Homeಕರ್ನಾಟಕಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

- Advertisement -
- Advertisement -

“ಪ್ರಾಧ್ಯಾಪಕರು ಮಾಡಿರುವ ಯಡವಟ್ಟಿನಿಂದಾಗಿ ನಮಗೆ ತೊಂದರೆಯಾಗಿದೆ” ಎಂದು ಇಬ್ಬರು ವಿದ್ಯಾರ್ಥಿಗಳು ದೂರಿದ್ದಾರೆ. ಎಂ.ಕಾಂ. ವಿಭಾಗಕ್ಕೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗೆ ಸೆಮಿಸ್ಟರ್‌ ಕಳೆದರೂ ವಿಭಾಗದ ಅಡ್ಮಿಷನ್‌ ಅಪ್ರೂವಲ್‌ ಕೊಡದೆ ವಂಚಿಸಲಾಗಿದ್ದು, ಇದನ್ನು ಪ್ರಶ್ನಿಸಿದ ವಿದ್ಯುನ್ಮಾನ ವಿಭಾಗದ ವಿದ್ಯಾರ್ಥಿಗೂ ತೊಂದರೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಥಮ ಸೆಮಿಸ್ಟರ್‌ ಎಂ.ಕಾಂ. (ಐಬಿ) ವಿದ್ಯಾರ್ಥಿ ಎಸ್.ಲಿಂಗೇಶ್‌, ನನಗೆ ಅನ್ಯಾಯವಾಗಿದೆ ಎಂದು ಕುಲಪತಿಯವರಿಗೆ ದೂರು ನೀಡಿದ್ದಾರೆ. ಅದಕ್ಕೆ ಕುಲಪತಿಯವರು ಸ್ಪಂದಿಸಿದರೂ ವಿಭಾಗದ ಮುಖ್ಯಸ್ಥರಾದ ಕೆ.ನಿರ್ಮಲಾ ಅವರು ಪರಿಗಣನೆಗೆ ತೆಗೆದುಕೊಂಡಿಲ್ಲ. ಲಿಂಗೇಶ್‌ ಪರವಾಗಿ ನಿಂತ ವಿದ್ಯಾನ್ಮಾನ ವಿಭಾಗದ ಎಸ್‌.ಮನೋಜ್‌ ಎಂಬ ವಿದ್ಯಾರ್ಥಿಗೂ ಪರೀಕ್ಷಾ ಪ್ರವೇಶಾತಿ ಪತ್ರವನ್ನು ತಡವಾಗಿ ನೀಡಲಾಗಿದೆ ಎಂಬ ದೂರು ಬಂದಿದೆ.

ಬೆಂ.ವಿ.ವಿ.ಯ ಎಂ.ಕಾಂ (ಐಬಿ) ವಿಭಾಗಕ್ಕೆ ಲಿಂಗೇಶ್ ಅನ್ನುವ ವಿದ್ಯಾರ್ಥಿ ಪ್ರಥಮ ವರ್ಷಕ್ಕೆ ಅಪ್ಲಿಕೇಶನ್ ಹಾಕಿದ್ದರು. ನಿಯಮಾನುಸಾರ ಮೂಲದಾಖಲಾತಿಗಳನ್ನು ವಿಭಾಗಕ್ಕೆ ನೀಡಿದ್ದರು. (ವಿದ್ಯಾರ್ಥಿಯ ದಾಖಲಾತಿಗಳು ಸರಿ ಇದಿಯಾ ಇಲ್ಲವಾ ಎಂದು ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಚೆಕ್ ಮಾಡಿ ಕೌನ್ಸಿಲಿಂಗ್‌‌ನಲ್ಲಿ ಸಹಿಯನ್ನು ಹಾಕಿದ್ದರು). ದಾಖಲಾತಿಗಳನ್ನು ಪರಿಶೀಲಿಸಿದ ನಂತರ ವಿಶ್ವವಿದ್ಯಾನಿಲಯವು ಫೀಸ್‌‌ ಪೇಮಂಟ್ ಲಿಂಕ್ ಜನರೇಟ್ ಮಾಡಿತ್ತು. ವಿದ್ಯಾರ್ಥಿ ಅದರಂತೆ ಫೀಸ್‌‌ ಕಟ್ಟಿದ್ದರು. ಆದರೆ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಕಚೇರಿಯವರು ಅಡ್ಮಿಷನ್ ಅಪ್ರೂವಲ್ ಮಾಡಬೇಕಿತ್ತು. (ಅವರು ಇಲ್ಲಿಯವರೆಗೂ ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ). ಪ್ರಥಮ ಸೆಮಿಸ್ಟಾರ್‌ ಪರೀಕ್ಷಾ ಶುಲ್ಕ ಪಾವತಿ ಮಾಡಲು ಹೋದಾಗ ವಿಷಯ ತಿಳಿಯಿತು ಎಂದು ಆರೋಪಿಸಲಾಗಿದೆ.

“ಅಡ್ಮಿಷನ್‌ ಅನುಮೋದನೆ ಕುರಿತು ಪ್ರಶ್ನಿಸಿದಾಗ ಈ ವಿದ್ಯಾರ್ಥಿ ಯಾರೋ ನಮಗೆ ಗೊತ್ತಿಲ್ಲ, ಇವರು ಸರಿಯಾಗಿ ತರಗತಿಗಳಿಗೆ ಹಾಜರಾತಿ ಆಗದೇ ಇರುವ ಕಾರಣ ಇವರದು ನಾವು ಅಡ್ಮಿಷನ್ ಅಪ್ರೂವಲ್ ಮಾಡಿಲ್ಲ, ಇವರಿಗೆ ನಾನು ಅಡ್ಮಿಷನ್ ಅಪ್ರೂವಲ್ ಮಾಡುವುದಿಲ್ಲ” ಎಂದು ನಿರ್ಮಲಾ ಅವರು ಪ್ರತಿಕ್ರಿಯೆ ನೀಡಿದರೆಂದು ವಿದ್ಯಾರ್ಥಿ ಲಿಂಗೇಶ್‌ ತಿಳಿಸಿದ್ದಾರೆ.

