Homeಕರ್ನಾಟಕಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

- Advertisement -
- Advertisement -

“ಪ್ರಾಧ್ಯಾಪಕರು ಮಾಡಿರುವ ಯಡವಟ್ಟಿನಿಂದಾಗಿ ನಮಗೆ ತೊಂದರೆಯಾಗಿದೆ” ಎಂದು ಇಬ್ಬರು ವಿದ್ಯಾರ್ಥಿಗಳು ದೂರಿದ್ದಾರೆ. ಎಂ.ಕಾಂ. ವಿಭಾಗಕ್ಕೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗೆ ಸೆಮಿಸ್ಟರ್‌ ಕಳೆದರೂ ವಿಭಾಗದ ಅಡ್ಮಿಷನ್‌ ಅಪ್ರೂವಲ್‌ ಕೊಡದೆ ವಂಚಿಸಲಾಗಿದ್ದು, ಇದನ್ನು ಪ್ರಶ್ನಿಸಿದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗೂ ತೊಂದರೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಥಮ ಸೆಮಿಸ್ಟರ್‌ ಎಂ.ಕಾಂ. (ಐಬಿ) ವಿದ್ಯಾರ್ಥಿ ಎಸ್.ಲಿಂಗೇಶ್‌, ನನಗೆ ಅನ್ಯಾಯವಾಗಿದೆ ಎಂದು ಕುಲಪತಿಯವರಿಗೆ ದೂರು ನೀಡಿದ್ದಾರೆ. ಅದಕ್ಕೆ ಕುಲಪತಿಯವರು ಸ್ಪಂದಿಸಿದರೂ ವಿಭಾಗದ ಮುಖ್ಯಸ್ಥರಾದ ಕೆ.ನಿರ್ಮಲಾ ಅವರು ಪರಿಗಣನೆಗೆ ತೆಗೆದುಕೊಂಡಿಲ್ಲ. ಲಿಂಗೇಶ್‌ ಪರವಾಗಿ ನಿಂತ ವಿದ್ಯಾನ್ಮಾನ ವಿಭಾಗದ ಎಸ್‌.ಮನೋಜ್‌ ಎಂಬ ವಿದ್ಯಾರ್ಥಿಗೂ ಪರೀಕ್ಷಾ ಪ್ರವೇಶಾತಿ ಪತ್ರವನ್ನು ತಡವಾಗಿ ನೀಡಲಾಗಿದೆ ಎಂಬ ದೂರು ಬಂದಿದೆ.

ಬೆಂ.ವಿ.ವಿ.ಯ ಎಂ.ಕಾಂ (ಐಬಿ) ವಿಭಾಗಕ್ಕೆ ಲಿಂಗೇಶ್ ಅನ್ನುವ ವಿದ್ಯಾರ್ಥಿ ಪ್ರಥಮ ವರ್ಷಕ್ಕೆ ಅಪ್ಲಿಕೇಶನ್ ಹಾಕಿದ್ದರು. ನಿಯಮಾನುಸಾರ ಮೂಲದಾಖಲಾತಿಗಳನ್ನು ವಿಭಾಗಕ್ಕೆ ನೀಡಿದ್ದರು. (ವಿದ್ಯಾರ್ಥಿಯ ದಾಖಲಾತಿಗಳು ಸರಿ ಇದಿಯಾ ಇಲ್ಲವಾ ಎಂದು ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಚೆಕ್ ಮಾಡಿ ಕೌನ್ಸಿಲಿಂಗ್‌‌ನಲ್ಲಿ ಸಹಿಯನ್ನು ಹಾಕಿದ್ದರು). ದಾಖಲಾತಿಗಳನ್ನು ಪರಿಶೀಲಿಸಿದ ನಂತರ ವಿಶ್ವವಿದ್ಯಾನಿಲಯವು ಫೀಸ್‌‌ ಪೇಮಂಟ್ ಲಿಂಕ್ ಜನರೇಟ್ ಮಾಡಿತ್ತು. ವಿದ್ಯಾರ್ಥಿ ಅದರಂತೆ ಫೀಸ್‌‌ ಕಟ್ಟಿದ್ದರು. ಆದರೆ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಕಚೇರಿಯವರು ಅಡ್ಮಿಷನ್ ಅಪ್ರೂವಲ್ ಮಾಡಬೇಕಿತ್ತು. (ಅವರು ಇಲ್ಲಿಯವರೆಗೂ ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ). ಪ್ರಥಮ ಸೆಮಿಸ್ಟಾರ್‌ ಪರೀಕ್ಷಾ ಶುಲ್ಕ ಪಾವತಿ ಮಾಡಲು ಹೋದಾಗ ವಿಷಯ ತಿಳಿಯಿತು ಎಂದು ಆರೋಪಿಸಲಾಗಿದೆ.

“ಅಡ್ಮಿಷನ್‌ ಅನುಮೋದನೆ ಕುರಿತು ಪ್ರಶ್ನಿಸಿದಾಗ ಈ ವಿದ್ಯಾರ್ಥಿ ಯಾರೋ ನಮಗೆ ಗೊತ್ತಿಲ್ಲ, ಇವರು ಸರಿಯಾಗಿ ತರಗತಿಗಳಿಗೆ ಹಾಜರಾತಿ ಆಗದೇ ಇರುವ ಕಾರಣ ಇವರದು ನಾವು ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ, ಇವರಿಗೆ ನಾನು ಅಡ್ಮಿಷನ್ ಅಪ್ರೂವಲ್ ಮಾಡುವುದಿಲ್ಲ” ಎಂದು ನಿರ್ಮಲಾ ಅವರು ಪ್ರತಿಕ್ರಿಯೆ ನೀಡಿದರೆಂದು ವಿದ್ಯಾರ್ಥಿ ಲಿಂಗೇಶ್‌ ತಿಳಿಸಿದ್ದಾರೆ.

