Homeಕರ್ನಾಟಕಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

- Advertisement -
- Advertisement -

“ಪ್ರಾಧ್ಯಾಪಕರು ಮಾಡಿರುವ ಯಡವಟ್ಟಿನಿಂದಾಗಿ ನಮಗೆ ತೊಂದರೆಯಾಗಿದೆ” ಎಂದು ಇಬ್ಬರು ವಿದ್ಯಾರ್ಥಿಗಳು ದೂರಿದ್ದಾರೆ. ಎಂ.ಕಾಂ. ವಿಭಾಗಕ್ಕೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗೆ ಸೆಮಿಸ್ಟರ್‌ ಕಳೆದರೂ ವಿಭಾಗದ ಅಡ್ಮಿಷನ್‌ ಅಪ್ರೂವಲ್‌ ಕೊಡದೆ ವಂಚಿಸಲಾಗಿದ್ದು, ಇದನ್ನು ಪ್ರಶ್ನಿಸಿದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗೂ ತೊಂದರೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಥಮ ಸೆಮಿಸ್ಟರ್‌ ಎಂ.ಕಾಂ. (ಐಬಿ) ವಿದ್ಯಾರ್ಥಿ ಎಸ್.ಲಿಂಗೇಶ್‌, ನನಗೆ ಅನ್ಯಾಯವಾಗಿದೆ ಎಂದು ಕುಲಪತಿಯವರಿಗೆ ದೂರು ನೀಡಿದ್ದಾರೆ. ಅದಕ್ಕೆ ಕುಲಪತಿಯವರು ಸ್ಪಂದಿಸಿದರೂ ವಿಭಾಗದ ಮುಖ್ಯಸ್ಥರಾದ ಕೆ.ನಿರ್ಮಲಾ ಅವರು ಪರಿಗಣನೆಗೆ ತೆಗೆದುಕೊಂಡಿಲ್ಲ. ಲಿಂಗೇಶ್‌ ಪರವಾಗಿ ನಿಂತ ವಿದ್ಯಾನ್ಮಾನ ವಿಭಾಗದ ಎಸ್‌.ಮನೋಜ್‌ ಎಂಬ ವಿದ್ಯಾರ್ಥಿಗೂ ಪರೀಕ್ಷಾ ಪ್ರವೇಶಾತಿ ಪತ್ರವನ್ನು ತಡವಾಗಿ ನೀಡಲಾಗಿದೆ ಎಂಬ ದೂರು ಬಂದಿದೆ.

ಬೆಂ.ವಿ.ವಿ.ಯ ಎಂ.ಕಾಂ (ಐಬಿ) ವಿಭಾಗಕ್ಕೆ ಲಿಂಗೇಶ್ ಅನ್ನುವ ವಿದ್ಯಾರ್ಥಿ ಪ್ರಥಮ ವರ್ಷಕ್ಕೆ ಅಪ್ಲಿಕೇಶನ್ ಹಾಕಿದ್ದರು. ನಿಯಮಾನುಸಾರ ಮೂಲದಾಖಲಾತಿಗಳನ್ನು ವಿಭಾಗಕ್ಕೆ ನೀಡಿದ್ದರು. (ವಿದ್ಯಾರ್ಥಿಯ ದಾಖಲಾತಿಗಳು ಸರಿ ಇದಿಯಾ ಇಲ್ಲವಾ ಎಂದು ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಚೆಕ್ ಮಾಡಿ ಕೌನ್ಸಿಲಿಂಗ್‌‌ನಲ್ಲಿ ಸಹಿಯನ್ನು ಹಾಕಿದ್ದರು). ದಾಖಲಾತಿಗಳನ್ನು ಪರಿಶೀಲಿಸಿದ ನಂತರ ವಿಶ್ವವಿದ್ಯಾನಿಲಯವು ಫೀಸ್‌‌ ಪೇಮಂಟ್ ಲಿಂಕ್ ಜನರೇಟ್ ಮಾಡಿತ್ತು. ವಿದ್ಯಾರ್ಥಿ ಅದರಂತೆ ಫೀಸ್‌‌ ಕಟ್ಟಿದ್ದರು. ಆದರೆ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಕಚೇರಿಯವರು ಅಡ್ಮಿಷನ್ ಅಪ್ರೂವಲ್ ಮಾಡಬೇಕಿತ್ತು. (ಅವರು ಇಲ್ಲಿಯವರೆಗೂ ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ). ಪ್ರಥಮ ಸೆಮಿಸ್ಟಾರ್‌ ಪರೀಕ್ಷಾ ಶುಲ್ಕ ಪಾವತಿ ಮಾಡಲು ಹೋದಾಗ ವಿಷಯ ತಿಳಿಯಿತು ಎಂದು ಆರೋಪಿಸಲಾಗಿದೆ.

“ಅಡ್ಮಿಷನ್‌ ಅನುಮೋದನೆ ಕುರಿತು ಪ್ರಶ್ನಿಸಿದಾಗ ಈ ವಿದ್ಯಾರ್ಥಿ ಯಾರೋ ನಮಗೆ ಗೊತ್ತಿಲ್ಲ, ಇವರು ಸರಿಯಾಗಿ ತರಗತಿಗಳಿಗೆ ಹಾಜರಾತಿ ಆಗದೇ ಇರುವ ಕಾರಣ ಇವರದು ನಾವು ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ, ಇವರಿಗೆ ನಾನು ಅಡ್ಮಿಷನ್ ಅಪ್ರೂವಲ್ ಮಾಡುವುದಿಲ್ಲ” ಎಂದು ನಿರ್ಮಲಾ ಅವರು ಪ್ರತಿಕ್ರಿಯೆ ನೀಡಿದರೆಂದು ವಿದ್ಯಾರ್ಥಿ ಲಿಂಗೇಶ್‌ ತಿಳಿಸಿದ್ದಾರೆ.

