Homeಕರ್ನಾಟಕಬೆಂಗಳೂರು: ಎನ್‌ಐಎಯಿಂದ ಇಬ್ಬರು ಶಂಕಿತ ಉಗ್ರರ ಬಂಧನ

ಬೆಂಗಳೂರು: ಎನ್‌ಐಎಯಿಂದ ಇಬ್ಬರು ಶಂಕಿತ ಉಗ್ರರ ಬಂಧನ

ಶಂಕಿತರನ್ನು ತಮಿಳುನಾಡು ಮೂಲದ ಅಹಮದ್ ಅಬ್ದುಲ್ ಖಾದರ್ (40) ಹಾಗೂ ಬೆಂಗಳೂರಿನ ಫ್ರೆಜರ್ ಟೌನ್ ವಾಸಿ ಇರ್ಫಾನ್ ನಾಸಿರ್ (33)​​ ಎಂದು ಗುರುತಿಸಲಾಗಿದೆ.

- Advertisement -
- Advertisement -

ಬೆಂಗಳೂರಿನಲ್ಲಿ ಐಎಸ್ಐಎಸ್, ಐಎಸ್ಐಎಲ್ ಸಂಘಟನೆಗೆ ಸೇರಿದ್ದಾರೆ ಎನ್ನಲಾಗಿರುವ ಇಬ್ಬರು ಶಂಕಿತ ಉಗ್ರರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ 10 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಶಂಕಿತರನ್ನು ತಮಿಳುನಾಡು ಮೂಲದ ಅಹಮದ್ ಅಬ್ದುಲ್ ಖಾದರ್ (40) ಹಾಗೂ ಬೆಂಗಳೂರಿನ ಫ್ರೆಜರ್ ಟೌನ್ ವಾಸಿ ಇರ್ಫಾನ್ ನಾಸಿರ್ (33)​​ ಎಂದು ಗುರುತಿಸಲಾಗಿದೆ.

2013-14ರಲ್ಲಿ ಬೆಂಗಳೂರಿನಿಂದ ಕನಿಷ್ಠ 13-14 ಜನರು ಇರಾಕ್ ಮತ್ತು ಸಿರಿಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ. 2014ರಲ್ಲಿ ಐಎಸ್ (Islamic State) ಇರಾಕ್ ಮತ್ತು ಸಿರಿಯಾದ ಮೇಲೆ ಅತಿಕ್ರಮಣ ಮಾಡಿತು. ಅಲ್ಲಿ ಐಸ್ ಪರ ಹೋರಾಡುವಾಗ ಅವರಲ್ಲಿ ಇಬ್ಬರು ಸಿರಿಯಾದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಮತ್ತೆ ಕೆಲವರು 2014 ರಲ್ಲಿ ಸದ್ದಿಲ್ಲದೆ ಮರಳಿದ್ದಾರೆ. ಅವರಲ್ಲಿ ಹಲವರು ಇನ್ನೂ ಪರಾರಿಯಾಗಿದ್ದಾರೆ ಎಂದು ಸಂಸ್ಥೆ ಹೇಳಿದೆ.

ಇದನ್ನೂ ಓದಿ: ಶೋಪಿಯಾನ ಯುವಕರ ಹತ್ಯೆಯಲ್ಲಿ ಸೈನಿಕರು ಕಾನೂನು ಉಲ್ಲಂಘನೆ ಮಾಡಿದ್ದಾರೆ: ಭಾರತೀಯ ಸೇನೆ

ಚೆನ್ನೈನ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರ ಖಾದರ್ ಮತ್ತು ಅಕ್ಕಿ ವ್ಯಾಪಾರಿ ಆಗಿದ್ದ ಆರೋಪಿ ಇರ್ಫಾನ್ ಐಎಸ್ ಘಟಕಕ್ಕೆ ಹೆಚ್ಚಿನ ಸದಸ್ಯರನ್ನು ಸೇರಿಸಿದ್ದರು. ಜೊತೆಗೆ ಕನಿಷ್ಠ ಐದು ಮಂದಿ ಸದಸ್ಯರ ಪ್ರಯಾಣಕ್ಕೆ ಹಣಕಾಸು ವ್ಯವಸ್ಥೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಐಎಸ್ ಜೊತೆ ಸಂಪರ್ಕ ಹೊಂದಿದ್ದಕ್ಕಾಗಿ ಇತ್ತೀಚೆಗೆ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆ ವೈದ್ಯನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಬಸವನಗುಡಿಯ ಅಪಾರ್ಟ್ಮೆಂಟ್ ನಲ್ಲಿದ್ದ ನೇತ್ರಶಾಸ್ತ್ರಜ್ಞ ಅಬ್ದುಲ್ ರೆಹಮಾನ್ ವಿಚಾರಣೆಯ ವೇಳೆ ಈ ಆರೋಪಿಗಳ ವಿವರವನ್ನ ಹೇಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮಾಹಿತಿ ಇದೆ. ಇಬ್ಬರ ಮನೆಯಲ್ಲೂ ಕೆಲ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ವಿಚಾರಣೆಯಿಂದ ಮತ್ತಷ್ಟು ಮಾಹಿತಿ ಕಲೆಹಾಕಬೇಕಿದೆ’ ಎಂದು ಎನ್‌ಐಎ ಅಧಿಕಾರಿಯೊಬ್ಬರು ಹೇಳಿದರು.

2013-14ರಲ್ಲಿ ಸಿರಿಯಾಗೆ ಹೋಗಿ ಬಂದಿದ್ದ ಶಂಕಿತರ ಉಗ್ರರು, ‘ಕುರಾನ್ ಸರ್ಕಲ್’ ಎಂಬ ವಾಟ್ಸ್​​ಆ್ಯಪ್ ಗುಂಪು ಕಟ್ಟಿಕೊಂಡಿದ್ದರು. ಅದಕ್ಕೆ ನಗರದ ಮುಸ್ಲಿಂ ಯುವಕರನ್ನ ಒಟ್ಟುಗೂಡಿಸಿ ಪ್ರಚೋದಿಸಿದ್ದರು. ಅದರ ಮೂಲಕವೇ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...