“ನಾನು ಆರಂಭದ ಕೆಲವು ದಿನ ಕಾಲೇಜಿಗೆ ಹೋಗಿದ್ದೆ. ನಂತರದಲ್ಲಿ ಕೆಲವು ವೈಯಕ್ತಿಕ ಕಾರಣಗಳಿಂದ ಕಾಲೇಜಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ದಾಖಲಾತಿಯ ಎಲ್ಲ ಪ್ರಕ್ರಿಯೆ ನಡೆದು, ಹಾಸ್ಟೆಲ್‌ಗೂ ಪ್ರವೇಶಾತಿ ದೊರೆತರೂ ವಿಭಾಗದಲ್ಲಿ ಪ್ರವೇಶಾತಿ ಅಪ್ರೂವಲ್‌ ಆಗದಿರುವುದು ಹೇಗೆ? ಪ್ರವೇಶಾತಿ ಅಪ್ರೂವಲ್ ಆಗಿದ್ದರೆ ಮುಂದಿನ ಸೆಮಿಸ್ಟರ್‌ಗಳಲ್ಲಾದರೂ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತಿತ್ತು” ಎಂದರು.

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಿಭಾಗದ ಮುಖ್ಯಸ್ಥರಾದ ನಿರ್ಮಲಾ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿ ಮುಖಂಡ, ವಿದ್ಯುನ್ಮಾನ‌ ವಿಭಾಗದ ವಿದ್ಯಾರ್ಥಿ ಎಸ್‌.ಮನೋಜ್‌, “ಇಲ್ಲಿ ಆಗಿರುವ ಲೋಪದೋಷಗಳ ಕುರಿತು ಕುಲಪತಿಗಳ ಗಮನಕ್ಕೆ ತರಲಾಯಿತು. ತಕ್ಷಣ ವಿದ್ಯಾರ್ಥಿಗೆ ಅಡ್ಮಿಷನ್ ಅಪ್ರೂವಲ್ ಮಾಡಿ ಎಂದು ವಿಭಾಗದ ಮುಖ್ಯಸ್ಥರ ಗಮಕ್ಕೆ ತಂದರು. ವಿದ್ಯಾರ್ಥಿ ಕೊಟ್ಟ ಮನವಿ ಪತ್ರಕ್ಕೆ ಕುಲಪತಿಯವರು ಸಹಿಯನ್ನೂ ಹಾಕಿದರು. ಆದರೂ ವಿಭಾಗದ ಮುಖ್ಯಸ್ಥರು(ಕೆ.ನಿರ್ಮಲ) ವಿದ್ಯಾರ್ಥಿಯ ಅಡ್ಮಿಷನ್ ಅಪ್ರೂವಲ್ ಅನ್ನು ನಿರಾಕರಿಸಿದ್ದಾರೆ” ಎಂದರು.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

“ನಮ್ಮ ವಿಭಾಗದ ಮುಖ್ಯಸ್ಥರಾದ ಟಿ.ಶ್ರೀಪತಿ ಅವರಿಗೂ ದೂರು ನೀಡಿ  ನನ್ನ ಹಾಲ್‌ ಟಿಕೆಟ್ ಕೂಡ ತಡೆ ಹಿಡಿಯಲು ಯತ್ನಿಸಲಾಯಿತು. ಎರಡು ವಿಷಯಗಳ ಪರೀಕ್ಷೆಗಳಾದ ಮೇಲೆ ನನಗೆ ಹಾಲ್‌ ಟಿಕೆಟ್ ನೀಡಲಾಯಿತು” ಎಂದು ಆರೋಪಿಸಿದ್ದಾರೆ.

ವಿದ್ಯುನ್ಮಾನ ವಿಭಾಗದ ಮುಖ್ಯಸ್ಥರಾದ ಶ್ರೀಪತಿಯವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ನನ್ನ ಇಪ್ಪತ್ತು ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ವಿದ್ಯಾರ್ಥಿಗೆ ಅನ್ಯಾಯ ಮಾಡಿಲ್ಲ. ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿ ಬಂದಿರಲಿಲ್ಲ. ಎರಡನೇ ದಿನ ಕೆಲವು ಕಾರಣಗಳಿಂದ ವಿಳಂಬವಾಯಿತು. ಮೂರನೇ ದಿನ ಪರೀಕ್ಷೆ ಬರೆದಿದ್ದಾರೆ. ಇನ್ನೇನೂ ಆತಂಕ ಪಡುವ ವಿಷಯ ಇಲ್ಲ. ಬೇರೆ ಡಿಪಾರ್ಟ್‌ಮೆಂಟ್ ವಿಷಯಗಳಿಗೆ ನೀವ್ಯಾಕೆ ಹೋಗ್ತೀರಾ ಎಂದು ಬುದ್ಧಿ ಹೇಳಿದ್ದು ನಿಜ. ಕೋರ್ಸ್ ಮುಗಿಸಿಕೊಳ್ಳಿ, ಚೆನ್ನಾಗಿ ಓದಿ ಎಂದು ಸಲಹೆ ನೀಡಿದೆ. ಆದರೆ ನನ್ನ ಮೇಲೆಯೇ ಕೂಗಾಡಿದರು. ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ನಾವು ವಿದ್ಯಾರ್ಥಿಗಳ ಪರವಾಗಿಯೇ ಎಂದಿಗೂ ಇರುತ್ತೇವೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...