“ನಾನು ಆರಂಭದ ಕೆಲವು ದಿನ ಕಾಲೇಜಿಗೆ ಹೋಗಿದ್ದೆ. ನಂತರದಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ಕಾಲೇಜಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ದಾಖಲಾತಿಯ ಎಲ್ಲ ಪ್ರಕ್ರಿಯೆ ನಡೆದು, ಹಾಸ್ಟೆಲ್‌ಗೂ ಪ್ರವೇಶಾತಿ ದೊರೆತರೂ ವಿಭಾಗದಲ್ಲಿ ಪ್ರವೇಶಾತಿ ಅಪ್ರೂವಲ್‌ ಆಗದಿರುವುದು ಹೇಗೆ? ಪ್ರವೇಶಾತಿ ಅಪ್ರೂವಲ್ ಆಗಿದ್ದರೆ ಮುಂದಿನ ಸೆಮಿಸ್ಟರ್‌ಗಳಲ್ಲಾದರೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತು” ಎಂದರು.

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಿಭಾಗದ ಮುಖ್ಯಸ್ಥರಾದ ನಿರ್ಮಲಾ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿ ಮುಖಂಡ, ವಿದ್ಯುನ್ಮಾನ‌ ವಿಭಾಗದ ವಿದ್ಯಾರ್ಥಿ ಎಸ್‌.ಮನೋಜ್‌, “ಇಲ್ಲಿ ಆಗಿರುವ ಲೋಪದೋಷಗಳ ಕುರಿತು ಕುಲಪತಿಗಳ ಗಮನಕ್ಕೆ ತರಲಾಯಿತು. ತಕ್ಷಣ ವಿದ್ಯಾರ್ಥಿಗೆ ಅಡ್ಮಿಷನ್ ಅಪ್ರೂವಲ್ ಮಾಡಿ ಎಂದು ವಿಭಾಗದ ಮುಖ್ಯಸ್ಥರ ಗಮಕ್ಕೆ ತಂದರು. ವಿದ್ಯಾರ್ಥಿ ಕೊಟ್ಟ ಮನವಿ ಪತ್ರಕ್ಕೆ ಕುಲಪತಿಯವರು ಸಹಿಯನ್ನೂ ಹಾಕಿದರು. ಆದರೂ ವಿಭಾಗದ ಮುಖ್ಯಸ್ಥರು(ಕೆ.ನಿರ್ಮಲ) ವಿದ್ಯಾರ್ಥಿಯ ಅಡ್ಮಿಷನ್ ಅಪ್ರೂವಲ್ ಅನ್ನು ನಿರಾಕರಿಸಿದ್ದಾರೆ” ಎಂದರು.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

“ನಮ್ಮ ವಿಭಾಗದ ಮುಖ್ಯಸ್ಥರಾದ ಟಿ.ಶ್ರೀಪತಿ ಅವರಿಗೂ ದೂರು ನೀಡಿ  ನನ್ನ ಹಾಲ್‌ ಟಿಕೆಟ್ ಕೂಡ ತಡೆ ಹಿಡಿಯಲು ಯತ್ನಿಸಲಾಯಿತು. ಎರಡು ವಿಷಯಗಳ ಪರೀಕ್ಷೆಗಳಾದ ಮೇಲೆ ನನಗೆ ಹಾಲ್‌ ಟಿಕೆಟ್ ನೀಡಲಾಯಿತು” ಎಂದು ಆರೋಪಿಸಿದ್ದಾರೆ.

ವಿದ್ಯುನ್ಮಾನ ವಿಭಾಗದ ಮುಖ್ಯಸ್ಥರಾದ ಶ್ರೀಪತಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ನನ್ನ ಇಪ್ಪತ್ತು ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ವಿದ್ಯಾರ್ಥಿಗೆ ಅನ್ಯಾಯ ಮಾಡಿಲ್ಲ. ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿ ಬಂದಿರಲಿಲ್ಲ. ಎರಡನೇ ದಿನ ಕೆಲವು ಕಾರಣಗಳಿಂದ ವಿಳಂಬವಾಯಿತು. ಮೂರನೇ ದಿನ ಪರೀಕ್ಷೆ ಬರೆದಿದ್ದಾರೆ. ಇನ್ನೇನೂ ಆತಂಕ ಪಡುವ ವಿಷಯ ಇಲ್ಲ. ಬೇರೆ ಡಿಪಾರ್ಟ್‌ಮೆಂಟ್ ವಿಷಯಗಳಿಗೆ ನೀವ್ಯಾಕೆ ಹೋಗ್ತೀರಾ ಎಂದು ಬುದ್ಧಿ ಹೇಳಿದ್ದು ನಿಜ. ಕೋರ್ಸ್ ಮುಗಿಸಿಕೊಳ್ಳಿ, ಚೆನ್ನಾಗಿ ಓದಿ ಎಂದು ಸಲಹೆ ನೀಡಿದೆ. ಆದರೆ ನನ್ನ ಮೇಲೆಯೇ ಕೂಗಾಡಿದರು. ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ನಾವು ವಿದ್ಯಾರ್ಥಿಗಳ ಪರವಾಗಿಯೇ ಎಂದಿಗೂ ಇರುತ್ತೇವೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...