳ್ಳು ಸುದ್ದಿಯಾಗಿದೆ. ತಪ್ಪಿತಸ್ಥರ ವಿರುದ್ಧ ಐಪಿಸಿ ಸೆಕ್ಷನ್‌ 354 (ಬಿ), 504, 506, 323, 324 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪ್ರಕರಣದಲ್ಲಿ ಪೊಲೀಸರ ವಾದ ಸಮರ್ಥನೀಯವಲ್ಲ. ದುರ್ಬಲರ ದೂರುಗಳನ್ನು ದಾಕಲಿಸದಿರುವ ಕೆಟ್ಟ ಚಾಳಿಯನ್ನು ನಮ್ಮ ಪೊಲೀಸರು ಮೊದಲು ಕೈಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...