“ನಾನು ಆರಂಭದ ಕೆಲವು ದಿನ ಕಾಲೇಜಿಗೆ ಹೋಗಿದ್ದೆ. ನಂತರದಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ಕಾಲೇಜಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ದಾಖಲಾತಿಯ ಎಲ್ಲ ಪ್ರಕ್ರಿಯೆ ನಡೆದು, ಹಾಸ್ಟೆಲ್‌ಗೂ ಪ್ರವೇಶಾತಿ ದೊರೆತರೂ ವಿಭಾಗದಲ್ಲಿ ಪ್ರವೇಶಾತಿ ಅಪ್ರೂವಲ್‌ ಆಗದಿರುವುದು ಹೇಗೆ? ಪ್ರವೇಶಾತಿ ಅಪ್ರೂವಲ್ ಆಗಿದ್ದರೆ ಮುಂದಿನ ಸೆಮಿಸ್ಟರ್‌ಗಳಲ್ಲಾದರೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತು” ಎಂದರು.

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಿಭಾಗದ ಮುಖ್ಯಸ್ಥರಾದ ನಿರ್ಮಲಾ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿ ಮುಖಂಡ, ವಿದ್ಯುನ್ಮಾನ‌ ವಿಭಾಗದ ವಿದ್ಯಾರ್ಥಿ ಎಸ್‌.ಮನೋಜ್‌, “ಇಲ್ಲಿ ಆಗಿರುವ ಲೋಪದೋಷಗಳ ಕುರಿತು ಕುಲಪತಿಗಳ ಗಮನಕ್ಕೆ ತರಲಾಯಿತು. ತಕ್ಷಣ ವಿದ್ಯಾರ್ಥಿಗೆ ಅಡ್ಮಿಷನ್ ಅಪ್ರೂವಲ್ ಮಾಡಿ ಎಂದು ವಿಭಾಗದ ಮುಖ್ಯಸ್ಥರ ಗಮಕ್ಕೆ ತಂದರು. ವಿದ್ಯಾರ್ಥಿ ಕೊಟ್ಟ ಮನವಿ ಪತ್ರಕ್ಕೆ ಕುಲಪತಿಯವರು ಸಹಿಯನ್ನೂ ಹಾಕಿದರು. ಆದರೂ ವಿಭಾಗದ ಮುಖ್ಯಸ್ಥರು(ಕೆ.ನಿರ್ಮಲ) ವಿದ್ಯಾರ್ಥಿಯ ಅಡ್ಮಿಷನ್ ಅಪ್ರೂವಲ್ ಅನ್ನು ನಿರಾಕರಿಸಿದ್ದಾರೆ” ಎಂದರು.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

“ನಮ್ಮ ವಿಭಾಗದ ಮುಖ್ಯಸ್ಥರಾದ ಟಿ.ಶ್ರೀಪತಿ ಅವರಿಗೂ ದೂರು ನೀಡಿ  ನನ್ನ ಹಾಲ್‌ ಟಿಕೆಟ್ ಕೂಡ ತಡೆ ಹಿಡಿಯಲು ಯತ್ನಿಸಲಾಯಿತು. ಎರಡು ವಿಷಯಗಳ ಪರೀಕ್ಷೆಗಳಾದ ಮೇಲೆ ನನಗೆ ಹಾಲ್‌ ಟಿಕೆಟ್ ನೀಡಲಾಯಿತು” ಎಂದು ಆರೋಪಿಸಿದ್ದಾರೆ.

ವಿದ್ಯುನ್ಮಾನ ವಿಭಾಗದ ಮುಖ್ಯಸ್ಥರಾದ ಶ್ರೀಪತಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ನನ್ನ ಇಪ್ಪತ್ತು ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ವಿದ್ಯಾರ್ಥಿಗೆ ಅನ್ಯಾಯ ಮಾಡಿಲ್ಲ. ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿ ಬಂದಿರಲಿಲ್ಲ. ಎರಡನೇ ದಿನ ಕೆಲವು ಕಾರಣಗಳಿಂದ ವಿಳಂಬವಾಯಿತು. ಮೂರನೇ ದಿನ ಪರೀಕ್ಷೆ ಬರೆದಿದ್ದಾರೆ. ಇನ್ನೇನೂ ಆತಂಕ ಪಡುವ ವಿಷಯ ಇಲ್ಲ. ಬೇರೆ ಡಿಪಾರ್ಟ್‌ಮೆಂಟ್ ವಿಷಯಗಳಿಗೆ ನೀವ್ಯಾಕೆ ಹೋಗ್ತೀರಾ ಎಂದು ಬುದ್ಧಿ ಹೇಳಿದ್ದು ನಿಜ. ಕೋರ್ಸ್ ಮುಗಿಸಿಕೊಳ್ಳಿ, ಚೆನ್ನಾಗಿ ಓದಿ ಎಂದು ಸಲಹೆ ನೀಡಿದೆ. ಆದರೆ ನನ್ನ ಮೇಲೆಯೇ ಕೂಗಾಡಿದರು. ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ನಾವು ವಿದ್ಯಾರ್ಥಿಗಳ ಪರವಾಗಿಯೇ ಎಂದಿಗೂ ಇರುತ್ತೇವೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...